Latest Updates
-
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು!
ಮಹಿಳೆಯರ ಆರೋಗ್ಯ: ಬಿಳುಪು ಹೋಗುವ ಸಮಸ್ಯೆಗೆ ಈ ಮನೆಮದ್ದು ಪರಿಣಾಮಕಾರಿ
ಮಹಿಳೆಯರಲ್ಲಿ ಬಿಳುಪು ಹೋಗುವುದು ಸಹಜ, ಅದರಲ್ಲೂ ಮುಟ್ಟಿನ ಸಮಯದಲ್ಲಿ ಸ್ವಲ್ಪ ಅಧಿಕ ಬಿಳುಪು ಹೋಗಬಹುದು, ಆದರೆ ಪ್ರತಿದಿನ ತುಂಬಾನೇ ಬಿಳುಪು ಹೋಗುವುದು ಅಂದರೆ ಒಳುಡುಪು ಒದ್ದೆಯಾಗುವಷ್ಟು ಬಿಳುಪು ಹೋಗುತ್ತಿದ್ದಾರೆ ನಿರ್ಲಕ್ಷ್ಯ ಮಾಡಲೇಬಾರದು, ಸ್ತ್ರೀ ರೋಗ ತಜ್ಞರನ್ನು ಭೇಟಿಯಾಗಿ ಸಲಹೆ ಪಡೆಯಬೇಕು.
ಇನ್ನು ಟೀನೇಜ್ ಹುಡುಗಿಯರಿಗೆ ಈ ರೀತಿ ಬಿಳುಪು ಹೋಗುವುದು. ಈ ರೀತಿ ಬಿಳುಪು ಹೋಗುತ್ತಿದ್ದರೆಈ ಮನೆಮದ್ದು ಟ್ರೈ ಮಾಡಿ, ಆದರೆ ತುಂಬಾನೇ ಬಿಳುಪು ಹೋಗುತ್ತಿದ್ದರೆ ನೀವು ವೈದ್ಯರಿಗೆ ತೋರಿಸಲೇಬೇಕು.
ಬಿಳುಪು ಹೀಗುವ ಸಮಸ್ಯೆಗೆ ಈ ಮನೆಮದ್ದು ಮಾಡಿ ನೋಡಿ:

ಮೆಂತೆ
ಒಂದು ಕಪ್ ನೀರಿಗೆ 1 ಚಮಚ ಮೆಂತೆ ಹಾಕಿ ಕುದಿಸಿ, ಒಂದು ಲೋಟ ನೀರು ಅರ್ಧ ಕೋಟ ಆಗುವವರೆಗೆ ಕುದಿಸಿ, ನಂತರ ತಣ್ಣಗಾದ ಮೇಲೆ ಕುಡಿಯಿರಿ.
ಬೆಂಡೆಕಾಯಿ ಅಂತೂ ತುಂಬಾ ಒಳ್ಳೆಯದು
ಬಿಳುಪು ಹೋಗುವುದನ್ನು ತಡೆಗಟ್ಟಲು ಬೆಂಡೆಕಾಯಿ ಕೂಡ ತುಂಬಾ ಒಳ್ಳೆಯದು. ಒಂದೆರಡು ಬೆಂಡೆಕಾಯಿ ಕತ್ತರಿಸಿ ನೀರಿಗೆ ಹಾಕಿ ಕುದಿಸಿ, ನಂತರ ಸ್ವಲ್ಪ ಬಿಸಿ ಇರುವಾಗ ಕುಡಿಯಿರಿ, ತುಂಬಾ ತಣ್ಣಗಾದರೆ ಕುಡಿಯುವುದು ಕಷ್ಟ.
ಬಿಳಿ ದಾಸವಾಳದ ಹೂ
ಬಿಲಿ ದಾಸವಾಳದ ಹೂ ತಿನ್ನುವುದು ಅಥವಾ ಅದನ್ನು ನೀರಿಗೆ ಹಾಕಿ ಕುದಿಸಿ ಕುಡಿಯುವುದು ಒಳ್ಳೆಯದು. ಹೀಗೆ ಮಾಡುವುದರಿಂದ ಬಿಳುಪು ಹೋಗುವುದು ಕಡಿಮೆಯಾಗುವುದು,'
ಕೊತ್ತಂಬರಿ ಬೀಜ
ಕೊತ್ತಂಬರಿ ಬೀಜ ತುಂಬಾ ತಂಪು ಹಾಗೂ ಬಿಳುಪು ಹೋಗುವುದನ್ನು ತಡೆಗಟ್ಟಲು ಸಹಕಾರಿ. ಕೊತ್ತಂಬರಿ ಬೀಜ ಹಾಕಿ ಬೆಲ್ಲದ ಕಾಫಿ ಮಾಡಿ ಕುಡಿಯಿರಿ.
ನೆಲ್ಲಿಕಾಯಿ
ನೆಲ್ಲಿಕಾಯಿಯ ಪುಡಿ ಬಿಸಿ ನೀರಿನಲ್ಲಿ ಹಾಕಿ ಕುಡಿದರೆ ತುಂಬಾನೇ ಒಳ್ಳೆಯದು.. ಇದರಲ್ಲಿ ವಿಟಮಿನ್ ಸಿ ಆರೋಗ್ಯ ವೃದ್ಧಿಸುತ್ತೆ.
ಗಂಜಿ ನೀರು
ಬಿಳುಪು ಹೋಗುವ ಸಮಸ್ಯೆ ಇರುವವರು ಗಂಜಿ ನೀರು ಕುಡಿಯುವುದು ಒಳ್ಳೆಯದು, ಗಂಜಿ ನೀರು ಬಿಳುಪು ಹೋಗುವುದನ್ನು ತಡೆಗಟ್ಟಲು ಸಹಕಾರಿ.
ಸೀಬೆಕಾಯಿ ಎಲೆ
ಬಿಳುಪು ಹೋಗುವುದು, ಜನನೇಂದ್ರೀಯದಲ್ಲಿ ತುರಿಕೆ ಕಂಡು ಬಂದರೆ ಸೀಬೆಕಾಯಿ ಗಿಡದ ಎಳೆಯ ಎಲೆಗಳನ್ನು ಕಿತ್ತು ಅದನ್ನು ನೀರಿನಲ್ಲಿ ಹಾಕಿ ದಿನದಲ್ಲಿ ಎರಡು ಬಾರಿ ಕುದಿಸಿ ಕುಡಿದರೆ ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications