Latest Updates
-
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್!
ಕೋವಿಡ್ 19: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಟಿಪ್ಸ್
ಇದೀಗ ಕೊರೊನಾ ಎರಡನೇ ಅಲೆಯ ಆತಂಕ ಶುರುವಾಗಿದೆ. ಮೊದಲನೇಯ ಅಲೆಯೇ ಸಾಕಷ್ಟು ಜನರನ್ನು ಬಲಿ ತೆಗೆದುಕೊಂಡಿತ್ತು. ಇದೀಗ ಮತ್ತೊಮ್ಮೆ ಕೊರೊನಾ ಹೆಚ್ಚಾಗುತ್ತಿರುವುದರಿಂದ ಜನರು ಈ ಸಂದರ್ಭದಲ್ಲಿ ಸಾಕಷ್ಟು ಎಚ್ಚರಿಕೆವಹಿಸಬೇಕು. ಒಂದು ಚಿಕ್ಕ ನಿರ್ಲಕ್ಷ್ಯ ದೊಡ್ಡ ಆಪತ್ತು ತರಬಹುದು.

ಇನ್ನು ಇದರ ಜೊತೆಗೆ ನಾವು ಈ ಸಮಯದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕಡೆಯೂ ಗಮನ ನೀಡಬೇಕು. ರೋಗ ನಿರೋಧಕ ಶಕ್ತಿ ಹೆಚ್ಚಾದರೆ ಕೋವಿಡ್ 19 ತಗುಲುವ ಅಪಾಯ ಕಡಿಮೆ ಎಂದು ಸಂಶೋಧನೆಗಳು ಹೇಳಿವೆ.
ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಆಯುರ್ವೇದ ಪ್ರಮುಖ ಪಾತ್ರವಹಿಸುತ್ತದೆ. ಗಿಡ ಮೂಲಿಕೆಯ ಔಷಧಿಗಳು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ವ್ಯಕ್ತಿ ಆರೋಗ್ಯಕರವಾಗಿರುವಂತೆ ಮಾಡುತ್ತದೆ.
ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುಷ್ ಇಲಾಖೆ ಕೂಡ ಕೆಲವೊಂದು ಮಾರ್ಗದರ್ಶನ ನೀಡಿದೆ. ಅವುಗಳೇನು ಎಂದು ನೋಡೋಣ:

ಸಾಮಾನ್ಯವಾಗಿ ನೀವು ಮಾಡಬೇಕಾಗಿರುವುದು
* ಬಿಸಿ ಬಿಸಿಯಾದ ನೀರು ಕುಡಿಯಿರಿ.
* ದಿನಾ 30 ನಿಮಿಷ ಯೋಗಾಸನ, ಪ್ರಾಣಯಾಮ, ಧ್ಯಾನ ಮಾಡಿ.
* ಆಹಾರದಲ್ಲಿ ಅರಿಶಿಣ, ಜೀರಿಗೆ, ಕೊತ್ತಂಬರಿ ಬೀಜ ಮತ್ತು ಬೆಳ್ಳುಳ್ಳಿ ಬಳಸಿ.

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ ಔಷಧಗಳು
* ದಿನಾ ಬೆಳಗ್ಗೆ 1 ಚಮಚ ಚವ್ಯನಪ್ರಾಶ ತೆಗೆದುಕೊಳ್ಳಿ. ಮಧುಮೇಹ ಇರುವವರು ಶುಗರ್ಲೆಸ್ ಚವ್ಯನಪ್ರಾಶ ತೆಗೆದುಕೊಳ್ಳಿ.
* ಹರ್ಬಲ್ ಟೀ ಕುಡಿಯಿರಿ,
* ಕಷಾಯ ಮಾಡಿ ಕುಡಿಯಿರಿ.
* ನಿಂಬೆ ಪಾನೀಯ ಮಾಡಿ ಕುಡಿಯಿರಿ.

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ವಿಧಾನಗಳು
* ಮೂಗಿಗೆ ಎಳ್ಳೆಣ್ಣೆ ಅಥವಾ ತುಪ್ಪವನ್ನು ಬೆಳಗ್ಗೆ ಹಾಗೂ ಸಂಜೆ ಸವರಿ.
* ಆಯಿಲ್ ಪುಲ್ಲಿಂಗ್ ಅಂದ್ರೆ 1 ಚಮಚ ಎಣ್ಣೆ ಹಾಕಿ ಬಾಯಿ ಮುಕ್ಕಳಿಸಿ. ಇದರಿಂದ ಬಾರಿಯಲ್ಲಿರುವ ಕೀಟಾಣುಗಳನ್ನು ಕೊಲ್ಲಬಹುದು. ಇದರಲ್ಲಿ ಒಂದು ಚಮಚ ಎಣ್ಣೆ ಬಾಯಿಗೆ ಹಾಕಿ ಬಾಯಿ ಮುಕ್ಕಳಿಸಬೇಕು, ಆದ್ರೆ ನುಂಗಬಾರದು. 2-3 ನಿಮಿಷ ಬಾಯಿ ಮುಕ್ಕಳಿಸಿ. ನಂತರ ಬಾಯಿಗೆ ನೀರು ಹಾಕಿ, ಬಾಯಿ ಮುಕ್ಕಳಿಸಿ. ಈ ರೀತಿ ದಿನದಲ್ಲಿ ಒಂದು ಬಾರಿ ಮಾಡಿ.
* ಕುದಿಯುವ ನೀರಿಗೆ ಪುದೀನಾ ಎಲೆ ಅಥವಾ ಅಜ್ವೈನ್ ಹಾಕಿ ಹಬೆ ತೆಗೆದುಕೊಳ್ಳಿ, ಈ ರೀತಿ ದಿನದಲ್ಲಿ ಒಮ್ಮೆ ಮಾಡಿ.
* ಒಣಕೆಮ್ಮು, ಗಂಟಲು ಕೆರೆತ ಇದ್ರೆ ಲವಂಗ ಪುಡಿಯನ್ನುಒಂದು ಚಮಚ ಜೇನಿನಲ್ಲಿ ಮಿಶ್ರ ಮಾಡಿ ದಿನದಲ್ಲಿ ಒಮ್ಮೆ ತೆಗೆದುಕೊಳ್ಳಿ.

ಕಷಾಯ ಮಾಡುವುದು ಹೇಗೆ?
ಒಂದು ಲೀಟರ್ ಜೀರಿಗೆ, ಚಕ್ಕೆ, ಲವಂಗ, ಒಣ ಶುಂಠಿ, ಒಣ ದ್ರಾಕ್ಷಿ, ಬೆಲ್ಲ ಹಾಕಿ ಅದು ಅರ್ಧ ಲೀಟರ್ ಆಗುವಷ್ಟು ಕುದಿಸಿ, ಅದಕ್ಕೆ ಸ್ವಲ್ಪ ನೀಂಬೆ ರಸ ಸೇರಿಸಿ ಮನೆಯವರು ಒಂದೊಮದು ಲೋಟ ಕುಡಿಯರಿ.
ಸೂಚನೆ: ಇವುಗಳು ಕೊರೊನಾಗೆ ಔಷಧಿಯಲ್ಲ, ಇವುಗಳಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಬಹುದು ಅಷ್ಟೇ.



Click it and Unblock the Notifications
