Latest Updates
-
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ -
ಈ 5 ವಿಷಯಗಳಲ್ಲಿ ಮಿತಿ ಮೀರಿದ್ರೆ ಜೀವನ ಸರ್ವನಾಶ! ಅಹಂಕಾರ ಬಿಡಿ.. ಇಂದೇ ಇವುಗಳಿಂದ ದೂರವಿರಿ -
ಪಕ್ಕಾ ಹೈದರಾಬಾದಿ ರುಚಿ.. ಅತಿಥಿಗಳು ಬಂದ್ರೆ ಈ ಚಿಕನ್ ಯಖನಿ ಪುಲಾವ್ ಮಾಡಿ! ಸಿಂಪಲ್ & ಸೂಪರ್ ರುಚಿ -
2026ರ ಸೂರ್ಯ ಗೋಚಾರ: ಇವರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ! ಯಾರಿಗೆ ಮಾನಸಿಕ ಒತ್ತಡ? 12 ರಾಶಿಯವರಿಗೆ ರಾಶಿಫಲ ಇಲ್ಲಿದೆ -
ಹೋಟೆಲ್ ಶೈಲಿಯ ಆಲೂ ಮಸಾಲಾ ಪೂರಿ! ಈ ರೀತಿ ಮನೆಯಲ್ಲೇ ಮಾಡಿ, ಪರ್ಫೆಕ್ಟ್ ಆಗಿ ಉಬ್ಬಿ ಬರುತ್ತೆ -
ಇವರ ಜೀವನದಲ್ಲಿ ಹೊಸ ಕಿಡಿ ಹೊತ್ತಿಕೊಳ್ಳಲಿದೆ! ಹಠಮಾರಿ ಸ್ವಭಾವವನ್ನು ಬಿಡಿ -
March 12 Horoscope: ಹಣಕಾಸಿನ ಸವಾಲುಗಳು ದೊಡ್ಡದಾಗುವ ಸಂಭವ -
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್
ಕೋವಿಡ್ 19: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಟಿಪ್ಸ್
ಇದೀಗ ಕೊರೊನಾ ಎರಡನೇ ಅಲೆಯ ಆತಂಕ ಶುರುವಾಗಿದೆ. ಮೊದಲನೇಯ ಅಲೆಯೇ ಸಾಕಷ್ಟು ಜನರನ್ನು ಬಲಿ ತೆಗೆದುಕೊಂಡಿತ್ತು. ಇದೀಗ ಮತ್ತೊಮ್ಮೆ ಕೊರೊನಾ ಹೆಚ್ಚಾಗುತ್ತಿರುವುದರಿಂದ ಜನರು ಈ ಸಂದರ್ಭದಲ್ಲಿ ಸಾಕಷ್ಟು ಎಚ್ಚರಿಕೆವಹಿಸಬೇಕು. ಒಂದು ಚಿಕ್ಕ ನಿರ್ಲಕ್ಷ್ಯ ದೊಡ್ಡ ಆಪತ್ತು ತರಬಹುದು.

ಇನ್ನು ಇದರ ಜೊತೆಗೆ ನಾವು ಈ ಸಮಯದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕಡೆಯೂ ಗಮನ ನೀಡಬೇಕು. ರೋಗ ನಿರೋಧಕ ಶಕ್ತಿ ಹೆಚ್ಚಾದರೆ ಕೋವಿಡ್ 19 ತಗುಲುವ ಅಪಾಯ ಕಡಿಮೆ ಎಂದು ಸಂಶೋಧನೆಗಳು ಹೇಳಿವೆ.
ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಆಯುರ್ವೇದ ಪ್ರಮುಖ ಪಾತ್ರವಹಿಸುತ್ತದೆ. ಗಿಡ ಮೂಲಿಕೆಯ ಔಷಧಿಗಳು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ವ್ಯಕ್ತಿ ಆರೋಗ್ಯಕರವಾಗಿರುವಂತೆ ಮಾಡುತ್ತದೆ.
ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುಷ್ ಇಲಾಖೆ ಕೂಡ ಕೆಲವೊಂದು ಮಾರ್ಗದರ್ಶನ ನೀಡಿದೆ. ಅವುಗಳೇನು ಎಂದು ನೋಡೋಣ:

ಸಾಮಾನ್ಯವಾಗಿ ನೀವು ಮಾಡಬೇಕಾಗಿರುವುದು
* ಬಿಸಿ ಬಿಸಿಯಾದ ನೀರು ಕುಡಿಯಿರಿ.
* ದಿನಾ 30 ನಿಮಿಷ ಯೋಗಾಸನ, ಪ್ರಾಣಯಾಮ, ಧ್ಯಾನ ಮಾಡಿ.
* ಆಹಾರದಲ್ಲಿ ಅರಿಶಿಣ, ಜೀರಿಗೆ, ಕೊತ್ತಂಬರಿ ಬೀಜ ಮತ್ತು ಬೆಳ್ಳುಳ್ಳಿ ಬಳಸಿ.

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ ಔಷಧಗಳು
* ದಿನಾ ಬೆಳಗ್ಗೆ 1 ಚಮಚ ಚವ್ಯನಪ್ರಾಶ ತೆಗೆದುಕೊಳ್ಳಿ. ಮಧುಮೇಹ ಇರುವವರು ಶುಗರ್ಲೆಸ್ ಚವ್ಯನಪ್ರಾಶ ತೆಗೆದುಕೊಳ್ಳಿ.
* ಹರ್ಬಲ್ ಟೀ ಕುಡಿಯಿರಿ,
* ಕಷಾಯ ಮಾಡಿ ಕುಡಿಯಿರಿ.
* ನಿಂಬೆ ಪಾನೀಯ ಮಾಡಿ ಕುಡಿಯಿರಿ.

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ವಿಧಾನಗಳು
* ಮೂಗಿಗೆ ಎಳ್ಳೆಣ್ಣೆ ಅಥವಾ ತುಪ್ಪವನ್ನು ಬೆಳಗ್ಗೆ ಹಾಗೂ ಸಂಜೆ ಸವರಿ.
* ಆಯಿಲ್ ಪುಲ್ಲಿಂಗ್ ಅಂದ್ರೆ 1 ಚಮಚ ಎಣ್ಣೆ ಹಾಕಿ ಬಾಯಿ ಮುಕ್ಕಳಿಸಿ. ಇದರಿಂದ ಬಾರಿಯಲ್ಲಿರುವ ಕೀಟಾಣುಗಳನ್ನು ಕೊಲ್ಲಬಹುದು. ಇದರಲ್ಲಿ ಒಂದು ಚಮಚ ಎಣ್ಣೆ ಬಾಯಿಗೆ ಹಾಕಿ ಬಾಯಿ ಮುಕ್ಕಳಿಸಬೇಕು, ಆದ್ರೆ ನುಂಗಬಾರದು. 2-3 ನಿಮಿಷ ಬಾಯಿ ಮುಕ್ಕಳಿಸಿ. ನಂತರ ಬಾಯಿಗೆ ನೀರು ಹಾಕಿ, ಬಾಯಿ ಮುಕ್ಕಳಿಸಿ. ಈ ರೀತಿ ದಿನದಲ್ಲಿ ಒಂದು ಬಾರಿ ಮಾಡಿ.
* ಕುದಿಯುವ ನೀರಿಗೆ ಪುದೀನಾ ಎಲೆ ಅಥವಾ ಅಜ್ವೈನ್ ಹಾಕಿ ಹಬೆ ತೆಗೆದುಕೊಳ್ಳಿ, ಈ ರೀತಿ ದಿನದಲ್ಲಿ ಒಮ್ಮೆ ಮಾಡಿ.
* ಒಣಕೆಮ್ಮು, ಗಂಟಲು ಕೆರೆತ ಇದ್ರೆ ಲವಂಗ ಪುಡಿಯನ್ನುಒಂದು ಚಮಚ ಜೇನಿನಲ್ಲಿ ಮಿಶ್ರ ಮಾಡಿ ದಿನದಲ್ಲಿ ಒಮ್ಮೆ ತೆಗೆದುಕೊಳ್ಳಿ.

ಕಷಾಯ ಮಾಡುವುದು ಹೇಗೆ?
ಒಂದು ಲೀಟರ್ ಜೀರಿಗೆ, ಚಕ್ಕೆ, ಲವಂಗ, ಒಣ ಶುಂಠಿ, ಒಣ ದ್ರಾಕ್ಷಿ, ಬೆಲ್ಲ ಹಾಕಿ ಅದು ಅರ್ಧ ಲೀಟರ್ ಆಗುವಷ್ಟು ಕುದಿಸಿ, ಅದಕ್ಕೆ ಸ್ವಲ್ಪ ನೀಂಬೆ ರಸ ಸೇರಿಸಿ ಮನೆಯವರು ಒಂದೊಮದು ಲೋಟ ಕುಡಿಯರಿ.
ಸೂಚನೆ: ಇವುಗಳು ಕೊರೊನಾಗೆ ಔಷಧಿಯಲ್ಲ, ಇವುಗಳಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಬಹುದು ಅಷ್ಟೇ.



Click it and Unblock the Notifications











