Latest Updates
-
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ! -
ದೆಹಲಿ ಧೂಳಿನ ಬಿರುಗಾಳಿ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 500 ರೂಪಾಯಿಯ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಬದಲಾವಣೆ ನಿಮ್ಮನ್ನು ಹೀಟ್ಸ್ಟ್ರೋಕ್ನಿಂದ ರಕ್ಷಿಸುತ್ತದೆ! -
ರೆಡ್ ಕಾರ್ಪೆಟ್ನಿಂದ ನಿಮ್ಮ ವಾರ್ಡ್ರೋಬ್ಗೆ: ಕಾನ್ 2026ರ ಈ ಫ್ಯಾಷನ್ ಟ್ರೆಂಡ್ಸ್ ಈಗ ಸಿಕ್ಕಾಪಟ್ಟೆ ವೈರಲ್! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ!
ದೀಪಾವಳಿ ಪಟಾಕಿ ಹಚ್ಚುವಾಗ ಸುಟ್ಟ ಗಾಯಗಳಾದರೆ ಮನೆಯಲ್ಲಿಯೇ ಹೀಗೆ ಮಾಡಿ
ಬೆಳಕಿನ ಹಬ್ಬದೀಪಾವಳಿಯಂದು ಮನೆಯಲ್ಲಿ ಪಟಾಕಿಯ ಬೆಳಕು ಇಲ್ಲದಿದ್ದರೆ ಹಬ್ಬ ಅಪೂರ್ಣವೆನಿಸುತ್ತದೆ. ದೀಪಾವಳಿಯಂದು ಪಟಾಕಿ ಹೊಡೆಯುವುದು ಮಕ್ಕಳಿಗೆ ತುಂಬಾ ಇಷ್ಟ. ಇದರ ಬೆಳಕು ಮತ್ತು ಸದ್ದು ಮಕ್ಕಳಿಗೆ ಖುಷಿ ನೀಡುತ್ತದೆ. ಆದರೆ, ಪಟಾಕಿ ಹಚ್ಚುವಾಗ ಎಚ್ಚರಿಕೆ ವಹಿಸುವುದು ಅಗತ್ಯ. ದೇಹದಿಂದ ಕನಿಷ್ಠ 5 ಮೀಟರ್ ದೂರದಲ್ಲಿ ಪಟಾಕಿಗಳನ್ನು ಸಿಡಿಸಿ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಿ. ಏಕೆಂದರೆ, ಪಟಾಕಿಗಳಿಂದ ಅವಘಡ ಸಂಭವಿಸಿರುವುದನ್ನು ಹಿಂದಿನಂದಲೂ ಕೇಳಿಕೊಂಡು ಬರುತ್ತಿದ್ದೇವೆ.
ಈ ಪಟಾಕಿಯಿಂದ ಸುಟ್ಟಗಾಯಕ್ಕೆ ತಕ್ಷಣವೇ ಚಿಕಿತ್ಸೆ ನೀಡದಿದ್ದರೆ, ಅದು ಸಮಸ್ಯೆಗಳನ್ನು ಉಂಟುಮಾಡಬಹುದು. ದೀಪಾವಳಿಯಂದು ಪಟಾಕಿ ಹೊಡೆಯುವ ಸಮಯದಲ್ಲಿ ಯಾರಾದರೂ ವ್ಯಕ್ತಿಯ ಕೈ ಸುಟ್ಟರೆ, ತಕ್ಷಣ ಮನೆಯಲ್ಲಿ ಪ್ರಥಮ ಚಿಕಿತ್ಸೆ ಮಾಡಿ. ಆದ್ದರಿಂದ ಈ ಸುಟ್ಟಗಾಯಗಳಿಗೆ ಹೇಗೆ ಚಿಕಿತ್ಸೆ ನೀಡಬೇಕು ಎಂಬುದನ್ನು ಇಲ್ಲಿ ತಿಳಿಯೋಣ.
ಪಟಾಕಿಯಿಂದ ಸುಟ್ಟಗಾಯಕ್ಕೆ ಮಾಡಬೇಕಾದ ಚಿಕಿತ್ಸೆ ಏನು ಎಂಬುದನ್ನು ಈ ಕೆಳಗೆ ನೀಡಲಾಗಿದೆ:

ಆಲೂಗಡ್ಡೆಯಿಂದ ಚಿಕಿತ್ಸೆ ನೀಡಿ:
ದೀಪಾವಳಿಯಂದು ಪಟಾಕಿ ಸಿಡಿಸುವಾಗ ಮಗುವಿನ ಕೈ ಅಥವಾ ಇನ್ನಾವುದೇ ಭಾಗ ಸುಟ್ಟರೆ ಆಲೂಗಡ್ಡೆ ಬಳಸಿ. ಆಲೂಗಡ್ಡೆಯಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ಗಾಯಗಳನ್ನು ತ್ವರಿತವಾಗಿ ಗುಣಪಡಿಸಲು ಸಹಾಯ ಮಾಡತ್ತದೆ ಜೊತೆಗೆ ತೇವಾಂಶವನ್ನು ನೀಡುತ್ತದೆ. ಆಲೂಗಡ್ಡೆಯನ್ನು ಕತ್ತರಿಸಿ ಸುಟ್ಟ ಜಾಗಕ್ಕೆ ಹಚ್ಚಿದರೆ ಗಾಯಕ್ಕೆ ತಂಪು ಸಿಗುತ್ತದೆ.

ಸುಟ್ಟ ಜಾಗಕ್ಕೆ ಅರಿಶಿನವನ್ನು ಹಚ್ಚಿ:
ದೀಪಾವಳಿಯಂದು ಪಟಾಕಿ ಹಚ್ಚುವಾಗ ಯಾವುದಾದರೂ ಭಾಗ ಸುಟ್ಟರೆ, ಆ ಭಾಗಕ್ಕೆ ಅರಿಶಿನವನ್ನು ಹಚ್ಚಿ. ನಂಜುನಿರೋಧಕ ಗುಣಗಳಿಂದ ಸಮೃದ್ಧವಾಗಿರುವ ಅರಿಶಿನ ಪೇಸ್ಟ್ ಕಿರಿಕಿರಿಯನ್ನು ನಿವಾರಿಸುತ್ತದೆ. ಜೊತೆಗೆ ಉರಿಯನ್ನು ಕಡಿಮೆ ಮಾಡುವುದು.

ಕಿರಿಕಿರಿ ಕಡಿಮೆ ಮಾಡಲು ಜೇನುತುಪ್ಪ:
ಪಟಾಕಿಯಿಂದ ಚರ್ಮ ಸುಟ್ಟರೆ ಜೇನು ತುಪ್ಪ ಹಚ್ಚಿದರೆ ಬೇಗ ಪರಿಹಾರ ಸಿಗುತ್ತದೆ. ಜೇನು ತುಪ್ಪವನ್ನು ಸುಟ್ಟ ಜಾಗಕ್ಕೆ ಹಚ್ಚುವುದರಿಂದ ಕಿರಿಕಿರಿ ಹಾಗೂ ಉರಿಯಿಂದ ಪಾರಾಗಬಹುದು, ಜೊತೆಗೆ ಗಾಯವೂ ಬೇಗನೇ ವಾಸಿಯಾಗುತ್ತದೆ.

ತಂಪಿನ ಅನುಭವಕ್ಕೆ ಅಲೋವೆರಾ ಬಳಸಿ:
ಸುಟ್ಟ ಗಾಯದ ಉರಿಯನ್ನು ಕಡಿಮೆ ಮಾಡಲು ನೀವು ಅಲೋವೆರಾವನ್ನು ಬಳಸಬಹುದು. ಅಲೋವೆರಾದ ತಿರುಳನ್ನು ತೆಗೆದು ಗಾಯದ ಮೇಲೆ ಹಚ್ಚಿದರೆ ತಂಪು ಸಿಗುತ್ತದೆ. ಜೊತೆಗೆ ಗುಳ್ಳೆಗಳಾಗುವುದಿಲ್ಲ.

ಟೂತ್ಪೇಸ್ಟ್ ಸಹ ಬಳಸಬಹುದು:
ಪಟಾಕಿಯಿಂದ ಸುಟ್ಟರೆ ಟೂತ್ ಪೇಸ್ಟ್ ಅನ್ನು ಸುಟ್ಟ ಜಾಗಕ್ಕೆ ಹಚ್ಚಿ. ಇದರಲ್ಲಿರುವ ಕ್ಯಾಲ್ಸಿಯಂ ಕಿರಿಕಿರಿಯನ್ನು ನಿವಾರಿಸುತ್ತದೆ. ಬೊಬ್ಬೆಗಳಾಗುವುದನ್ನು ತಡೆಯುತ್ತವೆ.
ಎಲ್ಲಕ್ಕಿಂತ ಮುಖ್ಯವಾಗಿ ನಿಮ್ಮ ಮನೆಯಲ್ಲಿ ಯಾರಾದರೂ ಪಟಾಕಿ ಅಥವಾ ಇನ್ನಾವುದೇ ವಸ್ತುಗಳಿಂದ ಸುಟ್ಟುಕೊಂಡಿದ್ದರೆ, ಸಮಯ ವ್ಯರ್ಥ ಮಾಡದೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ.



Click it and Unblock the Notifications