Latest Updates
-
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ!
ಚಳಿಗಾಲದಲ್ಲಿ ರೋಸ್ಟ್ ಮಾಡಿದ ಬೆಳ್ಳುಳ್ಳಿ ತಿನ್ನಬೇಕು, ಏಕೆ?
ಬೆಳ್ಳುಳ್ಳು ಆ್ಯಂಟಿಆಕ್ಸಿಡೆಂಟ್ ಅಧಿಕವಿರುವ ಒಂದು ಅದ್ಭುತವಾದ ತರಕಾರಿಯಾಗಿದೆ. ಇದನ್ನು ತಿನ್ನುವುದರಿಂದ ದೇಹಕ್ಕೆ ಅನೇಕ ಗುಣಗಳಿವೆ, ಅದರಲ್ಲೂ ಚಳಿಗಾಲದಲ್ಲಿ ತಿನ್ನುವುದರಿಂದ ಸಾಮಾನ್ಯವಾಗಿ ಕಾಡುವ ಶೀತ, ಕೆಮ್ಮು ಇವುಗಳನ್ನು ಸಮರ್ಥವಾಗಿ ಎದುರಿಸಬಹುದು.

ಅದರಲ್ಲೂ ರೋಸ್ಟ್ ಮಾಡಿದ (ಹುರಿದ) ಬೆಳ್ಳುಳ್ಳಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಗ್ಯಾಸ್ ತುಂಬಿ ಹೊಟ್ಟೆ ಉಬ್ಬಿದಂತೆ ಭಾಸವಾದರೆ ಬೆಳ್ಳುಳ್ಳಿಯನ್ನು ರೋಸ್ಟ್ ಅಥವಾ ಸುಟ್ಟು ತಿಂದರೆ ಸಾಕು. ನಾವಿಲ್ಲಿ ರೋಸ್ಟಡ್ ಬೆಳ್ಳುಳ್ಳಿ ತಿನ್ನುವುದರಿಂದ ದೊರೆಯುವ ಪ್ರಯೋಜನಗಳೇನು ಎಂದು ಹೇಳಲಾಗಿದೆ ನೋಡಿ:
ಬೆಳ್ಳುಳ್ಳಿ ತಿನ್ನುವುದರಿಂದ ದೊರೆಯುವ ಪ್ರಯೋಜನಗಳು

ಮೈ ಬೊಜ್ಜು ಕರಗುವುದು
ಚಳಿಗಾಲದಲ್ಲಿ ಹುರಿದ (ತವಾದಲ್ಲಿ ಹಾಕಿ ಎಣ್ಣೆ ಹಾಕದೆ ಹುರಿದ)ಅಥವಾ ಸುಟ್ಟ ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕಡಿಮೆಯಾಗುವುದು.
ಕೊಲೆಸ್ಟ್ರಾಲ್ ಕಡಿಮೆಯಾದರೆ ತೂಕ ಇಳಿಕೆಗೆ ತುಂಬಾನೇ ಸಹಕಾರಿ.
ಬೆಳ್ಳುಳ್ಳಿ ಬೊಜ್ಜು ಕರಗಿಸುವುದರಿಂದ ತೆಳ್ಳಗಾಗುವಿರಿ.
ದಿನಾ 2 ಎಸಳು ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿ.

ಶೀತ-ಕೆಮ್ಮು ದೂರ ಮಾಡುವುದು
ಚಳಿಗಾಲದಲ್ಲಿ ಶೀತ-ಕೆಮ್ಮು ಈ ರೀತಿಯ ಸಮಸ್ಯೆ ಸರ್ವೇ ಸಾಮಾನ್ಯ. ದಿನಾ ಬೆಳ್ಳುಳ್ಳಿ ತಿನ್ನುವುದರಿಂದ ಈ ರೀತಿಯ ಸಮಸ್ಯೆ ಕಾಡಲ್ಲ, ಒಂದು ವೇಳೆ ಕೆಮ್ಮು-ಶೀತ ಇದ್ದರೆ ಬೆಳ್ಳುಳ್ಳಿ ಸುಟ್ಟು ಜಜ್ಜಿ ಅದರ ರಸ ತೆಗೆದು ಜೇನಿನ ಜೊತೆ ಮಿಶ್ರ ಮಾಡಿ ಬೆಳಗ್ಗೆ ಹಾಗೂ ಮಲಗುವ ಮುನ್ನ ಸೇವಿಸಿದರೆ ಬೇಗನೆ ಕಡಿಮೆಯಾಗುವುದು.

ರೋಗ ನಿರೋಧಕ ಸಾಮರ್ಥ್ಯ ಹೆಚ್ಚುವುದು
ರೋಸ್ಟ್ ಮಾಡಿದ ಬೆಳ್ಳುಳ್ಳಿಯನ್ನು ದಿನಾ ತಿನ್ನುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದು, ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಿಸುತ್ತದೆ ಹಾಗೂ ಮಲಬದ್ಧತೆ ಸಮಸ್ಯೆ ಹೋಗಲಾಡಿಸುತ್ತೆ. ಅಲ್ಲದೆ ಇದು ಬಿಪಿ ನಿಯಂತ್ರಿಸಲೂ ಸಹಕಾರಿ.

ಹೃದಯ ಕಾಯಿಲೆಯ ಅಪಾಯ ತಪ್ಪಿಸುತ್ತೆ
ಬೆಳ್ಳುಳ್ಳಿ ಹೃದಯದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ರೋಸ್ಟ್ ಮಾಡಿದ ಬೆಳ್ಳುಳ್ಳಿಯನ್ನು ಜೇನು ಜೊತೆ ಮಿಶ್ರ ಮಾಡಿ ಸೇರಿಸಿದರೆ ಹೃದಯದ ಕಾಯಿಲೆಯ ಅಪಾಯವನ್ನು ತಪ್ಪಿಸುತ್ತದೆ.

ಜೀರ್ಣಕ್ರಿಯೆಗೆ ಸಹಕಾರಿ
ಹೊಟ್ಟೆ ಸಂಬಂಧಿಸಿದ ಸಮಸ್ಯೆ ಹೋಗಲಾಡಿಸಲು ಬೆಳ್ಳುಳ್ಳಿ ಸಹಕಾರಿಯಾಗಿದೆ. ಇದನ್ನು ತಿನ್ನುವುದರಿಂದ ಜೀರ್ಣಕ್ರಿಯೆ ಸರಿಯಾಗಿ ನಡೆಯುವುದು, ಇದು ಗ್ಯಾಸ್ಟ್ರಿಕ್ ಸಮಸ್ಯೆ , ಮಲಬದ್ಧತೆ ಸಮಸ್ಯೆ ಹೋಗಲಾಡಿಸುತ್ತೆ.



Click it and Unblock the Notifications