Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸಿಗರೇಟ್ನಂತೆ ಜಿಲೇಬಿ, ಸಮೋಸಾ ಕೂಡ ಡೇಂಜರ್..! ಎಣ್ಣೆ, ಸಕ್ಕರೆ ಬಿಟ್ಟು ಬಿಡಿ!
ನಮ್ಮ ಆರೋಗ್ಯದ ಮೇಲೆ ನಾವು ಸೇವಿಸುವ ಆಹಾರಗಳು ಎಷ್ಟು ಪರಿಣಾಮ ಉಂಟು ಮಾಡುತ್ತವೆ ಅನ್ನೋದನ್ನು ನೀವು ತಿಳಿದಿರಬಹುದು. ನಮ್ಮ ಬಹುತೇಕ ಅನಾರೋಗ್ಯ ಸಮಸ್ಯೆಗಳು ನಮ್ಮ ಜೀವನ ಶೈಲಿ ಹಾಗೂ ಆರೋಗ್ಯದ ಮೇಲೆ ನಿರ್ಧರಿತವಾಗುತ್ತಿವೆ. ಅದ್ರಲ್ಲೂ ಇತ್ತೀಚಿನ ದಿನಗಳಲ್ಲಿ ನಾವು ಯಾವುದೇ ಆಹಾರ ಸವಿದರು ಅದರಿಂದ ಒಂದಿಷ್ಟು ಸಮಸ್ಯೆ ಎದುರಿಸುವುದು ಸಾಮಾನ್ನು ಎನ್ನುವಂತಹ ಸ್ಥಿತಿಗೆ ತಲುಪಿದ್ದೇವೆ.
ನಾವು ಸವಿಯುತ್ತಿರುವ ಯಾವ ಆಹಾರ ಇಂದು ನಮಗೆ ಹಾನಿ ಮಾಡುತ್ತಿದೆ ಎಂಬುದನ್ನು ನಾವು ಕೂಡ ತಿಳಿದಿರಬೇಕಾಗುತ್ತದೆ. ಸದ್ಯ ಈಗ ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯವು ಕೇಂದ್ರ ಸಂಸ್ಥೆಗಳಲ್ಲಿ ಎಣ್ಣೆ ಮತ್ತು ಸಕ್ಕರೆ ಮಂಡಳಿಗಳನ್ನು ಸ್ಥಾಪಿಸಲು ಆದೇಶಿಸಿದೆ. ಇದು ಯಾವ ಆಹಾರ ಯಾಔ ರೀತಿ ಹಾನಿಗೆ ಕಾರಣವಾಗಲಿದೆ ಎಂಬ ಪರಿಷ್ಕರಣೆಯಲ್ಲಿ ತೊಡಗಲಿದೆ.

ಇದರ ಹೊಸ ಪಟ್ಟಿಯಲ್ಲೀಗ ಜೆಲೇಬಿ ಹಾಗೂ ಸಮೋಸಾದಂತಹ ಆಹಾರ ವ್ಯಕ್ತಿಯ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡುತ್ತಿವೆ ಎಂದಿದೆ. ಅದ್ರಲ್ಲೂ ಈ ಎರಡು ಆಹಾರವನ್ನು ಸಿಗರೇಟ್ ಸಾಲಿಗೆ ಸೇರಿಸಲಾಗಿದೆ. ಈ ಜಂಕ್ ಫುಡ್ಗಳು ಸಿಗರೇಟ್ನಷ್ಟೇ ಅಪಾಯಕಾರಿ ಎಂದು ವರ್ಗೀಕರಿಸಲಾಗಿದೆ.
ನಾಗ್ಪುರದ ಎಐಐಎಂಎಸ್ ಸೇರಿದಂತೆ ಎಲ್ಲ ಕೇಂದ್ರೀಯ ಸಂಸ್ಥೆಗಳು, ಜನಸಾಮಾನ್ಯರ ದೈನಂದಿನ ತಿಂಡಿ ತಿನಸುಗಳಲ್ಲಿ ಎಷ್ಟು ಸಕ್ಕರೆ ಪ್ರಮಾಣ, ಎಣ್ಣೆ, ಬಳಸಲಾಗುತ್ತದೆ ಎಂಬ ಮಾಹಿತಿ ಹೊಂದಿರುವ ಫಲಕಗಳನ್ನು ಅಳವಡಿಸುವಂತೆ ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಜಂಕ್ ಫುಡ್ಗಳನ್ನು ಸಿಗರೇಟ್ ಸಾಲಿಗೆ ಸೇರಿಸುವ ಮೊದಲ ಹೆಜ್ಜೆ ಇದಾಗಿದೆ.
ಜನರು ತಾವು ಏನನ್ನೂ ಸವಿಯುತ್ತಿದ್ದೇವೆ, ಯಾವ ಪ್ರಮಾಣದಲ್ಲಿ ಈ ಆಹಾರ ಹಾನಿ ಉಂಟು ಮಾಡಬಹುದು ಎಂಬ ಮಾಹಿತಿ ತಿಳಿದುಕೊಳ್ಳುವ ಸಂಪೂರ್ಣ ಹಕ್ಕು ಹೊಂದಿದ್ದಾರೆ. ಸಿಗರೇಟ್ ಎಚ್ಚರಿಕೆಯಂತೆ ಆಹಾರದ ಲೇಬಲಿಂಗ್ ನಲ್ಲಿ ಕೂಡಾ ಎಚ್ಚರಿಕೆ ಸಂದೇಶ ನೀಡುವ ನಿಟ್ಟಿನಲ್ಲಿ ಇದು ಮೊದಲ ಹೆಜ್ಜೆ ಎಂದು ಭಾರತೀಯ ಹೃದ್ರೋಗ ತಜ್ಞರ ಸಂಘದ ನಾಗ್ಪುರ ಶಾಖೆಯ ಅಧ್ಯಕ್ಷ ಅಮರ್ ಅಮಾಲ್ ಹೇಳಿದ್ದಾರೆ.
ಭಾರತದಲ್ಲಿ ಇತ್ತೀಚಿಗೆ ಬೊಜ್ಜು, ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಸಮಸ್ಯೆಗಳು ಸೇರಿ ಹಲವು ಅನಾರೋಗ್ಯಗಳು ಹೆಚ್ಚುತ್ತಿವೆ. ಸರ್ಕಾರ ಕೂಡ ಈ ಸಂಬಂಧವಾಗಿ ಆಹಾರ ಗುಣಮಟ್ಟ ಸುಧಾರಣೆಗೆ ಗಮನಹರಿಸಿದೆ. 2050ರ ವೇಳೆಗೆ ಭಾರತದಲ್ಲಿ ಸುಮಾರು 44 ಕೋಟಿಗೂ ಹೆಚ್ಚು ಮಂದಿ ಅಧಿಕ ತೂಕ ಅಥವಾ ಬೊಜ್ಜು ಹೊಂದಬಹುದು ಎಂದು ದಿ ಲ್ಯಾನ್ಸೆಟ್ ಜರ್ನಲ್ನಲ್ಲಿ ಪ್ರಕಟವಾದ ಜಾಗತಿಕ ವಿಶ್ಲೇಷಣೆ ಅಂದಾಜಿಸಿದೆ.
ಹೀಗಾಗಿ ಇನ್ಮುಂದೆ ನಾಗ್ಪುರದ ಹೆಸರಾಂತ ಆಹಾರ ಮಳಿಗೆಗಳ ಪಕ್ಕದಲ್ಲಿ ಯಾವ ಆಹಾರದಲ್ಲಿ ಎಷ್ಟು ಪ್ರಮಾಣದ ಕೊಬ್ಬು, ಸಕ್ಕರೆ ಅಂಶ, ಜಿಡ್ಡು, ಎಣ್ಣೆ, ಕೊಬ್ಬಿನ ಅಂಶ ಇರಲಿದೆ ಎಂಬ ಕುರಿತ ಮಾಹಿತಿ ಇರುವ ಫಲಗಳ ಹಾಕಲಾಗುತ್ತದೆ. ಜಂಕ್ ಫುಡ್ ಸೇವನೆಯಿಂದ ಯಾವೆಲ್ಲಾ ರೀತಿ ಅನಾರೋಗ್ಯಗಳು ಕಾಡಬಹುದು ಎಂಬ ಕುರಿತಾದ ಮಾಹಿತಿ, ಗ್ರಾಹಕರು ಏನನ್ನು ಸೇವಿಸುತ್ತಿದ್ದಾರೆ ಎಂಬುದನ್ನು ಅವರು ಸಹ ತಿಳಿದಿರಬೇಕು ಎಂಬ ಸೂಚನೆ. ಇದು ಆಹಾರ ಸೇವಿಸುವ ಪ್ರತಿಯೊಬ್ಬರು ಕೂಡ ಒಮ್ಮೆ ಗಮನಹರಿಸಿ ಸ್ಪಷ್ಟವಾಗಿ ಓದುವಂತಿರಬೇಕು. ಬಳಿಕ ಅವರೇ ಉತ್ತಮ ಸಮತೋಲನ ಭರಿತ ಆಹಾರ ಸೇವನೆಗೆ ಮುಂದಾಗಬೇಕು ಎಂಬ ಉದ್ದೇಶ ಹೊಂದಲಾಗಿದೆ.
ಸಿಗರೇಟ್ ಮೇಲೆಯೂ ಅದರ ಅಪಾಯಕಾರಿ ಅಂಶಗಳ ಮುದ್ರಿಸಲಾಗುತ್ತದೆ. ಅದರಿಂದ ಕ್ಯಾನ್ಸರ್ ಬರಲಿದೆ ಎಂದು ಹೇಳಲಾದರು ಅದನ್ನು ನಿಷೇಧ ಮಾಡಿಲ್ಲ. ಇಲ್ಲಿಗೂ ಕೂಡ ಈ ಆಹಾರಗಳಿಂದ ಆರೋಗ್ಯಕ್ಕೆ ಹಾನಿ ಎನ್ನಲಾದರೂ ಈ ಸಾಂಪ್ರದಾಯಿಕ ಆಹಾರವನ್ನು ನಿಷೇಧ ಮಾಡುವ ಯಾವುದೇ ನಿರ್ಧಾರಗಳಿಲ್ಲ ಎಂದು ತಿಳಿದುಬಂದಿದೆ.



Click it and Unblock the Notifications