Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಮಳೆಗಾಲದಲ್ಲಿ ಆರೋಗ್ಯ ಕಾಪಾಡಲು ಪಾಲಿಸಿ ಈ ಸರಳ ಆಯುರ್ವೇದ ಟಿಪ್ಸ್
ಮೇ ತಿಂಗಳಿನಲ್ಲಿಯೇ ಕೆಲವು ಕಡೆ ಪ್ರವಾಹದ ಭೀತಿ ಎದುರಾಗಿದೆ. ಧೋ ಎಂದು ಬಿಡದೆ ಸುರಿಯುತ್ತಿರುವ ಮಳೆಯಲ್ಲಿ ಜನರು ಕಂಗಲಾಗಿದ್ದಾರೆ. ಇನ್ನು ನಾಲ್ಕು ತಿಂಗಳು ಮಳೆಗಾಲ.
ಮಳೆಗಾಲ ಎಂದರೆ ಆರೋಗ್ಯ ಸಮಸ್ಯೆ ತುಸು ಹೆಚ್ಚಾಗಿಯೇ ಕಾಡುತ್ತದೆ. ನೆಗಡಿ, ಕೆಮ್ಮು, ಜ್ವರ ಈ ಸಮಸ್ಯೆಗಳು ಹೆಚ್ಚಿನವರನ್ನು ಕಾಡುವುದು. ಅದರಲ್ಲೂ ಮಳೆಗಾಲದಲ್ಲಿ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಸ್ವಾಭಾವಿಕವಾಗಿ ದುರ್ಬಲವಾಗಿರುತ್ತದೆ. ಇನ್ನು ಜೀರ್ಣಶಕ್ತಿ ಸಾಮರ್ಥ್ಯ ಕೂಡ ಕಡಿಮೆ ಇರುತ್ತದೆ. ಈ ಸಮಯದಲ್ಲಿ ನಮ್ಮ ಜೀವನಶೈಲಿ ಹಾಗೂ ಆರೋಗ್ಯಶೈಲಿಯಲ್ಲಿ ಬದಲಾವಣೆ ತಂದರೆ ಕಾಯಿಲೆ ಬೀಳುವುದು ಕಡಿಮೆಯಾಗುವುದು.

ಇನ್ನು ಕೊರೊನಾ ಅತಂಕ ಮತ್ತೆ ಕಾಡಿರುವುದರಿಂದ ಸಾಮಾನ್ಯ ನೆಗಡಿ, ಕೆಮ್ಮು ಬಂದರೂ ಕೊರೊನಾ ಇರಬಹುದಾ ಎಂಬ ಆತಂಕ ಕಾಡಬಹುದು ಅಥವಾ ಕೊರೊನಾ ಲಕ್ಷಣಗಳು ಕಂಡು ಬಂದರೂ ಪ್ರಾರಂಭದಲ್ಲಿ ಅದು ಸಾಮಾನ್ಯ ಶೀತ-ಕೆಮ್ಮು ಅಂತ ಭಾವಿಸಿ ಮತ್ತಷ್ಟು ಜನರಿಗೆ ಕೊರೊನಾ ಹರಡುವ ಸಾಧ್ಯತೆ ಇದೆ. ಆದ್ದರಿಂದ ಈ ಮಳೆಗಾಲದಲ್ಲಿ ತುಂಬಾನೇ ಹುಷಾರಾಗಿರಬೇಕು. ಮಳೆಗಾಲದಲ್ಲಿ ಆರೋಗ್ಯ ಕಾಪಾಡಲು ಏನು ಮಾಡಬೇಕು ಎಂಬುವುದು ಆಯುರ್ವೇದದಲ್ಲಿ ಹೇಳಲಾಗಿದೆ.
ಈ ಆಯುರ್ವೇದ ಟಿಪ್ಸ್ ಮಳೆಗಾಲದಲ್ಲಿ ನಿಮ್ಮ ಆರೋಗ್ಯ ಕಾಪಾಡಲು ಸಹಕಾರಿ:

ವಾತ, ಪಿತ್ತ, ಕಫ ದೋಷದ ಬಗ್ಗೆ ಎಚ್ಚರವಹಿಸಬೇಕು
ಆಯುರ್ವೇದ ಪ್ರಕಾರ ಮಳೆಗಾಲದಲ್ಲಿ ವಾತ, ಪಿತ್ತ, ಕಫದ ಸಮಸ್ಯೆ ಹೆಚ್ಚಾಗಿ ಕಾಡುವುದು, ಈ ದೋಷದಿಂದಾಗಿ ರೋಗ ನಿರೋಧಕ ಸಾಮಾರ್ಥ್ಯ ಕಡಿಮೆಯಾಗುವುದು. ಕಫ, ಪಿತ್ತ ದೋಷದಿಂದಾಗಿ ದೇಹದಲ್ಲಿ ಜೀರ್ಣಕ್ರಿಯೆ ಕೂಡ ಕಡಿಮೆಯಾಗುವುದು, ಇದರಿಂದಾಗಿ ದೇಹದಲ್ಲಿ ಕಶ್ಮಲ ಹೆಚ್ಚುವುದು. ಆಹಾರ ಸರಿಯಾಗಿ ಜೀರ್ಣವಾಗದಿದ್ದರೆ ದೇಹದಲ್ಲಿ ಕಶ್ಮಲ ಹೆಚ್ಚುವುದು. ಅದನ್ನು ಹೊರಹಾಕಬೇಕು ಇಲ್ಲದಿದ್ದರೆ ಕಾಯಿಲೆ ಹೆಚ್ಚುವುದು.

ಪ್ರಕೃತ್ತಿ ಕಡೆ ಗಮನ ನೀಡಿ
ಕಾಲಕ್ಕೆ ಬದಲಾದಂತೆ ನಮ್ಮ ಆಹಾರಶೈಲಿಯಲ್ಲಿ ಬದಲಾವಣೆ ಮಾಡಬೇಕು. ಮಳೆಗಾಲದಲ್ಲಿ ಮಳೆಗಾಲಕ್ಕೆ ಸೂಕ್ತವಾದ ಆಹಾರ ಸೇವಿಸಬೇಕು. ಮೈ ಬೆಚ್ಚಗಿಡುವ ಆಹಾರ ಸೇವಿಸಬೇಕು. ಈ ಸಮಯದಲ್ಲಿ ಘನ ಅಹಾರ ಬದಲಿಗೆ ಸುಲಭದಲ್ಲಿ ಜೀರ್ಣವಾಗುವಂಥ ಲಘು ಆಹಾರ, ಸೂಪ್ನಂಥ ದ್ರವಾಹಾರ ಸೇವನೆ ಮಾಡಬೇಕು. ಹೀಗೆ ಮಾಡುವುದರಿಂದ ಜೀರ್ಣಕ್ರಿಯೆಗೆ ಸಹಕಾರಿ. ದೇಹದಲ್ಲಿನ ಕಶ್ಮಲವನ್ನು ಹೊರಹಾಕಬಹುದು. ಹೀಗಾಗಿ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುವುದು. ದೇಹ ನಿರೋಧಕ ಶಕ್ತಿ ಹೆಚ್ಚಾದರೆ ಕೊರೊನಾ ವೈರಸ್ ಬಗ್ಗೆಯೂ ಭಯ ಪಡಬೇಕಾಗಿಲ್ಲ, ರೋಗ ನಿರೋಧಕ ಶಕ್ತಿ ಚೆನ್ನಾಗಿರುವವರ ಮೇಲೆ ಕೊರೊನಾ ವೈರಸ್ ಯಾವುದೇ ಪರಿಣಾಮ ಬೀರಲ್ಲ ಎಂಬುವುದು ಈಗಾಗಲೇ ಸಾಬೀತಾಗಿದೆ. ಜೊತೆಗೆ ಮಳೆಗಾಲದಲ್ಲಿ ಕಾಡುವ ಆರೋಗ್ಯ ಸಮಸ್ಯೆಯನ್ನೂ ತಡೆಗಟ್ಟಬಹುದು.

ಮಳೆಗಾಲದಲ್ಲಿ ಆಹಾರಕ್ರಮ
* ಹುಳಿ, ಸಿಹಿ, ಉಪ್ಪು ಇರುವ ಆಹಾರವನ್ನು ಸೇವಿಸಿ.
* ಸುಲಭವಾಗಿ ಜೀರ್ಣವಾಗುವ ಆಹಾರವನ್ನು ಲಘುವಾಗಿ ಸೇವಿಸಿ.
* ಬಿಸಿ-ಬಿಸಿ ಆಹಾರ ಸೇವಿಸಿ.
* ಶುಂಠಿ-ಬೆಳ್ಳುಳ್ಳಿ, ಕಾಳು ಮೆಣಸು, ಇಂಗು, ನಿಂಬೆ ಹಣ್ಣು ನಿಮ್ಮ ಆಹಾರದಲ್ಲಿ ಇರಲಿ, ಇವುಗಳು ಜೀರ್ಣಕ್ರಿಯೆಗೆ ಸಹಕಾರಿ.
* ಈ ಸಮಯದಲ್ಲಿ ತರಕಾರಿಗಳನ್ನು ಚೆನ್ನಾಗಿ ಬೇಯಿಸಿ ತಿನ್ನಿ.
* ಕರಿ ಜೀರಿಗೆ ಇದ್ದರೆ ಸೇವಿಸಿ.
* ಹೆಸರುಕಾಳು, ಚೆನ್ನಾ, ಜೋಳ, ಕಡ್ಲೆ ಹಿಟ್ಟಿನ ಪದಾರ್ಥ, ಸೋರೆಕಾಯಿ, ಹೀರೆಕಾಯಿ, ಬೆಂಡೆಕಾಯಿ ಈ ಬಗೆಯ ಆಹಾರ ಸೇವಿಸಿ.

ಜೀವನಶೈಲಿ
* ದೇಹವನ್ನು ಬೆಚ್ಚಗೆ ಇಡಿ
* ಬಿಸಿ-ಬಿಸಿ ನೀರಿನಲ್ಲಿ ಸ್ನಾನ ಮಾಡಿ.
* ಪಾದಗಳ ಆರೈಕೆ ಕಡೆ ಗಮನ ನೀಡಿ.
* ಪ್ರತಿದಿನ ದೇಹಕ್ಕೆ ಎಣ್ಣೆ ಹಚ್ಚಿ ಆರೈಕೆ ಮಾಡುವುದು ಒಳ್ಳೆಯದು.
* ಹಗಲು ಹೊತ್ತಿನಲ್ಲಿ ನಿದ್ರಿಸಬೇಡಿ
* ಮಳೆಯಲ್ಲಿ ಒದ್ದೆಯಾದರೆ ಕೂಡಲೇ ಬಟ್ಟೆ ಬದಲಾಯಿಸಿ
* ಮಳೆಗಾಲದಲ್ಲಿ ಮಧ್ಯಾಹ್ನದ ನಂತರ ಬರುವ ಬಿಸಿಲಿನಲ್ಲಿ ನಿಲ್ಲಬೇಡಿ
* ಈ ಸಮಯದಲ್ಲಿ ಪಂಚಕರ್ಮ ಚಿಕಿತ್ಸೆ ಪಡೆದರೆ ಒಳ್ಳೆಯದು.



Click it and Unblock the Notifications
