Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಇವುಗಳನ್ನು ತಿಂದ ನಂತರ ಎಂದಿಗೂ ನೀರು ಕುಡಿಯುವ ತಪ್ಪನ್ನು ಮಾಡಬೇಡಿ..!
ನಮ್ಮ ಆಹಾರ ಪದ್ಧತಿ ಹೇಗಿರುತ್ತದೆಯೋ ಅದೇ ನಮ್ಮ ಆರೋಗ್ಯವನ್ನು ನಿರ್ಧಿಸುತ್ತದೆ. ಆದರೆ ನಾವು ಅಂದುಕೊಂಡಿರುವ ಅದೆಷ್ಟೋ ತಪ್ಪಾದ ಆರೋಗ್ಯ ಮಾಹಿತಿಯಿಂದಾಗಿ ನಮಗೇ ತಿಳಿಯದಂತೇ ನಮ್ಮ ಆರೋಗ್ಯಕ್ಕೆ ನಾವೇ ಕುತ್ತು ತಂದುಕೊಳ್ಳುತ್ತಿದ್ದೇವೆ.


1. ನೀರಿನ ಅಂಶ ಹೆಚ್ಚಿರುವ ತರಕಾರಿಗಳು
ನೀರಿನ ಅಂಶ ಹೆಚ್ಚಿರುವ ತರಕಾರಿಗಳಲ್ಲಿ ಸೌತೆಕಾಯಿ, ಕಲ್ಲಂಗಡಿ ಇತ್ಯಾದಿ ಹಣ್ಣು/ತರಕಾರಿಗಳು ಸೇರಿವೆ. ಇವುಗಳಲ್ಲಿ ಉತ್ತಮ ಪ್ರಮಾಣದ ನೀರಿನ ಅಂಶ ಇರುತ್ತದೆ, ಅವುಗಳನ್ನು ತಿಂದ ನಂತರ ನೀರು ಕುಡಿಯುವುದನ್ನು ತಪ್ಪನ್ನು ಮಾಡಬೇಡಿ, ಏಕೆಂದರೆ ಇದು ವಾಯು ಸಮಸ್ಯೆಗೆ ಕಾರಣವಾಗಬಹುದು.

2. ಹಾಲು
ಹಾಲು ಕುಡಿದ ತಕ್ಷಣ ನೀರು ಕುಡಿಯುವುದರಿಂದ ಅದರಲ್ಲಿರುವ ಪೋಷಕಾಂಶಗಳು ಹೊಟ್ಟೆಯಲ್ಲಿ ಶೇಖರಣೆಗೊಂಡು ಮೂತ್ರದ ಮೂಲಕ ಹೊರಬರುತ್ತವೆ. ಇದರೊಂದಿಗೆ ಚಯಾಪಚಯ ಕ್ರಿಯೆಯೂ ನಿಧಾನವಾಗುತ್ತದೆ. ಇದರಿಂದ ಅಸಿಡಿಟಿ ಮತ್ತು ಅಜೀರ್ಣ ಸಮಸ್ಯೆ ಕಾಡಬಹುದು.

3. ಕಾಲಮಾನದಲ್ಲಿ ಬಿಡುವ ಹಣ್ಣುಗಳು
ಬೇಸಿಗೆ ಅಥವಾ ಚಳಿಗಾಲದ ಒಟ್ಟಾರೆ ಆಯಾ ಕಾಲಮಾನದಲ್ಲಿ ಬಿಡುವ ಹಣ್ಣುಗಳನ್ನು ತಿಂದ ನಂತರ ನೀರು ಕುಡಿಯಬಾರದು. ವಾಸ್ತವವಾಗಿ, ಈ ಹಣ್ಣುಗಳನ್ನು ಸೇವಿಸಿದ ನಂತರ ನೀರನ್ನು ಕುಡಿಯಬೇಕು ಎನಿಸುವುದಿಲ್ಲ ಹಾಗೂ ಕುಡಿದರೆ ಅದರಲ್ಲಿರುವ ಪೋಷಕಾಂಶಗಳು ನೇರವಾಗಿ ನಿಮ್ಮ ಹೊಟ್ಟೆಗೆ ಹೋಗುತ್ತವೆ, ಇದರಿಂದಾಗಿ ಅವುಗಳ ಪೌಷ್ಠಿಕಾಂಶಗಳು ದೇಹಕ್ಕೆ ಸರಿಯಾಗಿ ಲಭ್ಯವಾಗುವುದಿಲ್ಲ.

4. ಬಾಳೆಹಣ್ಣು
ಬಾಳೆಹಣ್ಣಿನೊಂದಿಗೆ ಹಾಲು ಸೇವಿಸುವುದು ಹೇಗೆ ಹಾನಿಕಾರಕವೋ, ಅದೇ ರೀತಿ ಬಾಳೆಹಣ್ಣಿನ ನಂತರ ನೀರು ಕುಡಿಯುವುದು ಸಹ ಹಾನಿಕಾರಕ. ನೀವು ಇದನ್ನು ಮಾಡಿದಾಗ, ಅದು ನಿಮ್ಮ ಹೊಟ್ಟೆಗೆ ಹೋಗುತ್ತದೆ ಮತ್ತು ವಿಷವಾಗಿ ಮಾರ್ಪಡುತ್ತದೆ. ಇದು ಹೊಟ್ಟೆಯ ಅಸಮಾಧಾನಕ್ಕೆ ಕಾರಣವಾಗಬಹುದು. ವಾಂತಿ ಭಾವನೆ ಬರಬಹುದು.



Click it and Unblock the Notifications