Latest Updates
-
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು ತಪ್ಪಿದ್ದಲ್ಲ! -
ಸೋಷಿಯಲ್ ಮೀಡಿಯಾದಲ್ಲಿ ಪ್ರೀತಿಯನ್ನು ತೋರಿಸುವ ಹೊಸ ಟ್ರೆಂಡ್: 'ಸಾಫ್ಟ್ ಲಾಂಚ್' ಮೂಲಕ ನಿಮ್ಮ ಸಂಬಂಧವನ್ನು ಭದ್ರಪಡಿಸಿಕೊಳ್ಳಿ! -
ಹೀಟ್ವೇವ್ ಎಚ್ಚರಿಕೆ: ಸುಡುವ ಬಿಸಿಲಲ್ಲೂ ನಿಮ್ಮ ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಉಳಿಸಲು ಈ ಟಿಪ್ಸ್ ಸಾಕು! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಆಹಾರ ಕ್ರಮಗಳನ್ನು ಮರೆಯದೆ ಪಾಲಿಸಿ! -
ಮುಟ್ಟಿನ ನೈರ್ಮಲ್ಯ ದಿನ: ಕೇವಲ 200 ರೂಪಾಯಿಗೂ ಕಡಿಮೆ ಬೆಲೆಯಲ್ಲಿ ಸಿಗುತ್ತಿವೆ ಈ ಅಗತ್ಯ ಉತ್ಪನ್ನಗಳು, ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ!
ಈ ರೀತಿ ಕಂಡು ಬಂದರೆ ರೋಗ ನಿರೋಧಕ ಶಕ್ತಿ ಕಡಿಮೆಯಾಗಿದೆ ಎನ್ನುವ ಸೂಚನೆಗಳಾಗಿವೆ
2019ರ ಕೊನೆಯಲ್ಲಿ ಶುರುವಾದ ಕೊರೊನಾ ಕಾಟ 2022 ಅರ್ಧ ವರ್ಷ ಕಳೆದರೂ ಇನ್ನೂ ಮುಗಿದಿಲ್ಲ, ಅದರ ಜೊತೆಗೆ ಈಗ ಮಂಕಿಪಾಕ್ಸ್ ಕೂಡ ವಿಶ್ವವನ್ನು ಕಾಡುತ್ತಿದೆ. ಮಳೆಗಾಲ, ಈ ಸಮಯದಲ್ಲಿ ಡೆಂಗ್ಯೂ, ಮಲೇರಿಯಾ ಈ ರೀತಿಯ ಕಾಯಿಲೆ ಕೂಡ ಹೆಚ್ಚಾಗುವುದು, ಈ ಎಲ್ಲಾ ಸಮಸ್ಯೆಗಳು ಯಾರಿಗೆ ಹೆಚ್ಚು ಅಪಾಯಕಾರಿ ಗೊತ್ತಾ? ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ.
ಹೌದು ರೋಗ ನಿರೋಧಕ ಶಕ್ತಿ ಕಡಿಮೆಯಿದ್ದರೆ ಬೇಗನೆ ಕಾಯಿಲೆಗಳು ಬರುತ್ತವೆ ಅಥವಾ ವೈರಸ್ಗಳು ತಗುಲಿದರೆ ಗಂಭೀರವಾಗುವ ಸಾಧ್ಯತೆ ಹೆಚ್ಚು. ನಮ್ಮ ದೇಹದಲ್ಲಿ ರೋಗ ನಿರೋಧಕ ಕಡಿಮೆ ಇದೆಯೇ ಎಂದು ತಿಳಿಯುವುದು ಹೇಗೆ. ಈ ಸಮಸ್ಯೆಗಳು ಪದೇ ಪದೇ ಕಾಡುತ್ತಿದ್ದರೆ ರೋಗ ನಿರೋಧಕ ಶಕ್ತಿ ಕಡಿಮೆಯಿದೆ ಎಂಬುವುದರ ಸೂಚನೆಯಾಗಿದೆ, ಹೀಗಿದ್ದರೆ ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕಡೆ ಗಮನ ನೀಡಬೇಕಾಗಿದೆ.
ನೀವು ಗಮನಿಸಬೇಕಾದ ಎಚ್ಚರಿಕೆಯ ಸೂಚನೆಗಳಿವು:

ಅತ್ಯಧಿಕ ಒತ್ತಡ
ನಿಮ್ಮ ದೇಹದಲ್ಲಿ lymphocytes ಕಡಿಮೆಯಾದಾಗ ಅತ್ಯಧಿಕ ಮಾನಸಿಕ ಒತ್ತಡ ಉಂಟಾಗುತ್ತದೆ. ಇದರಿಂದಾಗಿ ದೇಹದಲ್ಲಿ ಬಿಳಿ ರಕ್ತ ಕಣಗಳು ಕಡಿಮೆಯಾಗುವುದು. ಯಾವಾಗ ರಕ್ತದಲ್ಲಿ ಬಿಳಿ ರಕ್ತಕಣಗಳು ಕಡಿಮೆಯಾದಾಗ ಯಾವುದಾದರೂ ವೈರಸ್ ದೇಹವನ್ನು ಪ್ರವೇಶಿಸಿದಾಗ ಅದರ ವಿರುದ್ಧ ಹೋರಾಡುವ ಸಾಮರ್ಥ್ಯ ಕಳೆದುಕೊಳ್ಳುತ್ತದೆ. ದೇಹ ದುರ್ಬಲವಾಗುವುದು. ಆದ್ದರಿಂದ ಮಾನಸಿಕ ಒತ್ತಡದ ಕಡೆ ಗಮನ ನೀಡಿ, ಮಾನಸಿಕ ಒತ್ತಡ ರೋಗ ನಿರೋಧಕ ಶಕ್ತಿ ಕಡಿಮೆಯಾಗುವುದು.

ಆಗಾಗ ಶೀತ, ಕೆಮ್ಮು, ಜ್ವರ ಈ ರೀತಿಯ ಸಮಸ್ಯೆ ಕಾಡುವುದು
ಅಪರೂಪಕ್ಕೆ ಶೀತ, ಕೆಮ್ಮು ಬರುವುದು ಸಹಜ. ಆದರೆ ಆಗಾಗ ಈ ರೀತಿಯ ಸಮಸ್ಯೆ ಕಾಡುತ್ತಿದ್ದರೆ ನಿಮ್ಮಲ್ಲಿ ರೋಗ ನಿರೋಧಕ ಶಕ್ತಿ ತುಂಬಾನೇ ಕಡಿಮೆ ಇದೆ ಎಂದರ್ಥ.

ಆಗಾಗ ಹೊಟ್ಟೆ ಸಮಸ್ಯೆ ಕಾಡುವುದು
ಬೇಧಿ, ಗ್ಯಾಸ್ಟ್ರಿಕ್, ಮಲಬದ್ಧತೆ, ಹೊಟ್ಟೆ ನೋವು ಈ ರೀತಿಯ ಸಮಸ್ಯೆ ಆಗಾಗ ಕಾಡುತ್ತಿದ್ದರೆ ರೋಗ ನಿರೋಧಕ ಶಕ್ತಿ ಕಡಿಮೆ ಇದೆ ಎಂದರ್ಥ. ಇದರಿಂದಾಗಿ ವೈರಲ್ ಸೋಂಕಿನ ಸಮಸ್ಯೆ ಹೆಚ್ಚಾಗುವುದು.

ಗಾಯ ಒಣಗಲು ತುಂಬಾ ಸಮಯ ತೆಗೆದುಕೊಂಡರೆ
ಏನಾದರೂ ಗಾಯವಾದರೆ ಅದು ಒಣಗಲು ತುಂಬಾ ಸಮಯ ತೆಗೆದುಕೊಂಡರೆ ರೋಗ ನಿರೋಧಕ ಶಕ್ತಿ ಕಡಿಮೆ ಇದೆ ಎಂದರ್ಥ. ಆಗ ಗಾಯ ಒಣಗದೆ ಚಿಕ್ಕ ಗಾಯ ದೊಡ್ಡದಾಗಿ ಇನ್ನಿತರ ಸಮಸ್ಯೆ ಉಂಟಾಗುವ ಸಾಧ್ಯತೆ ಹೆಚ್ಚು.

ತುಂಬಾ ಸುಸ್ತು, ಆಗಾಗ ತಲೆಸುತ್ತು ಬರುವುದು
ನಿಮಗೆ ತುಂಬಾ ಸುಸ್ತು, ತಲೆ ಸುತ್ತು ಬರುವುದು ಈ ರೀತಿಯ ಸಮಸ್ಯೆ ಕಾಡುತ್ತಿದ್ದರೆ ರೋಗ ನಿರೋಧಕ ಶಕ್ತಿ ಕುಂದಿದ್ದರೆ ಆ ರೀತಿಯೆಲ್ಲಾ ಆಗುವುದು.
ಆದ್ದರಿಂದ ಇದರಲ್ಲಿ ಯಾವುದೇ ಲಕ್ಷಣಗಳು ಕಂಡು ಬಂದಿದ್ದರೂ ನಿರ್ಲಕ್ಷ್ಯ ಮಾಡದೆ ವೈದ್ಯರಿಗೆ ತೋರಿಸಿ ಸೂಕ್ತ ಚಿಕಿತ್ಸೆ ಪಡೆಯಿರಿ.



Click it and Unblock the Notifications