Latest Updates
-
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ! -
ಡೆಂಗ್ಯೂ ಭೀತಿ: ಕೇವಲ 10 ನಿಮಿಷದಲ್ಲಿ ನಿಮ್ಮ ಮನೆಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಿರಿ -
ಹಬ್ಬದ ಸೀಸನ್: ಕಲಬೆರಕೆ ಆಹಾರದಿಂದ ಎಚ್ಚರ! ಮಹಾರಾಷ್ಟ್ರ FDA ಕಠಿಣ ತಪಾಸಣೆ ಆರಂಭ -
ಶಿಕ್ಷಕರ ದಿನಾಚರಣೆ 2026: ನಿಮ್ಮ ಪೋಸ್ಟ್ ಟ್ರೆಂಡ್ ಆಗಲು ಬೆಸ್ಟ್ ಕ್ಯಾಪ್ಷನ್ಸ್ ಮತ್ತು ಗಿಫ್ಟ್ ಐಡಿಯಾಗಳು! -
ಮಳೆಗಾಲದ ಎಚ್ಚರಿಕೆ: ಹೊರಗೆ ವಾಕಿಂಗ್ ಹೋಗುವ ಮುನ್ನ ಈ ವಿಷಯ ಗಮನಿಸಿ, ಮನೆಯಲ್ಲೇ ಫಿಟ್ ಆಗಿರಿ
ಮಳೆಗಾಲ: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ-ಅಶ್ವಗಂಧ ಹೇಗೆ ಬಳಸಬೇಕು?
ಕೊರೊನಾ ಸಮಯದಲ್ಲಿ ಎಲ್ಲರೂ ಮನೆಮದ್ದುಗಳನ್ನು ತಿಳಿಯಲು ತುಂಬಾನೇ ಆಸಕ್ತಿ ತೋರುತ್ತಿದ್ದರು. ಅಜ್ಜಿ ಕಾಲದ ಚಿಕ್ಕ ಪುಟ್ಟ ಮನೆಮದ್ದುಗಳು ತುಂಬಾ ಜನರಿಗೆ ಗೊತ್ತೇ ಇರಲಿಲ್ಲ, ಆ ಮದ್ದುಗಳನ್ನು ಆ ಸಮಯದಲ್ಲಿ ಹೆಚ್ಚಾಗಿ ಬಳಸಲಾಯಿತು. ಅದರಲ್ಲೂ ಜನರ ಆರೋಗ್ಯ ಕಾಪಾಡುವಲ್ಲಿ ಕಷಾಯ, ಕೆಲವೊಂದು ಆಯುರ್ವೇದ ಹರ್ಬ್ಸ್ ಪ್ರಮುಖ ಪಾತ್ರವಹಿಸಿದೆವು.

ಇದೀಗ ಮಳೆಗಾಲ ಶುರುವಾಗಿ, ಈ ಸಮಯದಲ್ಲಿ ನೀವು ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕಾಗುತ್ತದೆ. ಅದಕ್ಕೆ ಮನೆಮದ್ದುಗಳು ಸಹಾಯ ಮಾಡುತ್ತದೆ, ಅದರಲ್ಲೂ ಆಯುರ್ವೇದಲ್ಲಿ ಬಳಸುವ ಕೆಲವೊಂದು ಗಿಡಮೂಲಿಕೆಗಳು ತುಂಬಾನೇ ಪರಿಣಾಮಕಾರಿಯಾಗಿದೆ. ನಾವು ಈ ಲೇಖನದಲ್ಲಿ ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ ಹಾಗೂ ಅಶ್ವಗಂಧ ಬಳಸುವುದು ಹೇಗೆ ಎಂದು ಹೇಳಲಾಗಿದೆ ನೋಡಿ:
ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ ಹಾಗೂ ಅಶ್ವಗಂಧದ ಕಷಾಯ
1 ಚಮಚ ಅಶ್ವಗಂಧ ಪುಡಿ, 5-6 ತುಳಸಿ ಇವುಗಳನ್ನು ಒಂದು ಲೋಟ ಕುದಿಯುವ ನೀರಿಗೆ ಹಾಕಿ ಕುದಿಸಿ ಅದಕ್ಕೆ ಸ್ವಲ್ಪ ಜೇನು ಸೇರಿಸಿ ಕುಡಿಯುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುವುದು. ನೀವು ಈ ಕಷಾಯ ದಿನಾ ಒಂದು ಲೋಟ ಅಥವಾ ಎರಡು ದಿನಕ್ಕೊಮ್ಮೆ ಕುಡಿದರೆ ಕೆಮ್ಮು, ನೆಗಡಿ ಈ ಬಗೆಯ ಸಮಸ್ಯೆ ತಡೆಗಟ್ಟಬಹುದು.
ಅಶ್ವಗಂಧ-ತುಳಸಿ ಕಷಾಯ ಕುಡಿಯುವುದರಿಂದ ದೊರೆಯುವ ಪ್ರಯೋಜನಗಳು
ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು
ಅಶ್ವಗಂಧ -ತುಳಸಿ ಕಷಾಯ ಮಾಡಿ ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು. ಇದು ಸೋಂಕಾಣು ವಿರುದ್ಧ ಹೋರಾಡುವಂತೆ ದೇಹವನ್ನು ಬಲಪಡಿಸುತ್ತದೆ. ಮಳೆಗಾಲದಲ್ಲಿ ಸೋಂಕು ತಗುಲಿ ಕಾಯಿಲೆ ಬೀಳುವುದು ಸಹಜ, ಇದನ್ನು ತಡೆಗಟ್ಟುವಲ್ಲಿ ಈ ಕಷಾಯ ಸಹಕಾರಿಯಾಗಿದೆ.
2. ಮಾನಸಿಕ ಒತ್ತಡ ಕಡಿಮೆ ಮಾಡುತ್ತದೆ
ಅಶ್ವಗಂಧಕ್ಕೆ ಮಾನಸಿಕ ಒತ್ತಡ ಕಡಿಮೆ ಮಾಡುವ ಸಾಮರ್ಥ್ಯವಿದೆ. ಅತಿಯಾದ ಮಾನಸಿಕ ಒತ್ತಡ ಕೂಡ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಮಾಡುವುದು.
3. ಆಂಟಿಆಕ್ಸಿಡೆಂಟ್ ಹಾಗೂ ಉರಿಯೂತದ ಸಮಸ್ಯೆ ಕಡಿಮೆ ಮಾಡುವುದು'
ನೀವು ತುಳಸಿ ಹಾಗೂ ಅಶ್ವಗಂಧದ ಕಷಾಯ ಕುಡಿಯುವುದರಿಂದ ಇದರಲ್ಲಿರುವ ಪ್ರತಿರೋಧಕ ಹಾಗೂ ಉರಿಯೂತ ಕಡಿಮೆ ಮಾಡುವ ಗುಣದಿಂದ ಮೈಕೈ ನೋವು, ಸಂಧಿವಾತ ಈ ಬಗೆಯ ಸಮಸ್ಯೆ ಕಡಿಮೆಯಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications