Latest Updates
-
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ! -
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ!
ಕೊರೊನಾ ಜೊತೆಗೆ ಕಾಲರಾ ಭಯ, ಮುನ್ನೆಚ್ಚರಿಕೆ ಕ್ರಮಗಳೇನು?
2020ರಲ್ಲಿ ಒಂದರ ಹಿಂದೆ ಮತ್ತೊಂದು ಭಯಾನಕ ರೋಗಗಳು ಕಾಲಿಡುತ್ತಿವೆ. ಕೊರೊನಾ ಎಂಬ ಮಹಾಮಾರಿ ಆತಂಕದ ಪರಿಸ್ಥಿತಿಯನ್ನು ಸೃಷ್ಟಿಸಿರುವಾಗಲೇ H1N1,ಕಾಲರಾ, ಹಕ್ಕಿ ಜ್ವರ ಮುಂತಾದ ರೋಗಳು ಪತ್ತೆಯಾಗಿದ್ದು ಈ ರೋಗಗಳಿಂದ ಪಾರಾಗಲು ಆರೋಗ್ಯ ಹಾಗೂ ಶುಚಿತ್ವದ ಕಡೆಗೆ ಸಾಕಷ್ಟು ಮುನ್ನಚ್ಚರಿಕೆವಹಿಸಬೇಕಾಗಿದೆ.

ಇದೀಗ ಬೆಂಗಳೂರಿನಲ್ಲಿ ಕೊರೊನಾ ಜೊತೆಗೆ ಕಾಲರಾ ರೋಗದ ಭೀತಿ ಶುರುವಾಗಿದೆ. ಜನರು ಬೀದಿ ಬದಿಯ ಆಹಾರಗಳನ್ನು ಸೇವಿಸದಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಕಾಲರಾ ಆಹರ ಹಾಗೂ ನೀರಿನಿಂದ ಹರಡುವ ರೋಗವಾಗಿದೆ.
ಇಲ್ಲಿ ನಾವು ಕಾಲರಾ ರೋಗದ ಲಕ್ಷಣಗಳು ಹಾಗೂ ಇದು ಹರಡುವುದು ಹೇಗೆ, ಇದನ್ನು ತಡೆಗಟ್ಟುವುದು ಹೇಗೆ? ಎಂಬ ಮಾಹಿತಿ ನೀಡಿದ್ದೇವೆ ನೋಡಿ:

ಕಾಲರಾದ ಲಕ್ಷಣಗಳು
ಮೊದಲಿಗೆ ವಾಂತಿ-ಭೇದಿ ಶುರುವಾಗುತ್ತದೆ , ಇದನ್ನು ನಿರ್ಲಕ್ಷ್ಯ ಮಾಡಿದರೆ ಪ್ರಾಣಕ್ಕೆ ಅಪಾಯ ಉಂಟಾಗಬಹುದು.
* ಒಂದೆರಡು ಬಾರಿ ವಾಂತಿ-ಭೇದಿ ಉಂಟಾದರೆ ಕೂಡಲೇ ವೈದ್ಯರಿಗೆ ತೋರಿಸಿ, ದೇಹದಲ್ಲಿ ನೀರಿನಂಶ ಕಡಿಮೆಯಾಗದಂತೆ ನೋಡಿಕೊಳ್ಳಿ.

ರೋಗ ಹರಡುವುದು ಹೇಗೆ?
* ಸೋಂಕಿತನ ಮಲದಿಂದ ಕೂಡ ಹರಡುವುದು
* ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಚರಂಡಿ ವ್ಯವಸ್ಥೆ ಇಲ್ಲದಿದ್ದರೆ ಬೇಗ ಹರಡುತ್ತದೆ
* ನಿಂತ ನೀರಿನಿಂದ ಕೂಡ ಹರಡುತ್ತಿದೆ.
* ಸೋಂಕಿತ ವ್ಯಕ್ತಿಯನ್ನು ಮುಟ್ಟುವುದಿಂದ, ಕೈ ಕುಲುಕುವುದರಿಂದ ಕೂಡ ಹರಡುತ್ತದೆ

ಚಿಕಿತ್ಸೆ
* ವಾಂತಿ-ಭೇದಿ ಕಂಡು ಬಂದ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.
* ಭೇದಿಯ ಮೂಲಕ ನಷ್ಟವಾದ ದೇಹದ ಜೀವ ದ್ರವ ಮತ್ತು ಲವಣಗಳನ್ನು ದೇಹಕ್ಕೆ ಸೇರಿಸಲು ಒಆರ್ ಎಸ್ ನಂತಹ ದ್ರವ ಕುಡಿಸಬೇಕು.
* ವಾಂತಿ-ಭೇದಿಯಾದವರಿಗೆ ಸಕ್ಕರೆ ಮತ್ತು ಉಪ್ಪನ್ನು ಸೇರಿಸಿದ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಕುಡಿಸಬೇಕು
* ತೀರಾ ನಿತ್ರಾಣವಾಗಿದ್ದರೆ ಗ್ಲೂಕೋಸ್ ಹಾಕಿಸಬೇಕು.
ಸೋಂಕು ತಗುಲಿದ ಸುಮಾರು 20 ಜನರಲ್ಲಿ ಒಬ್ಬರಿಗೆ ತೀವ್ರ ಲಕ್ಷಣಗಳು ಕಂಡುಬರುತ್ತವೆ. ಅತಿಯಾದ ವಾಂತಿ, ಭೇದಿ, ಮತ್ತು ಕಾಲು ಸೆಳೆತ ಕಂಡುಬರುತ್ತದೆ. ಇಂತಹ ವ್ಯಕ್ತಿಗಳಲ್ಲಿ ದೇಹ ನಿರ್ಜಲೀಕರಣ ಆಗುತ್ತದೆ. ಕೆಲವೇ ಗಂಟೆಗಳಲ್ಲೂ ಮರಣ ಹೊಂದಬಹುದು.

ಕಾಲರಾ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳು
* ಸುತ್ತ-ಮುತ್ತಲಿನ ವಾತಾವರಣದಲ್ಲಿ ಸೋಂಕು ಕಂಡು ಬಂದರೆ ಆ ಪ್ರದೇಶದ ವ್ಯಕ್ತಿಗಳು ತುಂಬಾ ಜಾಗ್ರತೆವಹಿಸಬೇಕು.
* ನೀರನ್ನು ಚೆನ್ನಾಗಿ ಕುದಿಸಿ ಕುಡಿಯಬೇಕು.
* ಆಹಾರವನ್ನು ಚೆನ್ನಾಗಿ ಬೇಯಿಸಿ ಸೇವಿಸಬೇಕು.
* ಹಣ್ಣುಗಳನ್ನು ಚೆನ್ನಾಗಿ ತೊಳೆದು ಅದರ ಸಿಪ್ಪೆ ಸುಲಿದು ತಿನ್ನಬೇಕು.
* ಕೈಗಳ ಸ್ವಚ್ಛತೆಗೆ ಹಚ್ಚಿನ ಆದ್ಯತೆ ನೀಡಬೇಕು.
* ಕಾಲರಾ ರೋಗಿಗಳ ಆರೈಕೆ ಮಾಡುವಾಗ ಮಾಸ್ಕ್ ಧರಿಸಬೇಕು
* ಅವರ ಬಟ್ಟೆಯನ್ನು ಶುಚಿ ಮಾಡುವಾಗ ಗ್ಲೌಸ್ ಹಾಗೂ ಮಾಸ್ಕ್ ಧರಿಸಬೇಕು. ಆ ಬಟ್ಟೆಯನ್ನು ಬಿಸಿ ನೀರಿನಲ್ಲಿ ಹಾಕಿ ತೊಳೆಯಿರಿ.



Click it and Unblock the Notifications