Latest Updates
-
ಹುಷಾರ್.. ಗಂಡನಿಗೆ ಈ 4 ಮಾತು ಹೇಳ್ತೀರಾ? ಮನೇಲಿ ಬೆಂಕಿ ಉರಿಯುತ್ತೆ.. ಹೀಗೆ ಮಾಡಿದ್ರೆ ಸಂಸಾರದಲ್ಲಿ ಸುಖ ಇರುತ್ತೆ -
ಸಿಸ್ಟರ್.. 30+ ಬಳಿಕ ಈ ಸೂತ್ರಗಳನ್ನು ಬೆಳೆಸಿಕೊಳ್ಳಿ! ಆರೋಗ್ಯ ಸದಾ ಚೆನ್ನಾಗಿ ಇರುತ್ತೆ -
10 ನಿಮಿಷದ ಹಾಟ್ ಹಾಟ್ ಪರೋಟ! ಈ ರೀತಿ ಮಾಡಿದ್ರೆ ಮೃದು & ಕ್ರಿಸ್ಪಿಯಾಗಿ ಬರುತ್ತೆ.. ಹೋಟೆಲ್ ಸ್ಟೈಲ್ ಸೀಕ್ರೆಟ್ ಇಲ್ಲಿದೆ -
ಹೋಟೆಲ್ ಸ್ಟೈಲ್ ರಾಯಲ್ ಚಟ್ನಿ! ಈ ಒಂದು ವಸ್ತು ಸೇರಿಸಿ ನೋಡಿ.. ರುಚಿ ಡಬಲ್, 2 ಇಡ್ಲಿ ಜಾಸ್ತಿ ತಿಂತೀರಾ -
ಈ ದಿನ ಆರ್ಥಿಕ ಲಾಭದ ಸಾಧ್ಯತೆಗಳೂ ಇವೆ! ನಿಮ್ಮ ಕ್ರಶ್ ಭೇಟಿಯಾಗುವ ಯೋಗ -
March 07 Horoscope: ಪ್ರಯಾಣ ಮಾಡುವಾಗ ಎಚ್ಚರವಿಡಿ! -
ಅಬ್ಬಬ್ಬಾ ಎಂಥಾ ರುಚಿ ಈ ಈರುಳ್ಳಿ ಮಂಚೂರಿಯನ್: ನೀವೂ ಕೂಡ ಟ್ರೈ ಮಾಡಿ -
ಮಾರ್ಚ್ನಲ್ಲಿ ಕಾಳಸರ್ಪ ಯೋಗ: ಈ ರಾಶಿಯವರಿಗೆ ಯೋಗದಿಂದ ಇದೆ ದೊಡ್ಡ ಲಾಭ! -
ದೇಹದಲ್ಲಿ ರಕ್ತ ಕಡಿಮೆ ಆಗಿದ್ರೆ ಈ ಎಳ್ಳುಂಡೆ ಮಾಡಿ: ತಿಂಗಳ ಕಾಲ ಇಟ್ಟು ಸವಿಯಬಹುದು! -
ಕರ್ನಾಟಕ ಬಜೆಟ್ 2026: ಆರೋಗ್ಯ ವಲಯಕ್ಕೆ ಬಂಪರ್, ಹೊಸ ಯೋಜನೆಗಳೇನು ನೋಡಿ!
ಮಕ್ಕಳ ರಕ್ಷಣೆಗೆ ಕೊರೊನಾ 3ನೇ ಅಲೆಗೆ ಮೊದಲು ಪೋಷಕರೇ ಲಸಿಕೆ ಪಡೆಯಿರಿ: ಡಾ. ದೇವಿ ಶೆಟ್ಟಿ
ಕೊರೊನಾ 3ನೇ ಅಲೆ ಎಂದು ಕೇಳಿದ ತಕ್ಷಣ ಚಿಕ್ಕ ಮಕ್ಕಳಿರುವ ಪೋಷಕರಲ್ಲಿ ಆತಂಕ ಹೆಚ್ಚಾಗುತ್ತಿದೆ. 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಲಭ್ಯವಿದೆ, ಲಸಿಕೆ ಪಡೆದವರು ಕೊರೊನಾಕ್ಕೆ ಬಲಿಯಾಗುವುದರಿಂದ ತಪ್ಪಿಸಿಕೊಳ್ಳಬಹುದು ಎಂಬುವುದು ಸಾಬೀತಾಗಿದೆ. ಮಕ್ಕಳಿಗೆ ಲಸಿಕೆ ಇನ್ನೂ ಬಂದಿಲ್ಲ, ಇದು ಪೋಷರ ಆತಂಕಕ್ಕೆ ಪ್ರಮುಖ ಕಾರಣವಾಗಿದೆ.
3ನೇ ಅಲೆ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಮದು ಈಗಾಗಲೇ ತಜ್ಷರು ಎಚ್ಚರಿಸಿದ್ದಾರೆ. ಮಕ್ಕಳನ್ನು ಕೊರೊನಾದಿಂದ ರಕ್ಷಿಸಲು ಏನು ಮಾಡಬೇಕು ಎಂಬುವುದರ ಬಗ್ಗೆ ತಜ್ಞರು ಸಲಹೆ ನೀಡುತ್ತಿದ್ದಾರೆ.
ಬೆಂಗಳೂರಿನ ನಿಮಾನ್ಸ್ನ ಪ್ರಸಿದ್ಧ ವೈರಲಾಜಿಸ್ಟ್ ಡಾ. ರವಿ 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ಎಚ್ಚರಿಸಿದ್ದಾರೆ. ಮಹರಾಷ್ಟ್ರದಲ್ಲಿ ಈ ಅಲೆಯನ್ನು ನಿಯಂತ್ರಿಸಲು ಸರ್ಕಾರ ಈಗಾಗಲೇ ಟಾಸ್ಕ್ ಫೋರ್ಸ್ ರಚಿಸಲಾಗಿದೆ..

ಕೊರೊನಾ 3ನೇ ಅಲೆ ಮಕ್ಕಳಿಗೇ ಏಕೆ ಅಪಾಯಕಾರಿ?
ಕೊರೊನಾ ಮೊದಲನೇ ಅಲೆ ವಯಸ್ಸಾದವರಿಗೆ ಹಾಗೂ ಈಗಾಗಲೇ ಕಾಯಿಲೆಯಿಂದ ಬಳಲುತ್ತಿರುವವರಿಗೆ ಹೆಚ್ಚು ಅಪಾಯಕಾರಿಯಾಗಿತ್ತು. ದೇಶದಲ್ಲಿ 2ನೇ ಹಂತದಲ್ಲಿ ಲಸಿಕೆಯನ್ನು 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗಿತ್ತು, ಎರಡನೇ ಅಲೆಯಲ್ಲಿ ಯುವಕ-ಯುವತಿಯರೂ ಬಲಿಯಾಗಿದ್ದಾರೆ. ಕುಟುಂಬದಲ್ಲಿ ದುಡಿದು ತರುತ್ತಿದ್ದ ಕೈಗಳನ್ನೇ ಕೊರೊನಾ ಕಿತ್ತುಕೊಂಡಿದೆ. ದೇಶದಲ್ಲಿ ಇದೀಗ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುತ್ತಿರುವುದರಿಂದ ಅವರು ಸುರಕ್ಷಿತವಾಗಬಹುದು. ಈಗ ಲಸಿಕೆ ಸಿಗದೇ ಇರುವುದು 18 ವರ್ಷ ಕೆಳಗಿನವರಿಗೆ. ಆದ್ದರಿಂದ 3ನೇ ಅಲೆ ಅವರಿಗೆ ಅಪಾಯಕಾರಿಯಾಗಬಹುದೆಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

3ನೇ ಅಲೆಯ ಬಗ್ಗೆ ತಜ್ಞರು ಹೇಳುವುದು ಏನು?
ಭಾರತದಲ್ಲಿ 12 ವರ್ಷಕ್ಕಿಂತ ಚಿಕಕ್ವರು 165 ಮಿಲಿಯನ್ ಇದ್ದಾರೆ. ಶೇ.20ರಷ್ಟು ಮಕ್ಕಳಿಗೆ ಕೊರೊನಾ ಸೋಂಕು ತಗುಲಿದರೂ ಅದರಲ್ಲಿ ಸೇ. 5ರಷ್ಟು ಮಕ್ಕಳಿಗೆ ಐಸಿಯು ಬೇಕಾಗುತ್ತದೆ. ಹಾಗೆ ನೋಡಿದರೆ ಪೀಡಿಯಾಟ್ರಿಕ್ ಐಸಿಯು 1.65 ಲಕ್ಷ ಬೇಕಾಗುವುದು. ಈಗೀನ ಪರಿಸ್ಥಿತಿಯಲ್ಲಿ 90,000 ಐಸಿಯು ಬೆಡ್ ಅನ್ನು ದೊಡ್ಡವರಿಗೆ ಒದಗಿಸಲು ಸರ್ಕಾರ ಹರಸಾಹಸ ಪಡುತ್ತಿದೆ.

ಮಕ್ಕಳ ರಕ್ಷಣೆಗಾಗಿ ಪೋಷಕರಿಗೆ ಮೊದಲು ಲಸಿಕೆ ನೀಡ ಬೇಕಾಗಿದೆ
ಮಕ್ಕಳನ್ನು ಹೊರಗಡೆ ಹೋಗದಂತೆ ನೋಡಿಕೊಳ್ಳಬಹುದು, ಅದೇ ಮನೆಯವರಿಂದಲೇ ಕೊರೊನಾ ಬರುವ ಸಾಧ್ಯತೆ ಇರುವುದರಿಂದ ಸುರಕ್ಷತೆಯ ದೃಷ್ಟಿಯಿಂದ ಪೋಷಕರಿಗೆ ಮೊದಲಿಗೆ ಲಸಿಕೆ ದೊರೆಯುವಂತಾಗಬೇಕು ಎಂದು ನಾರಾಯಣ ಆಸ್ಪತ್ರೆಯ ಮುಖ್ಯಸ್ಥ ಹಾಗೂ ಸಂಸ್ಥಾಪಕ, ಪ್ರಸಿದ್ಧ ಹೃದಯ ಶಸ್ತ್ರಚಿಕಿತ್ಸಕ ಡಾ. ದೇವಿ ಶೆಟ್ಟಿ ಸರ್ಕಾರಕ್ಕೆ ಸೂಚಿಸಿದ್ದಾರೆ.

ಕೊನೆಯದಾಗಿ
ಮನೆಯಲ್ಲಿ ಚಿಕ್ಕ ಮಕ್ಕಳಿರುವ ಪೋಷಕರು ತುಂಬಾನೇ ಜಾಗ್ರತೆವಹಿಸಿ. ಸಭೆ, ಸಮಾರಂಭಗಳಿಗೆ ನೀವೂ ಹೋಗಬೇಡಿ, ಮಕ್ಕಳನ್ನು ಕರೆದುಕೊಂಡು ಹೋಗಬೇಡಿ. ಅಲ್ಲದೆ ಸ್ವಲ್ಪ ಸಮಯದವರೆಗೆ ಮಕ್ಕಳನ್ನು ಎತ್ತಿ ಆಡಿಸಲು ಯಾರಿಗೂ ಕೊಡಬೇಕು, ಹೊರಗಡೆ ಮಕ್ಕಳ ಜೊತೆ ಆಡಲು ಬಿಡದಿರಿ. ಆದಷ್ಟು ಅವರನ್ನು ಸುರಕ್ಷತೆ ಮಾಡಿ.



Click it and Unblock the Notifications











