Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ಮನೆ ಔಷಧ: ಹೃದಯಾಘಾತವನ್ನು ತಡೆಯುವ ದಿವ್ಯೌಷಧ
ಹೃದಯಾಘಾತ, ಹೇಳದೇ ಕೇಳದೇ ಬಂದು ಕ್ಷಣಮಾತ್ರದಲ್ಲಿ ಯಮನ ಬಳಿಗೆ ಕೊಂಡೊಯ್ಯುವ ಪಾಶ. ಹಾಗಾಗಿ ಹೃದಯಾಘಾತಕ್ಕೂ ಮೊದಲೇ ಸರಿಯಾದ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೆ ಮಾತ್ರವೇ ಪ್ರಾಣಾಪಾಯದಿಂದ ಪಾರಾಗಬಹುದು
ದೇಶದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಾ ಇದೆ. ಹೃದಯದ ಬಗ್ಗೆ ಕಾಳಜಿ ಇಲ್ಲದೆ ಇರುವುದು ಹಾಗೂ ಅನಾರೋಗ್ಯಕರ ಆಹಾರ ಸೇವನೆ ಮಾಡುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಅಪಧಮನಿಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆ, ಕೊಬ್ಬು ಶೇಖರಣೆ, ಹೃದಯದ ದುರ್ಬಲತೆ, ರಕ್ತನಾಳಗಳಿಗೆ ಹಾನಿ, ಕೊಲೆಸ್ಟ್ರಾಲ್ ಶೇಖರಣೆ ಇತ್ಯಾದಿ ಹೃದಯಾಘಾತಕ್ಕೆ ಕಾರಣವಾಗಬಹುದು.

ಹೃದಯದ ಕೆಲವೊಂದು ಸಾಮಾನ್ಯ ಕಾಯಿಲೆಗಳೆಂದರೆ ಅಧಿಕ ರಕ್ತದೊತ್ತಡ, ಹೃದಯ ಸ್ತಂಭನ, ರಕ್ತಹೆಪ್ಪುಗಟ್ಟಿ ಹೃದಯ ಸ್ತಂಭನ, ಪಾರ್ಶ್ವವಾಯು, ಪರಿಧಮನಿ ಕಾಯಿಲೆ ಇತ್ಯಾದಿ. ಒಂದು ಅಥವಾ ಅದಕ್ಕಿಂತ ಹೆಚ್ಚಿನ ರಕ್ತನಾಳವು ಹೃದಯಕ್ಕೆ ರಕ್ತದ ಹರಿವು ಮತ್ತು ಆಮ್ಲಜನಕವನ್ನು ತಡೆದಾಗ ಇಂತಹ ಸಮಸ್ಯೆಯಾಗುತ್ತದೆ.
ಹೃದಯಾಘಾತ ಎನ್ನುವುದು ಜೀವಕ್ಕೆ ಯಾವತ್ತಿಗೂ ಜೀವಕ್ಕೆ ಅಪಾಯ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಹಾಗಾಗಿ ಆರೋಗ್ಯಕರ ಜೀವನಶೈಲಿಯನ್ನು ನಡೆಸಿ ಹೃದಯಕ್ಕೆ ಬರುವ ಅಪಾಯವನ್ನು ತಡೆಯಬಹುದು.... ಬನ್ನಿ ಕೆಲವೊಂದು ಮನೆಮದ್ದಿನಿಂದ ಕೂಡ ಅಪಾಯವನ್ನು ತಪ್ಪಿಸಬಹುದು. ಅದು ಯಾವುದು ಎಂದು ಈ ಲೇಖನವನ್ನು ಓದುತ್ತಾ ತಿಳಿಯಿರಿ. ಥಟ್ಟನೇ ಕಾಡುವ 'ಹೃದಯಾಘಾತ'! ತಿಳಿಯಲೇಬೇಕಾದ ಸತ್ಯ ಸಂಗತಿ
ಮದ್ದು ತಯಾರಿಕೆಗೆ ಬೇಕಾಗುವ ಸಾಮಗ್ರಿಗಳು
*ಬೆಳ್ಳುಳ್ಳಿ 2-3 ಎಸಲು
*ಆಪಲ್ ಸೀಡರ್ ವಿನೇಗರ್ 1 ಚಮಚ
*ನಿಂಬೆರಸ 1 ಚಮಚ ಹೃದಯಾಘಾತ ಬರದಂತೆ ತಡೆಯಬೇಕೆ?
ನಿಯಮಿತವಾಗಿ ಆರೋಗ್ಯಕರ ಆಹಾರ ಹಾಗೂ ವ್ಯಾಯಾಮ ಮಾಡುವುದರೊಂದಿಗೆ ಆರೋಗ್ಯವನ್ನು ಕಾಪಾಡಿಕೊಂಡರೆ ಈ ಮದ್ದು ಒಳ್ಳೆಯ ಪರಿಣಾಮವನ್ನು ಬೀರುವುದು.
ಬೆಳ್ಳುಳ್ಳಿ, ನಿಂಬೆರಸ ಮತ್ತು ಆಪರ್ ಸೀಡರ್ ವಿನೇಗರ್ ನಿಂದ ಮಾಡಿದ ಈ ಮದ್ದು ಅಪಧಮನಿಗಳಲ್ಲಿ ರಕ್ತವು ಹೆಪ್ಪುಗಟ್ಟದಂತೆ ಮಾಡುತ್ತದೆ.
ಹೃದಯದಲ್ಲಿ ರಕ್ತವು ಹೆಪ್ಪುಗಟ್ಟದೆ ಇದ್ದರೆ ಹೃದಯಕ್ಕೆ ರಕ್ತ ಹಾಗೂ ಆಮ್ಲಜನಕವು ಸರಿಯಾಗಿ ಸರಬರಾಜು ಆಗುತ್ತದೆ. ಇದರಿಂದ ಹೃದಯಾಘಾತ ಆಗುವುದು ತಪ್ಪುತ್ತದೆ. ಈ ಮನೆಮದ್ದು ದೇಹದಲ್ಲಿನ ಅತಿಯಾದ ಕೊಲೆಸ್ಟ್ರಾಲ್ ನ್ನು ತೆಗೆದುಹಾಕುವುದು. ಇದರಿಂದ ಹೃದಯಾಘಾತದ ಸಾಧ್ಯತೆಯು ಕಡಿಮೆಯಾಗುತ್ತದೆ. ಹೃದಯಾಘಾತ ತಡೆಯುವ ಶಕ್ತಿ ಲೈಂಗಿಕತೆಗೆ ಇದೆ!
ಮನೆಮದ್ದನ್ನು ತಯಾರಿಸುವ ವಿಧಾನ
*ಮೊದಲು ಬೆಳ್ಳುಳ್ಳಿಯನ್ನು ರುಬ್ಬಿಕೊಂಡು ಪೇಸ್ಟ್ ಮಾಡಿಕೊಳ್ಳಿ. ಒಂದು ಕಪ್ ಗೆ ಬೆಳ್ಳುಳ್ಳಿ ಪೇಸ್ಟ್, ಹೇಳಿದಷ್ಟು ಪ್ರಮಾಣದ ಆಪಲ್ ಸೀಡರ್ ವಿನೇಗರ್ ಮತ್ತು ನಿಂಬೆರಸವನ್ನು ಹಾಕಿ.
*ಇನ್ನು ಇದನ್ನು ಸರಿಯಾಗಿ ಕಳಸಿಕೊಂಡು ಮಿಶ್ರಣ ಮಾಡಿ. ಮನೆಮದ್ದು ಸೇವಿಸಲು ತಯಾರಾಗಿದೆ.
ಬೆಳಿಗ್ಗೆ ಉಪಹಾರಕ್ಕೆ ಮೊದಲು ಇದನ್ನು ಸೇವಿಸಿ.
*ಈ ಮದ್ದು ಹೃದಯಾಘಾತವನ್ನು ತಡೆಯುವ ದಿವ್ಯೌಷಧಿಯೆಂದು ನಿಮಗೆ ಅನಿಸಿದರೆ ನಮಗೆ ನಿಮ್ಮ ಪ್ರತಿಕ್ರಿಯೆ ನೀಡಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications



