Latest Updates
-
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್
ಮನೆ ಔಷಧ: ಹೃದಯಾಘಾತವನ್ನು ತಡೆಯುವ ದಿವ್ಯೌಷಧ
ಹೃದಯಾಘಾತ, ಹೇಳದೇ ಕೇಳದೇ ಬಂದು ಕ್ಷಣಮಾತ್ರದಲ್ಲಿ ಯಮನ ಬಳಿಗೆ ಕೊಂಡೊಯ್ಯುವ ಪಾಶ. ಹಾಗಾಗಿ ಹೃದಯಾಘಾತಕ್ಕೂ ಮೊದಲೇ ಸರಿಯಾದ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೆ ಮಾತ್ರವೇ ಪ್ರಾಣಾಪಾಯದಿಂದ ಪಾರಾಗಬಹುದು
ದೇಶದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಾ ಇದೆ. ಹೃದಯದ ಬಗ್ಗೆ ಕಾಳಜಿ ಇಲ್ಲದೆ ಇರುವುದು ಹಾಗೂ ಅನಾರೋಗ್ಯಕರ ಆಹಾರ ಸೇವನೆ ಮಾಡುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಅಪಧಮನಿಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆ, ಕೊಬ್ಬು ಶೇಖರಣೆ, ಹೃದಯದ ದುರ್ಬಲತೆ, ರಕ್ತನಾಳಗಳಿಗೆ ಹಾನಿ, ಕೊಲೆಸ್ಟ್ರಾಲ್ ಶೇಖರಣೆ ಇತ್ಯಾದಿ ಹೃದಯಾಘಾತಕ್ಕೆ ಕಾರಣವಾಗಬಹುದು.

ಹೃದಯದ ಕೆಲವೊಂದು ಸಾಮಾನ್ಯ ಕಾಯಿಲೆಗಳೆಂದರೆ ಅಧಿಕ ರಕ್ತದೊತ್ತಡ, ಹೃದಯ ಸ್ತಂಭನ, ರಕ್ತಹೆಪ್ಪುಗಟ್ಟಿ ಹೃದಯ ಸ್ತಂಭನ, ಪಾರ್ಶ್ವವಾಯು, ಪರಿಧಮನಿ ಕಾಯಿಲೆ ಇತ್ಯಾದಿ. ಒಂದು ಅಥವಾ ಅದಕ್ಕಿಂತ ಹೆಚ್ಚಿನ ರಕ್ತನಾಳವು ಹೃದಯಕ್ಕೆ ರಕ್ತದ ಹರಿವು ಮತ್ತು ಆಮ್ಲಜನಕವನ್ನು ತಡೆದಾಗ ಇಂತಹ ಸಮಸ್ಯೆಯಾಗುತ್ತದೆ.
ಹೃದಯಾಘಾತ ಎನ್ನುವುದು ಜೀವಕ್ಕೆ ಯಾವತ್ತಿಗೂ ಜೀವಕ್ಕೆ ಅಪಾಯ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಹಾಗಾಗಿ ಆರೋಗ್ಯಕರ ಜೀವನಶೈಲಿಯನ್ನು ನಡೆಸಿ ಹೃದಯಕ್ಕೆ ಬರುವ ಅಪಾಯವನ್ನು ತಡೆಯಬಹುದು.... ಬನ್ನಿ ಕೆಲವೊಂದು ಮನೆಮದ್ದಿನಿಂದ ಕೂಡ ಅಪಾಯವನ್ನು ತಪ್ಪಿಸಬಹುದು. ಅದು ಯಾವುದು ಎಂದು ಈ ಲೇಖನವನ್ನು ಓದುತ್ತಾ ತಿಳಿಯಿರಿ. ಥಟ್ಟನೇ ಕಾಡುವ 'ಹೃದಯಾಘಾತ'! ತಿಳಿಯಲೇಬೇಕಾದ ಸತ್ಯ ಸಂಗತಿ
ಮದ್ದು ತಯಾರಿಕೆಗೆ ಬೇಕಾಗುವ ಸಾಮಗ್ರಿಗಳು
*ಬೆಳ್ಳುಳ್ಳಿ 2-3 ಎಸಲು
*ಆಪಲ್ ಸೀಡರ್ ವಿನೇಗರ್ 1 ಚಮಚ
*ನಿಂಬೆರಸ 1 ಚಮಚ ಹೃದಯಾಘಾತ ಬರದಂತೆ ತಡೆಯಬೇಕೆ?
ನಿಯಮಿತವಾಗಿ ಆರೋಗ್ಯಕರ ಆಹಾರ ಹಾಗೂ ವ್ಯಾಯಾಮ ಮಾಡುವುದರೊಂದಿಗೆ ಆರೋಗ್ಯವನ್ನು ಕಾಪಾಡಿಕೊಂಡರೆ ಈ ಮದ್ದು ಒಳ್ಳೆಯ ಪರಿಣಾಮವನ್ನು ಬೀರುವುದು.
ಬೆಳ್ಳುಳ್ಳಿ, ನಿಂಬೆರಸ ಮತ್ತು ಆಪರ್ ಸೀಡರ್ ವಿನೇಗರ್ ನಿಂದ ಮಾಡಿದ ಈ ಮದ್ದು ಅಪಧಮನಿಗಳಲ್ಲಿ ರಕ್ತವು ಹೆಪ್ಪುಗಟ್ಟದಂತೆ ಮಾಡುತ್ತದೆ.
ಹೃದಯದಲ್ಲಿ ರಕ್ತವು ಹೆಪ್ಪುಗಟ್ಟದೆ ಇದ್ದರೆ ಹೃದಯಕ್ಕೆ ರಕ್ತ ಹಾಗೂ ಆಮ್ಲಜನಕವು ಸರಿಯಾಗಿ ಸರಬರಾಜು ಆಗುತ್ತದೆ. ಇದರಿಂದ ಹೃದಯಾಘಾತ ಆಗುವುದು ತಪ್ಪುತ್ತದೆ. ಈ ಮನೆಮದ್ದು ದೇಹದಲ್ಲಿನ ಅತಿಯಾದ ಕೊಲೆಸ್ಟ್ರಾಲ್ ನ್ನು ತೆಗೆದುಹಾಕುವುದು. ಇದರಿಂದ ಹೃದಯಾಘಾತದ ಸಾಧ್ಯತೆಯು ಕಡಿಮೆಯಾಗುತ್ತದೆ. ಹೃದಯಾಘಾತ ತಡೆಯುವ ಶಕ್ತಿ ಲೈಂಗಿಕತೆಗೆ ಇದೆ!
ಮನೆಮದ್ದನ್ನು ತಯಾರಿಸುವ ವಿಧಾನ
*ಮೊದಲು ಬೆಳ್ಳುಳ್ಳಿಯನ್ನು ರುಬ್ಬಿಕೊಂಡು ಪೇಸ್ಟ್ ಮಾಡಿಕೊಳ್ಳಿ. ಒಂದು ಕಪ್ ಗೆ ಬೆಳ್ಳುಳ್ಳಿ ಪೇಸ್ಟ್, ಹೇಳಿದಷ್ಟು ಪ್ರಮಾಣದ ಆಪಲ್ ಸೀಡರ್ ವಿನೇಗರ್ ಮತ್ತು ನಿಂಬೆರಸವನ್ನು ಹಾಕಿ.
*ಇನ್ನು ಇದನ್ನು ಸರಿಯಾಗಿ ಕಳಸಿಕೊಂಡು ಮಿಶ್ರಣ ಮಾಡಿ. ಮನೆಮದ್ದು ಸೇವಿಸಲು ತಯಾರಾಗಿದೆ.
ಬೆಳಿಗ್ಗೆ ಉಪಹಾರಕ್ಕೆ ಮೊದಲು ಇದನ್ನು ಸೇವಿಸಿ.
*ಈ ಮದ್ದು ಹೃದಯಾಘಾತವನ್ನು ತಡೆಯುವ ದಿವ್ಯೌಷಧಿಯೆಂದು ನಿಮಗೆ ಅನಿಸಿದರೆ ನಮಗೆ ನಿಮ್ಮ ಪ್ರತಿಕ್ರಿಯೆ ನೀಡಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications



