Just In
Don't Miss
- News Karnataka LS Election 2024 LIVE: ಇಂದು ಮೊದಲ ಹಂತದ ಮತದಾನಕ್ಕೆ ಸಿದ್ಧವಾದ ರಾಜ್ಯದ 14 ಕ್ಷೇತ್ರಗಳು
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಂದಿ ಜ್ವರದ ಲಕ್ಷಣಗಳೇನು, ತಡೆಗಟ್ಟುವುದು ಹೇಗೆ?
ದೇಶದಲ್ಲಿ ಒಂದು ಕಡೆ ಕೊರೊನಾ ವೈರಸ್ ಭಯ, ಮತ್ತೊಂದುನ ಕಡೆಯಿಂದ ಹಳೆಯ ಶತ್ರು ಹಂದಿಜ್ವರ ಮರುಕಳುಹಿಸಿದೆ. ಇದಕ್ಕೆ ಉತ್ತರ ಪ್ರದೇಶದಲ್ಲಿ ಈಗಾಗಲೇ 9 ಜನ ಬಲಿಯಾಗಿದ್ದಾರೆ.
ರಾಜ್ಯದಲ್ಲಿಯೂ H1N1 ಅಂದರೆ ಹಂದಿ ಜ್ವರ ಪತ್ತೆಯಾಗಿದ್ದು, ಈ ರೋಗದ ಬಗ್ಗೆ ಎಚ್ಚರಿಕೆವಹಿಸಬೇಕಾಗಿದೆ. ಈ ರೋಗ ಹೆಚ್1ಎನ್1 ಎಂಬ ವೈರಸ್ನಿಂದ ಹರಡುವ ರೋಗವಾಗಿದೆ. ಈ ರೋಗ ಸೋಂಕಿತ ವ್ಯಕ್ತಿಗಳಿಂದ ಮತ್ತೊಬ್ಬರಿಗೆ ಹರಡುವುದು.
ಸೋಂಕಿರುವ ವ್ಯಕ್ತಿ ಕೆಮ್ಮಿದಾಗ, ಸೀನಿದಾಗ ಅಥವಾ ರೋಗ ಇರುವ ವ್ಯಕ್ತಿಯೊಂದಿಗಿನ ಸಂಪರ್ಕದಿಂದಾಗಿ ಹಂದಿಜ್ವರ ಉಂಟಾಗುತ್ತದೆ. ಸಾಮಾನ್ಯವಾಗಿ ಈ ಕಾಯಿಲೆ ಮಳೆಗಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ, ಆದರೆ ಈ ವರ್ಷ ಫೆಬ್ರವರಿ-ಮಾರ್ಚ್ ತಿಂಗಳಿನಲ್ಲಿಯೇ ಪತ್ತೆಯಾಗಿದೆ.
ಈ ಕಾಯಿಲೆ ಬಂದಾಗ ಸೂಕ್ತ ಚಿಕಿತ್ಸೆ ದೊರೆಯದಿದ್ದರೆ ಸಾವು ಕೂಡ ಸಂಭವಿಸಬಹುದು. ಇಲ್ಲಿ ನಾವು ಹೆಚ್1ಎನ್1 ರೋಗದ ಅಪಾಯ ಯಾರಿಗೆ ಹೆಚ್ಚು? ಈ ರೋಗದ ಲಕ್ಷಣಗಳೇನು? ಇದನ್ನು ತಡೆಗಟ್ಟುವುದರ ಬಗ್ಗೆ ಕೆಲವೊಂದು ಮಾಹಿತಿ ನೀಡಿದ್ದೇವೆ ನೋಡಿ.
ಯಾರಿಗೆ ಅಪಾಯ ಹೆಚ್ಚು?
H1N1 ಸೋಂಕು ಹೆಚ್ಚಾಗಿ 5 ವರ್ಷಕ್ಕಿಂತ ಚಿಕ್ಕ ಮಕ್ಕಳಿಗೆ, ಗರ್ಭಿಣಿಯರಿಗೆ ಹಾಗೂ ವಯಸ್ಸಾದವರಿಗೆ ಬೇಗ ತಗುಲುತ್ತದೆ. ಇವರುಗಳು ಹೃದಯ ಸಮಸ್ಯೆ, ಮತ್ತಿತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೆ ಅವರ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಕೊಡಬೇಕು.
ಇದರಲ್ಲಿ ಎ ಮತ್ತು ಬಿ ಟೈಪ್ ಕಾಯಿಲೆಯನ್ನು ಮನೆಯಲ್ಲೇ ಗುಣಪಡಿಸಬಹುದು, ಅದೇ ಸಿ ಟೈಪ್ ಆಗಿದ್ದರೆ ಕೂಡಲೇ ಆಸ್ಪತ್ರೆಗೆ ದಾಖಲು ಮಾಡಬೇಕು.
ಹಂದಿಜ್ವರದ ಲಕ್ಷಣಗಳೇನು?
ಇದೊಂದು ಸಾಂಕ್ರಾಮಿಕ ರೋಗವಾಗಿದೆ. ಗಾಳಿಯ ಮೂಲಕ ರೋಗಾಣುಗಳು ಹರಡುತ್ತವೆ.
* ಸತತ ಕೆಮ್ಮು, ಅತೀವ ಜ್ವರ, ಕಫಗಟ್ಟಿರುವ ಗಂಟಲು, ಇಡಿಯ ದೇಹದ ಒಂದೊಂದು ಅಂಗವೂ ನೋವಿನಿಂದ ಕಿರುಗುಟ್ಟುವುದು, ಸುಸ್ತು, ತಲೆ ಎತ್ತಲಾರದಷ್ಟು ತಲೆನೋವು ಮತ್ತು ವಾಂತಿ ಮತ್ತು ಬೇಧಿ.
* ಈ ವೈರಸ್ ಪೀಡಿತ ಹಂದಿಯ ಮಾಂಸವನ್ನು ಸರಿಯಾಗಿ ಸ್ವಚ್ಛಗೊಳಿಸದೇ ಅಥವಾ ಬೇಯಿಸದೇ ತಿಂದರೆ ರೋಗ ಸಂಭವವಿರುತ್ತದೆ. * ರೋಗಾಣು ಬೆರೆತ ನೀರು, ಮಾಂಸ, ಸೇವಿಸುವುದರಿಂದ ರೋಗ ಹರಡಬಹುದು.
* ಹಂದಿಜ್ವರ ಪೀಡಿತ ವ್ಯಕ್ತಿಯ ಜೊಲ್ಲು, ಸೀನಿನ ಮೂಲಕ ಸಿಡಿದ ದ್ರವ ಆಹಾರ ವಸ್ತುಗಳಿಗೆ ಸೇರಿದರೆ ಸೊಂಕು ತಗಲುವ ಸಾಧ್ಯತೆಯಿದೆ.
* ಮೂಗಿಗೆ ಸದಾ ಬಟ್ಟೆ ಕಟ್ಟಿಕೊಳ್ಳುವುದರಿಂದ ಕೆಲ ಪ್ರಮಾಣದಲ್ಲಿ ರೋಗ ಹರಡುವುದನ್ನು ತಡೆಯಬಹುದು.
ಎಚ್ಚರಿಕೆ ಕ್ರಮಗಳು:
* ಮನೆಯಲ್ಲಿ ಬಿಸಿನೀರನ್ನು ಸೇವಿಸುವುದು, ಸಣ್ಣ ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸಬೇಕು, ನೀರಿನಲ್ಲಿ ಆಡಲು ಬಿಡಬಾರದು ಮತ್ತು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು.
* ನದಿ ಪಾತ್ರದ ಪ್ರವಾಸಿತಾಣಗಳಿಗೆ ಹೋಗುವಾಗ, ಆಸ್ಪತ್ರೆಗಳಿಗೆ ಭೇಟಿ ನೀಡುವಾಗ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವ ವೇಳೆ ಮುಖಕ್ಕೆ ಮಾಸ್ಕ್ ಧರಿಸಬೇಕು. * ಮನೆಯಲ್ಲಿ ಯಾರಿಗಾದರೂ ಎಚ್1ಎನ್1 ಸೋಂಕಿದರೆ ಇತರೆ ಸದಸ್ಯರು ಮಾಸ್ಕ್ಗಳನ್ನು ಧರಿಸಬೇಕು.
* ಸೋಂಕು ತಗುಲಿದವರನ್ನು ಪ್ರತ್ಯೇಕ ಕೋಣೆಯಲ್ಲಿರಿಸಿ ಹೆಚ್ಚಾಗಿ ಅವರೊಂದಿಗೆ ಸಂಪರ್ಕ ಬೆಳೆಸಬಾರದು ಮತ್ತು ಸೇವಿಸುವ ಆಹಾರ ಪಾತ್ರೆಗಳನ್ನೂ ಸಹ ಕ್ರಿಮಿನಾಶಕ ಅಥವಾ ಉಪ್ಪು ನೀರಿನಿಂದ ತೊಳೆಯಬೇಕು.
* ಈ ರೋಗದ ಸೋಂಕಿರುವ ಸ್ಥಳಗಳಲ್ಲಿ ಮೂಗು, ಬಾಯಿಯನ್ನು ಕರವಸ್ತ್ರ ಅಥವಾ ಮಾಸ್ಕ್ನಿಂದ ಮುಚ್ಚಿಕೊಳ್ಳಬೇಕು. ಕೈ ತೊಳೆಯದೆ ಯಾವುದೇ ಆಹಾರ ಸೇವನೆ ಮಾಡಬಾರದು. ಜ್ವರದ ಲಕ್ಷಣಗಳು ಕಂಡು ಬಂದರೆ ತಕ್ಷಣ ವೈದ್ಯರ ಸಲಹೆ ಮೇರೆಗೆ ಔಷಧ ತೆಗೆದುಕೊಳ್ಳಬೇಕು.
ಹಂದಿಜ್ವರಕ್ಕೆ ಮನೆಮದ್ದು:
* ಹಂದಿಜ್ವರಕ್ಕೆ ಅಮೃತಬಳ್ಳಿಯೂ ಉತ್ತಮ ಮತ್ತು ಪರಿಣಾಮಕಾರಿಯಾದ ಔಷಧಿಯಾಗಿದೆ. ಈ ಬಳ್ಳಿಯ ಸುಮಾರು ಒಂದು ಅಡಿ ಉದ್ದವನ್ನು ಕತ್ತರಿಸಿಕೊಂಡು ನೀರಿನಲ್ಲಿ ಬೇಯಿಸಿ. ಈ ನೀರಿಗೆ ಐದರಿಂದ ಆರು ತುಳಸಿ ಎಲೆಗಳನ್ನು ಸೇರಿಸಿ. ಸುಮಾರು ಇಪ್ಪತ್ತು ನಿಮಿಷಗಳ ಕುದಿಯುವಿಕೆಯ ಬಳಿಕ ಎಲೆ ತನ್ನ ಸಾರವನ್ನೆಲ್ಲಾ ನೀರಿನಲ್ಲಿ ಬಿಡುತ್ತದೆ. ಈ ನೀರಿಗೆ ಹಿಮಾಲಯದ ಸೇಂಧಾ ಉಪ್ಪು (ಹಿಮಾಲಯದ ಕೆಂಪು ಕಲ್ಲುಪ್ಪು), ಕೆಲವು ಕಾಳು ಕಾಳುಮೆಣಸು, ಕಪ್ಪು ಉಪ್ಪು (black salt), ಕಲ್ಲುಸಕ್ಕರೆಯ ಚಿಕ್ಕ ತುಂಡು ಹಾಕಿ ಕದಡಿ ಹಾಗೇ ಬಿಡಿ. ಸ್ವಲ್ಪ ತಣಿದ ಬಳಿಕ ಈ ನೀರನ್ನು ಸೋಸಿ ಉಗುರುಬೆಚ್ಚಗಿರುವಂತೆಯೇ ಕುಡಿಯಿರಿ.
* ಒಂದು ಚಿಕ್ಕ ಗುಳಿಗೆಯ ಗಾತ್ರದ ಕರ್ಪೂರವನ್ನು ನೀರಿನಲ್ಲಿ ಕದಡಿ ಕರಗಿದ ಬಳಿಕ ಕುಡಿಯುವುದೂ ಹಂದಿಜ್ವರಕ್ಕೆ ಉತ್ತಮ ಚಿಕಿತ್ಸೆಯಾಗಿದೆ. ಆದರೆ ಇದರ ಪ್ರಮಾಣ ತಿಂಗಳಿಗೆ ಒಂದು ಲೋಟ ಮಾತ್ರ.
* ಜ್ವರವಿದ್ದಾಗ ಬೆಳಿಗ್ಗೆ ಎದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಎರಡು ಎಸಳು ಹಸಿ ಬೆಳ್ಳುಳ್ಳಿಯನ್ನು ಉಗುರುಬೆಚ್ಚನೆಯ ನೀರಿನೊಂದಿಗೆ ಸೇವಿಸಿದರೆ ಒಳ್ಳೆಯದು.