Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಮನೆಯಲ್ಲಿಯೇ ಇದ್ದು ಕೊರೊನಾದಿಂದ ಹೇಗೆ ಚೇತರಿಸಿದೆ: ಶ್ರೀಧರ್ ರಾವ್ ಹಂಚಿಕೊಂಡ ಅನುಭವ
ಕೊರೊನಾವೈರಸ್ ಈ ಪದ ಕೇಳಿಯೇ ಜನರಿಗೆ ಸಾಕಾಗಿದೆ. ಯಾವಾಗಪ್ಪಾ ಈ ಹೆಸರು ಮರೆತು ಹೋಗುವುದು ಎಂದು ಜನರು ಬಯಸುತ್ತಿದ್ದಾರೆ. ಆದರೆ ದಿನಾ ಕೊರೊನಾ ಕೇಸ್ಗಳು ಪತ್ತೆಯಾಗುವುದು ಮಾತ್ರ ಕಡಿಮೆಯಾಗುತ್ತಿಲ್ಲ. ಇದರ ವಿರುದ್ಧ ನಿರಂತರ ಹೋರಾಟ ನಡೆಯುತ್ತಿದೆ.
ಕೊರೊನಾ ಬಗ್ಗೆ ಸಾಕಷ್ಟು ಭಯ ಕೂಡ ಜನರಲ್ಲಿದೆ. ಆದರೆ ಈ ಕಾಯಿಲೆಯನ್ನು ಮಣಿಸಲು ಸಾಧ್ಯ ಎಂದು ಇದರಿಂದ ಚೇತರಿಸಿಕೊಂಡವರು ಸಾಬೀತು ಪಡಿಸಿದ್ದಾರೆ ಕೋವಿಡ್ 19ನಿಂದ ಚೇತರಿಸಿಕೊಂಡ ಶ್ರೀಧರ್ ರಾವ್ ಅವರು ಬೋಲ್ಡ್ ಸ್ಕೈ ಕನ್ನಡ ಜೊತೆ ಅನುಭವ ಹಂಚಿಕೊಂಡಿದ್ದಾರೆ. ಈ ಸಂದರ್ಶನವನ್ನು ಅಂಜಲಿರಾವ್ ಅವರು ನಡೆಸಿಕೊಟ್ಟಿದ್ದಾರೆ.

ಶ್ರೀಧರ್ ರಾವ್ ಅವರು ಸಾಕಷ್ಟು ಕೋವಿಡ್ 19 ಬಾರದಂತೆ ತಡೆಗಟ್ಟಲು ಸಾಕಷ್ಟು ಮುನ್ನೆಚ್ಚರಿಕೆವಹಿಸಿದ್ದರು. ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದರು, ಆಗಾಗ ಸ್ಯಾನಿಟೈಸರ್ ಬಳಸುತ್ತಿದ್ದರು, ಹೊರಗಡೆ ಹೋಗುವಾಗ ಮಾಸ್ಕ್ ಧರಿಸುತ್ತಿದ್ದರು. ಆದರೂ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ತಮಗೆ ಹೇಗೆ ಕೊರೊನಾ ಬಂದಿರಬಹುದು ಎಂಬುವುದನ್ನು ಅವರು ಹೇಳಿರುವ ಅಂಶವನ್ನು ಪ್ರತಿಯೊಬ್ಬರು ಗಮನಿಸಬೇಕಾಗಿದೆ. ಏಕೆಂದರೆ ನಾವೆಲ್ಲಾ ತೋರುವ ಚಿಕ್ಕ ನಿರ್ಲಕ್ಷ್ಯ ಕೂಡ ಹೇಗೆ ಅಪಾಯವನ್ನು ತರಬಹುದು ಎಂದು ಹೇಳಿದ್ದಾರೆ.
ಅಲ್ಲದೆ ಮನೆಯಲ್ಲಿಯೇ ಐಸೋಲೇಟ್ ಆಗಿ ಕೊರೊನಾದಿಂದ ಚೇತರಿಸಿಕೊಂಡಿರುವ ಅವರು ಆಯುರ್ವೇದ ಔಷಧಿ, ನಿಂಬೆಹಣ್ಣಿನ ರಸ ಹಾಗೂ ಯೋಗ ಹೇಗೆ ಬೇಗನೆ ಚೇತರಿಸಿಕೊಳ್ಳಲು ಸಹಾಯವಾಯಿತು ಎಂಬುವುದನ್ನು ತುಂಬಾ ಚೆನ್ನಾಗಿ ವಿವರಿಸಿದ್ದಾರೆ. ಇವರ ಮಾತುಗಳನ್ನು ಕೇಳುತ್ತಿದ್ದರೆ ಮನಸ್ಸಿನಲ್ಲಿದ್ದ ಭಯ ಹೋಗಿ ಕೊರೊನಾವೈರಸ್ ಗೆಲ್ಲಲು ಸಾಧ್ಯ ಎಂಬ ಆತ್ಮವಿಶ್ವಾಸ ಮೂಡುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
