Latest Updates
-
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ!
ಆಫೀಸ್ ಚೇರ್ನಲ್ಲಿ ಹೆಚ್ಚು ಸಮಯ ಕೂತಷ್ಟೂ ಸಾವು ಶೆ 16ರಷ್ಟು ಸಮೀಸುತ್ತದೆಯಂತೆ!
ಕೆಲಸ ಕೆಲಸ ಅಂತ ಓಡುತ್ತಲೇ ಇದ್ದೇವೆ, ಈ ಓಟದಲ್ಲಿ ನಮ್ಮಲ್ಲಿ ಎಷ್ಟೋ ಜನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡುತ್ತಿದ್ದೇವೆ. ಇನ್ನು 10-12 ಗಂಟೆ ಆಫೀಸ್ ಚೇರ್ನಲ್ಲಿ ಕಾಲ ಕಳೆಯುವವರು ತುಂಬಾನೇ ಇದ್ದಾರೆ, ಏನು ಮಾಡುವುದು ವರ್ಕ್ ಫ್ರೆಷರ್, ಟಾರ್ಗೆಟ್, ಇಷ್ಟು ದುಡಿದಿಲ್ಲ ಎಂದರೆ ಕೆಲಸ ಹೋಗುತ್ತೆ
ಹೀಗೆ ನಾನಾ ಉತ್ತರಗಳು ಸಿಗುತ್ತೆ, ಆದರೆ ಆಫೀಸ್ಗೆ ಚೇರ್ನಲ್ಲಿ ಹೆಚ್ಚು ಹೊತ್ತು ಕೂರುವುದರಿಂದ ನಮ್ಮ ಪ್ರಾಣವೇ ಬೇಗ ಹೋಗುತ್ತೆ ಎಂದು ಅಧ್ಯಯನಗಳು ಹೇಳುತ್ತಿವೆ.

ತುಂಬಾ ಹೊತ್ತು ಒಂದೇ ಕಡೆ ಕೂತು ಕೆಲಸ ಮಾಡುವುದರಿಂದ ಅತ್ಯಧಿಕ ರಕ್ತದೊತ್ತಡ, ಮೈ ತೂಕ ಹೆಚ್ಚಾಗುವುದು, ಅನಾರೋಗ್ಯಕರ ಕೊಲೆಸ್ಟ್ರಾಲ್ ಹೀಗೆ ಅನೇಕ ಕಾಯಿಲೆಗಳು ಬರುವುದು. ಚಯಪಚಯ ಕ್ರಿಯೆಗೂ ನಾವು ತುಂಬಾ ಹೊತ್ತು ಕೂರುವುದಕ್ಕೂ ಸಂಬಂಧವಿದೆ, ತುಂಬಾ ಹೊತ್ತು ಕೂರುವುದರಿಂದ ಚಯಪಚಯ ಕ್ರಿಯೆಯಲ್ಲಿ ವ್ಯತ್ಯಾಸ ಉಂಟಾಗಿ ಅನೇಕ ಆರೋಗ್ಯ ಸಮಸ್ಯೆ ಉಂಟಾಗುವುದು.
ತುಂಬಾ ಹೊತ್ತು ಒಂದೇ ಕಡೆ ಕೂರುವುದರ ಬಗ್ಗೆ ಆರೋಗ್ಯ ತಜ್ಞರು ಹೇಳುವುದೇನು?
* ಮೈ ತೂಕ ಹೆಚ್ಚಾಗಿ ಬೊಜ್ಜು ಬರುವುದು: ದೈಹಿಕ ಚಟುವಟಿಕೆ ಕಡಿಮೆಯಾಗಿ ಒಂದೇ ಕಡೆ ಕೂರುವುದರಿಂದ ಮೈ ಬೊಜ್ಜು ಬರುವುದು. ಮೈ ಬೊಜ್ಜು ಹೆಚ್ಚಾದರೆ ಮಧುಮೇಹ, ಹೃದಯಾಘಾತ ಹೀಗೆ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುವುದು.
ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವುದು:
ದೈಹಿಕ ಚಟುವಟಿಕೆ ಕಡಿಮೆಯಾದರೆ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವುದು, ಇದರಿಂದ ನರಗಳಿಗೆ ಸಂಬಂಧಿಸಿದ ತೊಂದರೆ ಉಂಟಾಗುವುದು, ರಕ್ತ ಸಂಚಾರಕ್ಕೆ ಅಡಚಣೆ ಉಂಟಾಗುವುದು, ಹೃದಯದ ಆರೋಗ್ಯಕ್ಕೂ ಒಳ್ಳೆಯದಲ್ಲ.
ಅತ್ಯಧಿಕ ರಕ್ತದೊತ್ತಡ ಸಮಸ್ಯೆ ಹೆಚ್ಚುವುದು: ರಕ್ತದೊತ್ತಡ ಸಮಸ್ಯೆ ಹೆಚ್ಚಾಗಲು ಪ್ರಮುಖ ಕಾರಣ ನಮ್ಮ ಜೀವನಶೈಲಿ, ಅತ್ಯಧಿಕ ರಕ್ತದೊತ್ತಡದಿಂದ ಹೃದಯಾಘಾತ, ಪಾರ್ಶ್ವವಾಯು ಈ ಬಗೆಯ ಸಮಸ್ಯೆ ಬರಬಹುದು.
ಮಧುಮೇಹ: ಭಾರತದಲ್ಲಿ ಮಧುಮೇಹಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅದಕ್ಕೆ ಪ್ರಮುಖ ಕಾರಣ ಜೀವನಶೈಲಿ, ನಮ್ಮ ಹಿರಿಯರಿಗೆ ಹೋಲಿಸಿದರೆ ಜೀವನಶೈಲಿ ಬದಲಾಗಿದೆ, ದೈಹಿಕ ಚಟುವಟಿಕೆ, ವ್ಯಾಯಾಮ ಕಡಿಮೆಯಾಗುವುದರಿಂದ ಈ ರೀತಿ ಮಧುಮೇಹ ಸಮಸ್ಯೆ ಹೆಚ್ಚಾಗುವುದು. ಅಲ್ಲದೆ ಮಧುಮೇಹ ಸಮಸ್ಯೆ ಹೆಚ್ಚಾಗಲು ಅತ್ಯಧಿಕ ಮಾನಸಿಕ ಒತ್ತಡ ಹೆಚ್ಚಾಗುವುದು, ಆಫೀಸ್ ಚೇರ್ನಲ್ಲಿ ಎಷ್ಟು ಹೊತ್ತು ಕೂರುತ್ತೇವೋ ಅಷ್ಟು ಹೊತ್ತು ಮಾನಸಿಕ ಒತ್ತಡ ಅಧಿಕವಿರುತ್ತದೆ.
ಪುರುಷ ಹಾಗೂ ಮಹಿಳೆಯರಲ್ಲಿ ಇದರ ಪ್ರಭಾವ
ತೂಕದಲ್ಲಿ ವ್ಯತ್ಯಾಸ: ಮಹಿಳೆಯರಲ್ಲಿ ಹಿಂಭಾಗ ಹಾಗೂ ತೊಡೆಯಲ್ಲಿ ಅಧಿಕ ಕೊಬ್ಬಿನಂಶ ಸೇರಿಕೊಂಡರೆ ಪುರುಷರಲ್ಲಿ ಹೊಟ್ಟೆ ಭಾಗದಲ್ಲಿ ಕೊಬ್ಬಿನಂಶ ಹೆಚ್ಚಾಗುವುದು.
ಹಾರ್ಮೋನ್ಗಳ ಬದಲಾವಣೆಯಾಗುವುದು: ಪುರುಷ ಹಾಗೂ ಮಹಿಳೆಯರಲ್ಲಿ ಹಾರ್ಮೋನ್ಗಳಲ್ಲಿ ವ್ಯತ್ಯಾಸ ಉಂಟಾಗುವುದು, ಮಹಿಳೆಯರಲ್ಲಿ ಪ್ರೀಮೆನೋಪಾಸ್ ಸಮಸ್ಯೆ ಕೂಡ ಕಂಡು ಬರುವುದು.
ಮಾನಸಿಕವಾಗಿಯೂ ಪರಿಣಾಮ ಬೀರುವುದು: ಅತಿಯಾದ ಕೆಲಸ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ.
ಸಲಹೆ: ಜೀವನ ಹಾಗೂ ಕೆಲಸವನ್ನು ಬ್ಯಾಲೆನ್ಸ್ ಮಾಡಬೇಕು, ನಾವು ದುಡಿಯುವುದು ನಮಗಾಗಿ ಆದ್ದರಿಂದ ದುಡಿದ ದುಡ್ಡು ಆಸ್ಪತ್ರೆಗೆ ಹಾಕದಂತೆ ಜಾಗ್ರತೆವಹಿಸಿ.
- ಜೀವನಶೈಲಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳಿ:
- ತುಂಬಾ ಹೊತ್ತು ಒಂದೇ ಕಡೆ ಕೂರಬೇಡಿ, ಆಗಾಗ ಎದ್ದು ಸ್ವಲ್ಪ ನಡೆಯಿರಿ
- ದಿನಾ ಅರ್ಧ ಗಂಟೆ ವ್ಯಾಯಾಮ ಮಾಡಿ, ಸಮೀಪದ ಸ್ಥಳಗಳಿಗೆ ಗಾಡಿ ಬಳಿಕೆ ಬದಲಿಗೆ ನಡೆದುಕೊಮಡು ಹೋಗಿ
- ಆಹಾರಕ್ರಮದ ಕಡೆಗೆ ಗಮನಹರಿಸಿ, ಆರೋಗ್ಯಕರ ಆಹಾರ ಸೇವಿಸಿ
- ಧ್ಯಾನ ಮಾಡಿ, ಧ್ಯಾನ ಮಾನಸಿಕ ಒತ್ತಡ ಕಡಿಮೆಮಾಡಿಕೊಳ್ಳಲು ಸಹಾಯ ಮಾಡುತ್ತದೆ
- ಎಲ್ಲಕ್ಕಿಂತ ಹೆಚ್ಚಾಗಿ ಅವಧಿಗಿಂತ ಹೆಚ್ಚು ಕೆಲಸ ಮಾಡುವ ಬದಲಿಗೆ ಕೆಲಸವನ್ನು ಅವಧಿಯೊಳಗೆ ಮುಗಿಸಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications