Just In
- 38 min ago ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- 1 hr ago ಮೀನ ರಾಶಿಯಲ್ಲಿ ಬುಧ ವಕ್ರೀಯ ಚಲನೆ ಮಾಡುವಾಗ ಈ 5 ರಾಶಿಯವರು ವೃತ್ತಿ ಜೀವನದ ಬಗ್ಗೆ ಜಾಗ್ರತೆ
- 1 hr ago ದಿನ ಭವಿಷ್ಯ ಮಾರ್ಚ್ 29: ಶುಕ್ರವಾರದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
- 2 hrs ago ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
Don't Miss
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಂಟಲಿನಲ್ಲಿ ಕಿಚ್ ಕಿಚ್: ಶುಂಠಿ ಇದೆಯಲ್ಲ!
ತುಳಸಿ, ಶುಂಠಿ, ಕೊತ್ತಂಬರಿ ಬೀಜ ಇವು ಕಷಾಯಕ್ಕೆ ಖಾಯಂ ಪದಾರ್ಥಗಳು. ಅಡುಗೆಗೆ ಬಳಕೆಯಾಗುವುದಕ್ಕಿಂತ ಆರೋಗ್ಯ ವರ್ಧನೆಗೂ ಶುಂಠಿ ಹೆಚ್ಚು ಸಹಕಾರಿ ಎನ್ನಲಡ್ಡಿಯಿಲ್ಲ. ಶಾಲೆಯಲ್ಲಿ ಮಾತ್ರ ಮೇಷ್ಟ್ರು ಒಣ ಶುಂಠಿ ಕೊಡ್ಲಾ ಎಂದರೆ ನಡುಕ ಹುಟ್ಟಿಬಿಡುತ್ತಿತ್ತು.
ಪ್ರಪಂಚದೆಲ್ಲೆಡೆ ಸಿಗುವ ಅತ್ಯುತ್ತಮ ಔಷಧಿ ಎಂಬ ಕಾರಣಕ್ಕೆ ಇದನ್ನು 'ಮಹೌಷಧಿ', 'ವಿಷ್ವಬೇಷಜ' ಎಂದು ಕರೆಯುತ್ತಾರೆ. ಜಠರದ ತೊಂದರೆ ನಿವಾರಣೆಗೆ, ಅಜೀರ್ಣ, ವಾಯು, ವಾಕರಿಕೆ, ಮಲಬದ್ಧತೆ, ಹೊಟ್ಟೆಯ ಸೋಂಕು ನಿವಾರಣೆಗೆ ಸಹಕಾರಿ. ಕೊಲೆಸ್ಟ್ರಾಲ್ ಕಮ್ಮಿ ಮಾಡುವುದರಿಂದ ಹೃದಯ ಸಂಬಂಧಿ ರೋಗದಿಂದ ಬಳಲುವವರಿಗೆ ಸಹಕಾರಿ.
ಶುಂಠಿಯ ಸಾಮಾನ್ಯ ಉಪಯೋಗಗಳು:
* ಅರ್ಧ ಟೀ ಚಮಚ ಶುಂಠಿ ರಸ, 1 ಟೀ ಚಮಚ ನಿಂಬೆರಸ, ಅಷ್ಟೇ ಪುದೀನ ಎಲೆಯ ರಸ, 1 ಟೀ ಚಮಚ ಜೇನುತುಪ್ಪ ಸೇರಿಸಿ 3 ಭಾಗ ಮಾಡಿ ದಿನಕ್ಕೆ 3 ಬಾರಿ ಸೇವಿಸಲು ಶ್ವಾಸರೋಗ, ಸ್ವರ ಭೇದ, ಅಜೀರ್ಣ, ಕೆಮ್ಮು ರೋಗಗಳನ್ನು ನಿವಾರಿಸಬಹುದು.
* 1 ಸಣ್ಣ ತುಂಡು ಹಸಿ ಶುಂಠಿಯನ್ನು 1 ಬಟ್ಟಲು ನೀರಿನಲ್ಲಿ 15 ನಿಮಿಷ ಕುದಿಸಿ, ಸ್ವಲ್ಪ ಸಕ್ಕರೆ ಹಾಕಿ ದಿನಕ್ಕೆ 3 ಬಾರಿ ಆಹಾರ ಸೇವನೆ ಮಾಡಿದರೆ ಋತುಸ್ರಾವದ ತೊಂದರೆಗಳು ನಿವಾರಣೆಯಾಗುತ್ತದೆ.
*1 ತುಂಡು ಶುಂಠಿ, 1 ಲವಂಗ, 1 ಹರಳು ಉಪ್ಪು ಇವುಗಳನ್ನು ಬಾಯಿಯಲ್ಲಿಟ್ಟು ಚಪ್ಪರಿಸುವುದರಿಂದ ಕೆಮ್ಮು, ಗಂಟಲು ಕೆರೆತಗಳನ್ನು ಹೋಗಲಾಡಿಸಬಹುದು.
* ಶುಂಠಿಯನ್ನು ನೀರಿನಲ್ಲಿ ಅರೆದು ಬರುವ ಗಂಧವನ್ನು ಹಣೆಗೆ ಲೇಪ ಮಾಡಿ ಹಚ್ಚುವುದರಿಂದ ತಲೆನೋವು ನಿವಾರಣೆಯಾಗುತ್ತದೆ.
* ಒಣ ಶುಂಠಿ ಚೂರ್ಣವನ್ನು ಬೆಲ್ಲದೊಂದಿಗೆ ನೀಡುವುದರಿಂದ ಅಜೀರ್ಣದಿಂದ ಉಂಟಾದ ಭೇದಿ ಹತೋಟಿಗೆ ಬರುತ್ತದೆ.
* ಒಣ ಶುಂಠಿ, ಮೆಣಸು ಮತ್ತು ಹಿಪ್ಪಲಿಗಳನ್ನು ಸಮನಾಗಿ ತೆಗೆದುಕೊಂಡು, ಹುರಿದು , ಪುಡಿ ಮಾಡಿಕೊಂಡು ತೆಳು ಬಟ್ಟೆಯಲ್ಲಿ ಸೋಸಿ, ಬೆಣ್ಣೆಯೊಡನೆ ಸೇವಿಸಿದರೆ ಹೊಟ್ಟೆ ನೋವು ನಿವಾರಣೆಯಾಗುತ್ತದೆ.
ಓದುಗರಲ್ಲಿ ಒಂದು ಅರಿಕೆ: ಔಷಧೀಯ ಸಸ್ಯಗಳ ಬಗ್ಗೆ ಇಲ್ಲಿ ನೀಡಿರುವ ಉಪಯೋಗಗಳು ಮುನ್ನೋಟದಂತೆ ಭಾವಿಸಬಹುದು. ನಿಮಗೆ ಹೆಚ್ಚಿನ ಉಪಯುಕ್ತ ಮಾಹಿತಿ ಲಭ್ಯವಾದರೆ ದಯವಿಟ್ಟು ನಮಗೂ ಕಳಿಸಿಕೊಡಿ. ಅದನ್ನು ಇನ್ನಷ್ಟು ಜನರಿಗೆ ತಲುಪಿಸೋಣ.