Latest Updates
-
ಬಿಸಿಲು ಅಥವಾ ಮಳೆ: ಹವಾಮಾನದ ಅಬ್ಬರದ ನಡುವೆಯೂ ನಿಮ್ಮ ಮದುವೆ ಸಂಭ್ರಮವನ್ನು ಅಚ್ಚುಕಟ್ಟಾಗಿ ಪ್ಲಾನ್ ಮಾಡುವುದು ಹೇಗೆ? -
ಬಿಸಿಲ ಧಗೆಗೆ ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ನಿಮ್ಮ ಮನೆಯನ್ನು ತಂಪಾಗಿರಿಸಲು ಮತ್ತು ಗಿಡಗಳನ್ನು ಉಳಿಸಲು ಇಲ್ಲಿವೆ ಅದ್ಭುತ ಟಿಪ್ಸ್! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಅಡುಗೆ ಮನೆಯಲ್ಲಿರುವ ಈ ಪದಾರ್ಥಗಳೇ ಸಾಕು, ಇಂದೇ ಟ್ರೈ ಮಾಡಿ! -
ಕಾನ್ 2026 ರೆಡ್ ಕಾರ್ಪೆಟ್ನಲ್ಲಿ ಭಾರತೀಯ ತಾರೆಯರ ಮಿಂಚಿನ ಸಂಚಲನ: ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ನಾನು ಕೋವಿಡ್ 19 ನಿಂದ ಚೇತರಿಸಲು ಲಸಿಕೆಯೇ ಕಾರಣ: ವೈದ್ಯ ಸಿ ಎಸ್ ರಾಜನ್
'Story Of strength' ಎನ್ನುವುದು ಒನ್ ಇಂಡಿಯಾ ಕೈಗೊಂಡಿರುವ ಒಂದು ಅಭಿಯಾನವಾಗಿದೆ. ಕೋವಿಡ್ 19ನಿಂದ ಗುಣಮುಖರಾದವರು ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ಇತರರಲ್ಲಿ ಧೈರ್ಯ ತುಂಬುವುದು ಈ ಅಭಿಯಾನದ ಉದ್ದೇಶವಾಗಿದೆ.

ನಮ್ಮೊಂದಿಗೆ ಡಾ ಸಿ. ಎಸ್ ರಾಜನ್ ತಾವು ಕೋವಿಡ್ 19 ಮಣಿಸಿದ್ದು ಹೇಗೆ ಎಂಬುವುದಾಗಿ ನಮ್ಮೊಂದಿಗೆ ಹಂಚಿಕೊಂಡಿದ್ದಾರೆ. ಇವರು ನಿವೃತ್ತ ಸರ್ಜನ್, 30 ವರ್ಷಗಳವರೆಗೆ ಬೆಂಗಳೂರಿನ ಮಿಷನ್ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿದ್ದಾರೆ. ನಿವೃತ್ತಿ ಬಳಿಕ ಕ್ಲಿನಿಕ್ ಇಟ್ಟು ರೋಗಿಗಳ ಆರೈಕೆ ಮಾಡುತ್ತಿದ್ದರು. ದಿನದ ಸ್ವಲ್ಪ ಸಮಯ ರೋಗಿಗಳ ಆರೈಕೆಯಲ್ಲಿ ಕಳೆದರೆ ಮತ್ತೆ ಸ್ವಲ್ಪ ಸಮಯ ತಮ್ಮ ನಿವೃತ್ತಿ ಜೀವನವನ್ನು ಆಸ್ವಾದಿಸುತ್ತಿದ್ದರು.

ಎಲ್ಲಾ ಮುನ್ನೆಚ್ಚರಿಕೆ ವಹಿಸಿದರೂ ಸೋಂಕು ತಗುಲಿತ್ತು
ಅವರೇ ಹೇಳುವ ಪ್ರಕಾರ 'ಕೋವಿಡ್ 19 ಎಲ್ಲಾ ನಿಯಮಗಳನ್ನು ಪಾಲಿಸುತ್ತಿದ್ದೆ, ಕೊರೊನಾ ಬಾರದಂತೆ ಸಾಕಷ್ಟು ಮುನ್ನೆಚ್ಚರಿಕೆವಹಿಸಿದ್ದೆ, ಆದರೂ ಸೋಂಕು ತಗುಲಿತು. ಮೂಗು ಸೋರುವುದು, ಗಂಟಲು ಕಟ್ಟುವುದು ಮುಂತಾದ ಲಕ್ಷಣಗಳು ಕಂಡು ಬಂದವು. ನನಗೆ ಮಾತ್ರ ಕುಟುಂಬದವರಿಗೂ ಸೋಂಕು ತಗುಲಿತ್ತು. ಔಷಧಿಗಳನ್ನು ತೆಗೆದುಕೊಂಡೆ, ಆದರೆ ನನಗೆ ಉಸಿರಾಟದ ತೊಂದರೆ ಉಂಟಾದ ಕಾರಣ ಮನೆಯವರು ಆಸ್ಪತ್ರೆಗೆ ಕೊಂಡೊಯ್ಯದ್ದರು.

ಆಕ್ಸಿಜನ್ ಪ್ರಮಾಣ ಕಡಿಮೆಯಾಗುತ್ತಿತ್ತು
ನನ್ನ ಆಕ್ಸಿಜನ್ ಪ್ರಮಾಣ ತುಂಬ ಕಡಿಮೆಯಾಗುತ್ತಿತ್ತು. ತೀವ್ರ ನಿಗಾ ಘಟಕದಲ್ಲಿ ಇಟ್ಟು ಆರೈಕೆ ಮಾಡುತ್ತಿದ್ದರು, ಇನ್ನೇನು ICUಗೆ ಹಾಕಬೇಕು ಎಂಬ ಪರಿಸ್ಥಿತಿ ಉಂಟಾಯಿತು, ಆದರೆ ಆಕ್ಸಿಜನ್ ಸಪ್ಲಿಮೆಂಟ್ ನೀಡುತ್ತಿರುವಾಗಲೇ ದೇಹದಲ್ಲಿ ಸ್ವಲ್ಪ ಚೇತರಿಕೆ ಕಂಡು ಬಂತು, ಆರೋಗ್ಯ ಕುಸಿದಿದ್ದರೂ, ಮುಖದಲ್ಲಿ ನಗು ಮಯವಾಗಿರಲಿಲ್ಲ. ಮನಸ್ಸಿನಲ್ಲಿ ಧೈರ್ಯ ಇತ್ತು. ನಂತರ ವಾರದಲ್ಲಿ ಸುಧಾರಿಸಿ ಮನೆಗೆ ಬಂದೆ'

ಲಸಿಕೆ ನನ್ನ ಉಳಿಸಿದ್ದು
ನನ್ನ ಉಳಿಸಿದ್ದು ಲಸಿಕೆ ಎಂದೇ ನಾನು ಹೇಳುತ್ತೇನೆ. ಜನವರಿ-ಮಾರ್ಚ್ ಅಂತರದಲ್ಲಿ ಎರಡು ಡೋಸ್ ಲಸಿಕೆ ಪಡೆದಿದ್ದೆ. ಅದೇ ನನ್ನ ಪ್ರಾಣ ಉಳಿಸಿದ್ದು, ಲಸಿಕೆ ಪಡೆದ ಬಳಿಕ ಆ್ಯಂಟಿ ಬಾಡಿ ಬರಲು ಕೆಲವು ವಾರ ತೆಗೆದುಕೊಳ್ಳುತ್ತದೆ, ನನ್ನಲ್ಲಿ ಸೋಂಕು ತಗುಲಿದ ಬಳಿಕ ಈ ರೋಗ ನಿರೋಧಕ ಶಕ್ತಿ ಮರಳಿ, ನನಗೆ ಬೇಗನೆ ಚೇತರಿಸಿಕೊಳ್ಳಲು ಸಹಾಯವಾಯ್ತು' ಎಂದಿದ್ದಾರೆ.

ಎಲ್ಲರೂ ಲಸಿಕೆ ಪಡೆಯಿರಿ
ಕೋವಿಶೀಲ್ಡ್ ಹಾಗೂ ಕೊವಾಕ್ಸಿನ್ ಎರಡರ ನಡುವೆ ದೊಡ್ಡ ವ್ಯತ್ಯಾಸವೇನು ಇಲ್ಲ, ಇದರಲ್ಲಿ ಯಾವ ಲಸಿಕೆಯಾದರೂ ಪಡೆಯಿರಿ, ಇದರಿಂದ ಕೊರೊನಾ ಗೆಲ್ಲಲು ಸಾಧ್ಯವಾಗುವುದು ಎಂದು ಜನರಿಗೆ ಸಲಹೆ ನೀಡಿದ್ದಾರೆ.



Click it and Unblock the Notifications