Latest Updates
-
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್
ನಿಮ್ಮ ಒಳ್ಳೆದಕ್ಕೆ ಹೇಳ್ತಾಯಿರೋದು ಕೇಳಿ

ಸಾಧಾರಣವಾಗಿ ಬೇಸಿಗೆಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಕಾಯಿಲೆ ಕಸಾಲೆಗಳು ಈಗ ಮುಂಗಾರಿನ ಜೊತೆಜೊತೆಗೆ ಪುರಪ್ರವೇಶ ಮಾಡತೊಡಗಿವೆ. ಮೊದಲೆಲ್ಲಾ ದೂರದ ಹಳ್ಳಿಯೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದ ಹೆಮ್ಮಾರಿಗಳು ಈಗ ರಾಜಧಾನಿ ಸೇರಿದಂತೆ ನಗರ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು ಆರೋಗ್ಯ ಕೇಂದ್ರಗಳಿಗೆ ತಲೆ ಬಿಸಿಯಾಗಿದೆ. ಇದು ಬರೀ ಸರ್ಕಾರಿ ಆಸ್ಪತ್ರೆಯ ಮಾತಲ್ಲ, ಖಾಸಗಿ ಆಸ್ಪತ್ರೆಗಳಲ್ಲಿ ಕೂಡ ಚಿಕುನ್ ಗುನ್ಯಾ, ಡೆಂಗ್ಯೂ, ವಿಷಮಶೀತಜ್ವರ, ಕಾಲರಾ ಮುಂತಾದ ಹೆಮ್ಮಾರಿಗಳ ಕಾಟ ಶುರುವಾಗಿದೆ.
ಮುಂಜಾಗರುಕತೆಯೇ ಮದ್ದು: ಅಯ್ಯೋ ಬಿಡಿ, ದಿನಕ್ಕೊಂದು ಹೊಸ ಕಾಯಿಲೆ(ಉದಾ: ಸಾರ್ಸ್ ,ಹಂದಿಜ್ವರ) ಗಾಳಿಸುದ್ದಿ ಹರಡುವುದು ಸಾಮಾನ್ಯ. ಎಷ್ಟು ಬೇಗ ಸುದ್ದಿ ಹಬ್ಬುವುದೋ ಅಷ್ಟೇ ಬೇಗ ಸುದ್ದಿ ಸಾಯುತ್ತದೆ. ಅದರ ಬಗ್ಗೆ ಚಿಂತೆ ಬೇಡ ಎಂದು ಉಪೇಕ್ಷಿಸುವ ಹಾಗಿಲ್ಲ. ಆರೋಗ್ಯದ ವಿಷಯದಲ್ಲಿ ಎಷ್ಟು ಎಚ್ಚರಿಕೆ ವಹಿಸಿದರೂ ಕಮ್ಮಿಯೇ.
ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಹಾಗೂ ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ಕನಿಷ್ಠವೆಂದರೂ ಪ್ರತಿದಿನ 40ಕ್ಕೂ ಹೆಚ್ಚು ವೈರಾಣು ಜ್ವರ ಪ್ರಕರಣಗಳು ದಾಖಲಾಗುತ್ತಿವೆ. ಕೆಸಿ ಜನರಲ್ ಆಸ್ಪತ್ರೆಯಲ್ಲೂ ದಿನಕ್ಕೆ ಸುಮಾರು 30 ಕ್ಕೂ ಅಧಿಕ ವಿಷಮಶೀತಜ್ವರ ಬಾಧೆಗೆ ಒಳಪಟ್ಟ ರೋಗಿಗಳು ದಾಖಲಾಗುತ್ತಿದ್ದಾರೆ. ಚಿಕೂನ್ ಗುನ್ಯಾ ಪ್ರಕರಣ ಕೂಡಾ ದಿನೆದಿನೇ ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ.
ಬೇಸಿಗೆ ಬಂದಾಗ ಕಾಲರಾ ಕಾಮನ್ ಕಾಯಿಲೆ ಎನ್ನುವಂತೆ ಅಕಾಲಿಕ ಮಳೆ ಸುರಿದರೆ ಬೆಂಗಳೂರಲ್ಲಿ ಡೆಂಗ್ಯೂ ಜ್ವರ ಭೀತಿ ಖಾಯಂ ಎನಿಸತೊಡಗಿದೆ. ಸೊಳ್ಳೆಗಳ ಸಂತಾನ ಅಭಿವೃದ್ಧಿಗೆ ಬಿಬಿಎಂಪಿ ಕೊಡುಗೆ ಅಪಾರ ಎಂದರೆ ತಪ್ಪಾಗಲಾರದು. ಬಿಬಿಎಂಪಿ ಅಧಿಕಾರಗಳೆ ಹೇಳುವಂತೆ, ಪ್ರತಿದಿನ 22 ಡೆಂಗ್ಯೂ ಹಾಗೂ 27 ಚಿಕೂನ್ ಗುನ್ಯಾ ಕೇಸ್ ಗಳು ಬರುತ್ತಿವೆ.100 ಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿದೆ.
ಎಲ್ಲಿದೆ ಶುದ್ಧಜಲ? :ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಸುಮಾರು 23 ಜಿಲ್ಲೆಗಳಿಗೆ ಎಚ್ಚರಿಕೆಯ ಸಂದೇಶವನ್ನು ಆರೋಗ್ಯ ಇಲಾಖೆ ರವಾನಿಸಿದೆ. ಪ್ರಾಥಮಿಕ ಆರೋಗ್ಯಕೇಂದ್ರಗಳಿಗೆ ಹೆಚ್ಚಿನ ಸೌಲಭ್ಯ ಒದಗಿಸಲು ಚಿಂತನೆ ನಡೆದಿದೆ. ಬಾಗಲಕೋಟೆ, ಬಿಜಾಪುರ, ಗುಲ್ಭರ್ಗಾ, ತುಮಕೂರು, ಕೋಲಾರ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಮಲೇರಿಯಾ ಭೀತಿ ಆವರಿಸಿದೆ. ಅದರಲ್ಲೂ ಕೃಷ್ಣಾ ಮೇಲ್ದಂಡೆ ಯೋಜನಾ ಪ್ರದೇಶದಲ್ಲಿ ಸುಮಾರು 800 ಕ್ಕೂ ಅಧಿಕ ಮಲೇರಿಯಾ ರೋಗಿಗಳನ್ನು ಗುರುತಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಗದಗ, ಬೀದರ್, ಯಾದಗಿರಿ, ಹಾಸನ, ಬೆಳಗಾವಿ ಹಾಗೂ ಕೋಲಾರದಲ್ಲಿ ಚಿಕುನ್ ಗುನ್ಯಾ ಹರಡಿದೆ. ನಾನಾ ಬಗೆಯ ವೈರಾಣು ಜ್ವರಗಳು ಮೈಸೂರು, ಮಂಡ್ಯ ಹಾಗೂ ಬೆಳಗಾವಿ ಜಿಲ್ಲೆಯನ್ನು ಆವರಿಸಿದೆ. ಪುಣ್ಯಕ್ಕೆ ರಾಜ್ಯದೆಲ್ಲೆಡೆ ಎಚ್ 1 ಎನ್ 1 ಪ್ರಕರಣಗಳು ಕ್ರಮೇಣ ಕಮ್ಮಿಯಾಗುತ್ತಿದೆ. ಎಲ್ಲಕ್ಕೂ ಒಂದೇ ಪರಿಹಾರ ಶುದ್ಧ ಜಲ ಬಳಕೆ, ಕುದಿಸಿ ಆರಿಸಿದ ನೀರನ್ನು ಮಾತ್ರ ಬಳಸುವುದು.
ಮನೆಯ ಸುತ್ತಮುತ್ತ ನೀರು ನೆಲೆನಿಲ್ಲದಂತೆ ನೋಡಿಕೊಳ್ಳುವುದು. ಸೊಳ್ಳೆಗಳ ಸಂತಾನ ಅಭಿವೃದ್ಧಿ ತಡೆಗಟ್ಟಲು ಔಷಧಿ ಸಿಂಪಡಿಸುವುದು. ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ಮಾಡುವುದು. ಹೋಟೆಲ್ ನಲ್ಲೂ ಬಿಸಿನೀರು ಕೇಳಿ ಕುಡಿಯಿರಿ. ಶುದ್ಧತೆ ಹಾಗೂ ಗ್ರಾಹಕರ ಅಪೇಕ್ಷೆಗೆ ಅನುಸಾರವಾಗಿ ಸೇವೆ ಒದಗಿಸುವುದು ಅವರ ಧರ್ಮ ಹಾಗೂ ಕಾನೂನು ಸಮ್ಮತ ಕೂಡಾ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications