Latest Updates
-
ಹೊಸ ರೀತಿಯ ಟೊಮೆಟೊ ಚಕ್ಕುಲಿ ಸುಲಭವಾಗಿ ಮಾಡಿ: ಇಲ್ಲಿದೆ ಮಾಡುವ ವಿಧಾನ -
ಶನಿ ಸಂಚಾರ 2026: ಮಾರ್ಚ್ನಿಂದ ಈ 5 ರಾಶಿ ಜನರು ಎಚ್ಚರವಹಿಸಿ, ವೈಯಕ್ತಿಕ ಹಾನಿ ಸಂಭವ! -
ಮಸಾಲೆ ಲೆಸ್ ವೈಟ್ ಪಲಾವ್; ವಿಭಿನ್ನ ರುಚಿ ವಿಶೇಷ ಖಾದ್ಯ ಸಿದ್ದಮಾಡಿ ನೋಡಿ! -
ಅಂತಾರಾಷ್ಟ್ರೀಯ ಮಹಿಳಾ ದಿನ: ದಕ್ಷಿಣ ಏಷ್ಯಾದಲ್ಲಿ ಹೆಚ್ಚಾಗುತ್ತಿದೆ ರಕ್ತಹೀನತೆ, ಮಹಿಳೆಯರೇ ಬಲಿಪಶು ಏಕೆ? -
March 08 Horoscope: ಯಾರ ಬಳಿಯಾದರು ಸಾಲ ಪಡೆಯುವ ಆಲೋಚನೆ ಮುಂದೂಡಿ! -
ನೀನೇ ನನ್ನ ಶಕ್ತಿ.. ನಿಮ್ಮ ಪ್ರಿಯತಮೆಗೆ ಕಳಿಸಿ ಈ ರೊಮ್ಯಾಂಟಿಕ್ ಶುಭಾಶಯಗಳು! ಆಕೆಯ ಮುಖದಲ್ಲಿ ನಗು ತರಿಸಿ -
ಕೊನೆಗೂ ಬಂತು ರಾಜಯೋಗ: ಈ ರಾಶಿಗಳಿಗೆ ನಸೀಬಲ್ಲೇ ಇಲ್ಲದ ಸುಖ-ಸಂಪತ್ತು ಪ್ರಾಪ್ತಿ! ಪ್ರೀತಿಯಲ್ಲಿ ದೊಡ್ಡ ಯಶಸ್ಸು -
ಎಂದಾದರೂ ಮೊಸರು ಪರೋಟ ತಿಂದಿದ್ದೀರಾ? ಒಮ್ಮೆ ಇದರ ರುಚಿ ನೋಡಿ.. ಹಿಟ್ಟು ಕಲಸುವಾಗ ಈ ಟ್ರಿಕ್ ಬಳಸಿ -
ಹುಷಾರ್.. ಗಂಡನಿಗೆ ಈ 4 ಮಾತು ಹೇಳ್ತೀರಾ? ಮನೇಲಿ ಬೆಂಕಿ ಉರಿಯುತ್ತೆ.. ಹೀಗೆ ಮಾಡಿದ್ರೆ ಸಂಸಾರದಲ್ಲಿ ಸುಖ ಇರುತ್ತೆ -
ಸಿಸ್ಟರ್.. 30+ ಬಳಿಕ ಈ ಸೂತ್ರಗಳನ್ನು ಬೆಳೆಸಿಕೊಳ್ಳಿ! ಆರೋಗ್ಯ ಸದಾ ಚೆನ್ನಾಗಿ ಇರುತ್ತೆ
ಮನೆ ಔಷಧ: ಹೃದಯಾಘಾತವನ್ನು ತಡೆಯುವ ದಿವ್ಯೌಷಧ
ಹೃದಯಾಘಾತ, ಹೇಳದೇ ಕೇಳದೇ ಬಂದು ಕ್ಷಣಮಾತ್ರದಲ್ಲಿ ಯಮನ ಬಳಿಗೆ ಕೊಂಡೊಯ್ಯುವ ಪಾಶ. ಹಾಗಾಗಿ ಹೃದಯಾಘಾತಕ್ಕೂ ಮೊದಲೇ ಸರಿಯಾದ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೆ ಮಾತ್ರವೇ ಪ್ರಾಣಾಪಾಯದಿಂದ ಪಾರಾಗಬಹುದು
ದೇಶದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಾ ಇದೆ. ಹೃದಯದ ಬಗ್ಗೆ ಕಾಳಜಿ ಇಲ್ಲದೆ ಇರುವುದು ಹಾಗೂ ಅನಾರೋಗ್ಯಕರ ಆಹಾರ ಸೇವನೆ ಮಾಡುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಅಪಧಮನಿಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆ, ಕೊಬ್ಬು ಶೇಖರಣೆ, ಹೃದಯದ ದುರ್ಬಲತೆ, ರಕ್ತನಾಳಗಳಿಗೆ ಹಾನಿ, ಕೊಲೆಸ್ಟ್ರಾಲ್ ಶೇಖರಣೆ ಇತ್ಯಾದಿ ಹೃದಯಾಘಾತಕ್ಕೆ ಕಾರಣವಾಗಬಹುದು.

ಹೃದಯದ ಕೆಲವೊಂದು ಸಾಮಾನ್ಯ ಕಾಯಿಲೆಗಳೆಂದರೆ ಅಧಿಕ ರಕ್ತದೊತ್ತಡ, ಹೃದಯ ಸ್ತಂಭನ, ರಕ್ತಹೆಪ್ಪುಗಟ್ಟಿ ಹೃದಯ ಸ್ತಂಭನ, ಪಾರ್ಶ್ವವಾಯು, ಪರಿಧಮನಿ ಕಾಯಿಲೆ ಇತ್ಯಾದಿ. ಒಂದು ಅಥವಾ ಅದಕ್ಕಿಂತ ಹೆಚ್ಚಿನ ರಕ್ತನಾಳವು ಹೃದಯಕ್ಕೆ ರಕ್ತದ ಹರಿವು ಮತ್ತು ಆಮ್ಲಜನಕವನ್ನು ತಡೆದಾಗ ಇಂತಹ ಸಮಸ್ಯೆಯಾಗುತ್ತದೆ.
ಹೃದಯಾಘಾತ ಎನ್ನುವುದು ಜೀವಕ್ಕೆ ಯಾವತ್ತಿಗೂ ಜೀವಕ್ಕೆ ಅಪಾಯ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಹಾಗಾಗಿ ಆರೋಗ್ಯಕರ ಜೀವನಶೈಲಿಯನ್ನು ನಡೆಸಿ ಹೃದಯಕ್ಕೆ ಬರುವ ಅಪಾಯವನ್ನು ತಡೆಯಬಹುದು.... ಬನ್ನಿ ಕೆಲವೊಂದು ಮನೆಮದ್ದಿನಿಂದ ಕೂಡ ಅಪಾಯವನ್ನು ತಪ್ಪಿಸಬಹುದು. ಅದು ಯಾವುದು ಎಂದು ಈ ಲೇಖನವನ್ನು ಓದುತ್ತಾ ತಿಳಿಯಿರಿ. ಥಟ್ಟನೇ ಕಾಡುವ 'ಹೃದಯಾಘಾತ'! ತಿಳಿಯಲೇಬೇಕಾದ ಸತ್ಯ ಸಂಗತಿ
ಮದ್ದು ತಯಾರಿಕೆಗೆ ಬೇಕಾಗುವ ಸಾಮಗ್ರಿಗಳು
*ಬೆಳ್ಳುಳ್ಳಿ 2-3 ಎಸಲು
*ಆಪಲ್ ಸೀಡರ್ ವಿನೇಗರ್ 1 ಚಮಚ
*ನಿಂಬೆರಸ 1 ಚಮಚ ಹೃದಯಾಘಾತ ಬರದಂತೆ ತಡೆಯಬೇಕೆ?
ನಿಯಮಿತವಾಗಿ ಆರೋಗ್ಯಕರ ಆಹಾರ ಹಾಗೂ ವ್ಯಾಯಾಮ ಮಾಡುವುದರೊಂದಿಗೆ ಆರೋಗ್ಯವನ್ನು ಕಾಪಾಡಿಕೊಂಡರೆ ಈ ಮದ್ದು ಒಳ್ಳೆಯ ಪರಿಣಾಮವನ್ನು ಬೀರುವುದು.
ಬೆಳ್ಳುಳ್ಳಿ, ನಿಂಬೆರಸ ಮತ್ತು ಆಪರ್ ಸೀಡರ್ ವಿನೇಗರ್ ನಿಂದ ಮಾಡಿದ ಈ ಮದ್ದು ಅಪಧಮನಿಗಳಲ್ಲಿ ರಕ್ತವು ಹೆಪ್ಪುಗಟ್ಟದಂತೆ ಮಾಡುತ್ತದೆ.
ಹೃದಯದಲ್ಲಿ ರಕ್ತವು ಹೆಪ್ಪುಗಟ್ಟದೆ ಇದ್ದರೆ ಹೃದಯಕ್ಕೆ ರಕ್ತ ಹಾಗೂ ಆಮ್ಲಜನಕವು ಸರಿಯಾಗಿ ಸರಬರಾಜು ಆಗುತ್ತದೆ. ಇದರಿಂದ ಹೃದಯಾಘಾತ ಆಗುವುದು ತಪ್ಪುತ್ತದೆ. ಈ ಮನೆಮದ್ದು ದೇಹದಲ್ಲಿನ ಅತಿಯಾದ ಕೊಲೆಸ್ಟ್ರಾಲ್ ನ್ನು ತೆಗೆದುಹಾಕುವುದು. ಇದರಿಂದ ಹೃದಯಾಘಾತದ ಸಾಧ್ಯತೆಯು ಕಡಿಮೆಯಾಗುತ್ತದೆ. ಹೃದಯಾಘಾತ ತಡೆಯುವ ಶಕ್ತಿ ಲೈಂಗಿಕತೆಗೆ ಇದೆ!
ಮನೆಮದ್ದನ್ನು ತಯಾರಿಸುವ ವಿಧಾನ
*ಮೊದಲು ಬೆಳ್ಳುಳ್ಳಿಯನ್ನು ರುಬ್ಬಿಕೊಂಡು ಪೇಸ್ಟ್ ಮಾಡಿಕೊಳ್ಳಿ. ಒಂದು ಕಪ್ ಗೆ ಬೆಳ್ಳುಳ್ಳಿ ಪೇಸ್ಟ್, ಹೇಳಿದಷ್ಟು ಪ್ರಮಾಣದ ಆಪಲ್ ಸೀಡರ್ ವಿನೇಗರ್ ಮತ್ತು ನಿಂಬೆರಸವನ್ನು ಹಾಕಿ.
*ಇನ್ನು ಇದನ್ನು ಸರಿಯಾಗಿ ಕಳಸಿಕೊಂಡು ಮಿಶ್ರಣ ಮಾಡಿ. ಮನೆಮದ್ದು ಸೇವಿಸಲು ತಯಾರಾಗಿದೆ.
ಬೆಳಿಗ್ಗೆ ಉಪಹಾರಕ್ಕೆ ಮೊದಲು ಇದನ್ನು ಸೇವಿಸಿ.
*ಈ ಮದ್ದು ಹೃದಯಾಘಾತವನ್ನು ತಡೆಯುವ ದಿವ್ಯೌಷಧಿಯೆಂದು ನಿಮಗೆ ಅನಿಸಿದರೆ ನಮಗೆ ನಿಮ್ಮ ಪ್ರತಿಕ್ರಿಯೆ ನೀಡಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications















