Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಕೋವಿಡ್ 19: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಟಿಪ್ಸ್
ಇದೀಗ ಕೊರೊನಾ ಎರಡನೇ ಅಲೆಯ ಆತಂಕ ಶುರುವಾಗಿದೆ. ಮೊದಲನೇಯ ಅಲೆಯೇ ಸಾಕಷ್ಟು ಜನರನ್ನು ಬಲಿ ತೆಗೆದುಕೊಂಡಿತ್ತು. ಇದೀಗ ಮತ್ತೊಮ್ಮೆ ಕೊರೊನಾ ಹೆಚ್ಚಾಗುತ್ತಿರುವುದರಿಂದ ಜನರು ಈ ಸಂದರ್ಭದಲ್ಲಿ ಸಾಕಷ್ಟು ಎಚ್ಚರಿಕೆವಹಿಸಬೇಕು. ಒಂದು ಚಿಕ್ಕ ನಿರ್ಲಕ್ಷ್ಯ ದೊಡ್ಡ ಆಪತ್ತು ತರಬಹುದು.

ಇನ್ನು ಇದರ ಜೊತೆಗೆ ನಾವು ಈ ಸಮಯದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕಡೆಯೂ ಗಮನ ನೀಡಬೇಕು. ರೋಗ ನಿರೋಧಕ ಶಕ್ತಿ ಹೆಚ್ಚಾದರೆ ಕೋವಿಡ್ 19 ತಗುಲುವ ಅಪಾಯ ಕಡಿಮೆ ಎಂದು ಸಂಶೋಧನೆಗಳು ಹೇಳಿವೆ.
ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಆಯುರ್ವೇದ ಪ್ರಮುಖ ಪಾತ್ರವಹಿಸುತ್ತದೆ. ಗಿಡ ಮೂಲಿಕೆಯ ಔಷಧಿಗಳು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ವ್ಯಕ್ತಿ ಆರೋಗ್ಯಕರವಾಗಿರುವಂತೆ ಮಾಡುತ್ತದೆ.
ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುಷ್ ಇಲಾಖೆ ಕೂಡ ಕೆಲವೊಂದು ಮಾರ್ಗದರ್ಶನ ನೀಡಿದೆ. ಅವುಗಳೇನು ಎಂದು ನೋಡೋಣ:

ಸಾಮಾನ್ಯವಾಗಿ ನೀವು ಮಾಡಬೇಕಾಗಿರುವುದು
* ಬಿಸಿ ಬಿಸಿಯಾದ ನೀರು ಕುಡಿಯಿರಿ.
* ದಿನಾ 30 ನಿಮಿಷ ಯೋಗಾಸನ, ಪ್ರಾಣಯಾಮ, ಧ್ಯಾನ ಮಾಡಿ.
* ಆಹಾರದಲ್ಲಿ ಅರಿಶಿಣ, ಜೀರಿಗೆ, ಕೊತ್ತಂಬರಿ ಬೀಜ ಮತ್ತು ಬೆಳ್ಳುಳ್ಳಿ ಬಳಸಿ.

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ ಔಷಧಗಳು
* ದಿನಾ ಬೆಳಗ್ಗೆ 1 ಚಮಚ ಚವ್ಯನಪ್ರಾಶ ತೆಗೆದುಕೊಳ್ಳಿ. ಮಧುಮೇಹ ಇರುವವರು ಶುಗರ್ಲೆಸ್ ಚವ್ಯನಪ್ರಾಶ ತೆಗೆದುಕೊಳ್ಳಿ.
* ಹರ್ಬಲ್ ಟೀ ಕುಡಿಯಿರಿ,
* ಕಷಾಯ ಮಾಡಿ ಕುಡಿಯಿರಿ.
* ನಿಂಬೆ ಪಾನೀಯ ಮಾಡಿ ಕುಡಿಯಿರಿ.

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ವಿಧಾನಗಳು
* ಮೂಗಿಗೆ ಎಳ್ಳೆಣ್ಣೆ ಅಥವಾ ತುಪ್ಪವನ್ನು ಬೆಳಗ್ಗೆ ಹಾಗೂ ಸಂಜೆ ಸವರಿ.
* ಆಯಿಲ್ ಪುಲ್ಲಿಂಗ್ ಅಂದ್ರೆ 1 ಚಮಚ ಎಣ್ಣೆ ಹಾಕಿ ಬಾಯಿ ಮುಕ್ಕಳಿಸಿ. ಇದರಿಂದ ಬಾರಿಯಲ್ಲಿರುವ ಕೀಟಾಣುಗಳನ್ನು ಕೊಲ್ಲಬಹುದು. ಇದರಲ್ಲಿ ಒಂದು ಚಮಚ ಎಣ್ಣೆ ಬಾಯಿಗೆ ಹಾಕಿ ಬಾಯಿ ಮುಕ್ಕಳಿಸಬೇಕು, ಆದ್ರೆ ನುಂಗಬಾರದು. 2-3 ನಿಮಿಷ ಬಾಯಿ ಮುಕ್ಕಳಿಸಿ. ನಂತರ ಬಾಯಿಗೆ ನೀರು ಹಾಕಿ, ಬಾಯಿ ಮುಕ್ಕಳಿಸಿ. ಈ ರೀತಿ ದಿನದಲ್ಲಿ ಒಂದು ಬಾರಿ ಮಾಡಿ.
* ಕುದಿಯುವ ನೀರಿಗೆ ಪುದೀನಾ ಎಲೆ ಅಥವಾ ಅಜ್ವೈನ್ ಹಾಕಿ ಹಬೆ ತೆಗೆದುಕೊಳ್ಳಿ, ಈ ರೀತಿ ದಿನದಲ್ಲಿ ಒಮ್ಮೆ ಮಾಡಿ.
* ಒಣಕೆಮ್ಮು, ಗಂಟಲು ಕೆರೆತ ಇದ್ರೆ ಲವಂಗ ಪುಡಿಯನ್ನುಒಂದು ಚಮಚ ಜೇನಿನಲ್ಲಿ ಮಿಶ್ರ ಮಾಡಿ ದಿನದಲ್ಲಿ ಒಮ್ಮೆ ತೆಗೆದುಕೊಳ್ಳಿ.

ಕಷಾಯ ಮಾಡುವುದು ಹೇಗೆ?
ಒಂದು ಲೀಟರ್ ಜೀರಿಗೆ, ಚಕ್ಕೆ, ಲವಂಗ, ಒಣ ಶುಂಠಿ, ಒಣ ದ್ರಾಕ್ಷಿ, ಬೆಲ್ಲ ಹಾಕಿ ಅದು ಅರ್ಧ ಲೀಟರ್ ಆಗುವಷ್ಟು ಕುದಿಸಿ, ಅದಕ್ಕೆ ಸ್ವಲ್ಪ ನೀಂಬೆ ರಸ ಸೇರಿಸಿ ಮನೆಯವರು ಒಂದೊಮದು ಲೋಟ ಕುಡಿಯರಿ.
ಸೂಚನೆ: ಇವುಗಳು ಕೊರೊನಾಗೆ ಔಷಧಿಯಲ್ಲ, ಇವುಗಳಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಬಹುದು ಅಷ್ಟೇ.



Click it and Unblock the Notifications











