Latest Updates
-
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ?
ನೆನಪಿರಲಿ ಇರುವುದೊಂದೇ ಹೃದಯ, ನಿರ್ಲಕ್ಷಿಸದಿರಿ
ನಮ್ಮ ಸಂಪೂರ್ಣ ದೇಹದಕ್ಕೆ ರಕ್ತ ಪರಿಚಲನೆಯಾಗಬೇಕಾದರೆ ಹೃದಯವು ಸರಿಯಾಗಿ ಕೆಲಸ ಮಾಡಬೇಕು. ಹೃದಯಕ್ಕೆ ಸ್ವಲ್ಪ ಸಮಸ್ಯೆಯಾದರೂ ಅದು ದೇಹದ ಇತರ ಭಾಗಗಳ ಮೇಲೆ ಪರಿಣಾಮ ಬೀರುತ್ತದೆ....
ನಮ್ಮ ಹೃದಯವನ್ನು ಆರೋಗ್ಯದಿಂದಿಟ್ಟುಕೊಳ್ಳುವುದು ಮತ್ತು ಅದಕ್ಕೆ ಯಾವುದೇ ರೀತಿಯ ಸಮಸ್ಯೆ ಬಾರದಂತೆ ಸಂರಕ್ಷಿಸಿಕೊಳ್ಳುವುದು ಬಹಳ ಮುಖ್ಯ. ಆದ್ದರಿಂದ ಹೃದ್ರೋಗಕ್ಕೆ ಸಂಬಂಧಪಟ್ಟ ಕಾಯಿಲೆಗಳನ್ನು ತಡೆಗಟ್ಟವ ವಿಧಾನಗಳ ಬಗ್ಗೆ ಅರಿತುಕೊಳ್ಳಬೇಕು. ಮೊಟ್ಟ ಮೊದಲನೆಯದಾಗಿ, ಹೃದಯಕ್ಕೆ ಯಾವುದೇ ರೀತಿ ಸಮಸ್ಯೆ ಎದುರಾಗದೇ ಇರುವಂತೆ ನೋಡಿಕೊಳ್ಳಲು ನಮ್ಮ ಜೀವನದಿಂದ ಒತ್ತಡವನ್ನು ತೆಗೆದು ಹಾಕಬೇಕು. ನೆನಪಿಡಿ: ಪುಟ್ಟ ಹೃದಯದ ಆರೋಗ್ಯವನ್ನು ಕಡೆಗಣಿಸದಿರಿ!

ನಮ್ಮ ಜೀವನದಿಂದ ಒತ್ತಡವನ್ನು ಅಷ್ಟು ಸುಲಭವಾಗಿ ತೆಗೆದು ಹಾಕಲು ಸಾಧ್ಯವಾಗುವುದಿಲ್ಲ. ಸತತವಾಗಿ ಒತ್ತಡದಿಂದ ಬಳಲುತಿದ್ದರೆ, ರಕ್ತ ನಾಳಕ್ಕೆ ಕಿರಿಕಿರಿಯಾಗಿ ರಕ್ತ ಹೆಪ್ಪುಗಟ್ಟುತ್ತದೆ. ಒತ್ತಡ ನಿವಾರಣ ತಂತ್ರಗಳು ನಿಮಗೆ ಒತ್ತಡದ ಸಂದರ್ಭಗಳಲ್ಲಿ ನಿಮ್ಮ ಪ್ರತಿಕ್ರಿಯೆಯನ್ನು ಬದಲಾಯಿಸುತ್ತದೆ. ಎದೆ ಬಡಿತ, ವೇಗವಾಗದಂತೆ ದೇಹವು ಒತ್ತಡ ವಿರುದ್ಧ ಹೋರಾಟವನ್ನು ಮಾಡಲು ಸಿದ್ಧವಾಗುತ್ತದೆ.
10 ರಿಂದ 15 ನಿಮಿಷಗಳ ಕಾಲ ನಿಶ್ಯಬ್ಧವಾಗಿ ಕುಳಿತುಕೊಂಡು, ಉಸಿರಾಟದ ಮೇಲೆ ಗಮನವಿಡಬೇಕು. ಯೋಗಾಭ್ಯಾಸದ ಕೋರ್ಸ್ ಅನ್ನು ಒಂದು ವಾರದ ಮಟ್ಟಿಗೆ,ತಿಂಗಳಿಗೊಮ್ಮೆ ಮಸಾಜ್ ತೆಗೆದುಕೊಳ್ಳಬೇಕು. ದಿನವಿಡೀ ಕುಳಿತುಕೊಂಡೇ ಇದ್ದರೆ ಹೃದಯಕ್ಕೆ ಅಪಾಯ!
ಅಮೇರಿಕನ್ ಮೆಡಿಕಲ್ ಅಸೋಸಿಯೇಷನ್ ಪತ್ರಿಕೆ ನಡೆಸಿದ ಅಧ್ಯಯನದ ಪ್ರಕಾರ, ದಿನಂಪ್ರತಿ ಹೆಚ್ಚಿನ ಒಂದು ಗಂಟೆಯ ಕಾಲ ಆರಾಮ ಮಾಡಿದರೆ, ಮಧ್ಯ ವಯಸ್ಕರು ರಾತ್ರಿಯ ವಿಶ್ರಾಂತಿ ಪಡೆಯಲೇಬೇಕಾದ ಲೆಕ್ಕಕ್ಕೆ ಸೇರಿಕೊಂಡು ರಕ್ತನಾಳಕ್ಕೆ ಸಮಸ್ಯೆಯಾಗುವ ತೊಂದರೆಯಾಗುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.
ನಿಮಗೆ, ನಿದ್ರಾಹೀನತೆಯ ಸಮಸ್ಯೆ ಇದ್ದರೆ, ಅದನ್ನು ಸರಿಪಡಿಸಲು ನಿಮಗೆ ಸಾಕಷ್ಟು ಉತ್ತಮವಾದ ವಿಧಾನಗಳು ದೊರೆಯುತ್ತವೆ. ನಿದ್ರಾಹೀನತೆ ಸಂಬಂಧವಾಗಿ ಒಮ್ಮೆ ವೈದ್ಯರನ್ನು ಭೇಟಿ ಮಾಡಿ ಅವರಿಂದ ಸಲಹೆ ಸೂಚನೆಗಳನ್ನು ಪಡೆಯುವುದು ಸೂಕ್ತ ಏಕೆಂದರೆ, ನಿದ್ರಾಹೀನತೆಯಿಂದ ಹೃದ್ರೋಗದ ಸಮಸ್ಯೆಗಳು ಎದುರಾಗಬಹುದು. ಆದ್ದರಿಂದ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳನ್ನು ತಡೆಗಟ್ಟಲು ಚೆನ್ನಾಗಿ ನಿದ್ದೆ ಮಾಡುವುದು ಅತ್ಯಾವಶ್ಯಕ. ಇದೇ ಕಾರಣಕ್ಕೆ 'ಹೃದ್ರೋಗ ಸಮಸ್ಯೆ' ಕಾಣಿಸಿಕೊಳ್ಳುವುದು!
ಸೋಡಿಯಮ್ ಪ್ರಮಾಣ ಹೆಚ್ಚಾದರೆ, ರಕ್ತದೊತ್ತಡವೂ ಹೆಚ್ಚಾಗುತ್ತದೆ. ಇದರಿಂದ ಹೃದಯಕ್ಕೆ ಭಾರಿ ಪ್ರಮಾಣದಲ್ಲಿ ಹಾನಿಯಾಗುವ ಸಂಭವವಿರುತ್ತದೆ. ಅದನ್ನು ನೀವು ತಗೆದು ಹಾಕಿದಂತೆಯೇ, ಹೃದಯದಿಂದ ಮೇಲಾಗುವ ಒತ್ತಡವನ್ನೂ ತೆಗೆದಂತಾಗುತ್ತದೆ. ಇದರಿಂದ ಹೃದಯಕ್ಕೆ ಸಂಬಂಧ ಸಮಸ್ಯೆಗಳು ಎದುರಾಗುವುದಿಲ್ಲ. ಹೃದಯದ ಆರೋಗ್ಯಕ್ಕೆ- ಪುರಾತನ ಕಾಲದ ಆಯುರ್ವೇದ ಚಿಕಿತ್ಸೆ
ಆಹಾರ ಪದ್ಧತಿಯ ಸೂಚನೆಗಳ ಪ್ರಕಾರ ಮಯಸ್ಕರಿಗೆ, ದಿನ ನಿತ್ಯವೂ ಎರಡು ಕಪ್ ಗಳಷ್ಟು ಹಣ್ಣುಗಳು ಮತ್ತು ಎರಡುವರೆಯಿಂದ ಮೂರು ಕಪ್ ನಷ್ಟು ತರಕಾರಿ ಸೇವನೆ ಬಹಳ ಮುಖ್ಯ. ಒಂದು ಕಪ್ ಎಂದರೆ, ಒಂದು ದೊಡ್ಡ ಕಿತ್ತಳೆ ಅಥವಾ ಒಂದು ಚಿಕ್ಕ ಸೇಬು ಅಂದಾಜಿಗೆ ಸರಿಸಮಾನ. ಆದ್ದರಿಂದ ಹೃರ್ರೋಗವನ್ನು ದೂರವಿಡಲು ಆರೋಗ್ಯಕರ ಆಹಾರವನ್ನು ಸೇವಿಸಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications















