Latest Updates
-
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ!
ಈ 5 ಪ್ರಮುಖ ಪ್ರಯೋಜನ ಮಣ್ಣಿನ ಪಾತ್ರೆಯಲ್ಲಿ ಅಡುಗೆ ಮಾಡಿದರೆ ಮಾತ್ರ ಸಿಗುವುದು
ನೀವು ಅಡುಗೆಗೆ ಮಣ್ಣಿನ ಪಾತ್ರೆ ಬಳಸುತ್ತೀರಾ? ಮಣ್ಣಿನ ಪಾತ್ರೆ ಬಳಸುವವರಾದರೆ ಅದರಲ್ಲಿ ಮಾಡುವ ಅಡುಗೆಯ ರುಚಿ ಇತರ ಪಾತ್ರೆಯಲ್ಲಿ ಮಾಡುವ ಅಡುಗೆಗಿಂತ ಹೇಗೆ ಭಿನ್ನವಾಗಿರುತ್ತೆ ಎಂಬುವುದು ಖಂಡಿತ ಗೊತ್ತಿರುತ್ತದೆ.

ಇಲ್ಲದಿದ್ದರೆ ಇನ್ನು ಕೆಲ ರೆಸ್ಟೋರೆಂಟ್ಗಳಲ್ಲಿ ಮಣ್ಣಿನ ಪಾತ್ರೆಯಲ್ಲಿ ಮಾಡಿದ ಬಿರಿಯಾನಿ ಅಥವಾ ಕರಿ ಎಂದು ಸ್ಪೆಷಲ್ ಆಗಿ ಹೈಲೈಟ್ ಮಾಡಿರುತ್ತಾರೆ, ಅಂಥ ಹೋಟೆಲ್ಗಳಲ್ಲಿ ಆಹಾರದ ರುಚಿ ನೋಡಿರುತ್ತೀರಿ...
ಈ ಮಣ್ಣಿನ ಪಾತ್ರೆಯಲ್ಲಿ ಮಾಡುವ ಅಡುಗೆ ರುಚಿಯಲ್ಲಿ ಮಾತ್ರವಲ್ಲ, ಇನ್ನಿತರ ವಿಷಯಗಳಲ್ಲೂ ಬೇರೆ ಪಾತ್ರೆಗಳಲ್ಲಿ ಮಾಡುವ ಅಡುಗೆಗಿಂತ ತುಂಬಾನೇ ವಿಶೇಷವಾಗಿರುತ್ತೆ. ಹೇಗೆ ಎಂದು ನೋಡೋಣ ಬನ್ನಿ:

1. ಮಣ್ಣಿನ ಪಾತ್ರೆಯಲ್ಲಿ ಮಾಡಿದರೆ ಆಹಾರದ ಪೋಷಕಾಂಶಗಳು ಹಾಳಾಗಲ್ಲ
ಮಣ್ಣಿನ ಪಾತ್ರೆ ಇತರ ಅಲ್ಯುಮಿನಿಯಂ, ನಾನ್ಸ್ಟಿಕ್ ಪಾತ್ರೆಗೆ ಹೋಲಿಸಿದರೆ ನಿಧಾನಕ್ಕೆ ಬಿಸಿಯಾಗುತ್ತೆ, ಅಲ್ಲದೆ ಆಹಾರದಲ್ಲಿ ಬಿಸಿ ಒಂದೇ ರೀತಿ ಹರಡುತ್ತದೆ. ಇದರಿಂದಾಗಿ ಇತರ ಪಾತ್ರೆಗಳಲ್ಲಿ ಮಾಡಿದ ಅಡುಗೆಗಿಂತ ಮಣ್ಣಿನ ಪಾತ್ರೆಯಲ್ಲಿ ಮಾಡಿದ ಅಡುಗೆಯಲ್ಲಿ ಪೋಷಕಾಂಶ ಹೆಚ್ಚಿರುತ್ತದೆ.

2. ನಮ್ಮ ಹೃದಯದ ಆರೋಗ್ಯಕ್ಕೆ ಒಳ್ಳೆಯದು
ಮಣ್ಣಿನ ಪಾತ್ರೆಯಲ್ಲಿ ಅಡುಗೆ ಮಾಡಿದಾಗ ಅದರಲ್ಲಿರುವ ನೀರಿನಂಶ, ಎಣ್ಣೆಯಂಶ ಎಲ್ಲಾ ಆಹಾರ ಬೇಯುವಾಗ ಬಳಕೆಯಾಗುತ್ತೆ, ಇತರ ಪಾತ್ರೆಯಲ್ಲಿ ಬಳಸುವ ಎಣ್ಣೆಗಿಂತ ಸ್ವಲ್ಪ ಎಣ್ಣೆ ಹಾಕಿದರೆ ಸಾಕಾಗುತ್ತೆ. ಎಣ್ಣೆ ಸ್ವಲ್ಪ ಬಳಸಿದಾಗ ಹೃದಯದ ಆರೋಗ್ಯಕ್ಕೆ ಒಳ್ಳೆಯದು.

3. ಆಹಾರದಲ್ಲಿ PH ಸಮತೋಲನ ಮಾಡುತ್ತದೆ
ಮಣ್ಣಿನ ಪಾತ್ರೆಯಲ್ಲಿ ಮಾಡಿದ ಅಡುಗೆಯಲ್ಲಿ PH ಸಮತೋಲನದಲ್ಲಿರುತ್ತದೆ. ಆದ್ದರಿಂದ ಮಣ್ಣಿನ ಪಾತ್ರೆಯಲ್ಲಿ ಮಾಡಿದ ಅಡುಗೆಗೆ ರುಚಿ ಮಾತ್ರವಲ್ಲ ಒಳ್ಳೆಯ ಸುವಾಸನೆ ಕೂಡ ಇರುತ್ತದೆ.

4. ಖನಿಜಾಂಶಗಳಿರುತ್ತದೆ
ಮಣ್ಣಿನ ಪಾತ್ರೆಯಲ್ಲಿ ಮಾಡಿದ ಅಡುಗೆಯಲ್ಲಿ ಕಬ್ಬಿಣದಂಶ, ಮೆಗ್ನಿಷ್ಯಿಯಂ ಮುಂತಾದ ಖನಿಜಾಂಶಗಳಿರುತ್ತದೆ. ಆಹಾರದಲ್ಲಿರುವ ಎಲ್ಲಾ ಖನಿಜಾಂಶಗಳು ಹಾಳಾಗದೆ ನಿಮಗೆ ಸಿಗುತ್ತದೆ.

5. ಪರಿಸರಕ್ಕೂ ಒಳ್ಳೆಯದು
ಇನ್ನು ಮಣ್ಣಿನ ಪಾತ್ರೆ ಒಡೆದಾಗ ಬಿಸಾಡಿದರೆ ಪರಿಸರಕ್ಕೆ ಯಾವುದೇ ಹಾನಿಯಿಲ್ಲ. ಅಡುಗೆ ಮಾಡಿದರೆ ಆರೋಗ್ಯಕ್ಕೆ ಒಳ್ಲೆಯದು, ಬಿಸಾಡಿದಾಗ ಪರಿಸರಕ್ಕೂ ಒಳ್ಳೆಯದು. ಒಟ್ಟಿನಲ್ಲಿ ಮಣ್ಣಿನ ಪಾತ್ರೆ ಹಾಗೂ ಅದರ ದಿ ಬೆಸ್ಟ್....



Click it and Unblock the Notifications