Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಈ ರೀತಿ ಕಂಡು ಬಂದರೆ ರೋಗ ನಿರೋಧಕ ಶಕ್ತಿ ಕಡಿಮೆಯಾಗಿದೆ ಎನ್ನುವ ಸೂಚನೆಗಳಾಗಿವೆ
2019ರ ಕೊನೆಯಲ್ಲಿ ಶುರುವಾದ ಕೊರೊನಾ ಕಾಟ 2022 ಅರ್ಧ ವರ್ಷ ಕಳೆದರೂ ಇನ್ನೂ ಮುಗಿದಿಲ್ಲ, ಅದರ ಜೊತೆಗೆ ಈಗ ಮಂಕಿಪಾಕ್ಸ್ ಕೂಡ ವಿಶ್ವವನ್ನು ಕಾಡುತ್ತಿದೆ. ಮಳೆಗಾಲ, ಈ ಸಮಯದಲ್ಲಿ ಡೆಂಗ್ಯೂ, ಮಲೇರಿಯಾ ಈ ರೀತಿಯ ಕಾಯಿಲೆ ಕೂಡ ಹೆಚ್ಚಾಗುವುದು, ಈ ಎಲ್ಲಾ ಸಮಸ್ಯೆಗಳು ಯಾರಿಗೆ ಹೆಚ್ಚು ಅಪಾಯಕಾರಿ ಗೊತ್ತಾ? ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ.
ಹೌದು ರೋಗ ನಿರೋಧಕ ಶಕ್ತಿ ಕಡಿಮೆಯಿದ್ದರೆ ಬೇಗನೆ ಕಾಯಿಲೆಗಳು ಬರುತ್ತವೆ ಅಥವಾ ವೈರಸ್ಗಳು ತಗುಲಿದರೆ ಗಂಭೀರವಾಗುವ ಸಾಧ್ಯತೆ ಹೆಚ್ಚು. ನಮ್ಮ ದೇಹದಲ್ಲಿ ರೋಗ ನಿರೋಧಕ ಕಡಿಮೆ ಇದೆಯೇ ಎಂದು ತಿಳಿಯುವುದು ಹೇಗೆ. ಈ ಸಮಸ್ಯೆಗಳು ಪದೇ ಪದೇ ಕಾಡುತ್ತಿದ್ದರೆ ರೋಗ ನಿರೋಧಕ ಶಕ್ತಿ ಕಡಿಮೆಯಿದೆ ಎಂಬುವುದರ ಸೂಚನೆಯಾಗಿದೆ, ಹೀಗಿದ್ದರೆ ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕಡೆ ಗಮನ ನೀಡಬೇಕಾಗಿದೆ.
ನೀವು ಗಮನಿಸಬೇಕಾದ ಎಚ್ಚರಿಕೆಯ ಸೂಚನೆಗಳಿವು:

ಅತ್ಯಧಿಕ ಒತ್ತಡ
ನಿಮ್ಮ ದೇಹದಲ್ಲಿ lymphocytes ಕಡಿಮೆಯಾದಾಗ ಅತ್ಯಧಿಕ ಮಾನಸಿಕ ಒತ್ತಡ ಉಂಟಾಗುತ್ತದೆ. ಇದರಿಂದಾಗಿ ದೇಹದಲ್ಲಿ ಬಿಳಿ ರಕ್ತ ಕಣಗಳು ಕಡಿಮೆಯಾಗುವುದು. ಯಾವಾಗ ರಕ್ತದಲ್ಲಿ ಬಿಳಿ ರಕ್ತಕಣಗಳು ಕಡಿಮೆಯಾದಾಗ ಯಾವುದಾದರೂ ವೈರಸ್ ದೇಹವನ್ನು ಪ್ರವೇಶಿಸಿದಾಗ ಅದರ ವಿರುದ್ಧ ಹೋರಾಡುವ ಸಾಮರ್ಥ್ಯ ಕಳೆದುಕೊಳ್ಳುತ್ತದೆ. ದೇಹ ದುರ್ಬಲವಾಗುವುದು. ಆದ್ದರಿಂದ ಮಾನಸಿಕ ಒತ್ತಡದ ಕಡೆ ಗಮನ ನೀಡಿ, ಮಾನಸಿಕ ಒತ್ತಡ ರೋಗ ನಿರೋಧಕ ಶಕ್ತಿ ಕಡಿಮೆಯಾಗುವುದು.

ಆಗಾಗ ಶೀತ, ಕೆಮ್ಮು, ಜ್ವರ ಈ ರೀತಿಯ ಸಮಸ್ಯೆ ಕಾಡುವುದು
ಅಪರೂಪಕ್ಕೆ ಶೀತ, ಕೆಮ್ಮು ಬರುವುದು ಸಹಜ. ಆದರೆ ಆಗಾಗ ಈ ರೀತಿಯ ಸಮಸ್ಯೆ ಕಾಡುತ್ತಿದ್ದರೆ ನಿಮ್ಮಲ್ಲಿ ರೋಗ ನಿರೋಧಕ ಶಕ್ತಿ ತುಂಬಾನೇ ಕಡಿಮೆ ಇದೆ ಎಂದರ್ಥ.

ಆಗಾಗ ಹೊಟ್ಟೆ ಸಮಸ್ಯೆ ಕಾಡುವುದು
ಬೇಧಿ, ಗ್ಯಾಸ್ಟ್ರಿಕ್, ಮಲಬದ್ಧತೆ, ಹೊಟ್ಟೆ ನೋವು ಈ ರೀತಿಯ ಸಮಸ್ಯೆ ಆಗಾಗ ಕಾಡುತ್ತಿದ್ದರೆ ರೋಗ ನಿರೋಧಕ ಶಕ್ತಿ ಕಡಿಮೆ ಇದೆ ಎಂದರ್ಥ. ಇದರಿಂದಾಗಿ ವೈರಲ್ ಸೋಂಕಿನ ಸಮಸ್ಯೆ ಹೆಚ್ಚಾಗುವುದು.

ಗಾಯ ಒಣಗಲು ತುಂಬಾ ಸಮಯ ತೆಗೆದುಕೊಂಡರೆ
ಏನಾದರೂ ಗಾಯವಾದರೆ ಅದು ಒಣಗಲು ತುಂಬಾ ಸಮಯ ತೆಗೆದುಕೊಂಡರೆ ರೋಗ ನಿರೋಧಕ ಶಕ್ತಿ ಕಡಿಮೆ ಇದೆ ಎಂದರ್ಥ. ಆಗ ಗಾಯ ಒಣಗದೆ ಚಿಕ್ಕ ಗಾಯ ದೊಡ್ಡದಾಗಿ ಇನ್ನಿತರ ಸಮಸ್ಯೆ ಉಂಟಾಗುವ ಸಾಧ್ಯತೆ ಹೆಚ್ಚು.

ತುಂಬಾ ಸುಸ್ತು, ಆಗಾಗ ತಲೆಸುತ್ತು ಬರುವುದು
ನಿಮಗೆ ತುಂಬಾ ಸುಸ್ತು, ತಲೆ ಸುತ್ತು ಬರುವುದು ಈ ರೀತಿಯ ಸಮಸ್ಯೆ ಕಾಡುತ್ತಿದ್ದರೆ ರೋಗ ನಿರೋಧಕ ಶಕ್ತಿ ಕುಂದಿದ್ದರೆ ಆ ರೀತಿಯೆಲ್ಲಾ ಆಗುವುದು.
ಆದ್ದರಿಂದ ಇದರಲ್ಲಿ ಯಾವುದೇ ಲಕ್ಷಣಗಳು ಕಂಡು ಬಂದಿದ್ದರೂ ನಿರ್ಲಕ್ಷ್ಯ ಮಾಡದೆ ವೈದ್ಯರಿಗೆ ತೋರಿಸಿ ಸೂಕ್ತ ಚಿಕಿತ್ಸೆ ಪಡೆಯಿರಿ.



Click it and Unblock the Notifications
