Latest Updates
-
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು?
ಈ 5 ಪ್ರಮುಖ ಪ್ರಯೋಜನ ಮಣ್ಣಿನ ಪಾತ್ರೆಯಲ್ಲಿ ಅಡುಗೆ ಮಾಡಿದರೆ ಮಾತ್ರ ಸಿಗುವುದು
ನೀವು ಅಡುಗೆಗೆ ಮಣ್ಣಿನ ಪಾತ್ರೆ ಬಳಸುತ್ತೀರಾ? ಮಣ್ಣಿನ ಪಾತ್ರೆ ಬಳಸುವವರಾದರೆ ಅದರಲ್ಲಿ ಮಾಡುವ ಅಡುಗೆಯ ರುಚಿ ಇತರ ಪಾತ್ರೆಯಲ್ಲಿ ಮಾಡುವ ಅಡುಗೆಗಿಂತ ಹೇಗೆ ಭಿನ್ನವಾಗಿರುತ್ತೆ ಎಂಬುವುದು ಖಂಡಿತ ಗೊತ್ತಿರುತ್ತದೆ.

ಇಲ್ಲದಿದ್ದರೆ ಇನ್ನು ಕೆಲ ರೆಸ್ಟೋರೆಂಟ್ಗಳಲ್ಲಿ ಮಣ್ಣಿನ ಪಾತ್ರೆಯಲ್ಲಿ ಮಾಡಿದ ಬಿರಿಯಾನಿ ಅಥವಾ ಕರಿ ಎಂದು ಸ್ಪೆಷಲ್ ಆಗಿ ಹೈಲೈಟ್ ಮಾಡಿರುತ್ತಾರೆ, ಅಂಥ ಹೋಟೆಲ್ಗಳಲ್ಲಿ ಆಹಾರದ ರುಚಿ ನೋಡಿರುತ್ತೀರಿ...
ಈ ಮಣ್ಣಿನ ಪಾತ್ರೆಯಲ್ಲಿ ಮಾಡುವ ಅಡುಗೆ ರುಚಿಯಲ್ಲಿ ಮಾತ್ರವಲ್ಲ, ಇನ್ನಿತರ ವಿಷಯಗಳಲ್ಲೂ ಬೇರೆ ಪಾತ್ರೆಗಳಲ್ಲಿ ಮಾಡುವ ಅಡುಗೆಗಿಂತ ತುಂಬಾನೇ ವಿಶೇಷವಾಗಿರುತ್ತೆ. ಹೇಗೆ ಎಂದು ನೋಡೋಣ ಬನ್ನಿ:

1. ಮಣ್ಣಿನ ಪಾತ್ರೆಯಲ್ಲಿ ಮಾಡಿದರೆ ಆಹಾರದ ಪೋಷಕಾಂಶಗಳು ಹಾಳಾಗಲ್ಲ
ಮಣ್ಣಿನ ಪಾತ್ರೆ ಇತರ ಅಲ್ಯುಮಿನಿಯಂ, ನಾನ್ಸ್ಟಿಕ್ ಪಾತ್ರೆಗೆ ಹೋಲಿಸಿದರೆ ನಿಧಾನಕ್ಕೆ ಬಿಸಿಯಾಗುತ್ತೆ, ಅಲ್ಲದೆ ಆಹಾರದಲ್ಲಿ ಬಿಸಿ ಒಂದೇ ರೀತಿ ಹರಡುತ್ತದೆ. ಇದರಿಂದಾಗಿ ಇತರ ಪಾತ್ರೆಗಳಲ್ಲಿ ಮಾಡಿದ ಅಡುಗೆಗಿಂತ ಮಣ್ಣಿನ ಪಾತ್ರೆಯಲ್ಲಿ ಮಾಡಿದ ಅಡುಗೆಯಲ್ಲಿ ಪೋಷಕಾಂಶ ಹೆಚ್ಚಿರುತ್ತದೆ.

2. ನಮ್ಮ ಹೃದಯದ ಆರೋಗ್ಯಕ್ಕೆ ಒಳ್ಳೆಯದು
ಮಣ್ಣಿನ ಪಾತ್ರೆಯಲ್ಲಿ ಅಡುಗೆ ಮಾಡಿದಾಗ ಅದರಲ್ಲಿರುವ ನೀರಿನಂಶ, ಎಣ್ಣೆಯಂಶ ಎಲ್ಲಾ ಆಹಾರ ಬೇಯುವಾಗ ಬಳಕೆಯಾಗುತ್ತೆ, ಇತರ ಪಾತ್ರೆಯಲ್ಲಿ ಬಳಸುವ ಎಣ್ಣೆಗಿಂತ ಸ್ವಲ್ಪ ಎಣ್ಣೆ ಹಾಕಿದರೆ ಸಾಕಾಗುತ್ತೆ. ಎಣ್ಣೆ ಸ್ವಲ್ಪ ಬಳಸಿದಾಗ ಹೃದಯದ ಆರೋಗ್ಯಕ್ಕೆ ಒಳ್ಳೆಯದು.

3. ಆಹಾರದಲ್ಲಿ PH ಸಮತೋಲನ ಮಾಡುತ್ತದೆ
ಮಣ್ಣಿನ ಪಾತ್ರೆಯಲ್ಲಿ ಮಾಡಿದ ಅಡುಗೆಯಲ್ಲಿ PH ಸಮತೋಲನದಲ್ಲಿರುತ್ತದೆ. ಆದ್ದರಿಂದ ಮಣ್ಣಿನ ಪಾತ್ರೆಯಲ್ಲಿ ಮಾಡಿದ ಅಡುಗೆಗೆ ರುಚಿ ಮಾತ್ರವಲ್ಲ ಒಳ್ಳೆಯ ಸುವಾಸನೆ ಕೂಡ ಇರುತ್ತದೆ.

4. ಖನಿಜಾಂಶಗಳಿರುತ್ತದೆ
ಮಣ್ಣಿನ ಪಾತ್ರೆಯಲ್ಲಿ ಮಾಡಿದ ಅಡುಗೆಯಲ್ಲಿ ಕಬ್ಬಿಣದಂಶ, ಮೆಗ್ನಿಷ್ಯಿಯಂ ಮುಂತಾದ ಖನಿಜಾಂಶಗಳಿರುತ್ತದೆ. ಆಹಾರದಲ್ಲಿರುವ ಎಲ್ಲಾ ಖನಿಜಾಂಶಗಳು ಹಾಳಾಗದೆ ನಿಮಗೆ ಸಿಗುತ್ತದೆ.

5. ಪರಿಸರಕ್ಕೂ ಒಳ್ಳೆಯದು
ಇನ್ನು ಮಣ್ಣಿನ ಪಾತ್ರೆ ಒಡೆದಾಗ ಬಿಸಾಡಿದರೆ ಪರಿಸರಕ್ಕೆ ಯಾವುದೇ ಹಾನಿಯಿಲ್ಲ. ಅಡುಗೆ ಮಾಡಿದರೆ ಆರೋಗ್ಯಕ್ಕೆ ಒಳ್ಲೆಯದು, ಬಿಸಾಡಿದಾಗ ಪರಿಸರಕ್ಕೂ ಒಳ್ಳೆಯದು. ಒಟ್ಟಿನಲ್ಲಿ ಮಣ್ಣಿನ ಪಾತ್ರೆ ಹಾಗೂ ಅದರ ದಿ ಬೆಸ್ಟ್....



Click it and Unblock the Notifications
