Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಕರ್ನಾಟಕದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ, 4000ಕ್ಕೂ ಅಧಿಕ ಕೇಸ್ ಪತ್ತೆ: ಡೆಂಗ್ಯೂ ನಮಗೆ ಬಾರದಂತೆ ತಡೆಗಟ್ಟಲು ಏನು ಮಾಡಬೇಕು?
ಕರ್ನಾಟಕದಲ್ಲಿ ಮತ್ತೆ ಡೆಂಗ್ಯೂ ಕಾಟ ಹೆಚ್ಚಾಗಿದೆ, ಎಡೆ ಬಿಡದೆ ಕಾಡುತ್ತಿರುವ ಮಳೆಯಿಂದಾಗಿ ಡೆಂಗ್ಯೂ ಕೂಡ ಹೆಚ್ಚುತ್ತಿದೆ. ಕರ್ನಾಟಕದಲ್ಲಿ 4000ಕ್ಕೂ ಅಧಿಕ ಡೆಂಗ್ಯೂ ಕೇಸ್ಗಳು ಪತ್ತೆಯಾಗಿದ್ದು ಬೆಂಗಳೂರಿನಲ್ಲಿಯೇ 1102 ಕೇಸ್ಗಳು ಪತ್ತೆಯಾಗಿವೆ.
ಆಗಸ್ಟ್ನಲ್ಲಿ ಡೆಂಗ್ಯೂಗೆ 4 ಜನರು ಬಲಿಯಾಗಿದ್ದಾರೆ. ಅದರಲ್ಲಿ ಇಬ್ಬರು ಉಡುಪಿ ಜಿಲ್ಲೆಯವರು ಉಳಿದಿಬ್ಬರು ಚಿಕ್ಕ ಬಳ್ಳಾಪುರ ಹಾಗೂ ವಿಜಯಪುರಕ್ಕೆ ಸೇರಿದವರಾಗಿದ್ದರು.

ಪ್ರತಿದಿನ ನಗರಗಳಲ್ಲಿ 20ಕ್ಕೂ ಅಧಿಕ ಡೆಂಗ್ಯೂ ಕೇಸ್ಗಳು ಪತ್ತೆಯಾಗುತ್ತಿವೆ
ಬೆಂಗಳೂರಿನಲ್ಲಿ 351 ಇದ್ದ ಕೇಸ್ 1102 ಕ್ಕೆ ತಲುಪಿದೆ, ಪ್ರತಿದಿನ 20ಕ್ಕೂ ಅಧಿಕ ಜನರಿಗೆ ಡೆಂಗ್ಯೂ ಕಾಡುತ್ತಿದೆ. ಮೈಸೂರಿನಲ್ಲಿ 1000ಕ್ಕೂ ಅಧಿಕ ಕೇಸ್ಗಳು ಪತ್ತೆಯಾಗಿವೆ, ಉಡುಪಿಯಲ್ಲಿ 459, ಬೆಳಗಾವಿಯಲ್ಲಿ 161, ವಿಜಯಪುರದಲ್ಲಿ 160, ಮಂಡ್ಯ 155, ದಾವಣಗೆರೆ 143, ಚಿಕ್ಕಬಳ್ಳಾಪುರ 139,ಕಲ್ಬುರ್ಗಿ 146, ಚಾಮರಾಜನಗರ 120, ಧಾರವಾಡ 119, ಕೋಲಾರ 118, ಕೊಪ್ಪಳ 115, ಚಿಕ್ಕಮಂಗಳೂರು 108, ಬೆಳ್ಳಾರಿಯಲ್ಲಿ 108 ಕೇಸ್ಗಳು ಪತ್ತೆಯಾಗಿವೆ.
ಪ್ರತಿದಿನ ರಾಜ್ಯದಲ್ಲಿ ನೂರಾರು ಕೇಸ್ಗಳು ಪತ್ತೆಯಾಗುತ್ತಿತ್ತು ಈ ಸಮಯದಲ್ಲಿ ಡೆಂಗ್ಯೂ ಬಗ್ಗೆ ತುಂಬಾ ಮುನ್ನೆಚ್ಚರಿಕೆವಹಿಸಬೇಕಾಗಿದೆ.

ಡೆಂಗ್ಯೂ ಹೇಗೆ ಹರಡುತ್ತದೆ?
ಡೆಂಗ್ಯೂ ವ್ಯಕ್ತಿಯಿಂದ ವ್ಯಕ್ತಿಗೆ ಹರಡುವುದಿಲ್ಲ, ಬದಲಿಗೆ ಈಡೀಸ್ ಎಂಬ ಹೆಣ್ಣು ಸೊಳ್ಳೆಯಿಂದ ಹರಡುತ್ತದೆ. ಡೆಂಗ್ಯೂ ಇರುವ ವ್ಯಕ್ತಿಗೆ ಸೊಳ್ಳೆ ಕಚ್ಚಿ, ಆ ಸೊಳ್ಳೆ ಮತ್ತೊಬ್ಬರಿಗೆ ಕಚ್ಚಿದಾಗ ಡೆಂಗ್ಯೂ ಹರಡುತ್ತದೆ.ಆದ್ದರಿಂದ ಸೊಳ್ಳೆ ಕಚ್ಚದಂತೆ ತುಂಬಾ ಮುನ್ನೆಚ್ಚರಿಕೆವಹಿಸಿ. ಈ ಈಡೀಸ್ ಸೊಳ್ಳೆ ಹಗಲು ಹೊತ್ತಿನಲ್ಲಿ ಹೆಚ್ಚಾಗಿ ಕಂಡು ಬರುತ್ತದೆ.

ಡೆಂಗ್ಯೂ ತಡೆಗಟ್ಟಲು ಸರ್ಕಾರ ಕೈಗೊಂಡಿರುವ ಕ್ರಮಗಳೇನು?
* ಜನರಿಗೆ ಸ್ವಚ್ಛ ಕುಡಿಯುವ ನೀರು ದೊರೆಯುವಂತೆ ಮಾಡುತ್ತಿದೆ
* ಕುಡಿಯುವ ನೀರಿನ ಸ್ವಚ್ಛತೆ ಕಡೆ ತುಂಬಾ ಗಮನ ಹರಿಸುತ್ತಿದೆ
* ಸೊಳ್ಳೆಗಳು ಹೆಚ್ಚಿರುವ ಕಡೆ ಸೊಳ್ಳೆ ನಾಶಕಗಳನ್ನು ಸಿಂಪಡಿಸುತ್ತಿದೆ

ಡೆಂಗ್ಯೂ ಬರುವುದನ್ನು ತಡೆಗಟ್ಟಲು ಏನು ಮಾಡಬೇಕು?
* ಡೆಂಗ್ಯೂ ಬರುವುದು ಸೊಳ್ಳೆಯಿಂದ, ಆದ್ದರಿಂದ ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಿ.
* ಬೆಡ್ಗೆ ಸೊಳ್ಳೆ ಪರದೆ ಹಾಕಿಸಿ
* ಬೆಳಗ್ಗೆ-ಸಂಜೆ ಮನೆ ಬಾಗಿಲು ಹಾಗೂ ಕಿಟಕಿಗಳನ್ನು ತೆರೆದಿಡಬೇಡಿ.
* ಕಿಟಕಿಗಳಿಗೆ ಸೊಳ್ಳೆಪರದೆ ಹಾಕಿಸಿದ್ದರೆ ಮಾತ್ರ ಕಿಟಕಿ ತೆರೆದಿಡಿ.
* ಮಕ್ಕಳಿಗೆ ತುಂಬು ತೋಳಿನ ಬಟ್ಟೆಗಳನ್ನು ಧರಿಸಿ, ನೀವು ಕೂಡ ಅಷ್ಟೆ.

ಡೆಂಗ್ಯೂನ ಈ ಲಕ್ಷಣಗಳು ಕಂಡು ಬಂದರೆ ಎಚ್ಚರವಹಿಸಿ
* ತುಂಬಾ ತಲೆನೋವು
* ಕಣ್ಣಿನ ಹಿಂಭಾಗದಲ್ಲಿ ನೋವು
* ಮೈಕೈ ನೋವು
* ಜ್ವರ
* ಮೈಯಲ್ಲಿ ಕೆಂಪು ಗುಳ್ಳೆಗಳು/ದದ್ದುಗಳು ಕಂಡು ಬರುವುದು
* ಮೂಗು ಹಾಗೂ ವಸಡುಗಳಲ್ಲಿ ರಕ್ತಸ್ರಾವ
ಈ ರೀತಿಯ ಲಕ್ಷಣಗಳು ಕಂಡ ಬಂದ ತಕ್ಷಣ ಕೂಡಲೇ ಹೋಗಿ ಡೆಂಗ್ಯೂ ಪರೀಕ್ಷೆ ಮಾಡಿಸಿ. ತಡಮಾಡಿದರೆ ಪ್ಲೇಟ್ಲೆಟ್ ಕಡಿಮೆಯಾಗಿ ಅಪಾಯ ಹೆಚ್ಚುವುದು ಜಾಗ್ರತೆ..



Click it and Unblock the Notifications