Latest Updates
-
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ?
ಕೊರೊನಾ ಜೊತೆಗೆ ಕಾಲರಾ ಭಯ, ಮುನ್ನೆಚ್ಚರಿಕೆ ಕ್ರಮಗಳೇನು?
2020ರಲ್ಲಿ ಒಂದರ ಹಿಂದೆ ಮತ್ತೊಂದು ಭಯಾನಕ ರೋಗಗಳು ಕಾಲಿಡುತ್ತಿವೆ. ಕೊರೊನಾ ಎಂಬ ಮಹಾಮಾರಿ ಆತಂಕದ ಪರಿಸ್ಥಿತಿಯನ್ನು ಸೃಷ್ಟಿಸಿರುವಾಗಲೇ H1N1,ಕಾಲರಾ, ಹಕ್ಕಿ ಜ್ವರ ಮುಂತಾದ ರೋಗಳು ಪತ್ತೆಯಾಗಿದ್ದು ಈ ರೋಗಗಳಿಂದ ಪಾರಾಗಲು ಆರೋಗ್ಯ ಹಾಗೂ ಶುಚಿತ್ವದ ಕಡೆಗೆ ಸಾಕಷ್ಟು ಮುನ್ನಚ್ಚರಿಕೆವಹಿಸಬೇಕಾಗಿದೆ.

ಇದೀಗ ಬೆಂಗಳೂರಿನಲ್ಲಿ ಕೊರೊನಾ ಜೊತೆಗೆ ಕಾಲರಾ ರೋಗದ ಭೀತಿ ಶುರುವಾಗಿದೆ. ಜನರು ಬೀದಿ ಬದಿಯ ಆಹಾರಗಳನ್ನು ಸೇವಿಸದಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಕಾಲರಾ ಆಹರ ಹಾಗೂ ನೀರಿನಿಂದ ಹರಡುವ ರೋಗವಾಗಿದೆ.
ಇಲ್ಲಿ ನಾವು ಕಾಲರಾ ರೋಗದ ಲಕ್ಷಣಗಳು ಹಾಗೂ ಇದು ಹರಡುವುದು ಹೇಗೆ, ಇದನ್ನು ತಡೆಗಟ್ಟುವುದು ಹೇಗೆ? ಎಂಬ ಮಾಹಿತಿ ನೀಡಿದ್ದೇವೆ ನೋಡಿ:

ಕಾಲರಾದ ಲಕ್ಷಣಗಳು
ಮೊದಲಿಗೆ ವಾಂತಿ-ಭೇದಿ ಶುರುವಾಗುತ್ತದೆ , ಇದನ್ನು ನಿರ್ಲಕ್ಷ್ಯ ಮಾಡಿದರೆ ಪ್ರಾಣಕ್ಕೆ ಅಪಾಯ ಉಂಟಾಗಬಹುದು.
* ಒಂದೆರಡು ಬಾರಿ ವಾಂತಿ-ಭೇದಿ ಉಂಟಾದರೆ ಕೂಡಲೇ ವೈದ್ಯರಿಗೆ ತೋರಿಸಿ, ದೇಹದಲ್ಲಿ ನೀರಿನಂಶ ಕಡಿಮೆಯಾಗದಂತೆ ನೋಡಿಕೊಳ್ಳಿ.

ರೋಗ ಹರಡುವುದು ಹೇಗೆ?
* ಸೋಂಕಿತನ ಮಲದಿಂದ ಕೂಡ ಹರಡುವುದು
* ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಚರಂಡಿ ವ್ಯವಸ್ಥೆ ಇಲ್ಲದಿದ್ದರೆ ಬೇಗ ಹರಡುತ್ತದೆ
* ನಿಂತ ನೀರಿನಿಂದ ಕೂಡ ಹರಡುತ್ತಿದೆ.
* ಸೋಂಕಿತ ವ್ಯಕ್ತಿಯನ್ನು ಮುಟ್ಟುವುದಿಂದ, ಕೈ ಕುಲುಕುವುದರಿಂದ ಕೂಡ ಹರಡುತ್ತದೆ

ಚಿಕಿತ್ಸೆ
* ವಾಂತಿ-ಭೇದಿ ಕಂಡು ಬಂದ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.
* ಭೇದಿಯ ಮೂಲಕ ನಷ್ಟವಾದ ದೇಹದ ಜೀವ ದ್ರವ ಮತ್ತು ಲವಣಗಳನ್ನು ದೇಹಕ್ಕೆ ಸೇರಿಸಲು ಒಆರ್ ಎಸ್ ನಂತಹ ದ್ರವ ಕುಡಿಸಬೇಕು.
* ವಾಂತಿ-ಭೇದಿಯಾದವರಿಗೆ ಸಕ್ಕರೆ ಮತ್ತು ಉಪ್ಪನ್ನು ಸೇರಿಸಿದ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಕುಡಿಸಬೇಕು
* ತೀರಾ ನಿತ್ರಾಣವಾಗಿದ್ದರೆ ಗ್ಲೂಕೋಸ್ ಹಾಕಿಸಬೇಕು.
ಸೋಂಕು ತಗುಲಿದ ಸುಮಾರು 20 ಜನರಲ್ಲಿ ಒಬ್ಬರಿಗೆ ತೀವ್ರ ಲಕ್ಷಣಗಳು ಕಂಡುಬರುತ್ತವೆ. ಅತಿಯಾದ ವಾಂತಿ, ಭೇದಿ, ಮತ್ತು ಕಾಲು ಸೆಳೆತ ಕಂಡುಬರುತ್ತದೆ. ಇಂತಹ ವ್ಯಕ್ತಿಗಳಲ್ಲಿ ದೇಹ ನಿರ್ಜಲೀಕರಣ ಆಗುತ್ತದೆ. ಕೆಲವೇ ಗಂಟೆಗಳಲ್ಲೂ ಮರಣ ಹೊಂದಬಹುದು.

ಕಾಲರಾ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳು
* ಸುತ್ತ-ಮುತ್ತಲಿನ ವಾತಾವರಣದಲ್ಲಿ ಸೋಂಕು ಕಂಡು ಬಂದರೆ ಆ ಪ್ರದೇಶದ ವ್ಯಕ್ತಿಗಳು ತುಂಬಾ ಜಾಗ್ರತೆವಹಿಸಬೇಕು.
* ನೀರನ್ನು ಚೆನ್ನಾಗಿ ಕುದಿಸಿ ಕುಡಿಯಬೇಕು.
* ಆಹಾರವನ್ನು ಚೆನ್ನಾಗಿ ಬೇಯಿಸಿ ಸೇವಿಸಬೇಕು.
* ಹಣ್ಣುಗಳನ್ನು ಚೆನ್ನಾಗಿ ತೊಳೆದು ಅದರ ಸಿಪ್ಪೆ ಸುಲಿದು ತಿನ್ನಬೇಕು.
* ಕೈಗಳ ಸ್ವಚ್ಛತೆಗೆ ಹಚ್ಚಿನ ಆದ್ಯತೆ ನೀಡಬೇಕು.
* ಕಾಲರಾ ರೋಗಿಗಳ ಆರೈಕೆ ಮಾಡುವಾಗ ಮಾಸ್ಕ್ ಧರಿಸಬೇಕು
* ಅವರ ಬಟ್ಟೆಯನ್ನು ಶುಚಿ ಮಾಡುವಾಗ ಗ್ಲೌಸ್ ಹಾಗೂ ಮಾಸ್ಕ್ ಧರಿಸಬೇಕು. ಆ ಬಟ್ಟೆಯನ್ನು ಬಿಸಿ ನೀರಿನಲ್ಲಿ ಹಾಕಿ ತೊಳೆಯಿರಿ.



Click it and Unblock the Notifications