Just In
- 5 min ago ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- 5 hrs ago ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- 13 hrs ago ಮೀನ ರಾಶಿಯಲ್ಲಿ ರಾಹು-ಮಂಗಳ ಯುತಿಯಿಂದ ಅಂಗಾರಕ ಯೋಗ: 12 ರಾಶಿಗಳ ಮೇಲಿರಲಿದೆ ಈ ನಕರಾತ್ಮಕ ಪರಿಣಾ
- 14 hrs ago ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
Don't Miss
- Automobiles ಮಾರುತಿ ಸ್ವಿಫ್ಟ್ ಖರೀದಿಸುತ್ತಿದ್ದೀರಾ? ಸ್ವಲ್ಪ ಕಾಯಿರಿ... ಹೊಸ ಸ್ವಿಫ್ಟ್ ಬರುತ್ತಿದೆ! 35 ಕಿ.ಮೀ ಮೈಲೇಜ್
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- News ಈ ಎರಡು ಕ್ಷೇತ್ರಗಳಲ್ಲಿ ಕಾಡುಗೊಲ್ಲರ ಮತ ಪಡೆಯಲು ಕೈ, ಕಮಲ ಪ್ಲಾನ್ ಏನು?-ಇಲ್ಲಿದೆ ಮಾಹಿತಿ
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Movies ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆಮ್ಮು ನಿವಾರಣೆಗೆ ಜೇನುತುಪ್ಪ ಮದ್ದು
ಮಾನವ ದೇಹವನ್ನೇ ಅವರು ತಮ್ಮ ಔಷಧಿಗಳಿಗೆ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿರುವ ವೈದ್ಯರು ಹೇಳುವುದು ತಪ್ಪೆಂದು ಹೇಳುತ್ತಿಲ್ಲ. ಅನೇಕ ಬಾರಿ ಕಮ್ಮಿನ ಅಗಾಧತೆ, ಕೆಮ್ಮುತ್ತಿರುವ ರೀತಿ, ಬಂದಿರುವ ಕಾರಣಗಳನ್ನು ನೋಡಿ ಲೆಕ್ಕಹಾಕಿ ಕೊಡುವ ಔಷಧಿಯಿಂದ ಕಡಿಮೆಯಾಗಲೂಬಹುದು. ಎಲ್ಲಕ್ಕಿಂತ ಹೆಚ್ಚಾಗಿ ವೈದ್ಯರ ಮೇಲೆ ನಂಬಿಕೆಯಿಟ್ಟೇ ಅವರಲ್ಲಿಗೆ ಹೋಗಬೇಕು.
ಇಲ್ಲಿ ವಿಷಯವೇನೆಂದರೆ, ಆಯಾ ಖಾಯಿಲೆಗಳಿಗೆ ಬೇಕಾಗಿರುವ ಔಷಧಿಗಳು ನಮ್ಮ ಬಳಿಯೇ ಇರುವಾಗ, ಅಂದರೆ ಮನೆಯಲ್ಲಿಯೇ ದೊರೆಯುತ್ತಿರುವಾಗ ತಕ್ಕ ರೀತಿಯಲ್ಲಿ ಬಳಸಿಕೊಳ್ಳುವುದು ಜಾಣತನ. ಔಷಧಿಯಿಲ್ಲದೆ ಬದುಕುವುದನ್ನು ಕಲಿಯುವುದನ್ನು ನಾವು ರೂಢಿಸಿಕೊಳ್ಳಬೇಕು. ನಾವು ರೂಢಿಸಿಕೊಂಡ ಹಾಗೆ ನಮ್ಮ ದೇಹವೂ ಪ್ರತಿಸ್ಪಂದಿಸುತ್ತದೆ.
ಪುಟ್ಟ ಮಕ್ಕಳಿಗೆ ಔಷಧಿ ಕುಡಿಸುವಾಗ ಕೈಕಾಲು ಮೂಗು ಗಟ್ಟಿಯಾಗಿ ಹಿಡಿದು ಹಿಂಸಿಸುವ ಬದಲು, ಕೆಮ್ಮು ಬಂದಾಗ ಬೆಚ್ಚಗಿನ ನೀರಲ್ಲಿ ಜೇನುತುಪ್ಪವನ್ನು ಬೆರೆಸಿ ಪ್ರತಿದಿನ ಬೆಳಿಗ್ಗೆ ಕೆಲಕಾಲ ನಿರಂತರವಾಗಿ ನೀಡಿದರೆ ಮಗುವೂ ಖುಷಿಯಿಂದ ತೆಗೆದುಕೊಳ್ಳುತ್ತದೆ, ಕೆಮ್ಮು ಕೂಡ ಮಂಗಮಾಯವಾಗಿರುತ್ತದೆ. ಮಕ್ಕಳು ಮಾತ್ರವಲ್ಲ ಯಾವುದೇ ವಯಸ್ಸಿನವರು ಕೆಮ್ಮಿಗೆ ಜೇನುತುಪ್ಪವನ್ನು ಬಳಸಬಹುದು. ನೈಸರ್ಗಿಕವಾಗಿ ದೊರೆಯುವ ಜೇನುತುಪ್ಪಕ್ಕೆ ಆಬಗೆಯ ತಾಕತ್ತಿದೆ. ಕೆಮ್ಮು ನಮ್ಮನ್ನು ಜಬಡಿ ಹಾಕುವ ಮೊದಲೇ, ಪ್ರಾರಂಭಿಕ ಹಂತದಲ್ಲಿರುವಾಗ ಜೇನುತುಪ್ಪ ಸೇವಿಸಿದರೆ ಕೆಮ್ಮು ಬೇಗನೆ ಕಡಿಮೆಯಾಗುತ್ತದೆ.
ಜೇನುತುಪ್ಪ ವಿಪರೀತ ಹೀಟು, ಜಾಸ್ತಿ ತೆಗೆದುಕೊಂಡರೆ ದೇಹದ ಕಾವು ಏರುತ್ತದೆ ಎಂದು ಕೆಲವರು ಜೇನುತುಪ್ಪವನ್ನು ದೂರವೇ ಇಟ್ಟಿರುತ್ತಾರೆ. ಒಂದು ಮಿತವಾದ ಅಳತೆಯಲ್ಲಿ ಬೆಚ್ಚಗಿನ ನೀರಿನೊಂದಿಗೆ ಬೆರೆಸಿ ಸೇವಿಸುವುದರಿಂದ ದೇಹಕ್ಕೆ ಉಷ್ಣವಾಗುವುದಿಲ್ಲ. ಬದಲಿಗೆ ಆರೋಗ್ಯ ಸುಧಾರಿಸುತ್ತಾ ಸಾಗುತ್ತದೆ. ಜೇನುತುಪ್ಪದಲ್ಲಿ ರಕ್ತಶುದ್ಧಿ ಮಾಡುವ ಗುಣವೂ ಇದೆ. ನಿಯಮಿತವಾಗಿ ಜೇನುತುಪ್ಪುನ್ನು ಸೇವಿಸಿದರೆ ರೋಗನಿರೋಧಕ ಶಕ್ತಿ ವೃದ್ಧಿಸುತ್ತದೆ.
ಮನೆಹಿತ್ತಲಲ್ಲಿ ಬಿಟ್ಟ ಕೃಷ್ಣತುಳಸಿ ಎಲೆಗಳನ್ನು ಜಜ್ಜಿ ರಸಹಿಂಡಿ ಅದಕ್ಕೆ ತೊಟ್ಟು ಜೇನುತುಪ್ಪು ಬೆರೆಸಿ ಸೇವಿಸಿದರೂ ಕೆಮ್ಮು ದೂರವಾಗುತ್ತದೆ. ಈ ಕಾಫ್ ಸಿರಪ್ಪಿನಿಂದ ಕಡಿಮೆಯಾಗುತ್ತಿಲ್ಲ ಎಂದು ಅದು, ಅದರಿಂದ ಕಡಿಮೆಯಾಗುತ್ತಿಲ್ಲ ಎಂದು ಮತ್ತೊಂದು ಕಾಫ್ ಸಿರಪ್ ಸೇವಿಸುವ ಬದಲು ಮನೆಯೌಷಧಿಗೆ ಮೊರೆ ಹೋದರೆ ಹಣವೂ ಉಳಿತಾಯವಾಗುತ್ತದೆ ಮತ್ತು ಮನಸಿಗೂ ನೆಮ್ಮದಿ ಇರುತ್ತದೆ. ಪ್ರಯತ್ನಿಸಿ ನೋಡಿ. ಆದರೆ, ಈ ವಿಧದಲ್ಲಿಯೂ ನಂಬಿಕೆಯಿರಲಿ.
ಎಲ್ಲಕ್ಕಿಂತ ಹೆಚ್ಚಾಗಿ ಕೆಮ್ಮು ಬಂದಾಗ, ತಣ್ಣೀರು ಸೇವಿಸುವುದು, ತಂಪು ಪಾನೀಯ ಸೇವಿಸುವುದು, ಕರಿದ ಪದಾರ್ಥಗಳನ್ನು ಎಗ್ಗಿಲ್ಲದೆ ತಿನ್ನುವುದು, ದೂಳಿಗೆ ಒಡ್ಡಿಕೊಳ್ಳುವುದು, ತಿಳಿವಳಿಕೆ ಬಂದವರಾಗಿದ್ದರೆ ಧೂಮಪಾನ ಮಾಡುವುದು ಕಡಿಮೆ ಮಾಡಬೇಕು ಮತ್ತು ಪ್ರತಿನಿತ್ಯ ವ್ಯಾಯಾಮ ಮಾಡುವುದನ್ನು ಮರೆಯಬಾರದು.
ಸುಮ್ಕೆ ತಮಾಷಿಗೆ
ಒಬ್ಬ ಸಿಕ್ಕಾಪಟ್ಟೆ ಕೆಮ್ಮುವ ರೋಗಿ ಡಾಕ್ಟರ್ ಬಳಿ ಬರುತ್ತಾನೆ. ಡಾಕ್ಟರು ನೀಡಿದ ನಾನಾ ಬಗೆಯ ಕೆಮ್ಮಿನ ಔಷಧಿ ಸೇವಿಸಿದರೂ ಕಡಿಮೆಯಾಗುವುದಿಲ್ಲ. ಕೆಲ ತಿಂಗಳ ನಂತರ ಮತ್ತೆ ವೈದ್ಯರ ಬಳಿ ಬರುತ್ತಾನೆ. ವೈದ್ಯರಿಗೆ ಆಶ್ಚರ್ಯವೆಂಬಂತೆ ಕೆಮ್ಮು ಕಡಿಮೆಯಾಗಿರುತ್ತದೆ.
ವೈದ್ಯ
:
ಏನಯ್ಯಾ,
ನೋಡು
ನಾನು
ಕೊಟ್ಟ
ಔಷಧಿಯ
ಕಮಾಲ್.
ಕಡಿಮೆಯಾಯ್ತಲ್ಲ
ಕೆಮ್ಮು.
ರೋಗಿ
:
ಕೆಮ್ಮು
ಕಡಿಮೆಯಾಗಿದ್ದು
ನಿಮ್ಮ
ಔಷಧಿಯಿಂದಲ್ಲ
ವೈದ್ಯರೆ,
ಕೆಮ್ಮಿ
ಕೆಮ್ಮಿ
ವಿಪರೀತ
ಸುಸ್ತಾಗಿ
ಕೆಮ್ಮಲು
ಸಾಧ್ಯವೇ
ಆಗಲಿಲ್ಲ.
ಹಾಗಾಗಿ
ಕೆಮ್ಮು
ಕಡಿಮೆಯಾಯಿತು!