Latest Updates
-
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ
ಕೆಮ್ಮು ನಿವಾರಣೆಗೆ ಜೇನುತುಪ್ಪ ಮದ್ದು

ಮಾನವ ದೇಹವನ್ನೇ ಅವರು ತಮ್ಮ ಔಷಧಿಗಳಿಗೆ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿರುವ ವೈದ್ಯರು ಹೇಳುವುದು ತಪ್ಪೆಂದು ಹೇಳುತ್ತಿಲ್ಲ. ಅನೇಕ ಬಾರಿ ಕಮ್ಮಿನ ಅಗಾಧತೆ, ಕೆಮ್ಮುತ್ತಿರುವ ರೀತಿ, ಬಂದಿರುವ ಕಾರಣಗಳನ್ನು ನೋಡಿ ಲೆಕ್ಕಹಾಕಿ ಕೊಡುವ ಔಷಧಿಯಿಂದ ಕಡಿಮೆಯಾಗಲೂಬಹುದು. ಎಲ್ಲಕ್ಕಿಂತ ಹೆಚ್ಚಾಗಿ ವೈದ್ಯರ ಮೇಲೆ ನಂಬಿಕೆಯಿಟ್ಟೇ ಅವರಲ್ಲಿಗೆ ಹೋಗಬೇಕು.
ಇಲ್ಲಿ ವಿಷಯವೇನೆಂದರೆ, ಆಯಾ ಖಾಯಿಲೆಗಳಿಗೆ ಬೇಕಾಗಿರುವ ಔಷಧಿಗಳು ನಮ್ಮ ಬಳಿಯೇ ಇರುವಾಗ, ಅಂದರೆ ಮನೆಯಲ್ಲಿಯೇ ದೊರೆಯುತ್ತಿರುವಾಗ ತಕ್ಕ ರೀತಿಯಲ್ಲಿ ಬಳಸಿಕೊಳ್ಳುವುದು ಜಾಣತನ. ಔಷಧಿಯಿಲ್ಲದೆ ಬದುಕುವುದನ್ನು ಕಲಿಯುವುದನ್ನು ನಾವು ರೂಢಿಸಿಕೊಳ್ಳಬೇಕು. ನಾವು ರೂಢಿಸಿಕೊಂಡ ಹಾಗೆ ನಮ್ಮ ದೇಹವೂ ಪ್ರತಿಸ್ಪಂದಿಸುತ್ತದೆ.
ಪುಟ್ಟ ಮಕ್ಕಳಿಗೆ ಔಷಧಿ ಕುಡಿಸುವಾಗ ಕೈಕಾಲು ಮೂಗು ಗಟ್ಟಿಯಾಗಿ ಹಿಡಿದು ಹಿಂಸಿಸುವ ಬದಲು, ಕೆಮ್ಮು ಬಂದಾಗ ಬೆಚ್ಚಗಿನ ನೀರಲ್ಲಿ ಜೇನುತುಪ್ಪವನ್ನು ಬೆರೆಸಿ ಪ್ರತಿದಿನ ಬೆಳಿಗ್ಗೆ ಕೆಲಕಾಲ ನಿರಂತರವಾಗಿ ನೀಡಿದರೆ ಮಗುವೂ ಖುಷಿಯಿಂದ ತೆಗೆದುಕೊಳ್ಳುತ್ತದೆ, ಕೆಮ್ಮು ಕೂಡ ಮಂಗಮಾಯವಾಗಿರುತ್ತದೆ. ಮಕ್ಕಳು ಮಾತ್ರವಲ್ಲ ಯಾವುದೇ ವಯಸ್ಸಿನವರು ಕೆಮ್ಮಿಗೆ ಜೇನುತುಪ್ಪವನ್ನು ಬಳಸಬಹುದು. ನೈಸರ್ಗಿಕವಾಗಿ ದೊರೆಯುವ ಜೇನುತುಪ್ಪಕ್ಕೆ ಆಬಗೆಯ ತಾಕತ್ತಿದೆ. ಕೆಮ್ಮು ನಮ್ಮನ್ನು ಜಬಡಿ ಹಾಕುವ ಮೊದಲೇ, ಪ್ರಾರಂಭಿಕ ಹಂತದಲ್ಲಿರುವಾಗ ಜೇನುತುಪ್ಪ ಸೇವಿಸಿದರೆ ಕೆಮ್ಮು ಬೇಗನೆ ಕಡಿಮೆಯಾಗುತ್ತದೆ.
ಜೇನುತುಪ್ಪ ವಿಪರೀತ ಹೀಟು, ಜಾಸ್ತಿ ತೆಗೆದುಕೊಂಡರೆ ದೇಹದ ಕಾವು ಏರುತ್ತದೆ ಎಂದು ಕೆಲವರು ಜೇನುತುಪ್ಪವನ್ನು ದೂರವೇ ಇಟ್ಟಿರುತ್ತಾರೆ. ಒಂದು ಮಿತವಾದ ಅಳತೆಯಲ್ಲಿ ಬೆಚ್ಚಗಿನ ನೀರಿನೊಂದಿಗೆ ಬೆರೆಸಿ ಸೇವಿಸುವುದರಿಂದ ದೇಹಕ್ಕೆ ಉಷ್ಣವಾಗುವುದಿಲ್ಲ. ಬದಲಿಗೆ ಆರೋಗ್ಯ ಸುಧಾರಿಸುತ್ತಾ ಸಾಗುತ್ತದೆ. ಜೇನುತುಪ್ಪದಲ್ಲಿ ರಕ್ತಶುದ್ಧಿ ಮಾಡುವ ಗುಣವೂ ಇದೆ. ನಿಯಮಿತವಾಗಿ ಜೇನುತುಪ್ಪುನ್ನು ಸೇವಿಸಿದರೆ ರೋಗನಿರೋಧಕ ಶಕ್ತಿ ವೃದ್ಧಿಸುತ್ತದೆ.
ಮನೆಹಿತ್ತಲಲ್ಲಿ ಬಿಟ್ಟ ಕೃಷ್ಣತುಳಸಿ ಎಲೆಗಳನ್ನು ಜಜ್ಜಿ ರಸಹಿಂಡಿ ಅದಕ್ಕೆ ತೊಟ್ಟು ಜೇನುತುಪ್ಪು ಬೆರೆಸಿ ಸೇವಿಸಿದರೂ ಕೆಮ್ಮು ದೂರವಾಗುತ್ತದೆ. ಈ ಕಾಫ್ ಸಿರಪ್ಪಿನಿಂದ ಕಡಿಮೆಯಾಗುತ್ತಿಲ್ಲ ಎಂದು ಅದು, ಅದರಿಂದ ಕಡಿಮೆಯಾಗುತ್ತಿಲ್ಲ ಎಂದು ಮತ್ತೊಂದು ಕಾಫ್ ಸಿರಪ್ ಸೇವಿಸುವ ಬದಲು ಮನೆಯೌಷಧಿಗೆ ಮೊರೆ ಹೋದರೆ ಹಣವೂ ಉಳಿತಾಯವಾಗುತ್ತದೆ ಮತ್ತು ಮನಸಿಗೂ ನೆಮ್ಮದಿ ಇರುತ್ತದೆ. ಪ್ರಯತ್ನಿಸಿ ನೋಡಿ. ಆದರೆ, ಈ ವಿಧದಲ್ಲಿಯೂ ನಂಬಿಕೆಯಿರಲಿ.
ಎಲ್ಲಕ್ಕಿಂತ ಹೆಚ್ಚಾಗಿ ಕೆಮ್ಮು ಬಂದಾಗ, ತಣ್ಣೀರು ಸೇವಿಸುವುದು, ತಂಪು ಪಾನೀಯ ಸೇವಿಸುವುದು, ಕರಿದ ಪದಾರ್ಥಗಳನ್ನು ಎಗ್ಗಿಲ್ಲದೆ ತಿನ್ನುವುದು, ದೂಳಿಗೆ ಒಡ್ಡಿಕೊಳ್ಳುವುದು, ತಿಳಿವಳಿಕೆ ಬಂದವರಾಗಿದ್ದರೆ ಧೂಮಪಾನ ಮಾಡುವುದು ಕಡಿಮೆ ಮಾಡಬೇಕು ಮತ್ತು ಪ್ರತಿನಿತ್ಯ ವ್ಯಾಯಾಮ ಮಾಡುವುದನ್ನು ಮರೆಯಬಾರದು.
ಸುಮ್ಕೆ ತಮಾಷಿಗೆ
ಒಬ್ಬ ಸಿಕ್ಕಾಪಟ್ಟೆ ಕೆಮ್ಮುವ ರೋಗಿ ಡಾಕ್ಟರ್ ಬಳಿ ಬರುತ್ತಾನೆ. ಡಾಕ್ಟರು ನೀಡಿದ ನಾನಾ ಬಗೆಯ ಕೆಮ್ಮಿನ ಔಷಧಿ ಸೇವಿಸಿದರೂ ಕಡಿಮೆಯಾಗುವುದಿಲ್ಲ. ಕೆಲ ತಿಂಗಳ ನಂತರ ಮತ್ತೆ ವೈದ್ಯರ ಬಳಿ ಬರುತ್ತಾನೆ. ವೈದ್ಯರಿಗೆ ಆಶ್ಚರ್ಯವೆಂಬಂತೆ ಕೆಮ್ಮು ಕಡಿಮೆಯಾಗಿರುತ್ತದೆ.
ವೈದ್ಯ : ಏನಯ್ಯಾ, ನೋಡು ನಾನು ಕೊಟ್ಟ ಔಷಧಿಯ ಕಮಾಲ್. ಕಡಿಮೆಯಾಯ್ತಲ್ಲ ಕೆಮ್ಮು.
ರೋಗಿ : ಕೆಮ್ಮು ಕಡಿಮೆಯಾಗಿದ್ದು ನಿಮ್ಮ ಔಷಧಿಯಿಂದಲ್ಲ ವೈದ್ಯರೆ, ಕೆಮ್ಮಿ ಕೆಮ್ಮಿ ವಿಪರೀತ ಸುಸ್ತಾಗಿ ಕೆಮ್ಮಲು ಸಾಧ್ಯವೇ ಆಗಲಿಲ್ಲ. ಹಾಗಾಗಿ ಕೆಮ್ಮು ಕಡಿಮೆಯಾಯಿತು!
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











