Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಹೆಚ್ಚುತ್ತಿದೆ ಯುವಕರ ಹಠಾತ್ ಸಾವು, ಕಾರಣವೇನು? ಪತ್ತೆಗೆ ಮುಂದಾದ ರಾಜ್ಯ ಸರ್ಕಾರ
ಈ ಕೊರೊನಾ ಬಳಿಕ ಪರಿಸ್ಥಿತಿ ತುಂಬಾನೇ ಬದಲಾಗಿದೆ, ಅದಕ್ಕೂ ಮೊದಲು ಕೂಡ ಹೃದಯಾಘಾತದ ಸಮಸ್ಯೆವಿತ್ತು, ಆದರೆ ಯುವಕರಲ್ಲಿ, ಚಿಕ್ಕ ಮಕ್ಕಳಲ್ಲಿ ಕಂಡು ಬಂದಿರಲಿಲ್ಲ, ಆದರೆ ಈಗ ಆಗಲ್ಲ ಚಿಕ್ಕ ಪ್ರಾಯದವರಲ್ಲಿ, ನೋಡಲು ಗಟ್ಟಿಮುಟ್ಟಾಗಿ ಆರೋಗ್ಯವಾಗಿ ಇದ್ದವರು ಹಠಾತ್ ಆಗಿ ಹೃದಯಾಘಾತದಿಂದ ಸಾವನ್ನಪ್ಪಿದರು ಎಂದು ಕೇಳಿದಾಗ ಖಂಡಿತ ಅಚ್ಚರಿ ಉಂಟಾಗುವುದು. ಸರ್ಕಾರ ಇದನ್ನು ಗಂಭೀರ ಸಮಸ್ಯೆಯಾಗಿ ಪರಿಗಣಿಸಿದೆ, ಈ ಬಗ್ಗೆ ಸಮರ್ಪಕ ಸಂಶೋಧನೆ ನಡೆಸಬೇಕೆಂದು ತೀರ್ಮಾನಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ್ಮ ಸಾಮಾಜಿಕ ತಾಣದಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.

ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ.
ಕೊರೊನಾ ಕಾಲದ ನಂತರದಿಂದ ಎಳೆಯ ವಯಸಿನವರು, ಯುವಜನರು ಸೇರಿದಂತೆ ಬದುಕಿ ಬಾಳಬೇಕಾದವರು ಇದ್ದಕ್ಕಿದ್ದಂತೆ ಇಲ್ಲವಾಗುತ್ತಿದ್ದಾರೆ, ಇವರನ್ನು ನಂಬಿದ ಕುಟುಂಬಗಳು ಬೀದಿಪಾಲಾಗುತ್ತಿವೆ. ಇದೊಂದು ಗಂಭೀರ ಸಮಸ್ಯೆ, ಆದಷ್ಟು ಶೀಘ್ರ ಈ ಸಮಸ್ಯೆಯ ಮೂಲ ಪತ್ತೆಮಾಡಿ, ಪರಿಹರಿಸಬೇಕು ಎನ್ನುವುದು ನನ್ನ ಯೋಚನೆಯೂ ಆಗಿತ್ತು.
ಇಂತಹ ಸಂದರ್ಭದಲ್ಲಿ ಈ ಸಮಸ್ಯೆಯ ಬಗ್ಗೆ ಗಮನ ಸೆಳೆದು ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಅವರು ಬರೆದ ಪತ್ರ ನನ್ನ ಯೋಚನೆಯನ್ನು ಕಾರ್ಯರೂಪಕ್ಕೆ ತರಲು ಪ್ರೇರಣೆಯಾಯಿತು. ಅವರಿಗೆ ಕೃತಜ್ಞತೆಗಳು.
ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ನೀಡುವ ವರದಿಯನ್ನು ಆಧರಿಸಿ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ.
- ಮುಖ್ಯಮಂತ್ರಿ Siddaramaiah
ಈ ಕುರಿತು ನಡೆಸಿದ ಅಧ್ಯಯನ ವರದಿ ಏನು ಹೇಳಿದೆ
ಇತ್ತೀಚೆಗೆ ನಡೆಸಿದ ಅಧ್ಯಯನದಲ್ಲಿ ಕೋವಿಡ್ 19ನಿಂದ ಚೇತರಿಸಿಕೊಂಡವರಲ್ಲಿ ಹೃದಯಾಘಾತದ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತಿದೆ ಎಂದು ಹೇಳಿದೆ, ಅದರಲ್ಲಿಯೂ ಕೋವಿಡ್ 19 ಗಂಭೀರ ಪರಿಣಾಮ ಬೀರಿದ್ದು ನಂತರ ಚೇತರಿಸಿಕೊಂಡಿದ್ದರೆ ಅವರಲ್ಲಿ ಈ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತಿದೆ ಎಂದು ಹೇಳಿದೆ.
ಹಾಗಾಗಿ ಕೋವಿಡ್ 19 ಬಾಧಿಸಿದ್ದ ರೋಗಿಗಳು ಹೃದಯದ ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕೆಂದು ಹೇಳಿದೆ. ಕೋವಿಡ್ 19 ಬಾಧಿಸಿದವರಲ್ಲಿ ಉರಿಯೂತದ ಸಮಸ್ಯೆ ಕಂಡು ಬರುತ್ತಿದೆ ಎಂದ ಹೇಳಿದೆ. ಈ ವರದಿ ಜಗತ್ತಿನಲ್ಲಿ ಒಂದು ಬಗೆಯ ಆತಂಕ ಉಂಟು ಮಾಡಿದೆ, ಕಾರಣ ಸುಮಾರು 800 ಮಿಲಿಯನ್ ಜನರಿಗೆ ಕೋವಿಡ್ ಬಾಧಿಸಿತ್ತು.
ಕೋವಿಡ್ ಲಸಿಕೆಯಿಂದ ಹೃದಯಾಘಾತದ ಸಮಸ್ಯೆ ಹೆಚ್ಚಾಗುತ್ತಿದೆಯೇ?
ಈ ಬಗೆಯ ವಾದ ಕೂಡ ಇದೆ, ಕೋವಿಡ್ ಹೃದಯಾಘಾತದ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಕೆಲವರು ವಾದಿಸುತ್ತಿದ್ದಾರೆ. ಆದರೆ ಇದುವರೆಗಿನ ಯಾವುದೇ ಅಧ್ಯಯನಗಳು ಕೋವಿಡ್ ಲಸಿಕೆಯಿಂದಾಗಿ ಹೃದಯಾಘಾತದ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಹೇಳಿಲ್ಲ, ಬದಲಿಗೆ ಕೋವಿಡ್ 19 ಬಾಧಿಸಿ ಶ್ವಾಸಕೋಶಕ್ಕೆ ತೊಂದರೆಯಾಗಿದ್ದವರಿಗೆ, ಗಂಭೀರ ಆರೋಗ್ಯ ಸಮಸ್ಯೆ ಎದುರಿಸಿದವರಿಗೆ ಈ ಹೃದಯಾಘಾತದ ಅಪಾಯ ಹೆಚ್ಚಿದೆ ಎಂದು ಹೇಳಿದೆ.
ಸೌತ್ ಕೊರಿಯಾದಲ್ಲಿ ನಡೆಸಿದ ಅಧ್ಯಯನವೂ ಕೊರೊನಾ ಲಸಿಕೆಗೂ ಹೃದಯಾಘಾತಕ್ಕೂ ಯಾವುದೇ ಸಂಬಂಧವಿಲ್ಲ ಎಂಬುವುದಾಗಿ ಹೇಳಿದೆ, ಭಾರತದಲ್ಲಿಯೂ ಈ ಬಗ್ಗೆ ಅಧ್ಯಯನಗಳು ನಡೆಯುತ್ತಿವೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications