Latest Updates
-
ಮೈದಾ, ಮೊಟ್ಟೆ ಎರಡೂ ಬೇಡ! ಈ ಹೊಸ ರುಚಿಯ ಕೇಕ್ ಮಾಡಿ ನೋಡಿ.. ಶುಗರ್ ಇರುವವರು ತಿನ್ನಬಹುದು -
ಉದ್ದು ಬೇಡ 1 ಕಪ್ ರವೆ ಇದ್ರೆ ಥಟ್ ಅಂತ ವಡೆ ಮಾಡಿಕೊಳ್ಳಿ: ಬ್ರೇಕ್ಫಾಸ್ಟ್ಗೆ ಇದು ಬೆಸ್ಟ್ ರೆಸಿಪಿ! -
ಕೊನೆಗೂ ಕಣ್ಣು ಬಿಟ್ಟ ಶುಕ್ರ-ಶನಿ: ಈ ರಾಶಿಯವರ ಜೀವನದಲ್ಲಿ ಭೌತಿಕ ಸುಖ! ಸಂಪತ್ತು ತುಂಬಿ ತುಳುಕಲಿದೆ -
ಬದನೆಕಾಯಿ ಕಹಿ ತೆಗೆಯೋದು ಹೇಗೆ? ಈ ಸಿಂಪಲ್ ಟ್ರಿಕ್ ಬಳಸಿ.. ಬಲು ರುಚಿ! ಕಹಿ ಅನ್ನೋದೇ ಇರಲ್ಲ -
ಮಧ್ಯಪ್ರಾಚ್ಯ ಸಂಘರ್ಷ: ಭಾರತದಲ್ಲಿ ಏರಿಕೆಯಾಗಲಿದೆ ಈ ವಸ್ತುಗಳ ಬೆಲೆ! -
ಇವ್ರು ಬೇಗ ಲವ್ನಲ್ಲಿ ಬೀಳ್ತಾರೆ.. ಮದುವೆ ಅಂದ್ರೆ ಅನ್ಪ್ರೆಡಿಕ್ಟಬಲ್! ನಿಮ್ಮ ಜನ್ಮದಿನಾಂಕ ಇದೇನಾ? -
ಬೇಸಿಗೆಯ ಉರಿ ಬಿಸಿಲಿನಲ್ಲಿ ಫ್ರಿಡ್ಜ್ನಲ್ಲಿಟ್ಟ ಈ ಹಣ್ಣು ಸೇವಿಸಬೇಡಿ! ಎದುರಾಗುತ್ತೆ ಆಪತ್ತು! -
ಸಕ್ಕರೆ ಬೇಡ, ಪಾಕವೂ ಬೇಡ.. ಅಜ್ಜ-ಅಜ್ಜಿಯರ ಕಾಲದ ಹೆಲ್ದಿ ಲಡ್ಡು! ತಿಂದ್ರೆ ತೂಕ ಇಳಿಯುತ್ತೆ, ಶುಗರ್ಗೂ ಬೆಸ್ಟ್ -
ಬಿಸಿಲಿನ ತಾಪಕ್ಕೆ ಕಣ್ಣು ಉರಿಗೆ ಈ ಪುಡಿ ಬೆಸ್ಟ್! ದಿನ 1 ಚಮಚ ಕಣ್ಣಿನ ಎಲ್ಲಾ ಸಮಸ್ಯೆ ಕಡಿಮೆಯಾಗುತ್ತೆ -
ಭಾಲಚಂದ್ರ ಸಂಕಷ್ಟ ಚತುರ್ಥಿ 2026: ಈ 6 ರಾಶಿಗಳಿಗೆ ಗಜಕೇಸರಿ ಯೋಗ! ಹಣದ ಮಳೆ ಸುರಿಸಲಿದ್ದಾರೆ ಗಣಪ
ಔಷಧ ತೆಗೆದುಕೊಳ್ಳದಿದ್ದರೂ ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಿಸುವುದು ಹೇಗೆ?
ಮಧುಮೇಹ ಬಂದರೆ ಅದನ್ನು ನಿಯಂತ್ರಣದಲ್ಲಿ ಇಡಬಹುದೇ ಹೊರತು ಮಧುಮೇಹವನ್ನು ಸಂಪೂರ್ಣವಾಗಿ ಗುಣ ಪಡಿಸಲು ಸಾಧ್ಯವಿಲ್ಲ, ಆದರೆ ನೀವು ಮನಸ್ಸು ಮಾಡಿದರೆ ಮಧುಮೇಹವನ್ನು ರಿವರ್ಸ್ ಮಾಡಬಹುದು, ಆವಾಗ ಯಾವ ಇನ್ಸುಲಿನ್, ಮಾತ್ರೆಯ ಅಗ್ಯತವಿರಲ್ಲ.
ನಾವಿಲ್ಲಿ ಔಷಧವಿಲ್ಲದೆ ಮಧುಮೇಹವನ್ನು ನಿಯಂತ್ರಣದಲ್ಲಿಡ ಬಯಸುವವರು ಜೀವನಶೈಲಿಯಲ್ಲಿ ಈ 5 ಬದಲಾವಣೆ ಮಾಡಿದರೆ ಔಷಧ ತೆಗೆದುಕೊಳ್ಳದಿದ್ದರೂ ನಿಮ್ಮ ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿರುತ್ತದೆ:

ಆರೋಗ್ಯಕರ ಆಹಾರಕ್ರಮ
ಮಧುಮೇಹ ಬಂದವರು ಮೊದಲು ಆಹಾರಕ್ರಮ ಬದಲಾಯಿಸಬೇಕು. ಕೆಲವರು ಆಹಾರಕ್ರಮ ಬದಲಾಯಿಸಬೇಕೆಂದು ಹೇಳಿದಾಗ ಇನ್ಮುಂದೆ ರುಚಿಕರವಾದ ಆಹಾರ ತಿನ್ನುವಂತಿಲ್ಲ ಎಂದೇ ಭಾವಿಸುತ್ತಾರೆ, ಖಂಡಿತವಲ್ಲ, ನೀವು ಆರೋಗ್ಯಕರ ಜೀವನಶೈಲಿ ರೂಪಿಸಿಕೊಳ್ಳಬೇಕು, ಅಂದರೆ ನಿಮ್ಮ ಆಹಾರದಲ್ಲಿ ರಕ್ತದಲ್ಲಿ ಬೇಗನೆ ಸಕ್ಕರೆಯಂಶ ಹೆಚ್ಚಿಸುವ ಆಹಾರಗಳಿರಬಾರದು. ನೀವು ನಿಮ್ಮ ಆಹಾರದಲ್ಲಿ ನಾರಿನಂಶ ಅಧಿಕವಿರುವ ಆಹಾರ ಸೇವಿಸಬೇಕು, ತರಕಾರಿ ಹೆಚ್ಚಾಗಿ ಬಳಸಿ, ಲೋ ಗ್ಲೈಸೆಮಿಕ್ ಇಂಡೆಕ್ಸ್ ಆಹಾರ ಬಳಸಿ. ಅಲ್ಲದೆ ಮಿತಿಯಲ್ಲಿ ಆಹಾರ ಸೇವಿಸಿ.
ದಿನಾ ವ್ಯಾಯಾಮ ಮಾಡಿ
ದೇಹದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡಲು ದಿನಾ ವ್ಯಾಯಾಮ ಮಾಡಿ. ವ್ಯಾಯಾಮ ಮಾಡುವುದರಿಂದ ಇನ್ಸುಲಿನ್ ಉತ್ಪತ್ತಿಗೆ ಸಹಕಾರಿಯಾಗಿದೆ. ವಾರದಲ್ಲಿ 150 ನಿಮಿಷ ಅಂದರೆ ದಿನದಲ್ಲಿ 30 ನಿಮಿಷ ವ್ಯಾಯಾಮ ಮಾಡಲೇಬೇಕು. ವ್ಯಾಯಾಮ ಮಾಡುವುದರಿಂದ ಮಧುಮೇಹ ನಿಯಂತ್ರಣದಲ್ಲಿಡುವುದು ಮಾತ್ರವಲ್ಲ ಮೈ ತೂಕ ನಿಯಂತ್ರಿಸಲು ಸಹಕಾರಿಯಾಗಿದೆ.
ಆರೋಗ್ಯಕರ ಮೈ ತೂಕ ಹೊಂದಬೇಕು
ನಿಮ್ಮ ಮೈ ತೂಕ ಅಧಿಕವಿದ್ದರೆ ಸ್ವಲ್ಪ ಮೈ ತೂಕ ಕಡಿಮೆಯಾದರೂ ತುಂಬಾನೇ ಒಳ್ಳೆಯದು. ಇದರಿಂದ ದೇಹದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡಲು ಸಹಕಾರಿ. ಆಹಾರಕ್ರಮ ಹಾಗೂ ವ್ಯಾಯಾಮ ಮೈ ತೂಕ ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
ಮಾನಸಿಕ ಒತ್ತಡ ನಿಯಂತ್ರಣದಲ್ಲಿಡಲು ಸಹಕಾರಿ
ಮಾನಸಿಕ ಒತ್ತಡ ನಿಯಂತ್ರಿಸಬೇಕು. ಮಾನಸಿಕ ಒತ್ತಡ ಹೆಚ್ಚಾದರೆ ಮಧುಮೇಹ ಮಾತ್ರವಲ್ಲ ಅನೇಕ ಆರೋಗ್ಯ ಸಮಸ್ಯೆ ಹೆಚ್ಚಾಗುವುದು. ಆದ್ದರಿಂದ ಮಾನಸಿಕ ಒತ್ತಡ ನಿಯಂತ್ರಿಸಬೇಕು, ಚೆನ್ನಾಗಿ ನಿದ್ದೆ ಮಾಡಿ, ವೃತ್ತಿ ಜೀವನ ಹಾಗೂ ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಪಾಡಿ. ಧ್ಯಾನ, ಯೋಗ ಮಾನಸಿಕ ಒತ್ತಡ ನಿಯಂತ್ರಿಸಲು ಸಹಕಾರಿ.
* ಚೆನ್ನಾಗಿ ನೀರು ಕುಡಿಯಬೇಕು
ನೀವು ಸಾಕಷ್ಟು ನೀರು ಕುಡಿಯಬೇಕು, ದಿನದಲ್ಲಿ 8 ಲೋಟ ನೀರು ಕುಡಿಯಿರಿ. ಇದರಿಂದ ಕಿಡ್ನಿ ಚೆನ್ನಾಗಿ ಕಾರ್ಯನಿರ್ವಹಿಸಲು ಹಾಗೂ ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಿಸಲು ಸಹಕಾರಿ.
ಸಕ್ಕರೆಯಂಶ ಎಷ್ಟಿದೆಯೆಂದು ತಿಳಿಯಲು ನಿಯಮಿತವಾಗಿ ಚೆಕಪ್ ಮಾಡಿ
ನೀವು ನಿಮ್ಮ ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡುವುದು ಮಾತ್ರವಲ್ಲ ನೀವು ನಿಯಮಿತವಾಗಿ ಚೆಕಪ್ ಕೂಡ ಮಾಡಬೇಕು, ಇದರಿಂದ ಸ್ವಲ್ಪ ವ್ಯತ್ಯಾಸ ಉಂಟಾದರೆ ಗೊತ್ತಾಗುವುದು.
ಸೂಚನೆ: ನೀವು ಔಷಧ ತೆಗೆದುಕೊಳ್ಳುತ್ತಿದ್ದರೆ ಸಡನ್ ಬಿಡಬೇಡಿ, ಮೊದಲಿಗೆ ನಿಮ್ಮ ದೇಹದಲ್ಲಿ ಸಕ್ಕರೆಯಂಶ ನಿಯಂತ್ರಣಕ್ಕೆ ಬಂದ ಮೇಲೆ ನಂತರ ಈ ಟಿಪ್ಸ್ ಪಾಲಿಸಿ, ಅದರ ಮೊದಲು ನೀವು ವೈದ್ಯರ ಸಲಹೆ ಪಡೆಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











