Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಕೆಮ್ಮು ನಿವಾರಣೆಗೆ ಜೇನುತುಪ್ಪ ಮದ್ದು

ಮಾನವ ದೇಹವನ್ನೇ ಅವರು ತಮ್ಮ ಔಷಧಿಗಳಿಗೆ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿರುವ ವೈದ್ಯರು ಹೇಳುವುದು ತಪ್ಪೆಂದು ಹೇಳುತ್ತಿಲ್ಲ. ಅನೇಕ ಬಾರಿ ಕಮ್ಮಿನ ಅಗಾಧತೆ, ಕೆಮ್ಮುತ್ತಿರುವ ರೀತಿ, ಬಂದಿರುವ ಕಾರಣಗಳನ್ನು ನೋಡಿ ಲೆಕ್ಕಹಾಕಿ ಕೊಡುವ ಔಷಧಿಯಿಂದ ಕಡಿಮೆಯಾಗಲೂಬಹುದು. ಎಲ್ಲಕ್ಕಿಂತ ಹೆಚ್ಚಾಗಿ ವೈದ್ಯರ ಮೇಲೆ ನಂಬಿಕೆಯಿಟ್ಟೇ ಅವರಲ್ಲಿಗೆ ಹೋಗಬೇಕು.
ಇಲ್ಲಿ ವಿಷಯವೇನೆಂದರೆ, ಆಯಾ ಖಾಯಿಲೆಗಳಿಗೆ ಬೇಕಾಗಿರುವ ಔಷಧಿಗಳು ನಮ್ಮ ಬಳಿಯೇ ಇರುವಾಗ, ಅಂದರೆ ಮನೆಯಲ್ಲಿಯೇ ದೊರೆಯುತ್ತಿರುವಾಗ ತಕ್ಕ ರೀತಿಯಲ್ಲಿ ಬಳಸಿಕೊಳ್ಳುವುದು ಜಾಣತನ. ಔಷಧಿಯಿಲ್ಲದೆ ಬದುಕುವುದನ್ನು ಕಲಿಯುವುದನ್ನು ನಾವು ರೂಢಿಸಿಕೊಳ್ಳಬೇಕು. ನಾವು ರೂಢಿಸಿಕೊಂಡ ಹಾಗೆ ನಮ್ಮ ದೇಹವೂ ಪ್ರತಿಸ್ಪಂದಿಸುತ್ತದೆ.
ಪುಟ್ಟ ಮಕ್ಕಳಿಗೆ ಔಷಧಿ ಕುಡಿಸುವಾಗ ಕೈಕಾಲು ಮೂಗು ಗಟ್ಟಿಯಾಗಿ ಹಿಡಿದು ಹಿಂಸಿಸುವ ಬದಲು, ಕೆಮ್ಮು ಬಂದಾಗ ಬೆಚ್ಚಗಿನ ನೀರಲ್ಲಿ ಜೇನುತುಪ್ಪವನ್ನು ಬೆರೆಸಿ ಪ್ರತಿದಿನ ಬೆಳಿಗ್ಗೆ ಕೆಲಕಾಲ ನಿರಂತರವಾಗಿ ನೀಡಿದರೆ ಮಗುವೂ ಖುಷಿಯಿಂದ ತೆಗೆದುಕೊಳ್ಳುತ್ತದೆ, ಕೆಮ್ಮು ಕೂಡ ಮಂಗಮಾಯವಾಗಿರುತ್ತದೆ. ಮಕ್ಕಳು ಮಾತ್ರವಲ್ಲ ಯಾವುದೇ ವಯಸ್ಸಿನವರು ಕೆಮ್ಮಿಗೆ ಜೇನುತುಪ್ಪವನ್ನು ಬಳಸಬಹುದು. ನೈಸರ್ಗಿಕವಾಗಿ ದೊರೆಯುವ ಜೇನುತುಪ್ಪಕ್ಕೆ ಆಬಗೆಯ ತಾಕತ್ತಿದೆ. ಕೆಮ್ಮು ನಮ್ಮನ್ನು ಜಬಡಿ ಹಾಕುವ ಮೊದಲೇ, ಪ್ರಾರಂಭಿಕ ಹಂತದಲ್ಲಿರುವಾಗ ಜೇನುತುಪ್ಪ ಸೇವಿಸಿದರೆ ಕೆಮ್ಮು ಬೇಗನೆ ಕಡಿಮೆಯಾಗುತ್ತದೆ.
ಜೇನುತುಪ್ಪ ವಿಪರೀತ ಹೀಟು, ಜಾಸ್ತಿ ತೆಗೆದುಕೊಂಡರೆ ದೇಹದ ಕಾವು ಏರುತ್ತದೆ ಎಂದು ಕೆಲವರು ಜೇನುತುಪ್ಪವನ್ನು ದೂರವೇ ಇಟ್ಟಿರುತ್ತಾರೆ. ಒಂದು ಮಿತವಾದ ಅಳತೆಯಲ್ಲಿ ಬೆಚ್ಚಗಿನ ನೀರಿನೊಂದಿಗೆ ಬೆರೆಸಿ ಸೇವಿಸುವುದರಿಂದ ದೇಹಕ್ಕೆ ಉಷ್ಣವಾಗುವುದಿಲ್ಲ. ಬದಲಿಗೆ ಆರೋಗ್ಯ ಸುಧಾರಿಸುತ್ತಾ ಸಾಗುತ್ತದೆ. ಜೇನುತುಪ್ಪದಲ್ಲಿ ರಕ್ತಶುದ್ಧಿ ಮಾಡುವ ಗುಣವೂ ಇದೆ. ನಿಯಮಿತವಾಗಿ ಜೇನುತುಪ್ಪುನ್ನು ಸೇವಿಸಿದರೆ ರೋಗನಿರೋಧಕ ಶಕ್ತಿ ವೃದ್ಧಿಸುತ್ತದೆ.
ಮನೆಹಿತ್ತಲಲ್ಲಿ ಬಿಟ್ಟ ಕೃಷ್ಣತುಳಸಿ ಎಲೆಗಳನ್ನು ಜಜ್ಜಿ ರಸಹಿಂಡಿ ಅದಕ್ಕೆ ತೊಟ್ಟು ಜೇನುತುಪ್ಪು ಬೆರೆಸಿ ಸೇವಿಸಿದರೂ ಕೆಮ್ಮು ದೂರವಾಗುತ್ತದೆ. ಈ ಕಾಫ್ ಸಿರಪ್ಪಿನಿಂದ ಕಡಿಮೆಯಾಗುತ್ತಿಲ್ಲ ಎಂದು ಅದು, ಅದರಿಂದ ಕಡಿಮೆಯಾಗುತ್ತಿಲ್ಲ ಎಂದು ಮತ್ತೊಂದು ಕಾಫ್ ಸಿರಪ್ ಸೇವಿಸುವ ಬದಲು ಮನೆಯೌಷಧಿಗೆ ಮೊರೆ ಹೋದರೆ ಹಣವೂ ಉಳಿತಾಯವಾಗುತ್ತದೆ ಮತ್ತು ಮನಸಿಗೂ ನೆಮ್ಮದಿ ಇರುತ್ತದೆ. ಪ್ರಯತ್ನಿಸಿ ನೋಡಿ. ಆದರೆ, ಈ ವಿಧದಲ್ಲಿಯೂ ನಂಬಿಕೆಯಿರಲಿ.
ಎಲ್ಲಕ್ಕಿಂತ ಹೆಚ್ಚಾಗಿ ಕೆಮ್ಮು ಬಂದಾಗ, ತಣ್ಣೀರು ಸೇವಿಸುವುದು, ತಂಪು ಪಾನೀಯ ಸೇವಿಸುವುದು, ಕರಿದ ಪದಾರ್ಥಗಳನ್ನು ಎಗ್ಗಿಲ್ಲದೆ ತಿನ್ನುವುದು, ದೂಳಿಗೆ ಒಡ್ಡಿಕೊಳ್ಳುವುದು, ತಿಳಿವಳಿಕೆ ಬಂದವರಾಗಿದ್ದರೆ ಧೂಮಪಾನ ಮಾಡುವುದು ಕಡಿಮೆ ಮಾಡಬೇಕು ಮತ್ತು ಪ್ರತಿನಿತ್ಯ ವ್ಯಾಯಾಮ ಮಾಡುವುದನ್ನು ಮರೆಯಬಾರದು.
ಸುಮ್ಕೆ ತಮಾಷಿಗೆ
ಒಬ್ಬ ಸಿಕ್ಕಾಪಟ್ಟೆ ಕೆಮ್ಮುವ ರೋಗಿ ಡಾಕ್ಟರ್ ಬಳಿ ಬರುತ್ತಾನೆ. ಡಾಕ್ಟರು ನೀಡಿದ ನಾನಾ ಬಗೆಯ ಕೆಮ್ಮಿನ ಔಷಧಿ ಸೇವಿಸಿದರೂ ಕಡಿಮೆಯಾಗುವುದಿಲ್ಲ. ಕೆಲ ತಿಂಗಳ ನಂತರ ಮತ್ತೆ ವೈದ್ಯರ ಬಳಿ ಬರುತ್ತಾನೆ. ವೈದ್ಯರಿಗೆ ಆಶ್ಚರ್ಯವೆಂಬಂತೆ ಕೆಮ್ಮು ಕಡಿಮೆಯಾಗಿರುತ್ತದೆ.
ವೈದ್ಯ : ಏನಯ್ಯಾ, ನೋಡು ನಾನು ಕೊಟ್ಟ ಔಷಧಿಯ ಕಮಾಲ್. ಕಡಿಮೆಯಾಯ್ತಲ್ಲ ಕೆಮ್ಮು.
ರೋಗಿ : ಕೆಮ್ಮು ಕಡಿಮೆಯಾಗಿದ್ದು ನಿಮ್ಮ ಔಷಧಿಯಿಂದಲ್ಲ ವೈದ್ಯರೆ, ಕೆಮ್ಮಿ ಕೆಮ್ಮಿ ವಿಪರೀತ ಸುಸ್ತಾಗಿ ಕೆಮ್ಮಲು ಸಾಧ್ಯವೇ ಆಗಲಿಲ್ಲ. ಹಾಗಾಗಿ ಕೆಮ್ಮು ಕಡಿಮೆಯಾಯಿತು!
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications