Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಬಿಸಿಲಿನಲ್ಲಿ ಚುನಾವಣೆ ಪ್ರಚಾರ ಮಾಡುವ ಪಕ್ಷದ ಕಾರ್ಯಕರ್ತರೇ ಆರೋಗ್ಯಕ್ಕಾಗಿ ಈ ಅಂಶಗಳನ್ನು ಗಮನಿಸಲೇಬೇಕು
ಈ ವರ್ಷ ಎಂಥ ಉರಿಬಿಸಿಲು, ಮಧ್ಯಾಹ್ನ ಹೊತ್ತು ಸ್ವಲ್ಪ ಹೊತ್ತು ಬಿಸಿಲಿನಲ್ಲಿ ನಿಂತರೆ ತಲೆಸುತ್ತಿ ಬಿದ್ದು ಬಿಡುತ್ತೇವೆ ಅಷ್ಟೊಂದು ಉರಿ ಬಿಸಿಲು. ಈ ವರ್ಷ ಬಿಸಿಲಿನ ತೀವ್ರತೆ ಫೆಬ್ರವರಿಯಿಂದಲೇ ಶುರುವಾಗಿದೆ, ಜೂನ್ವರೆಗೆ ಇರಲಿದೆ ಎಂದು ಹೇಳಲಾಗುತ್ತಿದೆ. ಭಾರತದ ಬಹುತೇಕ ಕಡೆ ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚಿರಲಿದೆ ಎಂದು IMD (India Meteorological Department)
ಹೇಳಿದೆ.

ಹೀಟ್ ವೇವ್ ಆತಂಕ
ಏಪ್ರಿಲ್-ಜೂನ್ ನಡುವೆ ಅನೇಕ ಹೀಟ್ ವೇಟ್ ವೇವ್ ಉಂಟಾಗಲಿದೆ. ಅಂದರೆ ಆ ದಿನಗಳಲ್ಲಿ ಉಷ್ಣಾಂಶ ತುಂಬಾನೇ ಹೆಚ್ಚಿರುತ್ತದೆ. ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಉತ್ತರ ಕರ್ನಾಟಕ, ರಾಜಾಸ್ಥಾನ, ಒಡಿಸ್ಸಾ, ಆಂಧ್ರಪ್ರದೇಶ ಹೀಗೆ ದೇಶದ ಬಹುತೇಕ ಕಡೆ ಬಿಸಿಲಿನ ತೀವ್ರತೆ ತುಂಬಾನೇ ಹೆಚ್ಚಿರಲಿದೆ.
ಇನ್ನು 20 ದಿನದೊಳಗೆ ಹೀಟ್ ವೇವ್ ಬರಲಿದೆ
ಹವಾಮಾನ ಇಲಾಖೆ ಇನ್ನು ಕೆಲವೇ ದಿನಗಳಲ್ಲಿಯೇ ಹೀಟ್ ವೇವ್ ಬರಲಿದೆ ಎಂದು ಎಚ್ಚರಿಸಿದೆ. ಈ ಹೀಟ್ ವೇವ್ 2-8 ದಿನಗಳವರೆಗೆ ಇರಲಿದೆ ಎಂದು ಹೇಳಲಾಗುತ್ತಿದೆ.
ಭಾರತದಲ್ಲಿ ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧವಾಗುತ್ತಿದೆ. ಚುನಾವಣೆ ಪ್ರಚಾರ, ರೋಡ್ ಕ್ಯಾಂಪೇನ್ ಅಂತೆಲ್ಲಾ ನಡೆಯುತ್ತಿದೆ, ಈ ಸಮಯದಲ್ಲಿ ರಾಜಕಾರಣಿಗಳ ಜೊತೆಗೆ ಪಕ್ಷಗಳನ್ನು ಬೆಂಬಲಿಸುತ್ತಾ ಸಾಮಾನ್ಯ ಜನರೂ ಈ ರೋಡ್ ಕ್ಯಾಂಪೇನ್, ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಾರೆ. ಆದರೆ ಈ ಬಾರಿ ನೀವು ಈ ರೀತಿ ಪ್ರಚಾರ ಕಾರ್ಯಕ್ಕೆ ಹೋಗುವಾಗ ನಿಮ್ಮ ಆರೋಗ್ಯದ ಕಡೆಗೆ ನೀವು ಗಮನಹರಿಸಬೇಕು.
ಚುನಾಚಣೆ ಪ್ರಚಾರಕ್ಕೆ ಹೋಗುವಾಗ ಈ ಬಗ್ಗೆ ಜಾಗ್ರತೆವಹಿಸಿ:
ಸಾಕಷ್ಟು ನೀರು ಕುಡಿಯಬೇಕು: ಚುನಾವಣೆ ಪ್ರಚಾರಕ್ಕೆ ಹೋಗುವಾಗ ತುಂಬಾ ನೀರು ಕುಡಿಯಬೇಕು, ನಿಂಬು ಪಾನೀಯ, ಪುರ್ನಪುಳಿ ಈ ಬಗೆಯ ಜ್ಯೂಸ್ ಕುಡಿಯಿರಿ.
ಕೊಡೆ ಹಿಡಿದುಕೊಂಡು ಹೋಗಿ: ಮನೆಯಿಂದ ಹೊರಗಡೆ ಹೋಗುವಾಗ ಕೊಡೆ ಕೈಯಲ್ಲಿ ಇರಲೇಬೇಕು. ಇಲ್ಲದಿದ್ದರೆ ತುಂಬಾನೇ ಕಷ್ಟವಾಗುವುದು. ತಲೆಸುತ್ತುವುದು, ನಿರ್ಜಲೀಕರಣ ಮತ್ತಿತರ ಸಮಸ್ಯೆ ಉಂಟಾಗುವುದು, ಆರೋಗ್ಯದ ಕಡೆಗೆ ತುಂಬಾನೇ ಗಮನ ಹರಿಸಬೇಕು.
ಮದ್ಯ ಸೇವಿಸಬಾರದು: ಈ ಬಿಸಿಲಿನಲ್ಲಿ ಮದ್ಯ ಸೇವಿಸಿದರೆ ಆರೋಗ್ಯದ ಮೇಲೆ ತುಂಬಾನೇ ಕೆಟ್ಟ ಪರಿಣಾಮ ಬೀರುವುದು, ಆದ್ದರಿಂದ ಈ ಬಗ್ಗೆ ಜಾಗ್ರತೆವಹಿಸಿ.
ಮಾಂಸಾಹಾರ ಸೇವನೆ ಒಳ್ಳೆಯದಲ್ಲ: ಪ್ರಚಾರಕ್ಕೆ ಹೋಗುವವರೆಗೆ ಆಹಾರ ನೀಡುತ್ತಾರೆ, ಆದರೆ ಹೊರಗಡೆ ಮಾಂಸಾಹಾರ ಸೇವನೆ ಮಾಡಬೇಡಿ. ಏಕೆಂದರೆ ಈ ಬಿಸಿಲಿನಲ್ಲಿ ಮಾಂಸಾಹಾರದಲ್ಲಿ ಬೇಗನೆ ಬ್ಯಾಕ್ಟಿರಿಯಾ ಉತ್ಪತ್ತಿಯಾಗುತ್ತೆ, ಇದರಿಂದ ಆರೋಗ್ಯ ಸಮಸ್ಯೆ ಉಂಟಾಗುವುದು, ಆದ್ದರಿಂದ ಬಿರಿಯಾನಿ,ಮಟನ್, ಚಿಕನ್ ಅಂತ ತಿನ್ನಲು ಹೋಗಬೇಡಿ.
ತುಂಬಾ ಬಿಸಿಲಿದ್ದಾಗ ಓಡಾಡಬೇಡಿ
ರಾಜಕಾರಣಿಗಳು ಕಾರಿನಲ್ಲಿ, ಜೀಪ್ನಲ್ಲಿ ಅಂತ ಬರುತ್ತಾರೆ, ಆದರೆ ಸಾಮಾನ್ಯ ಕಾರ್ಯಕರ್ತರು ಕಾಲ್ನಡಿಗೆಯಲ್ಲಿ Rallyಯಲ್ಲಿ ಭಾಗವಹಿಸುತ್ತಾರೆ, ಉರಿ ಬಿಸಿಲಿನಲ್ಲಿ ನಡೆದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಉಂಟಾಗುವುದು. ಹೀಟ್ ಸ್ಟ್ರೋಕ್ ಸಾಧ್ಯತೆ ಇದೆ. ಆದ್ದರಿಂದ ಎಚ್ಚರಿಕೆವಹಿಸಲೇಬೇಕು.
ಹೀಟ್ ಸ್ಟ್ರೋಕ್ ಎಂದರೇನು
ದೇಹದ ಉಷ್ಣಾಂಶ ಹೆಚ್ಚಾಗುವುದು, ವಿಪರೀತ ಬಾಯಾರಿಕೆ ಅನಿಸುವುದು, ತಲೆಸುತ್ತುವುದು, ಎದೆ ಬಡಿತ ತೀವ್ರವಾಗುವುದು, ಬಾಯಲ್ಲಿ ನೊರೆ ಬರುವುದು ಇವೆಲ್ಲಾ ಹೀಟ್ ಸ್ಟ್ರೋಕ್ ಉಂಟಾದಾಗ ಉಂಟಾಗುವುದು.
ಹೀಟ್ ಸ್ಟ್ರೋಕ್ ಉಂಟಾದಾಗ ಏನು ಮಾಡಬೇಕು?
ಹೀಟ್ ಸ್ಟ್ರೋಕ್ ಉಂಟಾದಾಗ ವ್ಯಕ್ತಿಯನ್ನು ನೆರಳಿನಲ್ಲಿ ಕೂರಿಸಬೇಕು, ನಂತರ ಅವರಿಗೆ ನೀರು ಕುಡಿಸಿ, ಅವರ ತಲೆಗೆ ನೀರು ತಟ್ಟಿ, ನಂತರ ಅವರ ಮೈಯನ್ನು ಬಟ್ಟೆ ಒದ್ದೆ ಮಾಡಿ ಒರೆಸಿ, ನಂತರ ಕೂಡಲೇ ಸಮೀಪದ ಆಸ್ಪತ್ರೆಗೆ ಕೊಂಡೊಯ್ಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications