Latest Updates
-
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ!
ಹೃದಯದ ಆರೋಗ್ಯಕ್ಕೆ ಲಿಂಬೆ-ಬೆಳ್ಳುಳ್ಳಿಯ ಮ್ಯಾಜಿಕ್ ಚಿಕಿತ್ಸೆ!
ಹೃದಯವೆನ್ನುವುದು ದೇಹದ ಮುಖ್ಯ ಕೇಂದ್ರವಿದ್ದಂತೆ. ಇಲ್ಲಿಂದಲೇ ಪ್ರಮುಖ ಅಂಗಾಂಗಗಳಿಗೆ ರಕ್ತ ಪೂರೈಕೆಯಾಗುವುದು. ಹೃದಯದ ಕಾರ್ಯಕ್ಕೆ ಯಾವುದೇ ತೊಂದರೆಯಾದರೂ ಅದರಿಂದ ದೇಹದ ಇತರ ಅಂಗಾಂಗಗಳ ಮೇಲೂ ಪರಿಣಾಮ ಬೀರುವುದು ಖಚಿತ....
ಕೆಲವೊಮ್ಮೆ ರಕ್ತದಲ್ಲಿ ಕೊಲೆಸ್ಟ್ರಾಲ್ ಮಟ್ಟವು ಹೆಚ್ಚಾದಾಗ ಹೃದಯದ ರಕ್ತನಾಳಗಳಲ್ಲಿ ತಡೆ ಉಂಟಾಗಿ ಹಲವಾರು ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ರಕ್ತವು ತಡೆಯಲ್ಪಡುವುದರಿಂದ ಎದೆನೋವು, ಹೃದಯಾಘಾತ ಉಂಟಾಗುವ ಸಾಧ್ಯತೆಗಳಿವೆ.

ಹಾಗಾಗಿ ರಕ್ತನಾಳಗಳಲ್ಲಿ ಉಂಟಾಗುವ ತಡೆಯನ್ನು ನಿವಾರಿಸಲು ಲಿಂಬೆ ಹಾಗೂ ಬೆಳ್ಳುಳ್ಳಿಯನ್ನು ಬಳಸಬೇಕು. ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಿ, ತಡೆಉಂಟಾಗಿರುವ ಅಪಧಮನಿಗಳನ್ನು ಸ್ವಚ್ಛಗೊಳಿಸಿ ರಕ್ತಸಂಚಾರವನ್ನು ಉತ್ತಮಪಡಿಸುವುದು. ಹೃದಯದಲ್ಲಿನ ತಡೆಯನ್ನು ನಿವಾರಿಸಬೇಕೆಂದು ಲಿಂಬೆ ಹಾಗೂ ಬೆಳ್ಳುಳ್ಳಿಯನ್ನು ಬಳಸುವುದು ಹೇಗೆ ಎಂದು ತಿಳಿದುಕೊಳ್ಳಿ. ಹೃದಯದ ಆರೋಗ್ಯಕ್ಕೆ- ಪುರಾತನ ಕಾಲದ ಆಯುರ್ವೇದ ಚಿಕಿತ್ಸೆ
ಮೊದಲ ವಿಧಾನ
*1 ಕಪ್ ಬೆಳ್ಳುಳ್ಳಿ ರಸ ಒಂದು ಕಪ್ ತಾಜಾ ನಿಂಬೆ ಹಣ್ಣಿನ ರಸ
*1 ಕಪ್ ಆಪಲ್ ಸೀಡರ್ ವಿನೇಗರ್
*1 ಕಪ್ ಶುಂಠಿ ರಸ
*3 ಕಪ್ ಜೇನುತುಪ್ಪ
ತಯಾರಿಸುವುದು ಹೇಗೆ
*ಬೆಳ್ಳುಳ್ಳಿ, ಲಿಂಬೆ, ಆಪಲ್ ಸೀಡರ್ ವಿನೇಗರ್, ಶುಂಠಿ ರಸವನ್ನು ಒಂದು ಪಾತ್ರೆಗೆ ಹಾಕಿಕೊಂಡು ಅರ್ಧ ಗಂಟೆ ಬಿಸಿ ಮಾಡಿ.
*ಇದು ತಣ್ಣಗಾದ ಬಳಿಕ ಅದಕ್ಕೆ ಮೂರು ಕಪ್ ಜೇನುತುಪ್ಪವನ್ನು ಹಾಕಿ.
*ಈ ಮಿಶ್ರಣವನ್ನು ಚೆನ್ನಾಗಿ ಕಳಸಿಕೊಳ್ಳಿ.
*ಇದನ್ನು ಒಂದು ಜಾರ್ ಗೆ ಹಾಕಿಕೊಂಡು ಫ್ರಿಡ್ಜ್ ನಲ್ಲಿಡಿ.
* ಪ್ರತೀದಿನ ಉಪಹಾರಕ್ಕೆ ಮೊದಲು ಇದನ್ನು ಸೇವಿಸಿ.
2ನೇ ವಿಧಾನ
*2-3 ಲಿಂಬೆ
*ಸ್ವಲ್ಪ ಬೆಳ್ಳುಳ್ಳಿ ಎಸಲು
*ಜೇನುತುಪ್ಪ
ತಯಾರಿಸುವುದು ಹೇಗೆ
*ಲಿಂಬೆ ಹಾಗೂ ಬೆಳ್ಳುಳ್ಳಿಯ ಸಿಪ್ಪೆ ತೆಗೆದು ಅದನ್ನು ಸಣ್ಣಸಣ್ಣ ತುಂಡುಗಳನ್ನಾಗಿ ಮಾಡಿಕೊಂಡು ಬ್ಲೆಂಡರ್ ಗೆ ಹಾಕಿಕೊಳ್ಳಿ. ಇದಕ್ಕೆ ಸ್ವಲ್ಪ ನೀರು ಹಾಕಿ. ಬಳಿಕ ಇದಕ್ಕೆ ಎರಡು ಲೀಟರ್ ನೀರು ಹಾಕಿ ಕುದಿಸಿ.
*ಐದು ನಿಮಿಷ ಕಾಲ ಇದು ಚೆನ್ನಾಗಿ ಕುದಿಯಲು ಬಿಡಿ. ಜೇನುತುಪ್ಪವನ್ನು ರುಚಿಗೆ ತಕ್ಕಷ್ಟು ಹಾಕಿಕೊಳ್ಳಿ.
* ಇನ್ನು ಇದನ್ನು ಜಾರ್ಗೆ ಹಾಕಿಕೊಂಡು ಫ್ರಿಡ್ಜ್ ನಲ್ಲಿಡಿ. ಇದನ್ನು ಮೂರು ವಾರಗಳ ಕಾಲ ಸೇವಿಸಿ. ಒಂದು ವಾರ ಬಿಟ್ಟು ಮತ್ತೆ ಮೂರು ವಾರಗಳ ತನಕ ಸೇವಿಸಿ. ದಿನಕ್ಕೆ 50 ಮಿ.ಲೀ. ಸೇವಿಸಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications


