Latest Updates
-
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ?
ಮಳೆಗಾಲ: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ-ಅಶ್ವಗಂಧ ಹೇಗೆ ಬಳಸಬೇಕು?
ಕೊರೊನಾ ಸಮಯದಲ್ಲಿ ಎಲ್ಲರೂ ಮನೆಮದ್ದುಗಳನ್ನು ತಿಳಿಯಲು ತುಂಬಾನೇ ಆಸಕ್ತಿ ತೋರುತ್ತಿದ್ದರು. ಅಜ್ಜಿ ಕಾಲದ ಚಿಕ್ಕ ಪುಟ್ಟ ಮನೆಮದ್ದುಗಳು ತುಂಬಾ ಜನರಿಗೆ ಗೊತ್ತೇ ಇರಲಿಲ್ಲ, ಆ ಮದ್ದುಗಳನ್ನು ಆ ಸಮಯದಲ್ಲಿ ಹೆಚ್ಚಾಗಿ ಬಳಸಲಾಯಿತು. ಅದರಲ್ಲೂ ಜನರ ಆರೋಗ್ಯ ಕಾಪಾಡುವಲ್ಲಿ ಕಷಾಯ, ಕೆಲವೊಂದು ಆಯುರ್ವೇದ ಹರ್ಬ್ಸ್ ಪ್ರಮುಖ ಪಾತ್ರವಹಿಸಿದೆವು.

ಇದೀಗ ಮಳೆಗಾಲ ಶುರುವಾಗಿ, ಈ ಸಮಯದಲ್ಲಿ ನೀವು ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕಾಗುತ್ತದೆ. ಅದಕ್ಕೆ ಮನೆಮದ್ದುಗಳು ಸಹಾಯ ಮಾಡುತ್ತದೆ, ಅದರಲ್ಲೂ ಆಯುರ್ವೇದಲ್ಲಿ ಬಳಸುವ ಕೆಲವೊಂದು ಗಿಡಮೂಲಿಕೆಗಳು ತುಂಬಾನೇ ಪರಿಣಾಮಕಾರಿಯಾಗಿದೆ. ನಾವು ಈ ಲೇಖನದಲ್ಲಿ ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ ಹಾಗೂ ಅಶ್ವಗಂಧ ಬಳಸುವುದು ಹೇಗೆ ಎಂದು ಹೇಳಲಾಗಿದೆ ನೋಡಿ:
ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ ಹಾಗೂ ಅಶ್ವಗಂಧದ ಕಷಾಯ
1 ಚಮಚ ಅಶ್ವಗಂಧ ಪುಡಿ, 5-6 ತುಳಸಿ ಇವುಗಳನ್ನು ಒಂದು ಲೋಟ ಕುದಿಯುವ ನೀರಿಗೆ ಹಾಕಿ ಕುದಿಸಿ ಅದಕ್ಕೆ ಸ್ವಲ್ಪ ಜೇನು ಸೇರಿಸಿ ಕುಡಿಯುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುವುದು. ನೀವು ಈ ಕಷಾಯ ದಿನಾ ಒಂದು ಲೋಟ ಅಥವಾ ಎರಡು ದಿನಕ್ಕೊಮ್ಮೆ ಕುಡಿದರೆ ಕೆಮ್ಮು, ನೆಗಡಿ ಈ ಬಗೆಯ ಸಮಸ್ಯೆ ತಡೆಗಟ್ಟಬಹುದು.
ಅಶ್ವಗಂಧ-ತುಳಸಿ ಕಷಾಯ ಕುಡಿಯುವುದರಿಂದ ದೊರೆಯುವ ಪ್ರಯೋಜನಗಳು
ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು
ಅಶ್ವಗಂಧ -ತುಳಸಿ ಕಷಾಯ ಮಾಡಿ ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು. ಇದು ಸೋಂಕಾಣು ವಿರುದ್ಧ ಹೋರಾಡುವಂತೆ ದೇಹವನ್ನು ಬಲಪಡಿಸುತ್ತದೆ. ಮಳೆಗಾಲದಲ್ಲಿ ಸೋಂಕು ತಗುಲಿ ಕಾಯಿಲೆ ಬೀಳುವುದು ಸಹಜ, ಇದನ್ನು ತಡೆಗಟ್ಟುವಲ್ಲಿ ಈ ಕಷಾಯ ಸಹಕಾರಿಯಾಗಿದೆ.
2. ಮಾನಸಿಕ ಒತ್ತಡ ಕಡಿಮೆ ಮಾಡುತ್ತದೆ
ಅಶ್ವಗಂಧಕ್ಕೆ ಮಾನಸಿಕ ಒತ್ತಡ ಕಡಿಮೆ ಮಾಡುವ ಸಾಮರ್ಥ್ಯವಿದೆ. ಅತಿಯಾದ ಮಾನಸಿಕ ಒತ್ತಡ ಕೂಡ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಮಾಡುವುದು.
3. ಆಂಟಿಆಕ್ಸಿಡೆಂಟ್ ಹಾಗೂ ಉರಿಯೂತದ ಸಮಸ್ಯೆ ಕಡಿಮೆ ಮಾಡುವುದು'
ನೀವು ತುಳಸಿ ಹಾಗೂ ಅಶ್ವಗಂಧದ ಕಷಾಯ ಕುಡಿಯುವುದರಿಂದ ಇದರಲ್ಲಿರುವ ಪ್ರತಿರೋಧಕ ಹಾಗೂ ಉರಿಯೂತ ಕಡಿಮೆ ಮಾಡುವ ಗುಣದಿಂದ ಮೈಕೈ ನೋವು, ಸಂಧಿವಾತ ಈ ಬಗೆಯ ಸಮಸ್ಯೆ ಕಡಿಮೆಯಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











