Latest Updates
-
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು!
ಹಾಸನದಲ್ಲಿ ಮೂವರು ಸೇರಿ 6 ಮಂದಿ ಹೃದಯಾಘಾತಕ್ಕೆ ಬಲಿ: ತಜ್ಞರು ಹೇಳೋದೇನು?
ಯುವ ಜನತೆ ಹೃದಯಾಘಾತದಂತಹ ಸಮಸ್ಯೆಗೆ ತುತ್ತಾಗುತ್ತಿರುವ ನಡುವೆ ಈಗ ಹಾಸನದಲ್ಲಿ ಒಂದರ ಹಿಂದೆ ಒಂದರಂತೆ ಹೃದಯಾಘಾತ ಪ್ರಕರಣಗಳು ವರದಿಯಾಗುತ್ತಿರುವುದು ಆತಂಕ ಹೆಚ್ಚುವಂತೆ ಮಾಡಿದೆ. ರಾಜ್ಯದಲ್ಲಿ ವರದಿಯಾಗುತ್ತಿರುವ ಹೃದಯಾಘಾತ ಪ್ರಕರಣಗಳಲ್ಲಿ ಹಾಸನ ಜಿಲ್ಲೆಯಲ್ಲೇ ಅತ್ಯಧಿಕ ಪ್ರಕರಣ ವರದಿಯಾಗುತ್ತಿದೆ. ಇದು ಆತಂಕಕ್ಕೆ ಕಾರಣವಾಗಿದೆ.
ಇನ್ನು ಯುವ ಜನತೆಯಲ್ಲಿ ಏಕಾಏಕಿ ಈ ಸಮಸ್ಯೆ ಕಂಡುಬರುತ್ತಿದ್ದು, ಆರೋಗ್ಯವಾಗಿದ್ದವರು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಕಳೆದ 40 ದಿನಗಳಲ್ಲಿ 26 ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಈ ಅಂಕಿ ಅಂಶಗಳು ಈಗ ಆತಂಕ ಹುಟ್ಟಿಸಲು ಕಾರಣವಾಗಿದೆ. ಅದ್ರಲ್ಲೂ ಕಳೆದ ಸೋಮವಾರ ಒಂದೇ ದಿನ ನಾಲ್ವರು ಹೃದಯಾಘಾತಕ್ಕೆ ಬಲಿಯಾಗಿರುವುದು ಮತ್ತಷ್ಟು ಆತಂಕ ಹುಟ್ಟಿಸಿದೆ.

ಸೋಮವಾರ ಒಂದೇ ದಿನ ಹಾಸನದ ಬೇಲೂರಿನಲ್ಲಿ ಗೃಹಿಣಿ ಲೇಪಾಕ್ಷಿ (50), ಹೊಳೆನರಸೀಪುರದ ಪ್ರಾಧ್ಯಾಪಕ ಮುತ್ತಯ್ಯ (58), ಆಟೊರಿಕ್ಷಾ ಚಾಲಕ ಸೂರ್ಯನಾರಾಯಣರಾವ್ (63) ಹಾಗೂ ನುಗ್ಗೇಹಳ್ಳಿ ನಾಡ ಕಚೇರಿ ಸಿಬ್ಬಂದಿ ಕುಮಾರ್ (57) ಮೃತಪಟ್ಟಿದ್ದಾರೆ. ಈ ಘಟನೆಗಳು ಜಿಲ್ಲೆಯಾದ್ಯಂತ ಭಯಕ್ಕೆ ಕಾರಣವಾಗಿವೆ. ಇದರಲ್ಲಿ ಬೇರೆ ಜಿಲ್ಲೆಯಲ್ಲಿ ನೆಲೆಸಿದ್ದ ಹಾಸನದ ಐವರು ಹೃದಯಾಘಾತಕ್ಕೆ ಒಲಿಯಾಗಿದ್ದಾರೆ.
ಈ ಹೃದಯಾಘಾತಕ್ಕಿದ್ಯಾ ಕೋವಿಡ್ ನಂಟು?
ಕೋವಿಡ್ ಲಸಿಕೆಯ ಬಳಿಕ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿವೆ ಎಂಬ ಆರೋಪಗಳು ಕೂಡ ಇವೆ. ಈ ಕುರಿತಾಗಿ ಟ್ವೀಟ್ (ಎಕ್ಸ್) ಮಾಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಎಳೆಯ ವಯಸ್ಸಿನವರ ಯುವ ಜನರ ಹಠಾತ್ ನಿಧನಕ್ಕೆ ಕಾರಣಗಳೇನು? ಕೋವಿಡ್ ಲಸಿಕೆಯ ದುಷ್ಪರಿಣಾಮಗಳೇನಾದರೂ ಇರಬಹುದೇ? ಎಂದು ಕೂಲಂಕಷವಾಗಿ ಅಧ್ಯಯನ ನಡೆಸಲು ಇದೇ ಸಮಿತಿಗೆ ಕಳೆದ ಫೆಬ್ರವರಿ ತಿಂಗಳಲ್ಲೇ ಆದೇಶ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹೃದ್ರೋಗಿಗಳನ್ನು ಪರಿಶೀಲನೆಗೊಳಪಡಿಸಿ, ವಿಶ್ಲೇಷಣೆ ಮಾಡುವ ಕಾರ್ಯ ಕೂಡ ಪ್ರಗತಿಯಲ್ಲಿದೆ ಎಂದು ಸಿಎಂ ಹೇಳಿದ್ದಾರೆ.
ವೈದ್ಯರು, ತಜ್ಞರು ಹೇಳೋದೇನು?
ಹಾಸನ ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತಾಗಿ ಹಾಸನ ಜಿಲ್ಲಾ ಡಿಹೆಚ್ಒ ಡಾ. ಅನಿಲ್ ಹೆಚ್ ಮಾತಾಡಿದ್ದಾರೆ. ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಹೃದಯಾಘಾತ ಪ್ರಕರಣಗಳ ಬಗ್ಗೆ ಪರಿಶೀಲಿಸಿ ವರದಿ ನೀಡಲು ಡಾ.ಚೇತನ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಕೋವಿಡ್-19 ಲಸಿಕೆಯ ಅಡ್ಡಪರಿಣಾಮ ಎಂಬ ಆತಂಕ ಬೇಡ. ಅದಕ್ಕೂ ಇದಕ್ಕೂ ಸಂಬಂಧವಿಲ್ಲ. ಬದಲಾಗುತ್ತಿರುವ ಜೀವನಶೈಲಿ, ವ್ಯಾಯಾಮದ ಕೊರತೆ, ನಿಯಮಿತ ಆರೋಗ್ಯ ತಪಾಸಣೆ ಇಲ್ಲದಿರುವುದು ಹೃದಯಾಘಾತಕ್ಕೆ ಪ್ರಮುಖ ಕಾರಣ ಎಂದು ತಿಳಿಸಿದ್ದಾರೆ.
ಹೃದಯಾಘಾತಕ್ಕೆ ಕಾರಣ ತಿಳಿಯಲು ತಜ್ಞರ ಸಮಿತಿ
ಜಿಲ್ಲೆಯಲ್ಲಿ ಸರಣಿ ಹೃದಯಾಘಾತ ಪ್ರಕರಣಗಳು ವರದಿಯಾಗುತ್ತಿದ್ದಂತೆಯೇ ಸರ್ಕಾರ ಎಚ್ಚೆತ್ತುಕೊಂಡಿದೆ. ಹೀಗಾಗಿ ಈ ಹೃದಯಾಘಾತಗಳಿಗೆ ಕಾರಣ ಹುಡುಕಲು ತಜ್ಞರ ಸಮಿತಿ ರಚಿಸಿದೆ. ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಈಗಾಗಲೇ ಕೋವಿಡ್ ಅಡ್ಡ ಪರಿಣಾಮದಿಂದ ಆಗಿರುವ ಸಾವುಗಳು, ಹೃದಯಾಘಾತಗಳ ಕುರಿತಂತೆ ಸಂಶೋಧನೆ ನಡೆಸಿ ವರದಿ ನೀಡಲು ಸಮಿತಿ ರಚಿಸಲಾಗಿತ್ತು. ಇದೀಗ ಹಾಸನ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ಇದೇ ಸಮಿತಿಗೆ ಜವಾಬ್ದಾರಿ ವಹಿಸಲಾಗಿದೆ. ಈ ಸಮಿತಿ ಮುಂದಿನ 10 ದಿನಗಳಲ್ಲಿ ವರದಿ ಸಲ್ಲಿಸಲಿದೆ.
ಇನ್ನು ರಾಜ್ಯದಾದ್ಯಂತ ನಿನ್ನೆ ಒಂದೇ ದಿನದಲ್ಲಿ 6 ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಅದರಲ್ಲೂ ಹಾಸನದಲ್ಲಿ ಮೂವರು, ಶಿವಮೊಗ್ಗದಲ್ಲಿ ಓರ್ವ, ಚಿಕ್ಕಮಗಳೂರು ಹಾಗೂ ತುಮಕೂರಿನಲ್ಲಿ ಇಬ್ಬರು ಮೃತೊಟ್ಟಿದ್ದಾರೆ. ಈ ಸಂಖ್ಯೆ ಏರಿಕೆಯಾಗುತ್ತಿರುವುದು ಮತ್ತಷ್ಟು ಆತಂಕ ಹೆಚ್ಚಾಗಲು ಕಾರಣವಾಗುತ್ತಿದೆ. ಸದ್ಯ ಹೃದಯಾಘಾತಕ್ಕೆ ನಿಖರ ಕಾರಣ ಏನಿರಬಹುದು ಎಂಬುದನ್ನು ಪತ್ತೆ ಮಾಡಲು ನೇಮಿಸಿರುವ ಸಮಿತಿ 10 ದಿನದಲ್ಲಿ ವರದಿ ನೀಡಲಿದ್ದು, ಈ ಘಟನೆಗಳಿಗೆ ಕಾರಣ ತಿಳಿದುಬರಲಿದೆ.



Click it and Unblock the Notifications












