Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕ್ಯಾನ್ಸರ್ಗೆ ಟಾಟಾ ಮೆಮೋರಿಯಲ್ನಿಂದ ಮಾತ್ರೆ ರೆಡಿ..! ಒಂದು ಮಾತ್ರೆ ಬೆಲೆ ಎಷ್ಟು ಗೊತ್ತಾ?
ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಎನಿಸಿಕೊಂಡಿದೆ. ಇತ್ತೀಚಿಗೆ ಆರೋಗ್ಯವಂತ ಯುವ ಸಮುದಾಯವೂ ಸಹ ಕ್ಯಾನ್ಸರ್ಗೆ ತುತ್ತಾಗುತ್ತಿರುವುದು ಅನೇಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕ್ಯಾನ್ಸರ್ ಆರಂಭದಲ್ಲಿ ಚಿಕಿತಸ್ಎ ಇದ್ದರೂ, ವಿವಿಧ ರೀತಿಯ ಕ್ಯಾನ್ಸರ್ಗಳಿಗೆ ಇಂದಿಗೂ ಚಿಕಿತ್ಸೆ ಇಲ್ಲದೆ ರೋಗಿಗಳು ಸಾವಿನ ಕದ ತಟ್ಟುತ್ತಾರೆ.
ಆದರೆ ಕ್ಯಾನ್ಸರ್ಗೆ ಔಷಧಿ ಕಂಡುಹಿಡಿಯುವ ಕಾರ್ಯ ದಶಕಗಳಿಂದಲೂ ನಡೆಯುತ್ತಿದೆ. ಈ ನಡುವೆ ರಷ್ಯಾ ಕ್ಯಾನ್ಸರ್ನ ಒಂದು ವಿಧಕ್ಕೆ ಚುಚ್ಚು ಮದ್ದು ಕಂಡುಹಿಡಿದಿರುವುದಾಗಿ ಹೇಳಿತ್ತು, ಆದರೆ ಆ ಬಗ್ಗೆ ಯಾವುದೇ ಅಧಿಕೃತ ಮಾಹಿತಿಗಳು ವರದಿಯಾಗಿಲ್ಲ. ಆದರೆ ಇದೀಗ ಭಾರತದಲ್ಲಿ ಕ್ಯಾನ್ಸರ್ಗೆ ಔಷಧಿ ಕಂಡು ಹಿಡಿದಿರುವ ಕುರಿತು ಸುದ್ದಿ ಹೊರಬಿದ್ದಿದೆ.

ಹೌದು ಟಾಟಾ ಮೆಮೋರಿಯಲ್ ಸೆಂಟರ್ನ ಸಂಶೋದಕರು ಕ್ಯಾನ್ಸರ್ ಮಾತ್ರೆ ಕಂಡುಕೊಂಡಿದ್ದಾರಂತೆ ಹೀಗಂತ ಟಾಟಾ ಮೆಮೋರಿಯಲ್ ಸೆಂಟರ್ನ ನಿರ್ದೇಶಕ ಡಾ. ರಾಜೇಂದ್ರ ಬಡ್ವೆ ಟಿವಿ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ. ಈ ಮಾತ್ರೆಯು ಸಂಭಾವ್ಯ ಕ್ಯಾನ್ಸರ್ ರೋಗಿಗಳಿಗೆ ಯಾವುದೇ ಅಡ್ಡಪರಿಣಾಮವಿಲ್ಲದೆ ಬಳಸಬಹುದು. ಹಾಗೂ ಕ್ಯಾನ್ಸರ್ ಪುನರುತ್ಥಾನ ಅಥವಾ ಮರುಕಳಿಸುವಿಕೆಯನ್ನು ತಡೆಯಲು ಅಭಿವೃದ್ಧಿ ಪಡಿಸಲಾಗಿದೆ ಎಂದಿದ್ದಾರೆ.
100 ರೂಪಾಯಿಗೆ ಒಂದು ಮಾತ್ರೆ
ಅಚ್ಚರಿಯ ವಿಚಾರವೆಂದರೆ ಈ ಮಾತ್ರೆ ಹೆಚ್ಚು ದುಬಾರಿಯಾಗಿಲ್ಲ. ಒಂದು ಮಾತ್ರೆಯ ಬೆಲೆ 100 ರೂಪಾಯಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ಟಾಟಾ ಮೆಮೋರಿಯಲ್ ಹಾಸ್ಪಿಟಲ್ (ಟಿಎಮ್ಹೆಚ್) ವೈದ್ಯರ ಒಂದು ದಶಕದ ಸುದೀರ್ಘ ಸಂಶೋಧನಾ ಅಧ್ಯಯನವು ಸಾಯುತ್ತಿರುವ ಕ್ಯಾನ್ಸರ್ ಕೋಶಗಳು ಕೀಮೋಥೆರಪಿ ಮತ್ತು ರೇಡಿಯೊಥೆರಪಿ ನಂತರ ಜೀವಕೋಶ-ಮುಕ್ತ ಕ್ರೊಮಾಟಿನ್ ಕಣಗಳನ್ನು ಬಿಡುಗಡೆ ಮಾಡುತ್ತವೆ ಎಂದು ಕಂಡುಹಿಡಿದಿದೆ, ಅದು ಆರೋಗ್ಯಕರ ಕೋಶಗಳನ್ನು ಕ್ಯಾನ್ಸರ್ ಆಗಿ ಪರಿವರ್ತಿಸುತ್ತದೆ.
ಈ ಮಾತ್ರೆಯು ಕ್ಯಾನ್ಸರ್ ಚಿಕಿತ್ಸೆಯ ಅಡ್ಡ ಪರಿಣಾಮಗಳನ್ನು ಕಡಿಮೆ ಮಾಡಲು ಜೂನ್-ಜುಲೈನಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ (FSSAI) ಅನುಮೋದನೆ ಪಡೆಯುವ ಸಾಧ್ಯತೆಯಿದೆ. ಒಮ್ಮೆ ಅನುಮೋದಿಸಿದ ಮಾತ್ರೆಯು ಕೀಮೋಥೆರಪಿಯಂತಹ ಚಿಕಿತ್ಸೆಗಳ ಅಡ್ಡಪರಿಣಾಮಗಳನ್ನು ಶೇಕಡಾ 50ರಷ್ಟು ಮತ್ತು ಕ್ಯಾನ್ಸರ್ ಮರುಕಳಿಸುವಿಕೆಯ ಸಾಧ್ಯತೆಯನ್ನು ಶೇ. 30ರಷ್ಟು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದಿದ್ದಾರೆ. ಸದ್ಯ ಬಳಕೆಯಲ್ಲಿ ಅತ್ಯಂತ ಕಡಿಮೆ ಬೆಲೆಯ ಔಷಧಿ ಇದಾಗಿದೆ.
ಟಾಟಾ ಮೆಮೋರಿಯಲ್ ಹಾಸ್ಪಿಟಲ್ ವೈದ್ಯರ ದಶಕದ ಸುದೀರ್ಘ ಸಂಶೋಧನಾ ಅಧ್ಯಯನವು ಸಾಯುತ್ತಿರುವ ಕ್ಯಾನ್ಸರ್ ಕೋಶಗಳು ಕೀಮೋಥೆರಪಿ ಮತ್ತು ರೇಡಿಯೊಥೆರಪಿಯ ನಂತರ ಜೀವಕೋಶಗಳಿಲ್ಲದ ಕ್ರೊಮಾಟಿನ್ ಕಣಗಳನ್ನು ಬಿಡುಗಡೆ ಮಾಡುತ್ತವೆ ಎಂದು ಕಂಡು ಹಿಡಿದಿದ್ದಾರೆ. ಇವು ಆರೋಗ್ಯಕರ ಕೋಶಗಳನ್ನೂ ಸಹ ಕ್ಯಾನ್ಸರ್ ಕೋಶಗಳಾಗಿ ಪರಿವರ್ತಿಸುವ ಕಾರ್ಯ ಮಾಡಲಿವೆ. ಆದರೆ ರೆಸ್ವೆರಾಟ್ರೊಲ್ ಮತ್ತು ತಾಮ್ರದ ಪ್ರೊ-ಆಕ್ಸಿಡೆಂಟ್ ಸಂಯೋಜನೆಯು ಕ್ರೊಮಾಟಿನ್ ಕಣವನ್ನು ನಾಶಮಾಡಲು ಮತ್ತು ಕೀಮೋಥೆರಪಿಗೆ ಒಳಗಾಗುವ ರೋಗಿಗಳಲ್ಲಿ ಅಡ್ಡ ಪರಿಣಾಮ ನಿಯಂತ್ರಿಸಲು ಸಹಾಯ ಮಾಡಿದೆ ಎಂದು ತಿಳಿದುಬಂದಿದೆ.
ಅಧ್ಯಯನಕ್ಕಾಗಿ ಇಲಿಗಳ ಬಳಕೆ
ಈ ಅಧ್ಯಯನಕ್ಕಾಗಿ ಮೂರು ಇಲಿಗಳ ಬಳಸಲಾಗಿದೆ. ಅಂದರೆ ಮಾನವ ಸ್ತನ ಕ್ಯಾನ್ಸರ್ನ ಕೋಶಗಳನ್ನು ಇಲಿಗಳಿಗೆ ಹಾಕಿ ಪ್ರಯೋಗ ಮಾಡಲಾಗಿದೆ. ಈ ಕ್ಯಾನ್ಸರ್ ಕೋಶಗಳನ್ನು ಒಂದೊಂದು ಇಲಿಯಲ್ಲಿ ಒಂದೊಂದು ರೀತಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಕೀಮೋಥೆರಪಿ, ರೇಡಿಯೊಥೆರಪಿ ಮತ್ತು ಶಸ್ತ್ರ ಚಿಕಿತ್ಸೆ ನೆರವೇರಿಸಿ ಅವುಗಳ ಗುಣಪಡಿಸಲಾಗಿದೆ. ಆದರೆ ಈ ಚಿಕಿತ್ಸೆಯ ಬಳಿಕ ಇಲಿಗಳ ಮೆದುಳಿನಲ್ಲಿ ಕ್ರೊಮಾಟಿನ್ ಕಣಗಳು ಹೆಚ್ಚಾಗುವುದನ್ನು ಅಧ್ಯಯನ ತಂಡ ಗುರುತಿಸಿದೆ.
ರೆಸ್ವೆರಾಟ್ರೊಲ್ ಮತ್ತು ತಾಮ್ರದ ಸಂಯೋಜನೆಯು ಕ್ರೊಮಾಟಿನ್ ಅನ್ನು ನಾಶಮಾಡಲು ಸಹಾಯ ಮಾಡುತ್ತದೆ ಎಂದು ನಾವು ಕಂಡುಕೊಂಡಿದ್ದೇವೆ. ಆದರೆ ಇದನ್ನು ಮಾನವರ ಮೇಲೆ ಪರೀಕ್ಷಿಸುವುದು ಇನ್ನೂ ಬಾಕಿ ಇದೆ ಎಂದು ವೈದ್ಯರೊಬ್ಬರು ತಿಳಿಸಿದ್ದಾರೆ. ಆಧರೆ ಈ ಔಷಧ ಬಳಕೆ ಯೋಗ್ಯವಾಗಬೇಕಾದರೆ ಇನ್ನೂ ಒಂದೆರಡು ವರ್ಷ ಕಾಯಬೇಕಾಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications