Latest Updates
-
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ!
ಮಹಿಳೆಯರ ಆರೋಗ್ಯ: ಬಿಳುಪು ಹೋಗುವ ಸಮಸ್ಯೆಗೆ ಈ ಮನೆಮದ್ದು ಪರಿಣಾಮಕಾರಿ
ಮಹಿಳೆಯರಲ್ಲಿ ಬಿಳುಪು ಹೋಗುವುದು ಸಹಜ, ಅದರಲ್ಲೂ ಮುಟ್ಟಿನ ಸಮಯದಲ್ಲಿ ಸ್ವಲ್ಪ ಅಧಿಕ ಬಿಳುಪು ಹೋಗಬಹುದು, ಆದರೆ ಪ್ರತಿದಿನ ತುಂಬಾನೇ ಬಿಳುಪು ಹೋಗುವುದು ಅಂದರೆ ಒಳುಡುಪು ಒದ್ದೆಯಾಗುವಷ್ಟು ಬಿಳುಪು ಹೋಗುತ್ತಿದ್ದಾರೆ ನಿರ್ಲಕ್ಷ್ಯ ಮಾಡಲೇಬಾರದು, ಸ್ತ್ರೀ ರೋಗ ತಜ್ಞರನ್ನು ಭೇಟಿಯಾಗಿ ಸಲಹೆ ಪಡೆಯಬೇಕು.
ಇನ್ನು ಟೀನೇಜ್ ಹುಡುಗಿಯರಿಗೆ ಈ ರೀತಿ ಬಿಳುಪು ಹೋಗುವುದು. ಈ ರೀತಿ ಬಿಳುಪು ಹೋಗುತ್ತಿದ್ದರೆಈ ಮನೆಮದ್ದು ಟ್ರೈ ಮಾಡಿ, ಆದರೆ ತುಂಬಾನೇ ಬಿಳುಪು ಹೋಗುತ್ತಿದ್ದರೆ ನೀವು ವೈದ್ಯರಿಗೆ ತೋರಿಸಲೇಬೇಕು.
ಬಿಳುಪು ಹೀಗುವ ಸಮಸ್ಯೆಗೆ ಈ ಮನೆಮದ್ದು ಮಾಡಿ ನೋಡಿ:

ಮೆಂತೆ
ಒಂದು ಕಪ್ ನೀರಿಗೆ 1 ಚಮಚ ಮೆಂತೆ ಹಾಕಿ ಕುದಿಸಿ, ಒಂದು ಲೋಟ ನೀರು ಅರ್ಧ ಕೋಟ ಆಗುವವರೆಗೆ ಕುದಿಸಿ, ನಂತರ ತಣ್ಣಗಾದ ಮೇಲೆ ಕುಡಿಯಿರಿ.
ಬೆಂಡೆಕಾಯಿ ಅಂತೂ ತುಂಬಾ ಒಳ್ಳೆಯದು
ಬಿಳುಪು ಹೋಗುವುದನ್ನು ತಡೆಗಟ್ಟಲು ಬೆಂಡೆಕಾಯಿ ಕೂಡ ತುಂಬಾ ಒಳ್ಳೆಯದು. ಒಂದೆರಡು ಬೆಂಡೆಕಾಯಿ ಕತ್ತರಿಸಿ ನೀರಿಗೆ ಹಾಕಿ ಕುದಿಸಿ, ನಂತರ ಸ್ವಲ್ಪ ಬಿಸಿ ಇರುವಾಗ ಕುಡಿಯಿರಿ, ತುಂಬಾ ತಣ್ಣಗಾದರೆ ಕುಡಿಯುವುದು ಕಷ್ಟ.
ಬಿಳಿ ದಾಸವಾಳದ ಹೂ
ಬಿಲಿ ದಾಸವಾಳದ ಹೂ ತಿನ್ನುವುದು ಅಥವಾ ಅದನ್ನು ನೀರಿಗೆ ಹಾಕಿ ಕುದಿಸಿ ಕುಡಿಯುವುದು ಒಳ್ಳೆಯದು. ಹೀಗೆ ಮಾಡುವುದರಿಂದ ಬಿಳುಪು ಹೋಗುವುದು ಕಡಿಮೆಯಾಗುವುದು,'
ಕೊತ್ತಂಬರಿ ಬೀಜ
ಕೊತ್ತಂಬರಿ ಬೀಜ ತುಂಬಾ ತಂಪು ಹಾಗೂ ಬಿಳುಪು ಹೋಗುವುದನ್ನು ತಡೆಗಟ್ಟಲು ಸಹಕಾರಿ. ಕೊತ್ತಂಬರಿ ಬೀಜ ಹಾಕಿ ಬೆಲ್ಲದ ಕಾಫಿ ಮಾಡಿ ಕುಡಿಯಿರಿ.
ನೆಲ್ಲಿಕಾಯಿ
ನೆಲ್ಲಿಕಾಯಿಯ ಪುಡಿ ಬಿಸಿ ನೀರಿನಲ್ಲಿ ಹಾಕಿ ಕುಡಿದರೆ ತುಂಬಾನೇ ಒಳ್ಳೆಯದು.. ಇದರಲ್ಲಿ ವಿಟಮಿನ್ ಸಿ ಆರೋಗ್ಯ ವೃದ್ಧಿಸುತ್ತೆ.
ಗಂಜಿ ನೀರು
ಬಿಳುಪು ಹೋಗುವ ಸಮಸ್ಯೆ ಇರುವವರು ಗಂಜಿ ನೀರು ಕುಡಿಯುವುದು ಒಳ್ಳೆಯದು, ಗಂಜಿ ನೀರು ಬಿಳುಪು ಹೋಗುವುದನ್ನು ತಡೆಗಟ್ಟಲು ಸಹಕಾರಿ.
ಸೀಬೆಕಾಯಿ ಎಲೆ
ಬಿಳುಪು ಹೋಗುವುದು, ಜನನೇಂದ್ರೀಯದಲ್ಲಿ ತುರಿಕೆ ಕಂಡು ಬಂದರೆ ಸೀಬೆಕಾಯಿ ಗಿಡದ ಎಳೆಯ ಎಲೆಗಳನ್ನು ಕಿತ್ತು ಅದನ್ನು ನೀರಿನಲ್ಲಿ ಹಾಕಿ ದಿನದಲ್ಲಿ ಎರಡು ಬಾರಿ ಕುದಿಸಿ ಕುಡಿದರೆ ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications