Just In
Don't Miss
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮನೆಯಲ್ಲಿಯೇ ಇದ್ದು ಕೊರೊನಾದಿಂದ ಹೇಗೆ ಚೇತರಿಸಿದೆ: ಶ್ರೀಧರ್ ರಾವ್ ಹಂಚಿಕೊಂಡ ಅನುಭವ
ಕೊರೊನಾವೈರಸ್ ಈ ಪದ ಕೇಳಿಯೇ ಜನರಿಗೆ ಸಾಕಾಗಿದೆ. ಯಾವಾಗಪ್ಪಾ ಈ ಹೆಸರು ಮರೆತು ಹೋಗುವುದು ಎಂದು ಜನರು ಬಯಸುತ್ತಿದ್ದಾರೆ. ಆದರೆ ದಿನಾ ಕೊರೊನಾ ಕೇಸ್ಗಳು ಪತ್ತೆಯಾಗುವುದು ಮಾತ್ರ ಕಡಿಮೆಯಾಗುತ್ತಿಲ್ಲ. ಇದರ ವಿರುದ್ಧ ನಿರಂತರ ಹೋರಾಟ ನಡೆಯುತ್ತಿದೆ.
ಕೊರೊನಾ ಬಗ್ಗೆ ಸಾಕಷ್ಟು ಭಯ ಕೂಡ ಜನರಲ್ಲಿದೆ. ಆದರೆ ಈ ಕಾಯಿಲೆಯನ್ನು ಮಣಿಸಲು ಸಾಧ್ಯ ಎಂದು ಇದರಿಂದ ಚೇತರಿಸಿಕೊಂಡವರು ಸಾಬೀತು ಪಡಿಸಿದ್ದಾರೆ ಕೋವಿಡ್ 19ನಿಂದ ಚೇತರಿಸಿಕೊಂಡ ಶ್ರೀಧರ್ ರಾವ್ ಅವರು ಬೋಲ್ಡ್ ಸ್ಕೈ ಕನ್ನಡ ಜೊತೆ ಅನುಭವ ಹಂಚಿಕೊಂಡಿದ್ದಾರೆ. ಈ ಸಂದರ್ಶನವನ್ನು ಅಂಜಲಿರಾವ್ ಅವರು ನಡೆಸಿಕೊಟ್ಟಿದ್ದಾರೆ.
ಶ್ರೀಧರ್ ರಾವ್ ಅವರು ಸಾಕಷ್ಟು ಕೋವಿಡ್ 19 ಬಾರದಂತೆ ತಡೆಗಟ್ಟಲು ಸಾಕಷ್ಟು ಮುನ್ನೆಚ್ಚರಿಕೆವಹಿಸಿದ್ದರು. ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದರು, ಆಗಾಗ ಸ್ಯಾನಿಟೈಸರ್ ಬಳಸುತ್ತಿದ್ದರು, ಹೊರಗಡೆ ಹೋಗುವಾಗ ಮಾಸ್ಕ್ ಧರಿಸುತ್ತಿದ್ದರು. ಆದರೂ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ತಮಗೆ ಹೇಗೆ ಕೊರೊನಾ ಬಂದಿರಬಹುದು ಎಂಬುವುದನ್ನು ಅವರು ಹೇಳಿರುವ ಅಂಶವನ್ನು ಪ್ರತಿಯೊಬ್ಬರು ಗಮನಿಸಬೇಕಾಗಿದೆ. ಏಕೆಂದರೆ ನಾವೆಲ್ಲಾ ತೋರುವ ಚಿಕ್ಕ ನಿರ್ಲಕ್ಷ್ಯ ಕೂಡ ಹೇಗೆ ಅಪಾಯವನ್ನು ತರಬಹುದು ಎಂದು ಹೇಳಿದ್ದಾರೆ.
ಅಲ್ಲದೆ ಮನೆಯಲ್ಲಿಯೇ ಐಸೋಲೇಟ್ ಆಗಿ ಕೊರೊನಾದಿಂದ ಚೇತರಿಸಿಕೊಂಡಿರುವ ಅವರು ಆಯುರ್ವೇದ ಔಷಧಿ, ನಿಂಬೆಹಣ್ಣಿನ ರಸ ಹಾಗೂ ಯೋಗ ಹೇಗೆ ಬೇಗನೆ ಚೇತರಿಸಿಕೊಳ್ಳಲು ಸಹಾಯವಾಯಿತು ಎಂಬುವುದನ್ನು ತುಂಬಾ ಚೆನ್ನಾಗಿ ವಿವರಿಸಿದ್ದಾರೆ. ಇವರ ಮಾತುಗಳನ್ನು ಕೇಳುತ್ತಿದ್ದರೆ ಮನಸ್ಸಿನಲ್ಲಿದ್ದ ಭಯ ಹೋಗಿ ಕೊರೊನಾವೈರಸ್ ಗೆಲ್ಲಲು ಸಾಧ್ಯ ಎಂಬ ಆತ್ಮವಿಶ್ವಾಸ ಮೂಡುವುದು.