Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಮಳೆಗಾಲ: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ-ಅಶ್ವಗಂಧ ಹೇಗೆ ಬಳಸಬೇಕು?
ಕೊರೊನಾ ಸಮಯದಲ್ಲಿ ಎಲ್ಲರೂ ಮನೆಮದ್ದುಗಳನ್ನು ತಿಳಿಯಲು ತುಂಬಾನೇ ಆಸಕ್ತಿ ತೋರುತ್ತಿದ್ದರು. ಅಜ್ಜಿ ಕಾಲದ ಚಿಕ್ಕ ಪುಟ್ಟ ಮನೆಮದ್ದುಗಳು ತುಂಬಾ ಜನರಿಗೆ ಗೊತ್ತೇ ಇರಲಿಲ್ಲ, ಆ ಮದ್ದುಗಳನ್ನು ಆ ಸಮಯದಲ್ಲಿ ಹೆಚ್ಚಾಗಿ ಬಳಸಲಾಯಿತು. ಅದರಲ್ಲೂ ಜನರ ಆರೋಗ್ಯ ಕಾಪಾಡುವಲ್ಲಿ ಕಷಾಯ, ಕೆಲವೊಂದು ಆಯುರ್ವೇದ ಹರ್ಬ್ಸ್ ಪ್ರಮುಖ ಪಾತ್ರವಹಿಸಿದೆವು.

ಇದೀಗ ಮಳೆಗಾಲ ಶುರುವಾಗಿ, ಈ ಸಮಯದಲ್ಲಿ ನೀವು ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕಾಗುತ್ತದೆ. ಅದಕ್ಕೆ ಮನೆಮದ್ದುಗಳು ಸಹಾಯ ಮಾಡುತ್ತದೆ, ಅದರಲ್ಲೂ ಆಯುರ್ವೇದಲ್ಲಿ ಬಳಸುವ ಕೆಲವೊಂದು ಗಿಡಮೂಲಿಕೆಗಳು ತುಂಬಾನೇ ಪರಿಣಾಮಕಾರಿಯಾಗಿದೆ. ನಾವು ಈ ಲೇಖನದಲ್ಲಿ ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ ಹಾಗೂ ಅಶ್ವಗಂಧ ಬಳಸುವುದು ಹೇಗೆ ಎಂದು ಹೇಳಲಾಗಿದೆ ನೋಡಿ:
ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ ಹಾಗೂ ಅಶ್ವಗಂಧದ ಕಷಾಯ
1 ಚಮಚ ಅಶ್ವಗಂಧ ಪುಡಿ, 5-6 ತುಳಸಿ ಇವುಗಳನ್ನು ಒಂದು ಲೋಟ ಕುದಿಯುವ ನೀರಿಗೆ ಹಾಕಿ ಕುದಿಸಿ ಅದಕ್ಕೆ ಸ್ವಲ್ಪ ಜೇನು ಸೇರಿಸಿ ಕುಡಿಯುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುವುದು. ನೀವು ಈ ಕಷಾಯ ದಿನಾ ಒಂದು ಲೋಟ ಅಥವಾ ಎರಡು ದಿನಕ್ಕೊಮ್ಮೆ ಕುಡಿದರೆ ಕೆಮ್ಮು, ನೆಗಡಿ ಈ ಬಗೆಯ ಸಮಸ್ಯೆ ತಡೆಗಟ್ಟಬಹುದು.
ಅಶ್ವಗಂಧ-ತುಳಸಿ ಕಷಾಯ ಕುಡಿಯುವುದರಿಂದ ದೊರೆಯುವ ಪ್ರಯೋಜನಗಳು
ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು
ಅಶ್ವಗಂಧ -ತುಳಸಿ ಕಷಾಯ ಮಾಡಿ ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು. ಇದು ಸೋಂಕಾಣು ವಿರುದ್ಧ ಹೋರಾಡುವಂತೆ ದೇಹವನ್ನು ಬಲಪಡಿಸುತ್ತದೆ. ಮಳೆಗಾಲದಲ್ಲಿ ಸೋಂಕು ತಗುಲಿ ಕಾಯಿಲೆ ಬೀಳುವುದು ಸಹಜ, ಇದನ್ನು ತಡೆಗಟ್ಟುವಲ್ಲಿ ಈ ಕಷಾಯ ಸಹಕಾರಿಯಾಗಿದೆ.
2. ಮಾನಸಿಕ ಒತ್ತಡ ಕಡಿಮೆ ಮಾಡುತ್ತದೆ
ಅಶ್ವಗಂಧಕ್ಕೆ ಮಾನಸಿಕ ಒತ್ತಡ ಕಡಿಮೆ ಮಾಡುವ ಸಾಮರ್ಥ್ಯವಿದೆ. ಅತಿಯಾದ ಮಾನಸಿಕ ಒತ್ತಡ ಕೂಡ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಮಾಡುವುದು.
3. ಆಂಟಿಆಕ್ಸಿಡೆಂಟ್ ಹಾಗೂ ಉರಿಯೂತದ ಸಮಸ್ಯೆ ಕಡಿಮೆ ಮಾಡುವುದು'
ನೀವು ತುಳಸಿ ಹಾಗೂ ಅಶ್ವಗಂಧದ ಕಷಾಯ ಕುಡಿಯುವುದರಿಂದ ಇದರಲ್ಲಿರುವ ಪ್ರತಿರೋಧಕ ಹಾಗೂ ಉರಿಯೂತ ಕಡಿಮೆ ಮಾಡುವ ಗುಣದಿಂದ ಮೈಕೈ ನೋವು, ಸಂಧಿವಾತ ಈ ಬಗೆಯ ಸಮಸ್ಯೆ ಕಡಿಮೆಯಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications