Latest Updates
-
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್ -
ಐಟಿಆರ್ ಸಲ್ಲಿಕೆಗೆ ಇನ್ನು 4 ದಿನ ಬಾಕಿ: ಭಾರಿ ದಂಡದಿಂದ ಪಾರಾಗಲು ಈ ಕೆಲಸಗಳನ್ನು ಇಂದೇ ಮಾಡಿ!
ಈ ರೀತಿ ಕಂಡು ಬಂದರೆ ರೋಗ ನಿರೋಧಕ ಶಕ್ತಿ ಕಡಿಮೆಯಾಗಿದೆ ಎನ್ನುವ ಸೂಚನೆಗಳಾಗಿವೆ
2019ರ ಕೊನೆಯಲ್ಲಿ ಶುರುವಾದ ಕೊರೊನಾ ಕಾಟ 2022 ಅರ್ಧ ವರ್ಷ ಕಳೆದರೂ ಇನ್ನೂ ಮುಗಿದಿಲ್ಲ, ಅದರ ಜೊತೆಗೆ ಈಗ ಮಂಕಿಪಾಕ್ಸ್ ಕೂಡ ವಿಶ್ವವನ್ನು ಕಾಡುತ್ತಿದೆ. ಮಳೆಗಾಲ, ಈ ಸಮಯದಲ್ಲಿ ಡೆಂಗ್ಯೂ, ಮಲೇರಿಯಾ ಈ ರೀತಿಯ ಕಾಯಿಲೆ ಕೂಡ ಹೆಚ್ಚಾಗುವುದು, ಈ ಎಲ್ಲಾ ಸಮಸ್ಯೆಗಳು ಯಾರಿಗೆ ಹೆಚ್ಚು ಅಪಾಯಕಾರಿ ಗೊತ್ತಾ? ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ.
ಹೌದು ರೋಗ ನಿರೋಧಕ ಶಕ್ತಿ ಕಡಿಮೆಯಿದ್ದರೆ ಬೇಗನೆ ಕಾಯಿಲೆಗಳು ಬರುತ್ತವೆ ಅಥವಾ ವೈರಸ್ಗಳು ತಗುಲಿದರೆ ಗಂಭೀರವಾಗುವ ಸಾಧ್ಯತೆ ಹೆಚ್ಚು. ನಮ್ಮ ದೇಹದಲ್ಲಿ ರೋಗ ನಿರೋಧಕ ಕಡಿಮೆ ಇದೆಯೇ ಎಂದು ತಿಳಿಯುವುದು ಹೇಗೆ. ಈ ಸಮಸ್ಯೆಗಳು ಪದೇ ಪದೇ ಕಾಡುತ್ತಿದ್ದರೆ ರೋಗ ನಿರೋಧಕ ಶಕ್ತಿ ಕಡಿಮೆಯಿದೆ ಎಂಬುವುದರ ಸೂಚನೆಯಾಗಿದೆ, ಹೀಗಿದ್ದರೆ ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕಡೆ ಗಮನ ನೀಡಬೇಕಾಗಿದೆ.
ನೀವು ಗಮನಿಸಬೇಕಾದ ಎಚ್ಚರಿಕೆಯ ಸೂಚನೆಗಳಿವು:

ಅತ್ಯಧಿಕ ಒತ್ತಡ
ನಿಮ್ಮ ದೇಹದಲ್ಲಿ lymphocytes ಕಡಿಮೆಯಾದಾಗ ಅತ್ಯಧಿಕ ಮಾನಸಿಕ ಒತ್ತಡ ಉಂಟಾಗುತ್ತದೆ. ಇದರಿಂದಾಗಿ ದೇಹದಲ್ಲಿ ಬಿಳಿ ರಕ್ತ ಕಣಗಳು ಕಡಿಮೆಯಾಗುವುದು. ಯಾವಾಗ ರಕ್ತದಲ್ಲಿ ಬಿಳಿ ರಕ್ತಕಣಗಳು ಕಡಿಮೆಯಾದಾಗ ಯಾವುದಾದರೂ ವೈರಸ್ ದೇಹವನ್ನು ಪ್ರವೇಶಿಸಿದಾಗ ಅದರ ವಿರುದ್ಧ ಹೋರಾಡುವ ಸಾಮರ್ಥ್ಯ ಕಳೆದುಕೊಳ್ಳುತ್ತದೆ. ದೇಹ ದುರ್ಬಲವಾಗುವುದು. ಆದ್ದರಿಂದ ಮಾನಸಿಕ ಒತ್ತಡದ ಕಡೆ ಗಮನ ನೀಡಿ, ಮಾನಸಿಕ ಒತ್ತಡ ರೋಗ ನಿರೋಧಕ ಶಕ್ತಿ ಕಡಿಮೆಯಾಗುವುದು.

ಆಗಾಗ ಶೀತ, ಕೆಮ್ಮು, ಜ್ವರ ಈ ರೀತಿಯ ಸಮಸ್ಯೆ ಕಾಡುವುದು
ಅಪರೂಪಕ್ಕೆ ಶೀತ, ಕೆಮ್ಮು ಬರುವುದು ಸಹಜ. ಆದರೆ ಆಗಾಗ ಈ ರೀತಿಯ ಸಮಸ್ಯೆ ಕಾಡುತ್ತಿದ್ದರೆ ನಿಮ್ಮಲ್ಲಿ ರೋಗ ನಿರೋಧಕ ಶಕ್ತಿ ತುಂಬಾನೇ ಕಡಿಮೆ ಇದೆ ಎಂದರ್ಥ.

ಆಗಾಗ ಹೊಟ್ಟೆ ಸಮಸ್ಯೆ ಕಾಡುವುದು
ಬೇಧಿ, ಗ್ಯಾಸ್ಟ್ರಿಕ್, ಮಲಬದ್ಧತೆ, ಹೊಟ್ಟೆ ನೋವು ಈ ರೀತಿಯ ಸಮಸ್ಯೆ ಆಗಾಗ ಕಾಡುತ್ತಿದ್ದರೆ ರೋಗ ನಿರೋಧಕ ಶಕ್ತಿ ಕಡಿಮೆ ಇದೆ ಎಂದರ್ಥ. ಇದರಿಂದಾಗಿ ವೈರಲ್ ಸೋಂಕಿನ ಸಮಸ್ಯೆ ಹೆಚ್ಚಾಗುವುದು.

ಗಾಯ ಒಣಗಲು ತುಂಬಾ ಸಮಯ ತೆಗೆದುಕೊಂಡರೆ
ಏನಾದರೂ ಗಾಯವಾದರೆ ಅದು ಒಣಗಲು ತುಂಬಾ ಸಮಯ ತೆಗೆದುಕೊಂಡರೆ ರೋಗ ನಿರೋಧಕ ಶಕ್ತಿ ಕಡಿಮೆ ಇದೆ ಎಂದರ್ಥ. ಆಗ ಗಾಯ ಒಣಗದೆ ಚಿಕ್ಕ ಗಾಯ ದೊಡ್ಡದಾಗಿ ಇನ್ನಿತರ ಸಮಸ್ಯೆ ಉಂಟಾಗುವ ಸಾಧ್ಯತೆ ಹೆಚ್ಚು.

ತುಂಬಾ ಸುಸ್ತು, ಆಗಾಗ ತಲೆಸುತ್ತು ಬರುವುದು
ನಿಮಗೆ ತುಂಬಾ ಸುಸ್ತು, ತಲೆ ಸುತ್ತು ಬರುವುದು ಈ ರೀತಿಯ ಸಮಸ್ಯೆ ಕಾಡುತ್ತಿದ್ದರೆ ರೋಗ ನಿರೋಧಕ ಶಕ್ತಿ ಕುಂದಿದ್ದರೆ ಆ ರೀತಿಯೆಲ್ಲಾ ಆಗುವುದು.
ಆದ್ದರಿಂದ ಇದರಲ್ಲಿ ಯಾವುದೇ ಲಕ್ಷಣಗಳು ಕಂಡು ಬಂದಿದ್ದರೂ ನಿರ್ಲಕ್ಷ್ಯ ಮಾಡದೆ ವೈದ್ಯರಿಗೆ ತೋರಿಸಿ ಸೂಕ್ತ ಚಿಕಿತ್ಸೆ ಪಡೆಯಿರಿ.



Click it and Unblock the Notifications