Latest Updates
-
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ!
ಚಳಿಗಾಲದಲ್ಲಿ ರೋಸ್ಟ್ ಮಾಡಿದ ಬೆಳ್ಳುಳ್ಳಿ ತಿನ್ನಬೇಕು, ಏಕೆ?
ಬೆಳ್ಳುಳ್ಳು ಆ್ಯಂಟಿಆಕ್ಸಿಡೆಂಟ್ ಅಧಿಕವಿರುವ ಒಂದು ಅದ್ಭುತವಾದ ತರಕಾರಿಯಾಗಿದೆ. ಇದನ್ನು ತಿನ್ನುವುದರಿಂದ ದೇಹಕ್ಕೆ ಅನೇಕ ಗುಣಗಳಿವೆ, ಅದರಲ್ಲೂ ಚಳಿಗಾಲದಲ್ಲಿ ತಿನ್ನುವುದರಿಂದ ಸಾಮಾನ್ಯವಾಗಿ ಕಾಡುವ ಶೀತ, ಕೆಮ್ಮು ಇವುಗಳನ್ನು ಸಮರ್ಥವಾಗಿ ಎದುರಿಸಬಹುದು.

ಅದರಲ್ಲೂ ರೋಸ್ಟ್ ಮಾಡಿದ (ಹುರಿದ) ಬೆಳ್ಳುಳ್ಳಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಗ್ಯಾಸ್ ತುಂಬಿ ಹೊಟ್ಟೆ ಉಬ್ಬಿದಂತೆ ಭಾಸವಾದರೆ ಬೆಳ್ಳುಳ್ಳಿಯನ್ನು ರೋಸ್ಟ್ ಅಥವಾ ಸುಟ್ಟು ತಿಂದರೆ ಸಾಕು. ನಾವಿಲ್ಲಿ ರೋಸ್ಟಡ್ ಬೆಳ್ಳುಳ್ಳಿ ತಿನ್ನುವುದರಿಂದ ದೊರೆಯುವ ಪ್ರಯೋಜನಗಳೇನು ಎಂದು ಹೇಳಲಾಗಿದೆ ನೋಡಿ:
ಬೆಳ್ಳುಳ್ಳಿ ತಿನ್ನುವುದರಿಂದ ದೊರೆಯುವ ಪ್ರಯೋಜನಗಳು

ಮೈ ಬೊಜ್ಜು ಕರಗುವುದು
ಚಳಿಗಾಲದಲ್ಲಿ ಹುರಿದ (ತವಾದಲ್ಲಿ ಹಾಕಿ ಎಣ್ಣೆ ಹಾಕದೆ ಹುರಿದ)ಅಥವಾ ಸುಟ್ಟ ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕಡಿಮೆಯಾಗುವುದು.
ಕೊಲೆಸ್ಟ್ರಾಲ್ ಕಡಿಮೆಯಾದರೆ ತೂಕ ಇಳಿಕೆಗೆ ತುಂಬಾನೇ ಸಹಕಾರಿ.
ಬೆಳ್ಳುಳ್ಳಿ ಬೊಜ್ಜು ಕರಗಿಸುವುದರಿಂದ ತೆಳ್ಳಗಾಗುವಿರಿ.
ದಿನಾ 2 ಎಸಳು ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿ.

ಶೀತ-ಕೆಮ್ಮು ದೂರ ಮಾಡುವುದು
ಚಳಿಗಾಲದಲ್ಲಿ ಶೀತ-ಕೆಮ್ಮು ಈ ರೀತಿಯ ಸಮಸ್ಯೆ ಸರ್ವೇ ಸಾಮಾನ್ಯ. ದಿನಾ ಬೆಳ್ಳುಳ್ಳಿ ತಿನ್ನುವುದರಿಂದ ಈ ರೀತಿಯ ಸಮಸ್ಯೆ ಕಾಡಲ್ಲ, ಒಂದು ವೇಳೆ ಕೆಮ್ಮು-ಶೀತ ಇದ್ದರೆ ಬೆಳ್ಳುಳ್ಳಿ ಸುಟ್ಟು ಜಜ್ಜಿ ಅದರ ರಸ ತೆಗೆದು ಜೇನಿನ ಜೊತೆ ಮಿಶ್ರ ಮಾಡಿ ಬೆಳಗ್ಗೆ ಹಾಗೂ ಮಲಗುವ ಮುನ್ನ ಸೇವಿಸಿದರೆ ಬೇಗನೆ ಕಡಿಮೆಯಾಗುವುದು.

ರೋಗ ನಿರೋಧಕ ಸಾಮರ್ಥ್ಯ ಹೆಚ್ಚುವುದು
ರೋಸ್ಟ್ ಮಾಡಿದ ಬೆಳ್ಳುಳ್ಳಿಯನ್ನು ದಿನಾ ತಿನ್ನುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದು, ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಿಸುತ್ತದೆ ಹಾಗೂ ಮಲಬದ್ಧತೆ ಸಮಸ್ಯೆ ಹೋಗಲಾಡಿಸುತ್ತೆ. ಅಲ್ಲದೆ ಇದು ಬಿಪಿ ನಿಯಂತ್ರಿಸಲೂ ಸಹಕಾರಿ.

ಹೃದಯ ಕಾಯಿಲೆಯ ಅಪಾಯ ತಪ್ಪಿಸುತ್ತೆ
ಬೆಳ್ಳುಳ್ಳಿ ಹೃದಯದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ರೋಸ್ಟ್ ಮಾಡಿದ ಬೆಳ್ಳುಳ್ಳಿಯನ್ನು ಜೇನು ಜೊತೆ ಮಿಶ್ರ ಮಾಡಿ ಸೇರಿಸಿದರೆ ಹೃದಯದ ಕಾಯಿಲೆಯ ಅಪಾಯವನ್ನು ತಪ್ಪಿಸುತ್ತದೆ.

ಜೀರ್ಣಕ್ರಿಯೆಗೆ ಸಹಕಾರಿ
ಹೊಟ್ಟೆ ಸಂಬಂಧಿಸಿದ ಸಮಸ್ಯೆ ಹೋಗಲಾಡಿಸಲು ಬೆಳ್ಳುಳ್ಳಿ ಸಹಕಾರಿಯಾಗಿದೆ. ಇದನ್ನು ತಿನ್ನುವುದರಿಂದ ಜೀರ್ಣಕ್ರಿಯೆ ಸರಿಯಾಗಿ ನಡೆಯುವುದು, ಇದು ಗ್ಯಾಸ್ಟ್ರಿಕ್ ಸಮಸ್ಯೆ , ಮಲಬದ್ಧತೆ ಸಮಸ್ಯೆ ಹೋಗಲಾಡಿಸುತ್ತೆ.



Click it and Unblock the Notifications