Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ರಾಜ್ಯದ ಹಲವು ಕಡೆ ಹೆಚ್ಚಾಗಿದೆ ಜ್ವರ, ಶೀತದ ಸಮಸ್ಯೆ: ಬೇಗನೆ ಚೇತರಿಸಿಕೊಳ್ಳಲು ಈ ಮನೆಮದ್ದು ಬೆಸ್ಟ್
ಈಗ ಕರ್ನಾಟಕದ ಹಲವು ಕಡೆ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ, ಕ್ಲಿನಿಕ್ಗಳು ರೋಗಿಗಳಿಂದ ತುಂಬಿದೆ, ಕೆಮ್ಮು, ಜ್ವರ, ಶೀತ ಅಂತ ಆಸ್ಪತ್ರೆಗೆ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸೊಂಕು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತಿದೆ.
ಮನೆಯಲ್ಲಿ ಒಬ್ಬರಿಗೆ ಬಂದರೆ ಸಾಕು ಎಲ್ಲರಿಗೂ ಜ್ವರ ಹರಡುತ್ತದೆ, ಹೀಗಾಗಿ ಜ್ವರ ಹರಡದಂತೆ ಮುನ್ನೆಚ್ಚರಿಕೆವಹಿಸಬೇಕು. ಹವಾಮಾನದಲ್ಲಿನ ವ್ಯತ್ಯಾಸದಿಂದಾಗಿ ವೈರಲ್ ಸೋಂಕು ಕಂಡು ಬಂದಿರುವುದಾಗಿ ವೈದ್ಯರು ಹೇಳುತ್ತಿದ್ದಾರೆ.
ಜ್ವರ ಬಂದರೆ ಬೇಗನೆ ಚೇತರಿಸಿಕೊಳ್ಳಲು ಔಷಧಿ ಜೊತೆಗೆ ಆರೈಕೆ ಕೂಡ ಮುಖ್ಯವಾಗಿರುತ್ತದೆ. ಈ ಮನೆಮದ್ದು ಜ್ವರದಿಂದ ಬೇಗನೆ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ:

ಶುಂಠಿ ಟೀ:
ಶುಂಠಿ ಟೀ ಅಥವಾ ಶುಂಠಿ ಕಷಾಯ ಮಾಡಿ ಕುಡಿದರೆ ಗಂಟಲು ಕೆರೆತ, ಶೀತ ಈ ಬಗೆಯ ಸಮಸ್ಯೆ ಕಡಿಮೆಯಾಗುವುದು, ಜ್ವರದಿಂದ ಬೇಗನೆ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ.
ತುಳಸಿ-ಶುಂಠಿ ಕಷಾಯ
ತುಳಸಿ, ಶುಂಠಿ, ಕರಿಮೆಣಸು, ಎರಡು ಎಸಳು ಬೆಳ್ಳುಳ್ಳಿ, ಒಂದು ಚಿಕ್ಕ ತುಂಡು ಅಮೃತಬಳ್ಳಿ , ಸ್ವಲ್ಪ ಕರಿಮೆಣಸು ಹಾಕಿ 2 ಲೋಟ ನೀರು ಅರ್ಧ ಲೋಟಕ್ಕೆ ಬರುವಷ್ಟು ಹೊತ್ತು ಕುದಿಸಿ, ಬಳಿಕ ಆ ನೀರನ್ನು ಒಂದು ಲೋಟಕ್ಕೆ ಸೋಸಿ, ಅದರಲ್ಲಿ ಸ್ವಲ್ಪ ಜೇನು ಹಾಕಿ ಕುಡಿದರೆ ಒಳ್ಳೆಯದು. ಈ ರೀತಿ ದಿನದಲ್ಲಿ ಎರಡು ಬಾರಿ ಕುಡಿಯಬಹುದು.
ಸೂಪು: ಜ್ವರದಿಂದ ಬೇಗನೆ ಚೇತರಿಸಿಕೊಳ್ಳಲು ಸೂಪು ಸಹಕಾರಿ. ನಾನ್ ವೆಜ್ ತಿನ್ನುವವರಾದರೆ ಚಿಕನ್ ಸೂಪ್ ಮಾಡಿ ತಿನ್ನಬಹುದು, ಅದೇ ನೀವು ಸಸ್ಯಾಹಾರಿಯಾದರೆ ತರಕಾರಿ ಸೂಪ್ ಮಾಡಿ ಸವಿಯಿರಿ. ಸೂಪ್ ಜ್ವರದಿಂದ ಬೇಗನೆ ಚೇತರಿಸಿಕೊಳ್ಳಲು ಸಹಕಾರಿ. ಸೂಪ್ ತಯಾರಿಸಿ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು.
ಸೂಪ್ ತಯಾರಿಸುವುದು ಹೇಗೆ?
ಚಿಕನ್: ಬ್ರೆಸ್ಟ್ ಪೀಸ್
ಸ್ವಲ್ಪ ಕಾಳು ಮೆಣಸು
2-3 ಎಸಳು ಬೆಳ್ಳುಳ್ಳು
ಕಲ್ಲುಪ್ಪು ಸ್ವಲ್ಪ
ಒಂದು ಇಂಚಿನಷ್ಟು ದೊಡ್ಡದಿರುವ ಶುಂಠಿ
ಬೀನ್ಸ್
ಕ್ಯಾರೆಟ್
(ಇತರ ತರಕಾರಿ ಬೇಕಿದ್ದರೆ ಸೇರಿಸಬಹುದು)
ಇವುಗಳನ್ನು ಹಾಕಿ ಬೇಯಿಸಿ, ನಂತರ 1 ಚಮಚ ಜೋಳದ ಹಿಟ್ಟು ಸೇರಿಸಿ ಮಿಕ್ಸ್ ಮಾಡಿ.
ನಂತರ ಕೊತ್ತಂಬರಿ ಸೊಪ್ಪು ಹಾಕಿ ಒಂದು ಚಮಚ ನಿಂಬೆರಸ ಹಾಕಿ ಸೂಪ್ ಕುಡಿಯಿರಿ.
ತರಕಾರಿ ಸೂಪ್
ಜೋಳ, ಬ್ರೊಕೋಲಿ, ಬೀನ್ಸ್, ಕ್ಯಾರೆಟ್, ಬೆಳ್ಳುಳ್ಳಿ , ಶುಂಠಿ, ಕಾಳು ಮೆಣಸು, ಟೊಮೆಟೊ ಹಾಕಿ 2 ಕಪ್ ನೀರು ಹಾಕಿ ರುಚಿಗೆ ತಕ್ಕ ಉಪ್ಪು ಹಾಕಿ ಬೇಯಿಸಿ.
ಬೇಯಿಸುವಾಗ ಜೋಳದ ಹಿಟ್ಟು ಸೇರಿಸಿ ಬೇಯಿಸಿ
ನಂತರ ಸ್ವಲ್ಪ ನಿಂಬೆರಸ ಸೇರಿಸಿ ಸವಿಯಿರಿ.
ಬ್ರೊಬಯೋಟಿಕ್ ಆಹಾರ ಸೇವಿಸಿ
ಬ್ರೊಬಯೋಟಿಕ್ ಆಹಾರ ಹೊಟ್ಟೆಯ ಆರೋಗ್ಯಕ್ಕೆ ಒಳ್ಳೆಯದು. ಇದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುವುದು. ಮೊಸರು, ಯೋಗರ್ಟ್ ಆಹಾರ ಸೇವಿಸಿ.
ಗಂಟಲು ನೋವಿದ್ದರೆ
ಗಂಟಲು ನೋವಿದ್ದರೆ ಬಿಸಿ ನೀರಿಗೆ ಸ್ವಲ್ಪ ಉಪ್ಪು ಹಾಕಿ ಬಾಯಿ ಮುಕ್ಕಳಿಸಿ, ಇದರಿಂದ ಗಂಟಲು ನೋವು ಕಡಿಮೆಯಾಗುವುದು.
ಸಾಕಷ್ಟು ವಿಶ್ರಾಂತಿ ತೆಗೆಯಿರಿ
ಜ್ವರದಿಂದ ಚೇತರಿಸಿಕೊಳ್ಳಲು ಸಾಕಷ್ಟು ವಿಶ್ರಾಂತಿ ಪಡೆಯಿರಿ. ಸಾಕಷ್ಟು ನೀರು ಕುಡಿಯಬೇಕು, ಮಲಗಿ ನಿದ್ರಿಸಿ. ವಿಶ್ರಾಂತಿ ತೆಗೆದುಕೊಳ್ಳುವುದರಿಂದ ಬೇಗನೆ
ಚೇತರಿಸಿಕೊಳ್ಳಲು ಸಾಧ್ಯವಾಗುವುದು.
ಜ್ವರ ಬಂದಾಗ ಮನೆಯಲ್ಲಿ ಹಾಗೂ ಹೊರಗಡೆ ತಿರುಗಾಡುವಾಗ ಮಾಸ್ಕ್ ಧರಿಸಿ. ಇದರಿಂದ ಮತ್ತೊಬ್ಬರಿಗೆ ರೋಗ ಹರಡುವುದನ್ನು ತಡೆಗಟ್ಟಬಹುದು. ಅಲ್ಲದೆ ಈ ಮನೆಮದ್ದು ಮಾಡಿ ಆಸ್ಪತ್ರೆಗೆ ಹೋಗದೇ ಇರಬೇಡಿ, ಹಲವು ಕಡೆ ಡೆಂಗ್ಯೂ ಕೂಡ ಇದೆ ಹಾಗಾಗಿ ಜ್ವರವನ್ನು ನಿರ್ಲಕ್ಷ್ಯ ಮಾಡಬೇಡಿ. ವೈದ್ಯರು ಸೂಚಿಸಿದ ಔಷಧ ತೆಗೆದುಕೊಳ್ಳಿ, ನಂತರ ಈ ಮನೆಮದ್ದು ಮಾಡಿ, ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು, ಬೇಗನೆ ಚೇತರಿಸಿಕೊಳ್ಳಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications