Latest Updates
-
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್!
ದೀಪಾವಳಿ ಪಟಾಕಿ ಹಚ್ಚುವಾಗ ಸುಟ್ಟ ಗಾಯಗಳಾದರೆ ಮನೆಯಲ್ಲಿಯೇ ಹೀಗೆ ಮಾಡಿ
ಬೆಳಕಿನ ಹಬ್ಬದೀಪಾವಳಿಯಂದು ಮನೆಯಲ್ಲಿ ಪಟಾಕಿಯ ಬೆಳಕು ಇಲ್ಲದಿದ್ದರೆ ಹಬ್ಬ ಅಪೂರ್ಣವೆನಿಸುತ್ತದೆ. ದೀಪಾವಳಿಯಂದು ಪಟಾಕಿ ಹೊಡೆಯುವುದು ಮಕ್ಕಳಿಗೆ ತುಂಬಾ ಇಷ್ಟ. ಇದರ ಬೆಳಕು ಮತ್ತು ಸದ್ದು ಮಕ್ಕಳಿಗೆ ಖುಷಿ ನೀಡುತ್ತದೆ. ಆದರೆ, ಪಟಾಕಿ ಹಚ್ಚುವಾಗ ಎಚ್ಚರಿಕೆ ವಹಿಸುವುದು ಅಗತ್ಯ. ದೇಹದಿಂದ ಕನಿಷ್ಠ 5 ಮೀಟರ್ ದೂರದಲ್ಲಿ ಪಟಾಕಿಗಳನ್ನು ಸಿಡಿಸಿ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಿ. ಏಕೆಂದರೆ, ಪಟಾಕಿಗಳಿಂದ ಅವಘಡ ಸಂಭವಿಸಿರುವುದನ್ನು ಹಿಂದಿನಂದಲೂ ಕೇಳಿಕೊಂಡು ಬರುತ್ತಿದ್ದೇವೆ.
ಈ ಪಟಾಕಿಯಿಂದ ಸುಟ್ಟಗಾಯಕ್ಕೆ ತಕ್ಷಣವೇ ಚಿಕಿತ್ಸೆ ನೀಡದಿದ್ದರೆ, ಅದು ಸಮಸ್ಯೆಗಳನ್ನು ಉಂಟುಮಾಡಬಹುದು. ದೀಪಾವಳಿಯಂದು ಪಟಾಕಿ ಹೊಡೆಯುವ ಸಮಯದಲ್ಲಿ ಯಾರಾದರೂ ವ್ಯಕ್ತಿಯ ಕೈ ಸುಟ್ಟರೆ, ತಕ್ಷಣ ಮನೆಯಲ್ಲಿ ಪ್ರಥಮ ಚಿಕಿತ್ಸೆ ಮಾಡಿ. ಆದ್ದರಿಂದ ಈ ಸುಟ್ಟಗಾಯಗಳಿಗೆ ಹೇಗೆ ಚಿಕಿತ್ಸೆ ನೀಡಬೇಕು ಎಂಬುದನ್ನು ಇಲ್ಲಿ ತಿಳಿಯೋಣ.
ಪಟಾಕಿಯಿಂದ ಸುಟ್ಟಗಾಯಕ್ಕೆ ಮಾಡಬೇಕಾದ ಚಿಕಿತ್ಸೆ ಏನು ಎಂಬುದನ್ನು ಈ ಕೆಳಗೆ ನೀಡಲಾಗಿದೆ:

ಆಲೂಗಡ್ಡೆಯಿಂದ ಚಿಕಿತ್ಸೆ ನೀಡಿ:
ದೀಪಾವಳಿಯಂದು ಪಟಾಕಿ ಸಿಡಿಸುವಾಗ ಮಗುವಿನ ಕೈ ಅಥವಾ ಇನ್ನಾವುದೇ ಭಾಗ ಸುಟ್ಟರೆ ಆಲೂಗಡ್ಡೆ ಬಳಸಿ. ಆಲೂಗಡ್ಡೆಯಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ಗಾಯಗಳನ್ನು ತ್ವರಿತವಾಗಿ ಗುಣಪಡಿಸಲು ಸಹಾಯ ಮಾಡತ್ತದೆ ಜೊತೆಗೆ ತೇವಾಂಶವನ್ನು ನೀಡುತ್ತದೆ. ಆಲೂಗಡ್ಡೆಯನ್ನು ಕತ್ತರಿಸಿ ಸುಟ್ಟ ಜಾಗಕ್ಕೆ ಹಚ್ಚಿದರೆ ಗಾಯಕ್ಕೆ ತಂಪು ಸಿಗುತ್ತದೆ.

ಸುಟ್ಟ ಜಾಗಕ್ಕೆ ಅರಿಶಿನವನ್ನು ಹಚ್ಚಿ:
ದೀಪಾವಳಿಯಂದು ಪಟಾಕಿ ಹಚ್ಚುವಾಗ ಯಾವುದಾದರೂ ಭಾಗ ಸುಟ್ಟರೆ, ಆ ಭಾಗಕ್ಕೆ ಅರಿಶಿನವನ್ನು ಹಚ್ಚಿ. ನಂಜುನಿರೋಧಕ ಗುಣಗಳಿಂದ ಸಮೃದ್ಧವಾಗಿರುವ ಅರಿಶಿನ ಪೇಸ್ಟ್ ಕಿರಿಕಿರಿಯನ್ನು ನಿವಾರಿಸುತ್ತದೆ. ಜೊತೆಗೆ ಉರಿಯನ್ನು ಕಡಿಮೆ ಮಾಡುವುದು.

ಕಿರಿಕಿರಿ ಕಡಿಮೆ ಮಾಡಲು ಜೇನುತುಪ್ಪ:
ಪಟಾಕಿಯಿಂದ ಚರ್ಮ ಸುಟ್ಟರೆ ಜೇನು ತುಪ್ಪ ಹಚ್ಚಿದರೆ ಬೇಗ ಪರಿಹಾರ ಸಿಗುತ್ತದೆ. ಜೇನು ತುಪ್ಪವನ್ನು ಸುಟ್ಟ ಜಾಗಕ್ಕೆ ಹಚ್ಚುವುದರಿಂದ ಕಿರಿಕಿರಿ ಹಾಗೂ ಉರಿಯಿಂದ ಪಾರಾಗಬಹುದು, ಜೊತೆಗೆ ಗಾಯವೂ ಬೇಗನೇ ವಾಸಿಯಾಗುತ್ತದೆ.

ತಂಪಿನ ಅನುಭವಕ್ಕೆ ಅಲೋವೆರಾ ಬಳಸಿ:
ಸುಟ್ಟ ಗಾಯದ ಉರಿಯನ್ನು ಕಡಿಮೆ ಮಾಡಲು ನೀವು ಅಲೋವೆರಾವನ್ನು ಬಳಸಬಹುದು. ಅಲೋವೆರಾದ ತಿರುಳನ್ನು ತೆಗೆದು ಗಾಯದ ಮೇಲೆ ಹಚ್ಚಿದರೆ ತಂಪು ಸಿಗುತ್ತದೆ. ಜೊತೆಗೆ ಗುಳ್ಳೆಗಳಾಗುವುದಿಲ್ಲ.

ಟೂತ್ಪೇಸ್ಟ್ ಸಹ ಬಳಸಬಹುದು:
ಪಟಾಕಿಯಿಂದ ಸುಟ್ಟರೆ ಟೂತ್ ಪೇಸ್ಟ್ ಅನ್ನು ಸುಟ್ಟ ಜಾಗಕ್ಕೆ ಹಚ್ಚಿ. ಇದರಲ್ಲಿರುವ ಕ್ಯಾಲ್ಸಿಯಂ ಕಿರಿಕಿರಿಯನ್ನು ನಿವಾರಿಸುತ್ತದೆ. ಬೊಬ್ಬೆಗಳಾಗುವುದನ್ನು ತಡೆಯುತ್ತವೆ.
ಎಲ್ಲಕ್ಕಿಂತ ಮುಖ್ಯವಾಗಿ ನಿಮ್ಮ ಮನೆಯಲ್ಲಿ ಯಾರಾದರೂ ಪಟಾಕಿ ಅಥವಾ ಇನ್ನಾವುದೇ ವಸ್ತುಗಳಿಂದ ಸುಟ್ಟುಕೊಂಡಿದ್ದರೆ, ಸಮಯ ವ್ಯರ್ಥ ಮಾಡದೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ.



Click it and Unblock the Notifications