Latest Updates
-
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು
ನೀವೂ ಚಳಿಗಾಲದಲ್ಲಿ ತಣ್ಣೀರಿನಿಂದ ಸ್ನಾನ ಮಾಡುತ್ತೀರಾ, ಇಂದಿನಿಂದಲೇ ಈ ಅಭ್ಯಾಸ ಬಿಟ್ಟುಬಿಡಿ!
ಸಾಮಾನ್ಯವಾಗಿ ಎಲ್ಲರಿಗೂ ಬಿಸಿನರಿನಿಂದ ಸ್ನಾನ ಮಾಡುವ ಅಭ್ಯಾಸ ಇರುತ್ತದೆ. ಆದರೆ ಬಹಳ ವಿರಳವಾಗಿ ಕೆಲವು ಜನರು ಮಾತ್ರ ಯಾವುದೇ ಹವಾಮಾನವಿರಲಿ ತಣ್ಣೀರಿನಿಂದ ಸ್ನಾನ ಮಾಡುವ ಅಭ್ಯಾಸ ಇರುತ್ತದೆ.
ಇನ್ನೂ ಕೆಲವು ಜನರು ವರ್ಷವೆಲ್ಲಾ ಬಿಸಿ ನೀರಿನಿಂದ ಸ್ನಾನ ಮಾಡಿದರೂ, ಚಳಿಗಾಲದಲ್ಲಿ ಬರುವ ಧನುರ್ಮಾಸದ ನಿಮಿತ್ತ ಒಂದು ತಿಂಗಳು ಬೆಳಗಿನ ಜಾವದಲ್ಲಿ ತಣ್ಣೀರಿನಿಂದ ಸ್ನಾನ ಮಾಡುತ್ತಾರೆ.
ಆದರೆ ನೆನಪಿರಲಿ ಓದುಗರೇ, ಚಳಿಗಾಲದಲ್ಲಿ ತಣ್ಣೀರಿನಲ್ಲಿ ಸ್ನಾನ ಮಾಡುವುದು ಪ್ರಾಣಕ್ಕೆ ಅಪಾಯ ಎನ್ನುತ್ತಾರೆ ವೈದ್ಯರು. ಹೌದು, ಹಲವಾರು ಕಾರಣಗಳಿಂದಾಗಿ ಚಳಿಗಾಲದಲ್ಲಿ ತಣ್ಣೀರಿನಿಂದ ಸ್ನಾನ ಮಾಡಲೇಬಾರದಂತೆ. ಏಕೆ ಮುಂದೆ ಲೇಖನದಲ್ಲಿ ತಿಳಿಯೋಣ:

1. ಆರೋಗ್ಯ ತಜ್ಞರು ತಣ್ಣೀರಿನ ಸ್ನಾನ ಬೇಡ ಎನ್ನುತ್ತಾರೆ ಏಕೆ?
ಆರೋಗ್ಯ ತಜ್ಞರು ಚಳಿಗಾಲದಲ್ಲಿ ತಣ್ಣೀರಿನ ಬಳಕೆಯನ್ನು ಶಿಫಾರಸು ಮಾಡುವುದೇ ಇಲ್ಲ. ಅವರ ಪ್ರಕಾರ, ನಿಮ್ಮ ಸ್ನಾಯುಗಳು ಸಾಕಷ್ಟು ರಕ್ತವನ್ನು ಪಡೆಯದಿದ್ದಾಗ ಹೃದಯಾಘಾತ ಅಥವಾ ಪಾರ್ಶ್ವವಾಯು ಸಂಭವಿಸುತ್ತದೆ ಮತ್ತು ರಕ್ತ ಹೆಪ್ಪುಗಟ್ಟುವಿಕೆಯಿಂದಾಗಿ ಅವು ನಿಲ್ಲುತ್ತವೆ. ಹಾಗಾದರೆ ಚಳಿಗಾಲದಲ್ಲಿ ತಣ್ಣೀರಿನಿಂದ ಸ್ನಾನ ಮಾಡುವುದು ನಿಷಿದ್ಧ ಎನ್ನುತ್ತಾರೆ.

2. ತಣ್ಣೀರಿನಿಂದ ಸ್ನಾನ ಮಾಡಿದರೆ ಏನಾಗುತ್ತದೆ?
ಹೃದ್ರೋಗದಿಂದ ಬಳಲುತ್ತಿರುವವರಿಗೆ ತಣ್ಣೀರಿನಿಂದ ಹಠಾತ್ ಸ್ನಾನ ಮಾಡುವುದು ಭಾರೀ ಅಪಾಯವನ್ನು ಉಂಟುಮಾಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ತಣ್ಣೀರು ದೇಹವನ್ನು ಆಘಾತಗೊಳಿಸುತ್ತದೆ, ಇದು ಚರ್ಮದಲ್ಲಿನ ರಕ್ತನಾಳಗಳನ್ನು ಸಂಕುಚಿತಗೊಳಿಸುತ್ತದೆ, ರಕ್ತದ ಹರಿವನ್ನು ನಿಧಾನಗೊಳಿಸುತ್ತದೆ. ಹೃದಯವು ವೇಗವಾಗಿ ಬಡಿಯಲು ಪ್ರಾರಂಭಿಸುತ್ತದೆ, ಇದರಿಂದ ಅದು ದೇಹಕ್ಕೆ ರಕ್ತವನ್ನು ಪಂಪ್ ಮಾಡುತ್ತದೆ, ಇದರಿಂದ ರಕ್ತದೊತ್ತಡ, ಬ್ರೈನ್ ಸ್ಟ್ರೋಕ್ ಸಂಭವಿಸಬಹುದು ಎನ್ನುತ್ತಾರೆ.

3. ಚಳಿಗಾಲದಲ್ಲಿ ಸ್ಟ್ರೋಕ್ ಅನ್ನು ತಪ್ಪಿಸುವುದು ಹೇಗೆ?
ಭಾರತದಲ್ಲಿ ಅಂಗವೈಕಲ್ಯ ಮತ್ತು ಸಾವಿಗೆ ಬ್ರೈನ್ ಸ್ಟ್ರೋಕ್ ದೊಡ್ಡ ಕಾರಣ ಎಂದು ವೈದ್ಯರು ಹೇಳುತ್ತಾರೆ. ಪ್ರತಿ ವರ್ಷ ಸುಮಾರು 18 ಲಕ್ಷ ಪ್ರಕರಣಗಳು ಕೇವಲ ಪಾರ್ಶ್ವವಾಯುವಿಗೆ ತುತ್ತಾಗುತ್ತಿದ್ದಾರೆ. ಆದ್ದರಿಂದ ಶೀತ ವಾತಾವರಣದಲ್ಲಿ ತಣ್ಣೀರಿನ ಸ್ನಾನವನ್ನು ಕಡ್ಡಾಯವಾಗಿ ತಪ್ಪಿಸುವುದು ಮೊದಲು ನೀವು ತೆಗೆದುಕೊಳ್ಳಬಹುದಾದ ಎಚ್ಚರಿಕೆಯಾಗಿದೆ.

4. ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಹೀಗೆ ಮಾಡಿ
* ತಣ್ಣೀರಿನಿಂದ ಸ್ನಾನ ಮಾಡುವುದನ್ನು ತಪ್ಪಿಸಿ: ಯಾವಾಗಲೂ ಉಗುರು ಬೆಚ್ಚಗಿನ ಅಥವಾ ಬಿಸಿ ನೀರಿನಿಂದ ಸ್ನಾನ ಮಾಡಿ.
* ಚಳಿಗಾಲದಲ್ಲಿ ನಿಮ್ಮನ್ನು ಸದಾ ಬೆಚ್ಚಗೆ ಇಟ್ಟುಕೊಳ್ಳಿ, ಶೀತ ವಾತಾವರಣದಲ್ಲಿ ನೀವು ಆಗಾಗ ಅನಾರೋಗ್ಯಕ್ಕೆ ಒಳಗಾಗಿದ್ದರೆ ನಿಮ್ಮನ್ನು ಚೆನ್ನಾಗಿ ಶೀತವಾಗಿರುವಂತೆ ಇಟ್ಟುಕೊಳ್ಳಿ.
* ಸಕ್ರಿಯರಾಗಿರಿ: ಪ್ರತಿದಿನ ಕನಿಷ್ಠ 30 ನಿಮಿಷಗಳನ್ನು ತೆಗೆದುಕೊಳ್ಳಿ ಮತ್ತು ವ್ಯಾಯಾಮ ಮಾಡಿ. ನೀವು ಓಟ, ಜಾಗಿಂಗ್, ಏರೋಬಿಕ್ಸ್, ಯೋಗ, ವರ್ಕೌಟ್ಗಳು, ನೃತ್ಯ ಅಥವಾ ಧ್ಯಾನವನ್ನು ಪ್ರಯತ್ನಿಸಬಹುದು. ಪ್ರತಿದಿನ ವ್ಯಾಯಾಮ ಮಾಡುವುದರಿಂದ ದೇಹವು ಬೆಚ್ಚಗಿರುತ್ತದೆ ಮತ್ತು ಫಿಟ್ ಆಗಿರುತ್ತದೆ.



Click it and Unblock the Notifications