Just In
Don't Miss
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Movies ರಾಜಕೀಯ ಆಯಾಮ ಬೇಡ, ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್ ; #JusticeForNeha ಎಂದ ರಿಷಬ್ ಶೆಟ್ಟಿ..!
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿಕ್ಕ ಪ್ರಾಯದಲ್ಲಿಯೇ ಹೃದಯಾಘಾತ: ಇದನ್ನು ತಡೆಗಟ್ಟಲು ಆಯುರ್ವೇದ ಟಿಪ್ಸ್
ಪುನೀತ್ ರಾಜ್ಕುಮಾರ್ ಸಾವಿನ ಬಳಿಕ ಜನರು ಹೃದಯದ ಆರೋಗ್ಯದ ಬಗ್ಗೆ ತುಂಬಾನೇ ಕಾಳಜಿವಹಿಸುತ್ತಿದ್ದಾರೆ. ಹೃದಯ ಪರೀಕ್ಷೆಗೆ ಬರುವವರ ಸಂಖ್ಯೆ ಶೇ.30ರಷ್ಟು ಹೆಚ್ಚಾಗಿದೆ ಎಂದು ಬೆಂಗಳೂರಿನ ಜಯದೇವ ಆಸ್ಪತ್ರೆಯ ತಜ್ಞರು ಹೇಳುತ್ತಿದ್ದಾರೆ. ಚಿರಂಜೀವಿ ಸರ್ಜಾ, ಹಿಂದಿ ಬಿಗ್ಬಾಸ್ ವಿನ್ನರ್ ಆಗಿದ್ದ ಸಿದ್ಧಾರ್ಥ್ ಶುಕ್ಲ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ ಸುದ್ದಿ ಕೇಳಿದಾಗ ಅಷ್ಟೊಂದು ಫಿಟ್ ಆಗಿದ್ದವರಿಗೆ ಹೃದಯಾಘಾತ ಬರಲು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದರು. ಇದೀಗ ಪುನೀತ್ ರಾಜ್ಕುಮಾರ್ ಅವರ ಸಾವು ದೊಡ್ಡ ಶಾಕ್ ಅನ್ನೇ ನೀಡಿದೆ. ನಮಗೇನೂ ತೊಂದರೆಯಿಲ್ಲ ಆರಾಮವಾಗಿದ್ದೇವೆ ಎಂದು ಅಂದುಕೊಂಡವರು ಕೂಡ ತಮ್ಮ ಹೃದಯದ ಆರೋಗ್ಯ ಹೇಗಿದೆ ಎಂದು ತಿಳಿದುಬಿಡೋಣ ಎಂದ ಪರೀಕ್ಷೆ ಮಾಡಿಸುತ್ತಿದ್ದಾರೆ.
ತುಂಬಾ ಚಿಕ್ಕ ಪ್ರಾಯದಲ್ಲಿ ಹೃದಯಕ್ಕೆ ಹಾನಿಯುಂಟಾಗದಂತೆ ಹೃದಯವನ್ನು ಜೋಪಾನ ಮಾಡಲು ಆಯುರ್ವೇದ ಕೆಲವೊಂದು ಟಿಪ್ಸ್ ನೀಡಿ, ಅದೇನೆಂದು ನೋಡೋಣ ಬನ್ನಿ:
ಹೃದಯಾಘಾತಕ್ಕೆ ಕಾರಣವೇನು?
ಹೃದಯದ ನಾಳಗಳಲ್ಲಿ ರಕ್ತ ಸಂಚಾರಕ್ಕೆ ವ್ಯತ್ಯಾಸ ಉಂಟಾದರೆ ಅಂದರೆ ಸರಿಯಾಗಿ ರಕ್ತ ಪೂರೈಕೆಯಾಗದೇ ಹೋದಾಗ ರಕ್ತ ಸಂಚಾರವಾಗುವುದು. ಅದಿಕ ಕೊಲೆಸ್ಟ್ರಾಲ್, ಒಬೆಸಿಟಿ, ಮಧುಮೇಹ, ಕುಟುಂಬದಲ್ಲಿ ಹೃದಯ ಸಮಸ್ಯೆಯ ಇತಿಹಾಸ ಇರುವವರಲ್ಲಿ ಈ ಸಮಸ್ಯೆ ಕಂಡು ಬರುವುದು. ಅಧಿಕ ಕೊಬ್ಬಿನಂಶದ ಆಹಾರ ಸೇವನೆ, ಅಧಿಕ ಸೋಡಿಯಂ ಇರುವ ಆಹಾರಗಳ ಸೇವನೆ, ಧೂಮಪಾನ ಇವೆಲ್ಲಾ ಹೃದಯಾಘಾತವನ್ನು ಉಂಟು ಮಾಡಬಹುದು.
ಹೃದಯ ಸಂಬಂಧಿ ಸಮಸ್ಯೆ ತಡೆಗಟ್ಟಲು ಕೆಲವೊಂದು ಆಹಾರಗಳನ್ನು ಆಹಾರಕ್ರಮದಲ್ಲಿ ಸೇರಿಸಬೇಕೆಂದು ಆಯುರ್ವೇದದಲ್ಲಿ ಹೇಳಲಾಗಿದೆ.
ಹೃದಯಾಘಾತ ನಿಮ್ಮ ಆಹಾರಕ್ರಮದಲ್ಲಿ ಸೇರಿಸಬೇಕಾದ ಆಹಾರಗಳು
ಹೊಳೆ ಮತ್ತಿ, ತೊರೆ ಮತ್ತಿ(Terminalia Arjuna, Arjuna Tree)
ಕೊಲೆಸ್ಟ್ರಾಲ್ ಪ್ರಮಾಣ ನಿಯಂತ್ರಣದಲ್ಲಿಡಲು ಇದು ತುಂಬಾನೇ ಸಹಕಾರಿ. ಇದನ್ನು ಬಳಸುವುದರಿಂದ ದೇಹದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚುವುದು, ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುವುದು.
ಚಕ್ಕೆ
ಭಾರತೀಯರ ಅಡುಗೆಯಲ್ಲಿ ಚಕ್ಕೆ ಇದ್ದೇ ಇರುತ್ತದೆ. ಇದು ರಕ್ತದೊತ್ತಡ ನಿಯಂತ್ರಣದಲ್ಲಿಡುತ್ತದೆ. ಹೃದಯ ಸಮಸ್ಯೆ ಇರುವವರು ಬೆಳಗ್ಗೆ ಒಂದು ಲೋಟ ನೀರಿಗೆ ಚಿಟಿಕೆಯಷ್ಟು ಚಕ್ಕೆ ಪುಡಿ ಹಾಕಿ ಕುಡಿದರೆ ಹೃದಯದ ಆರೋಗ್ಯಕ್ಕೆ ಒಳ್ಳೆಯದು.
ಪಪ್ಪಾಯಿ
ಪ್ರತಿದಿನ ಒಂದು ಬೌಲ್ ಪಪ್ಪಾಯಿ ತಿಂದರೆ ಹೃದಯಕ್ಕೆ ತುಂಬಾನೇ ಒಳ್ಳೆಯದು. ಇದರಲ್ಲಿ ವಿಟಮಿನ್ ಎ, ಸಿ, ಇ ಹಾಗೂ ಆ್ಯಂಟಿಆಕ್ಸಿಡೆಂಟ್ ಅಂಶ ಅಧಿಕವಿರುತ್ತದೆ. ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್ ಕೊಲೆಸ್ಟ್ರಾಲ್ ನಿಯಂತ್ರಿಸುತ್ತದೆ. ಅಲ್ಲದೆ ಹೃದಯ ನಾಳಗಳಲ್ಲಿ ಬ್ಲಾಕ್ ಉಂಟಾಗದಂತೆ ತಡೆಗಟ್ಟುತ್ತೆ.
ಅಶ್ವಗಂಧ
ಅಶ್ವಗಂಧವನ್ನು ಆಯುರ್ವೇದದಲ್ಲಿ ತುಂಬಾ ವ್ಯಾಪಕವಾಗಿ ಬಳಸಲಾಗುವುದು. ಅಶ್ವಗಂಧದಲ್ಲಿ ಹಲವು ಬಗೆಯ ಔಷಧೀಯ ಗುಣಗಳಿದ್ದು ಇದನ್ನು ಪ್ರತಿದಿನ ಬಳಸುವುದರಿಂದ ಹೃದಯದ ಸ್ವಾಸ್ಥ್ಯ ಹೆಚ್ಚುವುದು. ಇದು ಒತ್ತಡದ ಹಾರ್ಮೋನ್ ಬಿಡುಗಡೆಯನ್ನು ಕಡಿಮೆ ಮಾಡುತ್ತೆ, ಕೊಲೆಸ್ಟ್ರಾಲ್ ನಿಯಂತ್ರಿಸುತ್ತದೆ.