Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ಬಾದಾಮಿಯನ್ನು ನೆನೆ ಹಾಕಿ ಸಿಪ್ಪೆ ತೆಗೆದು ತಿನ್ನುವುದು ಒಳ್ಳೆಯದಾ ? ನ್ಯೂಟ್ರಿಷಿಯನಿಸ್ಟ್ ಏನು ಹೇಳಿದ್ದಾರೆ ಗೊತ್ತಾ?
ಬಾದಾಮಿ ಶರೀರಕ್ಕೆ ತುಂಬಾನೇ ಒಳ್ಳೆಯದು, ಆದರೆ ಈ ಬಾದಾಮಿಯನ್ನು ಶರೀರಕ್ಕೆ ತುಂಬಾ ಗುಣ ಸಿಗುವಂತೆ ತಿನ್ನುವುದು ಹೇಗೆ ಎಂಬ ಐಡಿಯಾ ಬಹುತೇಕರಿಗೆ ಇರಲ್ಲ, ಕೆಲವರು ಸಿಪ್ಪೆ ಸುಲಿದ ಬಾದಾಮಿ ಒಳ್ಳೆಯದು ಎಂದು ಹೇಳಿದರೆ ಇನ್ನು ಕೆಲವರು ಸಿಪ್ಪೆ ತೆಗೆಯದೆ ತಿನ್ನಬೇಕು ಎಂದು ಹೇಳುತ್ತಾರೆ. ಆದರೆ ಇದರ ಬಗ್ಗೆ ಪ್ರಸಿದ್ಧ ನ್ಯೂಟ್ರಿಷಿಯನಿಸ್ಟ್ ಲುಕೆ ಕೌಂಟಿನೋ ಇದರ ಬಗ್ಗೆ ಏನು ಹೇಳಿದ್ದಾರೆ ಎಂದು ನೋಡೋಣ ಬನ್ನಿ:

ತ್ವಚೆ ಸಹಿತ ತಿಂದರೆ
ಬಾದಾಮಿ ಸಿಪ್ಪೆ ತುಂಬಾ ಒಳ್ಳೆಯದು, ಇದರಲ್ಲಿ ನಾರಿನಂಶ ತುಂಬಾನೇ ಇದೆ, ಅಲ್ಲದೆ ಪೈಟೋ ಕೆಮಿಕಲ್ಸ್ ಹಾಗೂ ಆಂಟಿಆಕ್ಸಿಡೆಂಟ್ ತುಂಬಾನೇ ಇದೆ, ಹಾಗಾಗಿ ಬಾದಾಮಿ ಸಿಪ್ಪೆ ಹೃದಯದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಅಲ್ಲದೆ ಬಾದಾಮಿ ಸಿಪ್ಪೆ ಆಕ್ಸಿಟೇಟಿವ್ ಸ್ಟ್ರೆಸ್ (ಒತ್ತಡ) ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಬಾದಾಮಿ ಸಿಪ್ಪೆಯಲ್ಲಿ ಪೈಟಿಕ್ ಆಮ್ಮ (phytic acid) ಇದು ಖನಿಜಾಂಶ, ಸತು, ಕಬ್ಬಿಣದದಂಶ, ಕ್ಯಾಲ್ಸಿಯಂ ಇವುಗಳನ್ನು ಹೊಂದಿದೆ. ಈ ಎಲ್ಲಾ ಗುಣಗಳು ಬಾದಾಮಿ ಸಿಪ್ಪೆಯಲ್ಲಿ ಮಾತ್ರ ದೊರೆಯುತ್ತದೆ.
ಅದೇ ಸಿಪ್ಪೆ ತೆಗೆದರೆ
ಬಾದಾಮಿ ನೆನೆ ಹಾಕಿ ತಿನ್ನುವ ಅಭ್ಯಾಸ ಹಲವರಲ್ಲಿ ಇರುತ್ತದೆ. ಆದರೆ ಹಾಗೆ ತಿನ್ನುವಾಗ ಸಿಪ್ಪೆ ತೆಗೆದು ತಿನ್ನುತ್ತಾರೆ, ಅಲ್ಲದೆ ಎನೆ ಹಾಕಿದ ಬಾದಾಮಿ ಸಿಪ್ಪೆ ಸಹಿತ ತಿನ್ನಲು ಟೇಸ್ಟ್ ಅನಿಸುವುದಿಲ್ಲ ಹಾಗಾಗಿ ಕೂಡ ಕೆಲವರು ಸಿಪ್ಪೆ ತೆಗೆದು ತಿನ್ನುತ್ತಾರೆ.
ಸಿಪ್ಪೆ ತೆಗೆದ ಬಾದಾಮಿಯಲ್ಲಿ ನಾರಿನಂಶ ಕಡಿಮೆ ಇರುತ್ತದೆ. ಯಾರಿಗೆ ಕಡಿಮೆ ನಾರಿನಂಶ ಸಾಕೋ ಅವರಿಗೆ ಅನುಕೂಲಕರವಾಗಿದೆ. ಸಿಪ್ಪೆತೆಗೆಯುವುದರಿಂದ ಆಂಟಿಆಕ್ಸಿಡೆಂಟ್ ಕೂಡ ಕಡಿಮೆಯಾಗುವುದು, ಅಲ್ಲದ ಫ್ಲೇವೋನಾಯ್ಡ್, ಫೀನೋಲಿಕ್ ಈ ಬಗೆಯ ಅಂಶ ಕಡಿಮೆಯಾಗುವುದು. ಅಲ್ಲದೆ ಖನಿಜಾಂಶ ಕಡಿಮೆಯಾಗುವುದು
ಈ ಪಿಕ್ಟಿಕ್ ಆಮ್ಲ ಎಂದರೇನು?
ಈ ಪಿಕ್ಟಿಕ್ ಆಮ್ಲ ಪೋಷಕಾಂಶವಾಗಿದ್ದು ಇದು ಅನೇಕ ನಟ್ಸ್ಗಳಲ್ಲಿ ಕಂಡು ಬರುವುದು, ಇದು ಬಾದಾಮಿಯ ಸಿಪ್ಪೆಯಲ್ಲಿಯೂ ಇದೆ, ಇದನ್ನು ತಿನ್ನುವುದರಿಂದ ಕೆಲವೊಂದು ದೊಡ್ಡ ಕಾಯಿಲೆ ಕೂಡ ತಡೆಗಟ್ಟಬಹುದು, ಇದು ಇತರ ಖನಿಜಾಂಶಗಳು ದೇಹವನ್ನು ಹೀರಿಕೊಳ್ಳುವಂತೆ ಮಾಡುತ್ತದೆ, ಅದೇ ಬಾದಾಮಿಯನ್ನು ನೆನೆ ಹಾಕಿದರೆ ಅದರಲ್ಲಿರುವ ಪಿಕ್ಟಿಕ್ ಆಮ್ಲ ಕಡಿಮೆಯಾಗುವುದು. ಅಲ್ಲದೆ ದೇಹವು ಸಂಪೂರ್ಣ ಖನಿಜಾಂಶ ಹೀರಿಕೊಳ್ಳುವುದಿಲ್ಲ, ಆದರೆ ನೀವು ಸಿಪ್ಪೆ ಸಹಿತ ತಿಂದ್ರೆ ಖನಿಜಾಂಶ ಹೀರಿಕೊಳ್ಳಲು ಸಹಾಯ ಮಾಡುತ್ತದೆ.
ಬಾದಾಮಿಯನ್ನು ನೆನೆ ಹಾಕಿ ತಿಂದ್ರೆ ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು, ಇದು ಬೇಗನೆ ಜೀರ್ಣವಾಗುತ್ತದೆ, ಹಾಗಾಗಿ ಜೀರ್ಣಕ್ರಿಯೆ ಸಮಸ್ಯೆ ಇರುವವರು ಬಾದಾಮಿ ನೆನೆ ಹಾಕಿ ತಿನ್ನಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications