Latest Updates
-
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು -
ವರಮಹಾಲಕ್ಷ್ಮೀ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ: ಕೆ.ಆರ್. ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವು-ಹಣ್ಣುಗಳ ದರ -
BWF ವಿಶ್ವ ಚಾಂಪಿಯನ್ಷಿಪ್: ದೆಹಲಿಯಲ್ಲಿ ಭಾರತೀಯ ಆಟಗಾರರ ಅಬ್ಬರ, ಅಭಿಮಾನಿಗಳಿಗೆ ಇಲ್ಲಿದೆ ವಿಶೇಷ ಗೇಮ್ ಪ್ಲಾನ್! -
ವರಮಹಾಲಕ್ಷ್ಮಿ ಹಬ್ಬದ ದಿನಾಂಕದ ಗೊಂದಲ: ಆಗಸ್ಟ್ 21 ಅಥವಾ 28? ಇಲ್ಲಿದೆ ಸ್ಪಷ್ಟ ಮಾಹಿತಿ! -
ವಿಶ್ವ ಸೊಳ್ಳೆ ದಿನ: ಮಳೆಗಾಲದಲ್ಲಿ ಬಾಲ್ಕನಿಯಲ್ಲಿ ಯೋಗ ಮಾಡುವಾಗ ಸೊಳ್ಳೆ ಕಡಿತದಿಂದ ಪಾರಾಗುವುದು ಹೇಗೆ? -
BWF ವರ್ಲ್ಡ್ಸ್ ದೆಹಲಿ: ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ಈ 8 ನಿಮಿಷದ ವ್ಯಾಯಾಮ ನಿಮ್ಮ ನೋವನ್ನು ಮರೆಸುತ್ತೆ! -
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು!
ಕೋವಿಡ್ 19: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಟಿಪ್ಸ್
ಇದೀಗ ಕೊರೊನಾ ಎರಡನೇ ಅಲೆಯ ಆತಂಕ ಶುರುವಾಗಿದೆ. ಮೊದಲನೇಯ ಅಲೆಯೇ ಸಾಕಷ್ಟು ಜನರನ್ನು ಬಲಿ ತೆಗೆದುಕೊಂಡಿತ್ತು. ಇದೀಗ ಮತ್ತೊಮ್ಮೆ ಕೊರೊನಾ ಹೆಚ್ಚಾಗುತ್ತಿರುವುದರಿಂದ ಜನರು ಈ ಸಂದರ್ಭದಲ್ಲಿ ಸಾಕಷ್ಟು ಎಚ್ಚರಿಕೆವಹಿಸಬೇಕು. ಒಂದು ಚಿಕ್ಕ ನಿರ್ಲಕ್ಷ್ಯ ದೊಡ್ಡ ಆಪತ್ತು ತರಬಹುದು.

ಇನ್ನು ಇದರ ಜೊತೆಗೆ ನಾವು ಈ ಸಮಯದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕಡೆಯೂ ಗಮನ ನೀಡಬೇಕು. ರೋಗ ನಿರೋಧಕ ಶಕ್ತಿ ಹೆಚ್ಚಾದರೆ ಕೋವಿಡ್ 19 ತಗುಲುವ ಅಪಾಯ ಕಡಿಮೆ ಎಂದು ಸಂಶೋಧನೆಗಳು ಹೇಳಿವೆ.
ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಆಯುರ್ವೇದ ಪ್ರಮುಖ ಪಾತ್ರವಹಿಸುತ್ತದೆ. ಗಿಡ ಮೂಲಿಕೆಯ ಔಷಧಿಗಳು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ವ್ಯಕ್ತಿ ಆರೋಗ್ಯಕರವಾಗಿರುವಂತೆ ಮಾಡುತ್ತದೆ.
ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುಷ್ ಇಲಾಖೆ ಕೂಡ ಕೆಲವೊಂದು ಮಾರ್ಗದರ್ಶನ ನೀಡಿದೆ. ಅವುಗಳೇನು ಎಂದು ನೋಡೋಣ:

ಸಾಮಾನ್ಯವಾಗಿ ನೀವು ಮಾಡಬೇಕಾಗಿರುವುದು
* ಬಿಸಿ ಬಿಸಿಯಾದ ನೀರು ಕುಡಿಯಿರಿ.
* ದಿನಾ 30 ನಿಮಿಷ ಯೋಗಾಸನ, ಪ್ರಾಣಯಾಮ, ಧ್ಯಾನ ಮಾಡಿ.
* ಆಹಾರದಲ್ಲಿ ಅರಿಶಿಣ, ಜೀರಿಗೆ, ಕೊತ್ತಂಬರಿ ಬೀಜ ಮತ್ತು ಬೆಳ್ಳುಳ್ಳಿ ಬಳಸಿ.

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ ಔಷಧಗಳು
* ದಿನಾ ಬೆಳಗ್ಗೆ 1 ಚಮಚ ಚವ್ಯನಪ್ರಾಶ ತೆಗೆದುಕೊಳ್ಳಿ. ಮಧುಮೇಹ ಇರುವವರು ಶುಗರ್ಲೆಸ್ ಚವ್ಯನಪ್ರಾಶ ತೆಗೆದುಕೊಳ್ಳಿ.
* ಹರ್ಬಲ್ ಟೀ ಕುಡಿಯಿರಿ,
* ಕಷಾಯ ಮಾಡಿ ಕುಡಿಯಿರಿ.
* ನಿಂಬೆ ಪಾನೀಯ ಮಾಡಿ ಕುಡಿಯಿರಿ.

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ವಿಧಾನಗಳು
* ಮೂಗಿಗೆ ಎಳ್ಳೆಣ್ಣೆ ಅಥವಾ ತುಪ್ಪವನ್ನು ಬೆಳಗ್ಗೆ ಹಾಗೂ ಸಂಜೆ ಸವರಿ.
* ಆಯಿಲ್ ಪುಲ್ಲಿಂಗ್ ಅಂದ್ರೆ 1 ಚಮಚ ಎಣ್ಣೆ ಹಾಕಿ ಬಾಯಿ ಮುಕ್ಕಳಿಸಿ. ಇದರಿಂದ ಬಾರಿಯಲ್ಲಿರುವ ಕೀಟಾಣುಗಳನ್ನು ಕೊಲ್ಲಬಹುದು. ಇದರಲ್ಲಿ ಒಂದು ಚಮಚ ಎಣ್ಣೆ ಬಾಯಿಗೆ ಹಾಕಿ ಬಾಯಿ ಮುಕ್ಕಳಿಸಬೇಕು, ಆದ್ರೆ ನುಂಗಬಾರದು. 2-3 ನಿಮಿಷ ಬಾಯಿ ಮುಕ್ಕಳಿಸಿ. ನಂತರ ಬಾಯಿಗೆ ನೀರು ಹಾಕಿ, ಬಾಯಿ ಮುಕ್ಕಳಿಸಿ. ಈ ರೀತಿ ದಿನದಲ್ಲಿ ಒಂದು ಬಾರಿ ಮಾಡಿ.
* ಕುದಿಯುವ ನೀರಿಗೆ ಪುದೀನಾ ಎಲೆ ಅಥವಾ ಅಜ್ವೈನ್ ಹಾಕಿ ಹಬೆ ತೆಗೆದುಕೊಳ್ಳಿ, ಈ ರೀತಿ ದಿನದಲ್ಲಿ ಒಮ್ಮೆ ಮಾಡಿ.
* ಒಣಕೆಮ್ಮು, ಗಂಟಲು ಕೆರೆತ ಇದ್ರೆ ಲವಂಗ ಪುಡಿಯನ್ನುಒಂದು ಚಮಚ ಜೇನಿನಲ್ಲಿ ಮಿಶ್ರ ಮಾಡಿ ದಿನದಲ್ಲಿ ಒಮ್ಮೆ ತೆಗೆದುಕೊಳ್ಳಿ.

ಕಷಾಯ ಮಾಡುವುದು ಹೇಗೆ?
ಒಂದು ಲೀಟರ್ ಜೀರಿಗೆ, ಚಕ್ಕೆ, ಲವಂಗ, ಒಣ ಶುಂಠಿ, ಒಣ ದ್ರಾಕ್ಷಿ, ಬೆಲ್ಲ ಹಾಕಿ ಅದು ಅರ್ಧ ಲೀಟರ್ ಆಗುವಷ್ಟು ಕುದಿಸಿ, ಅದಕ್ಕೆ ಸ್ವಲ್ಪ ನೀಂಬೆ ರಸ ಸೇರಿಸಿ ಮನೆಯವರು ಒಂದೊಮದು ಲೋಟ ಕುಡಿಯರಿ.
ಸೂಚನೆ: ಇವುಗಳು ಕೊರೊನಾಗೆ ಔಷಧಿಯಲ್ಲ, ಇವುಗಳಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಬಹುದು ಅಷ್ಟೇ.



Click it and Unblock the Notifications