Latest Updates
-
ಜುಲೈ 17: ದಂಪತಿಗಳ ನಡುವಿನ ಮನಸ್ತಾಪ ದೂರವಾಗಿಸಲು ಈ ಸರಳ ಟಿಪ್ಸ್ ಪಾಲಿಸಿ! -
ದೆಹಲಿಯ ಸೆಖೆ ಮತ್ತು ಆರ್ದ್ರತೆ: ಕರೆಂಟ್ ಬಿಲ್ ಉಳಿಸಿ, ಮನೆಯನ್ನು ತಂಪಾಗಿರಿಸುವ ಸ್ಮಾರ್ಟ್ ಟಿಪ್ಸ್! -
ಬೆಲೆ ಏರಿಕೆಯ ಬಿಸಿ: ಟೊಮೆಟೊ, ಈರುಳ್ಳಿ ಇಲ್ಲದೆ ರುಚಿಕರ ಮತ್ತು ಪೌಷ್ಟಿಕ ಅಡುಗೆ ಮಾಡುವುದು ಹೇಗೆ? -
IND vs ENG ODI: ಇಂದಿನ ಹೈ-ವೋಲ್ಟೇಜ್ ಪಂದ್ಯದ ನೇರ ಪ್ರಸಾರ ಮತ್ತು ಕನ್ನಡ ಕಾಮೆಂಟರಿ ಮಿಸ್ ಮಾಡ್ಬೇಡಿ! -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಈ 7 ನಿಮಿಷದ ರೂಟೀನ್ ನಿಮ್ಮನ್ನು ರಕ್ಷಿಸುತ್ತದೆ! -
ಬೆಂಗಳೂರಿನಲ್ಲಿ ಇಂದೇ ವಿದ್ಯುತ್ ಕಡಿತ: ನಿಮ್ಮ ಎಲೆಕ್ಟ್ರಾನಿಕ್ ಉಪಕರಣಗಳನ್ನು ಸುರಕ್ಷಿತವಾಗಿಡುವುದು ಹೇಗೆ? -
ಕರ್ಕ ಸಂಕ್ರಾಂತಿ ವಿಶೇಷ: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಜಗನ್ನಾಥ ರಥಯಾತ್ರೆ 2026: ಸಂಚಾರ ಮಾರ್ಗ ಬದಲಾವಣೆ, ಭಕ್ತರಿಗಾಗಿ ಇಲ್ಲಿದೆ ಮಹತ್ವದ ಮಾಹಿತಿ! -
ನೀಟ್ ಪರೀಕ್ಷೆಯ ಆತಂಕವೇ? ಈ 6 ನಿಮಿಷದ ವ್ಯಾಯಾಮ ನಿಮ್ಮ ಒತ್ತಡವನ್ನು ಮರೆಸುತ್ತದೆ! -
ಮಧ್ಯಪ್ರದೇಶ UCC: ಲಿವ್-ಇನ್ ಜೋಡಿಗಳಿಗೆ ಕಡ್ಡಾಯ ನೋಂದಣಿ, ನಿಯಮ ಮೀರಿದರೆ ಕಾದಿದೆ ಸಂಕಷ್ಟ!
ಮಳೆಗಾಲ: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ-ಅಶ್ವಗಂಧ ಹೇಗೆ ಬಳಸಬೇಕು?
ಕೊರೊನಾ ಸಮಯದಲ್ಲಿ ಎಲ್ಲರೂ ಮನೆಮದ್ದುಗಳನ್ನು ತಿಳಿಯಲು ತುಂಬಾನೇ ಆಸಕ್ತಿ ತೋರುತ್ತಿದ್ದರು. ಅಜ್ಜಿ ಕಾಲದ ಚಿಕ್ಕ ಪುಟ್ಟ ಮನೆಮದ್ದುಗಳು ತುಂಬಾ ಜನರಿಗೆ ಗೊತ್ತೇ ಇರಲಿಲ್ಲ, ಆ ಮದ್ದುಗಳನ್ನು ಆ ಸಮಯದಲ್ಲಿ ಹೆಚ್ಚಾಗಿ ಬಳಸಲಾಯಿತು. ಅದರಲ್ಲೂ ಜನರ ಆರೋಗ್ಯ ಕಾಪಾಡುವಲ್ಲಿ ಕಷಾಯ, ಕೆಲವೊಂದು ಆಯುರ್ವೇದ ಹರ್ಬ್ಸ್ ಪ್ರಮುಖ ಪಾತ್ರವಹಿಸಿದೆವು.

ಇದೀಗ ಮಳೆಗಾಲ ಶುರುವಾಗಿ, ಈ ಸಮಯದಲ್ಲಿ ನೀವು ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕಾಗುತ್ತದೆ. ಅದಕ್ಕೆ ಮನೆಮದ್ದುಗಳು ಸಹಾಯ ಮಾಡುತ್ತದೆ, ಅದರಲ್ಲೂ ಆಯುರ್ವೇದಲ್ಲಿ ಬಳಸುವ ಕೆಲವೊಂದು ಗಿಡಮೂಲಿಕೆಗಳು ತುಂಬಾನೇ ಪರಿಣಾಮಕಾರಿಯಾಗಿದೆ. ನಾವು ಈ ಲೇಖನದಲ್ಲಿ ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ ಹಾಗೂ ಅಶ್ವಗಂಧ ಬಳಸುವುದು ಹೇಗೆ ಎಂದು ಹೇಳಲಾಗಿದೆ ನೋಡಿ:
ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ ಹಾಗೂ ಅಶ್ವಗಂಧದ ಕಷಾಯ
1 ಚಮಚ ಅಶ್ವಗಂಧ ಪುಡಿ, 5-6 ತುಳಸಿ ಇವುಗಳನ್ನು ಒಂದು ಲೋಟ ಕುದಿಯುವ ನೀರಿಗೆ ಹಾಕಿ ಕುದಿಸಿ ಅದಕ್ಕೆ ಸ್ವಲ್ಪ ಜೇನು ಸೇರಿಸಿ ಕುಡಿಯುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುವುದು. ನೀವು ಈ ಕಷಾಯ ದಿನಾ ಒಂದು ಲೋಟ ಅಥವಾ ಎರಡು ದಿನಕ್ಕೊಮ್ಮೆ ಕುಡಿದರೆ ಕೆಮ್ಮು, ನೆಗಡಿ ಈ ಬಗೆಯ ಸಮಸ್ಯೆ ತಡೆಗಟ್ಟಬಹುದು.
ಅಶ್ವಗಂಧ-ತುಳಸಿ ಕಷಾಯ ಕುಡಿಯುವುದರಿಂದ ದೊರೆಯುವ ಪ್ರಯೋಜನಗಳು
ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು
ಅಶ್ವಗಂಧ -ತುಳಸಿ ಕಷಾಯ ಮಾಡಿ ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು. ಇದು ಸೋಂಕಾಣು ವಿರುದ್ಧ ಹೋರಾಡುವಂತೆ ದೇಹವನ್ನು ಬಲಪಡಿಸುತ್ತದೆ. ಮಳೆಗಾಲದಲ್ಲಿ ಸೋಂಕು ತಗುಲಿ ಕಾಯಿಲೆ ಬೀಳುವುದು ಸಹಜ, ಇದನ್ನು ತಡೆಗಟ್ಟುವಲ್ಲಿ ಈ ಕಷಾಯ ಸಹಕಾರಿಯಾಗಿದೆ.
2. ಮಾನಸಿಕ ಒತ್ತಡ ಕಡಿಮೆ ಮಾಡುತ್ತದೆ
ಅಶ್ವಗಂಧಕ್ಕೆ ಮಾನಸಿಕ ಒತ್ತಡ ಕಡಿಮೆ ಮಾಡುವ ಸಾಮರ್ಥ್ಯವಿದೆ. ಅತಿಯಾದ ಮಾನಸಿಕ ಒತ್ತಡ ಕೂಡ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಮಾಡುವುದು.
3. ಆಂಟಿಆಕ್ಸಿಡೆಂಟ್ ಹಾಗೂ ಉರಿಯೂತದ ಸಮಸ್ಯೆ ಕಡಿಮೆ ಮಾಡುವುದು'
ನೀವು ತುಳಸಿ ಹಾಗೂ ಅಶ್ವಗಂಧದ ಕಷಾಯ ಕುಡಿಯುವುದರಿಂದ ಇದರಲ್ಲಿರುವ ಪ್ರತಿರೋಧಕ ಹಾಗೂ ಉರಿಯೂತ ಕಡಿಮೆ ಮಾಡುವ ಗುಣದಿಂದ ಮೈಕೈ ನೋವು, ಸಂಧಿವಾತ ಈ ಬಗೆಯ ಸಮಸ್ಯೆ ಕಡಿಮೆಯಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications